Homeದಲಿತ್ ಫೈಲ್ಸ್ತುಮಕೂರು: ಮುಚ್ಚಿ ಹೋಗುತ್ತಿದೆಯೇ ಮತ್ತೊಬ್ಬ ದಲಿತನ ಕೊಲೆ ಪ್ರಕರಣ?

ತುಮಕೂರು: ಮುಚ್ಚಿ ಹೋಗುತ್ತಿದೆಯೇ ಮತ್ತೊಬ್ಬ ದಲಿತನ ಕೊಲೆ ಪ್ರಕರಣ?

- Advertisement -
- Advertisement -

ತುಮಕೂರು ತಾಲ್ಲೂಕು ಕೋರಾ ಹೋಬಳಿ ಜಕ್ಕೇನಹಳ್ಳಿ ಗ್ರಾಮದಲ್ಲಿ ಏಪ್ರಿಲ್‌ 29ನೇ ತಾರೀಕಿನಿಂದ ಈ ಪ್ರಕರಣ ತೆರೆದುಕೊಳ್ಳುತ್ತದೆ. ಊರಿನ ಬಳಿ ನಡೆಯುತ್ತಿರುವ ಎತ್ತಿನಹೊಳೆ ಕಾಮಗಾರಿಯ ಚಾನೆಲ್‌ನಲ್ಲಿ ಮಾದಿಗ ಸಮುದಾಯದ ಮುತ್ತುರಾಜ (26) ಎಂಬ ಯುವಕನ ಶವ ಪತ್ತೆಯಾಗುತ್ತದೆ. ಅಂದು ಮುತ್ತುರಾಜನ ತಂದೆ ಮುತ್ತುರಾಯಪ್ಪ (65) ನೀಡಿದ ದೂರು ದಾಖಲಾಗುತ್ತದೆ. ಆದರೆ ದೂರಿನಲ್ಲಿ ಏನು ಬರೆದಿದೆ ಎಂಬುದೇ ಗೊತ್ತಾಗದ, ಕೇವಲ ಸಹಿ ಮಾಡಲು ಬರುವ ಮುತ್ತುರಾಯಪ್ಪ ಮತ್ತೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಚೇರಿಯ ಮೆಟ್ಟಿಲೇರುತ್ತಾರೆ.

ಶವವಾಗಿ ಪತ್ತೆಯಾದ ಮುತ್ತುರಾಜನನ್ನು ಸವರ್ಣೀಯ ಜಾತಿಯವರು ಕೊಂದಿದ್ದಾರೆ ಎಂಬುದು ಮುತ್ತುರಾಯಪ್ಪನವರ ಕುಟುಂಬದ ಆರೋಪ. ಜಕ್ಕೇನಹಳ್ಳಿಯ ಜಿಲ್ಲಾ ಪೊಲೀಸ್ ಕಚೇರಿಗೆ ಜೂನ್‌ 7ರಂದು ತೆರಳಿದ ಮುತ್ತುರಾಯಪ್ಪ ಹೀಗೆ ದೂರು ನೀಡುತ್ತಾರೆ:

“ತುಮಕೂರು ಗ್ರಾಮಾಂತರ ಪೊಲೀಸ್‌ ಠಾಣಾಧಿಕಾರಿಗಳು ನಾನು ನೀಡಿದ್ದ ಕೈ ಬರವಣಿಗೆಯ ದೂರನ್ನು ಮರೆಮಾಚಿ ಪೊಲೀಸ್‌ನವರೇ ಒಂದು ದೂರನ್ನು ಸೃಷ್ಟಿ ಮಾಡಿಕೊಂಡು ಅನಕ್ಷರಸ್ಥನಾದ ನನ್ನ ಸಹಿಯನ್ನು ಪಡೆದುಕೊಂಡು ನನಗೆ ಅನ್ಯಾಯ ಮಾಡಿದ್ದಾರೆ. ಇದರ ವಿರುದ್ಧ ಕ್ರಮ ಜರುಗಿಸಬೇಕು” ಎಂದು ಒತ್ತಾಯಿಸುತ್ತಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಜಕ್ಕೇನಹಳ್ಳಿ  ಗ್ರಾಮದ ಬಳಿ ನಡೆಯುತ್ತಿರುವ ಎತ್ತಿನಹೊಳೆ ಕಾಮಗಾರಿ ಚಾನಲ್‌ನಲ್ಲಿ ನನ್ನ ಮಗನಾದ ಮುತ್ತುರಾಜನ ಮೃತದೇಹವು ತೇಲುತ್ತಿತ್ತು. ಸಾರ್ವಜನಿಕರು ಗಮನಿಸಿ ವಿಚಾರ ತಿಳಿಸಿದರು. ಪೊಲೀಸರು ಮಾಹಿತಿ ತಿಳಿದು ಸ್ಥಳಕ್ಕೆ ಬಂದರು. ಪೊಲೀಸ್‌ನವರ ಸಮಕ್ಷಮ ಮೃತ ದೇಹವನ್ನು ಹೊರತೆಗೆದು ತುಮಕೂರಿನ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿತ್ತು. ಮೃತದೇಹವನ್ನು ನಮ್ಮ ವಶಕ್ಕೆ ಕೇಳಿದಾಗ ಪೊಲೀಸರ ಕಂಪ್ಲೇಟ್ ಅಗತ್ಯವೆಂದರು. ಆ ದಿನ ನಾನು ತುಂಬ ದುಃಖಿತನಾಗಿದ್ದೆ. ಏನನ್ನೂ ಸರಿಯಾಗಿ ಹೇಳುವ ಪರಿಸ್ಥಿತಿಯಲ್ಲಿ ಇರಲಿಲ್ಲ. ಆದರೆ ನಾನು ನನಗೆ ಗೊತ್ತಿರುವ ಒಬ್ಬರಿಂದ ಒಂದು ದೂರನ್ನು ಕೈಯಲ್ಲಿ ಬರೆಯಿಸಿ ಆ ದೂರಿಗೆ ನಾನು ಸಹಿ ಮಾಡಿರುತ್ತೇನೆ. ನಾನು ಸಹಿ ಮಾಡುವುದನ್ನು ಮಾತ್ರ ಕಲಿತಿರುತ್ತೇನೆ. ಓದಲು, ಬರೆಯಲು ಬರುವುದಿಲ್ಲ. ಆದರೆ ಪೊಲೀಸ್‌ನವರು ನಾನು ನೀಡಿದ್ದ ದೂರನ್ನು ಮರೆಮಾಚಿ ಈ ಪ್ರಕರಣದಲ್ಲಿ ಭಾಗಿಯಾಗಿರುವ ಅನುಮಾನಾಸ್ಪದ ವ್ಯಕ್ತಿಗಳನ್ನು ಕಾಪಾಡುವ ಸಲುವಾಗಿ ಅಮಾಯಕನಾದ ನನಗೆ ಮೋಸ ಮಾಡಿರುತ್ತಾರೆ” ಎಂದು ಮುತ್ತುರಾಯಪ್ಪ ಆರೋಪಿಸುತ್ತಾರೆ.

ಇದನ್ನೂ ಓದಿರಿ: ಪೆದ್ದನಹಳ್ಳಿ ದಲಿತರ ಹತ್ಯೆ ಪ್ರಕರಣ: ಅನುಮಾನಕ್ಕೆ ಆಸ್ಪದ ನೀಡಿದ ತನಿಖಾಧಿಕಾರಿಗಳ ಜಾತಿ, ಹಿನ್ನೆಲೆ; ಆರೋಪ

ಕುಟುಂಬ ಏನು ಹೇಳುತ್ತದೆ? ಆರೋಪಿಗಳು ಯಾರು?

ಮಹಾಲಕ್ಷ್ಮಮ್ಮ- ಮುತ್ತುರಾಯಪ್ಪ ಜಕ್ಕೇನಹಳ್ಳಿ ಗ್ರಾಮದ ದಂಪತಿ. ಇವರಿಗೆ ಮೂರು ಜನ ಹೆಣ್ಣು ಮಕ್ಕಳು. ಒಬ್ಬ ಗಂಡು ಮಗ. ಮೂವರು ಹೆಣ್ಣುಮಕ್ಕಳಲ್ಲಿ ನಡುಮಧ್ಯೆಯವರಾದ ಮುತ್ತಮ್ಮ ಅವರು ಜಕ್ಕೇನಹಳ್ಳಿಯ ಗ್ರಾಮದ ಒಕ್ಕಲಿಗ ಜಾತಿಯ ನಾಗರಾಜ್‌ (ಕೆಎಸ್‌ಆರ್‌ಟಿಸಿ ಡ್ರೈವರ್‌) ಎಂಬವರನ್ನು ಸುಮಾರು ಆರೇಳು ವರ್ಷಗಳ ಹಿಂದೆ ಮದುವೆಯಾಗುತ್ತಾರೆ. ನಾಗರಾಜ್‌- ಮುತ್ತಮ್ಮ ಕುಟುಂಬ ತುಮಕೂರಿನಲ್ಲೇ ವಾಸವಿತ್ತು.

ನಾಗರಾಜ್‌ ಅವರ ಬಾಮೈದ ಬಸವರಾಜನು ಮುತ್ತುರಾಜನ ಜೊತೆ ಆಗಾಗ್ಗೆ ಜಗಳವಾಡುತ್ತಿದ್ದನು. “ನಿಮ್ಮಕ್ಕ ನಮ್ಮ ಭಾವನನ್ನು ಮದುವೆಯಾದ ಕಾರಣ ನನಗೆ ಯಾರೂ ಹೆಣ್ಣು ಕೊಡುತ್ತಿಲ್ಲ” ಎಂದು ತಕರಾರು ತೆಗೆಯುತ್ತಿದ್ದನು. ಮುತ್ತರಾಜ ತನ್ನ ಅಕ್ಕನಲ್ಲಿ ಹೋಗಿ, “ಆಗಿದ್ದು ಆಗಿಹೋಯಿತು. ನಾನು ನಿನ್ನನ್ನು ಸಾಕಿಕೊಳ್ಳುತ್ತೇನೆ. ನಮ್ಮ ಮನೆಗೆ ಬಂದು ಬಿಡು” ಎಂದು ಕೇಳಿಕೊಂಡಿದ್ದ. ಅವರು ಬಂದಿರಲಿಲ್ಲ.

ಕೊಲೆಯಾಗುವ ಸಮಯದಲ್ಲಿ ಜಕ್ಕೇನಹಳ್ಳಿಯಲ್ಲಿ ಜಾತ್ರೆ ಇತ್ತು. ಅದಕ್ಕೂ ಐದಾರು ದಿನಗಳ ಮುಂಚೆ ಬಸವರಾಜನು ಮುತ್ತುರಾಜನೊಂದಿಗೆ ಚೆನ್ನಾಗಿ ಹೊಂದಾಣಿಕೆಯಿಂದ ಇದ್ದನು. ಏಪ್ರಿಲ್‌ 28ರ ಮಧ್ಯಾಹ್ನ 3 ಗಂಟೆಯ ಸಮಯದಲ್ಲಿ ಮನೆಯ ಬಳಿ ಬಂದ ಬಸವರಾಜ, ಮುತ್ತುರಾಜರನ್ನು ಕರೆದುಕೊಂಡು ಹೋಗುತ್ತಾನೆ. ಮುತ್ತುರಾಜ ಟವೆಲ್‌ ಧರಿಸಿದ್ದರು. ಸಂಜೆ ವೇಳೆಗೆ ಮತ್ತೆ ಒಬ್ಬನೇ ಮರಳಿದ ಬಸವರಾಜನು ಮುತ್ತುರಾಜನ ಟವೆಲ್ ವಾಪಸ್‌ ತಂದಿರುತ್ತಾನೆ. “ಟವಲ್‌ ಮಾತ್ರ ತಂದಿದ್ದೀಯ. ನಮ್ಮ ಹುಡುಗ ಎಲ್ಲೋ” ಎಂದು ಮಹಾಲಕ್ಷ್ಮಮ್ಮ  ಕೇಳುತ್ತಾರೆ. ಆದರೆ ಆತ, “ನನಗೆ ಮಾಹಿತಿ ಇಲ್ಲ” ಎಂದು ಹೇಳುತ್ತಾನೆ.

ಮುತ್ತುರಾಯಪ್ಪನವರ ಹೆಂಡತಿ ಮಹಾಲಕ್ಷ್ಮಮ್ಮ ತುಮಕೂರಿನ ನರಸಿಂಹಯ್ಯ ಆಸ್ಪತ್ರೆಯಲ್ಲಿ ಸ್ಲೀಪರ್‌ ಕೆಲಸ ಮಾಡುತ್ತಿದ್ದು, ರಾತ್ರಿ ಪಾಳಿಗೆಂದು ಅಂದು ಸಂಜೆ ಹೋಗಿರುತ್ತಾರೆ. ಬೆಳಿಗ್ಗೆ ವಾಪಸ್‌ ಮನೆಗೆ ಮರಳಿದಾಗ ಅವರಿಗೆ ಕೆಟ್ಟ ಸುದ್ದಿ ಕಾದಿರುತ್ತದೆ.

ಪೊಲೀಸರು ಬಂದು ಹೆಣವನ್ನು ಶವಾಗಾರಕ್ಕೆ ತೆಗೆದುಕೊಂಡು ಹೋಗುತ್ತಾರೆ. ಮರಣೋತ್ತರ ಪರೀಕ್ಷೆಯ ನಂತರ ಹೆಣವನ್ನು ಕುಟುಂಬಕ್ಕೆ ಹಸ್ತಾಂತರಿಸುತ್ತಾರೆ. ರಾತ್ರಿ ಅಂತ್ಯಸಂಸ್ಕಾರ ನಡೆಯುತ್ತದೆ. ಅಂದು ಹತ್ತು ಗಂಟೆಯ ಸಮಯದಲ್ಲಿ ನಾಗರಾಜ್‌ (ಮುತ್ತಮ್ಮನ ಗಂಡ) ಕುಡಿದ ಮತ್ತಲ್ಲಿ- “ನಾವೇ ಕೊಲೆ ಮಾಡಿದ್ದೀವಿ” ಎಂದು ಹೇಳಿದ್ದರು ಎಂದು ಕುಟುಂಬ ಆರೋಪಿಸುತ್ತದೆ.

ಎಸ್‌ಪಿಗೆ ದೂರು

ನ್ಯಾಚುರಲ್‌ ಡೆತ್‌ ಎಂದು ಹೇಳಲಾಗುತ್ತಿತ್ತು. ಆದರೆ ಕುಟುಂಬ ಇದನ್ನು ಒಪ್ಪಲಿಲ್ಲ. ವಿಷಯ ಅರಿತ ದಲಿತ ಸಂಘರ್ಷ ಸಮಿತಿ ಮುಖಂಡರು ಪ್ರಕರಣವನ್ನು ಮುಚ್ಚಿ ಹಾಕಲು ಬಿಡಲಿಲ್ಲ. ಮೇ 7ರಂದು ಎಸ್‌ಪಿಗೆ ವಿಷಯ ತಿಳಿಸಿದರು. ಬಳಿಕ ಮೇ 18ರಂದು ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮರು ದೂರು ನೀಡಿದ ಬಳಿಕ ಪ್ರಕರಣದ ದಾಖಲಾಗುತ್ತದೆ.

ಇದನ್ನೂ ಓದಿರಿ: ಪೆದ್ದನಹಳ್ಳಿ ಪ್ರಕರಣ: ಇಬ್ಬರು ದಲಿತ ಯುವಕರ ಹತ್ಯೆಯ ಸುತ್ತ ಎಷ್ಟೊಂದು ಸಂಕಟ!

“ನನ್ನ ಮಗನಿಗೆ ಈಜಲು ಬರುತ್ತಿತ್ತು. ಒಕ್ಕಲಿಗ ಜನಾಂಗಕ್ಕೆ ಸೇರಿದ ಬಸವರಾಜು ಮತ್ತು ಆತನ ಸ್ನೇಹಿತರು ಸೇರಿ ನನ್ನ ಮಗನಾದ ಮುತ್ತುರಾಜನನ್ನು ಕೊಲೆ ಮಾಡಿ ನಾಲೆಗೆ ಹಾಕಿರುತ್ತಾರೆ” ಎಂದು ಮುತ್ತುರಾಯಪ್ಪ ದೂರಿನಲ್ಲಿ ತಿಳಿಸಿದ್ದಾರೆ. ಐಪಿಸಿ ಹಾಗೂ ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಪ್ರಕರಣಕ್ಕೆ ಸಂಬಂಧಪಟ್ಟ ಡಿವೈಎಸ್‌ಪಿಯವರನ್ನು ‘ನಾನುಗೌರಿ.ಕಾಂ’ ಸಂಪರ್ಕಿಸಿತು. ಮಾಹಿತಿ ನೀಡಲು ನಿರಾಕರಿಸಿದ ಅವರು, ಎಸ್‌ಪಿಯವರನ್ನು ಸಂಪರ್ಕಿಸಿ ಎಂದು ಪ್ರತಿಕ್ರಿಯಿಸಿದರು.

“ಇಷ್ಟೆಲ್ಲ ಆದ ಮೇಲೆ, ಪ್ರಕರಣ ಏನಾಯಿತೆಂಬ ಮಾಹಿತಿ ದೊರಕುತ್ತಿಲ್ಲ. ಅವರಿವರಲ್ಲಿಗೆ ಓಡಾಡಲು ನಮ್ಮ ಬಳಿ ದುಡ್ಡು-ಕಾಸು ಇಲ್ಲ. ಏನು ಮಾಡಬೇಕೆಂದು ತೋಚುತ್ತಿಲ್ಲ. ತಪ್ಪಿತಸ್ಥರ ಬಂಧನವಾಗಿದೆಯೋ ಇಲ್ಲವೋ ಗೊತ್ತಿಲ್ಲ” ಎಂದು ಕುಟುಂಬ ಸದಸ್ಯರು ದುಃಖಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...