Homeದಲಿತ್ ಫೈಲ್ಸ್ತುಮಕೂರು: ಮುಚ್ಚಿ ಹೋಗುತ್ತಿದೆಯೇ ಮತ್ತೊಬ್ಬ ದಲಿತನ ಕೊಲೆ ಪ್ರಕರಣ?

ತುಮಕೂರು: ಮುಚ್ಚಿ ಹೋಗುತ್ತಿದೆಯೇ ಮತ್ತೊಬ್ಬ ದಲಿತನ ಕೊಲೆ ಪ್ರಕರಣ?

- Advertisement -
- Advertisement -

ತುಮಕೂರು ತಾಲ್ಲೂಕು ಕೋರಾ ಹೋಬಳಿ ಜಕ್ಕೇನಹಳ್ಳಿ ಗ್ರಾಮದಲ್ಲಿ ಏಪ್ರಿಲ್‌ 29ನೇ ತಾರೀಕಿನಿಂದ ಈ ಪ್ರಕರಣ ತೆರೆದುಕೊಳ್ಳುತ್ತದೆ. ಊರಿನ ಬಳಿ ನಡೆಯುತ್ತಿರುವ ಎತ್ತಿನಹೊಳೆ ಕಾಮಗಾರಿಯ ಚಾನೆಲ್‌ನಲ್ಲಿ ಮಾದಿಗ ಸಮುದಾಯದ ಮುತ್ತುರಾಜ (26) ಎಂಬ ಯುವಕನ ಶವ ಪತ್ತೆಯಾಗುತ್ತದೆ. ಅಂದು ಮುತ್ತುರಾಜನ ತಂದೆ ಮುತ್ತುರಾಯಪ್ಪ (65) ನೀಡಿದ ದೂರು ದಾಖಲಾಗುತ್ತದೆ. ಆದರೆ ದೂರಿನಲ್ಲಿ ಏನು ಬರೆದಿದೆ ಎಂಬುದೇ ಗೊತ್ತಾಗದ, ಕೇವಲ ಸಹಿ ಮಾಡಲು ಬರುವ ಮುತ್ತುರಾಯಪ್ಪ ಮತ್ತೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಚೇರಿಯ ಮೆಟ್ಟಿಲೇರುತ್ತಾರೆ.

ಶವವಾಗಿ ಪತ್ತೆಯಾದ ಮುತ್ತುರಾಜನನ್ನು ಸವರ್ಣೀಯ ಜಾತಿಯವರು ಕೊಂದಿದ್ದಾರೆ ಎಂಬುದು ಮುತ್ತುರಾಯಪ್ಪನವರ ಕುಟುಂಬದ ಆರೋಪ. ಜಕ್ಕೇನಹಳ್ಳಿಯ ಜಿಲ್ಲಾ ಪೊಲೀಸ್ ಕಚೇರಿಗೆ ಜೂನ್‌ 7ರಂದು ತೆರಳಿದ ಮುತ್ತುರಾಯಪ್ಪ ಹೀಗೆ ದೂರು ನೀಡುತ್ತಾರೆ:

“ತುಮಕೂರು ಗ್ರಾಮಾಂತರ ಪೊಲೀಸ್‌ ಠಾಣಾಧಿಕಾರಿಗಳು ನಾನು ನೀಡಿದ್ದ ಕೈ ಬರವಣಿಗೆಯ ದೂರನ್ನು ಮರೆಮಾಚಿ ಪೊಲೀಸ್‌ನವರೇ ಒಂದು ದೂರನ್ನು ಸೃಷ್ಟಿ ಮಾಡಿಕೊಂಡು ಅನಕ್ಷರಸ್ಥನಾದ ನನ್ನ ಸಹಿಯನ್ನು ಪಡೆದುಕೊಂಡು ನನಗೆ ಅನ್ಯಾಯ ಮಾಡಿದ್ದಾರೆ. ಇದರ ವಿರುದ್ಧ ಕ್ರಮ ಜರುಗಿಸಬೇಕು” ಎಂದು ಒತ್ತಾಯಿಸುತ್ತಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಜಕ್ಕೇನಹಳ್ಳಿ  ಗ್ರಾಮದ ಬಳಿ ನಡೆಯುತ್ತಿರುವ ಎತ್ತಿನಹೊಳೆ ಕಾಮಗಾರಿ ಚಾನಲ್‌ನಲ್ಲಿ ನನ್ನ ಮಗನಾದ ಮುತ್ತುರಾಜನ ಮೃತದೇಹವು ತೇಲುತ್ತಿತ್ತು. ಸಾರ್ವಜನಿಕರು ಗಮನಿಸಿ ವಿಚಾರ ತಿಳಿಸಿದರು. ಪೊಲೀಸರು ಮಾಹಿತಿ ತಿಳಿದು ಸ್ಥಳಕ್ಕೆ ಬಂದರು. ಪೊಲೀಸ್‌ನವರ ಸಮಕ್ಷಮ ಮೃತ ದೇಹವನ್ನು ಹೊರತೆಗೆದು ತುಮಕೂರಿನ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿತ್ತು. ಮೃತದೇಹವನ್ನು ನಮ್ಮ ವಶಕ್ಕೆ ಕೇಳಿದಾಗ ಪೊಲೀಸರ ಕಂಪ್ಲೇಟ್ ಅಗತ್ಯವೆಂದರು. ಆ ದಿನ ನಾನು ತುಂಬ ದುಃಖಿತನಾಗಿದ್ದೆ. ಏನನ್ನೂ ಸರಿಯಾಗಿ ಹೇಳುವ ಪರಿಸ್ಥಿತಿಯಲ್ಲಿ ಇರಲಿಲ್ಲ. ಆದರೆ ನಾನು ನನಗೆ ಗೊತ್ತಿರುವ ಒಬ್ಬರಿಂದ ಒಂದು ದೂರನ್ನು ಕೈಯಲ್ಲಿ ಬರೆಯಿಸಿ ಆ ದೂರಿಗೆ ನಾನು ಸಹಿ ಮಾಡಿರುತ್ತೇನೆ. ನಾನು ಸಹಿ ಮಾಡುವುದನ್ನು ಮಾತ್ರ ಕಲಿತಿರುತ್ತೇನೆ. ಓದಲು, ಬರೆಯಲು ಬರುವುದಿಲ್ಲ. ಆದರೆ ಪೊಲೀಸ್‌ನವರು ನಾನು ನೀಡಿದ್ದ ದೂರನ್ನು ಮರೆಮಾಚಿ ಈ ಪ್ರಕರಣದಲ್ಲಿ ಭಾಗಿಯಾಗಿರುವ ಅನುಮಾನಾಸ್ಪದ ವ್ಯಕ್ತಿಗಳನ್ನು ಕಾಪಾಡುವ ಸಲುವಾಗಿ ಅಮಾಯಕನಾದ ನನಗೆ ಮೋಸ ಮಾಡಿರುತ್ತಾರೆ” ಎಂದು ಮುತ್ತುರಾಯಪ್ಪ ಆರೋಪಿಸುತ್ತಾರೆ.

ಇದನ್ನೂ ಓದಿರಿ: ಪೆದ್ದನಹಳ್ಳಿ ದಲಿತರ ಹತ್ಯೆ ಪ್ರಕರಣ: ಅನುಮಾನಕ್ಕೆ ಆಸ್ಪದ ನೀಡಿದ ತನಿಖಾಧಿಕಾರಿಗಳ ಜಾತಿ, ಹಿನ್ನೆಲೆ; ಆರೋಪ

ಕುಟುಂಬ ಏನು ಹೇಳುತ್ತದೆ? ಆರೋಪಿಗಳು ಯಾರು?

ಮಹಾಲಕ್ಷ್ಮಮ್ಮ- ಮುತ್ತುರಾಯಪ್ಪ ಜಕ್ಕೇನಹಳ್ಳಿ ಗ್ರಾಮದ ದಂಪತಿ. ಇವರಿಗೆ ಮೂರು ಜನ ಹೆಣ್ಣು ಮಕ್ಕಳು. ಒಬ್ಬ ಗಂಡು ಮಗ. ಮೂವರು ಹೆಣ್ಣುಮಕ್ಕಳಲ್ಲಿ ನಡುಮಧ್ಯೆಯವರಾದ ಮುತ್ತಮ್ಮ ಅವರು ಜಕ್ಕೇನಹಳ್ಳಿಯ ಗ್ರಾಮದ ಒಕ್ಕಲಿಗ ಜಾತಿಯ ನಾಗರಾಜ್‌ (ಕೆಎಸ್‌ಆರ್‌ಟಿಸಿ ಡ್ರೈವರ್‌) ಎಂಬವರನ್ನು ಸುಮಾರು ಆರೇಳು ವರ್ಷಗಳ ಹಿಂದೆ ಮದುವೆಯಾಗುತ್ತಾರೆ. ನಾಗರಾಜ್‌- ಮುತ್ತಮ್ಮ ಕುಟುಂಬ ತುಮಕೂರಿನಲ್ಲೇ ವಾಸವಿತ್ತು.

ನಾಗರಾಜ್‌ ಅವರ ಬಾಮೈದ ಬಸವರಾಜನು ಮುತ್ತುರಾಜನ ಜೊತೆ ಆಗಾಗ್ಗೆ ಜಗಳವಾಡುತ್ತಿದ್ದನು. “ನಿಮ್ಮಕ್ಕ ನಮ್ಮ ಭಾವನನ್ನು ಮದುವೆಯಾದ ಕಾರಣ ನನಗೆ ಯಾರೂ ಹೆಣ್ಣು ಕೊಡುತ್ತಿಲ್ಲ” ಎಂದು ತಕರಾರು ತೆಗೆಯುತ್ತಿದ್ದನು. ಮುತ್ತರಾಜ ತನ್ನ ಅಕ್ಕನಲ್ಲಿ ಹೋಗಿ, “ಆಗಿದ್ದು ಆಗಿಹೋಯಿತು. ನಾನು ನಿನ್ನನ್ನು ಸಾಕಿಕೊಳ್ಳುತ್ತೇನೆ. ನಮ್ಮ ಮನೆಗೆ ಬಂದು ಬಿಡು” ಎಂದು ಕೇಳಿಕೊಂಡಿದ್ದ. ಅವರು ಬಂದಿರಲಿಲ್ಲ.

ಕೊಲೆಯಾಗುವ ಸಮಯದಲ್ಲಿ ಜಕ್ಕೇನಹಳ್ಳಿಯಲ್ಲಿ ಜಾತ್ರೆ ಇತ್ತು. ಅದಕ್ಕೂ ಐದಾರು ದಿನಗಳ ಮುಂಚೆ ಬಸವರಾಜನು ಮುತ್ತುರಾಜನೊಂದಿಗೆ ಚೆನ್ನಾಗಿ ಹೊಂದಾಣಿಕೆಯಿಂದ ಇದ್ದನು. ಏಪ್ರಿಲ್‌ 28ರ ಮಧ್ಯಾಹ್ನ 3 ಗಂಟೆಯ ಸಮಯದಲ್ಲಿ ಮನೆಯ ಬಳಿ ಬಂದ ಬಸವರಾಜ, ಮುತ್ತುರಾಜರನ್ನು ಕರೆದುಕೊಂಡು ಹೋಗುತ್ತಾನೆ. ಮುತ್ತುರಾಜ ಟವೆಲ್‌ ಧರಿಸಿದ್ದರು. ಸಂಜೆ ವೇಳೆಗೆ ಮತ್ತೆ ಒಬ್ಬನೇ ಮರಳಿದ ಬಸವರಾಜನು ಮುತ್ತುರಾಜನ ಟವೆಲ್ ವಾಪಸ್‌ ತಂದಿರುತ್ತಾನೆ. “ಟವಲ್‌ ಮಾತ್ರ ತಂದಿದ್ದೀಯ. ನಮ್ಮ ಹುಡುಗ ಎಲ್ಲೋ” ಎಂದು ಮಹಾಲಕ್ಷ್ಮಮ್ಮ  ಕೇಳುತ್ತಾರೆ. ಆದರೆ ಆತ, “ನನಗೆ ಮಾಹಿತಿ ಇಲ್ಲ” ಎಂದು ಹೇಳುತ್ತಾನೆ.

ಮುತ್ತುರಾಯಪ್ಪನವರ ಹೆಂಡತಿ ಮಹಾಲಕ್ಷ್ಮಮ್ಮ ತುಮಕೂರಿನ ನರಸಿಂಹಯ್ಯ ಆಸ್ಪತ್ರೆಯಲ್ಲಿ ಸ್ಲೀಪರ್‌ ಕೆಲಸ ಮಾಡುತ್ತಿದ್ದು, ರಾತ್ರಿ ಪಾಳಿಗೆಂದು ಅಂದು ಸಂಜೆ ಹೋಗಿರುತ್ತಾರೆ. ಬೆಳಿಗ್ಗೆ ವಾಪಸ್‌ ಮನೆಗೆ ಮರಳಿದಾಗ ಅವರಿಗೆ ಕೆಟ್ಟ ಸುದ್ದಿ ಕಾದಿರುತ್ತದೆ.

ಪೊಲೀಸರು ಬಂದು ಹೆಣವನ್ನು ಶವಾಗಾರಕ್ಕೆ ತೆಗೆದುಕೊಂಡು ಹೋಗುತ್ತಾರೆ. ಮರಣೋತ್ತರ ಪರೀಕ್ಷೆಯ ನಂತರ ಹೆಣವನ್ನು ಕುಟುಂಬಕ್ಕೆ ಹಸ್ತಾಂತರಿಸುತ್ತಾರೆ. ರಾತ್ರಿ ಅಂತ್ಯಸಂಸ್ಕಾರ ನಡೆಯುತ್ತದೆ. ಅಂದು ಹತ್ತು ಗಂಟೆಯ ಸಮಯದಲ್ಲಿ ನಾಗರಾಜ್‌ (ಮುತ್ತಮ್ಮನ ಗಂಡ) ಕುಡಿದ ಮತ್ತಲ್ಲಿ- “ನಾವೇ ಕೊಲೆ ಮಾಡಿದ್ದೀವಿ” ಎಂದು ಹೇಳಿದ್ದರು ಎಂದು ಕುಟುಂಬ ಆರೋಪಿಸುತ್ತದೆ.

ಎಸ್‌ಪಿಗೆ ದೂರು

ನ್ಯಾಚುರಲ್‌ ಡೆತ್‌ ಎಂದು ಹೇಳಲಾಗುತ್ತಿತ್ತು. ಆದರೆ ಕುಟುಂಬ ಇದನ್ನು ಒಪ್ಪಲಿಲ್ಲ. ವಿಷಯ ಅರಿತ ದಲಿತ ಸಂಘರ್ಷ ಸಮಿತಿ ಮುಖಂಡರು ಪ್ರಕರಣವನ್ನು ಮುಚ್ಚಿ ಹಾಕಲು ಬಿಡಲಿಲ್ಲ. ಮೇ 7ರಂದು ಎಸ್‌ಪಿಗೆ ವಿಷಯ ತಿಳಿಸಿದರು. ಬಳಿಕ ಮೇ 18ರಂದು ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮರು ದೂರು ನೀಡಿದ ಬಳಿಕ ಪ್ರಕರಣದ ದಾಖಲಾಗುತ್ತದೆ.

ಇದನ್ನೂ ಓದಿರಿ: ಪೆದ್ದನಹಳ್ಳಿ ಪ್ರಕರಣ: ಇಬ್ಬರು ದಲಿತ ಯುವಕರ ಹತ್ಯೆಯ ಸುತ್ತ ಎಷ್ಟೊಂದು ಸಂಕಟ!

“ನನ್ನ ಮಗನಿಗೆ ಈಜಲು ಬರುತ್ತಿತ್ತು. ಒಕ್ಕಲಿಗ ಜನಾಂಗಕ್ಕೆ ಸೇರಿದ ಬಸವರಾಜು ಮತ್ತು ಆತನ ಸ್ನೇಹಿತರು ಸೇರಿ ನನ್ನ ಮಗನಾದ ಮುತ್ತುರಾಜನನ್ನು ಕೊಲೆ ಮಾಡಿ ನಾಲೆಗೆ ಹಾಕಿರುತ್ತಾರೆ” ಎಂದು ಮುತ್ತುರಾಯಪ್ಪ ದೂರಿನಲ್ಲಿ ತಿಳಿಸಿದ್ದಾರೆ. ಐಪಿಸಿ ಹಾಗೂ ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಪ್ರಕರಣಕ್ಕೆ ಸಂಬಂಧಪಟ್ಟ ಡಿವೈಎಸ್‌ಪಿಯವರನ್ನು ‘ನಾನುಗೌರಿ.ಕಾಂ’ ಸಂಪರ್ಕಿಸಿತು. ಮಾಹಿತಿ ನೀಡಲು ನಿರಾಕರಿಸಿದ ಅವರು, ಎಸ್‌ಪಿಯವರನ್ನು ಸಂಪರ್ಕಿಸಿ ಎಂದು ಪ್ರತಿಕ್ರಿಯಿಸಿದರು.

“ಇಷ್ಟೆಲ್ಲ ಆದ ಮೇಲೆ, ಪ್ರಕರಣ ಏನಾಯಿತೆಂಬ ಮಾಹಿತಿ ದೊರಕುತ್ತಿಲ್ಲ. ಅವರಿವರಲ್ಲಿಗೆ ಓಡಾಡಲು ನಮ್ಮ ಬಳಿ ದುಡ್ಡು-ಕಾಸು ಇಲ್ಲ. ಏನು ಮಾಡಬೇಕೆಂದು ತೋಚುತ್ತಿಲ್ಲ. ತಪ್ಪಿತಸ್ಥರ ಬಂಧನವಾಗಿದೆಯೋ ಇಲ್ಲವೋ ಗೊತ್ತಿಲ್ಲ” ಎಂದು ಕುಟುಂಬ ಸದಸ್ಯರು ದುಃಖಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...