Homeದಲಿತ್ ಫೈಲ್ಸ್ತುಮಕೂರು: ಮುಚ್ಚಿ ಹೋಗುತ್ತಿದೆಯೇ ಮತ್ತೊಬ್ಬ ದಲಿತನ ಕೊಲೆ ಪ್ರಕರಣ?

ತುಮಕೂರು: ಮುಚ್ಚಿ ಹೋಗುತ್ತಿದೆಯೇ ಮತ್ತೊಬ್ಬ ದಲಿತನ ಕೊಲೆ ಪ್ರಕರಣ?

- Advertisement -
- Advertisement -

ತುಮಕೂರು ತಾಲ್ಲೂಕು ಕೋರಾ ಹೋಬಳಿ ಜಕ್ಕೇನಹಳ್ಳಿ ಗ್ರಾಮದಲ್ಲಿ ಏಪ್ರಿಲ್‌ 29ನೇ ತಾರೀಕಿನಿಂದ ಈ ಪ್ರಕರಣ ತೆರೆದುಕೊಳ್ಳುತ್ತದೆ. ಊರಿನ ಬಳಿ ನಡೆಯುತ್ತಿರುವ ಎತ್ತಿನಹೊಳೆ ಕಾಮಗಾರಿಯ ಚಾನೆಲ್‌ನಲ್ಲಿ ಮಾದಿಗ ಸಮುದಾಯದ ಮುತ್ತುರಾಜ (26) ಎಂಬ ಯುವಕನ ಶವ ಪತ್ತೆಯಾಗುತ್ತದೆ. ಅಂದು ಮುತ್ತುರಾಜನ ತಂದೆ ಮುತ್ತುರಾಯಪ್ಪ (65) ನೀಡಿದ ದೂರು ದಾಖಲಾಗುತ್ತದೆ. ಆದರೆ ದೂರಿನಲ್ಲಿ ಏನು ಬರೆದಿದೆ ಎಂಬುದೇ ಗೊತ್ತಾಗದ, ಕೇವಲ ಸಹಿ ಮಾಡಲು ಬರುವ ಮುತ್ತುರಾಯಪ್ಪ ಮತ್ತೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಚೇರಿಯ ಮೆಟ್ಟಿಲೇರುತ್ತಾರೆ.

ಶವವಾಗಿ ಪತ್ತೆಯಾದ ಮುತ್ತುರಾಜನನ್ನು ಸವರ್ಣೀಯ ಜಾತಿಯವರು ಕೊಂದಿದ್ದಾರೆ ಎಂಬುದು ಮುತ್ತುರಾಯಪ್ಪನವರ ಕುಟುಂಬದ ಆರೋಪ. ಜಕ್ಕೇನಹಳ್ಳಿಯ ಜಿಲ್ಲಾ ಪೊಲೀಸ್ ಕಚೇರಿಗೆ ಜೂನ್‌ 7ರಂದು ತೆರಳಿದ ಮುತ್ತುರಾಯಪ್ಪ ಹೀಗೆ ದೂರು ನೀಡುತ್ತಾರೆ:

“ತುಮಕೂರು ಗ್ರಾಮಾಂತರ ಪೊಲೀಸ್‌ ಠಾಣಾಧಿಕಾರಿಗಳು ನಾನು ನೀಡಿದ್ದ ಕೈ ಬರವಣಿಗೆಯ ದೂರನ್ನು ಮರೆಮಾಚಿ ಪೊಲೀಸ್‌ನವರೇ ಒಂದು ದೂರನ್ನು ಸೃಷ್ಟಿ ಮಾಡಿಕೊಂಡು ಅನಕ್ಷರಸ್ಥನಾದ ನನ್ನ ಸಹಿಯನ್ನು ಪಡೆದುಕೊಂಡು ನನಗೆ ಅನ್ಯಾಯ ಮಾಡಿದ್ದಾರೆ. ಇದರ ವಿರುದ್ಧ ಕ್ರಮ ಜರುಗಿಸಬೇಕು” ಎಂದು ಒತ್ತಾಯಿಸುತ್ತಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಜಕ್ಕೇನಹಳ್ಳಿ  ಗ್ರಾಮದ ಬಳಿ ನಡೆಯುತ್ತಿರುವ ಎತ್ತಿನಹೊಳೆ ಕಾಮಗಾರಿ ಚಾನಲ್‌ನಲ್ಲಿ ನನ್ನ ಮಗನಾದ ಮುತ್ತುರಾಜನ ಮೃತದೇಹವು ತೇಲುತ್ತಿತ್ತು. ಸಾರ್ವಜನಿಕರು ಗಮನಿಸಿ ವಿಚಾರ ತಿಳಿಸಿದರು. ಪೊಲೀಸರು ಮಾಹಿತಿ ತಿಳಿದು ಸ್ಥಳಕ್ಕೆ ಬಂದರು. ಪೊಲೀಸ್‌ನವರ ಸಮಕ್ಷಮ ಮೃತ ದೇಹವನ್ನು ಹೊರತೆಗೆದು ತುಮಕೂರಿನ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿತ್ತು. ಮೃತದೇಹವನ್ನು ನಮ್ಮ ವಶಕ್ಕೆ ಕೇಳಿದಾಗ ಪೊಲೀಸರ ಕಂಪ್ಲೇಟ್ ಅಗತ್ಯವೆಂದರು. ಆ ದಿನ ನಾನು ತುಂಬ ದುಃಖಿತನಾಗಿದ್ದೆ. ಏನನ್ನೂ ಸರಿಯಾಗಿ ಹೇಳುವ ಪರಿಸ್ಥಿತಿಯಲ್ಲಿ ಇರಲಿಲ್ಲ. ಆದರೆ ನಾನು ನನಗೆ ಗೊತ್ತಿರುವ ಒಬ್ಬರಿಂದ ಒಂದು ದೂರನ್ನು ಕೈಯಲ್ಲಿ ಬರೆಯಿಸಿ ಆ ದೂರಿಗೆ ನಾನು ಸಹಿ ಮಾಡಿರುತ್ತೇನೆ. ನಾನು ಸಹಿ ಮಾಡುವುದನ್ನು ಮಾತ್ರ ಕಲಿತಿರುತ್ತೇನೆ. ಓದಲು, ಬರೆಯಲು ಬರುವುದಿಲ್ಲ. ಆದರೆ ಪೊಲೀಸ್‌ನವರು ನಾನು ನೀಡಿದ್ದ ದೂರನ್ನು ಮರೆಮಾಚಿ ಈ ಪ್ರಕರಣದಲ್ಲಿ ಭಾಗಿಯಾಗಿರುವ ಅನುಮಾನಾಸ್ಪದ ವ್ಯಕ್ತಿಗಳನ್ನು ಕಾಪಾಡುವ ಸಲುವಾಗಿ ಅಮಾಯಕನಾದ ನನಗೆ ಮೋಸ ಮಾಡಿರುತ್ತಾರೆ” ಎಂದು ಮುತ್ತುರಾಯಪ್ಪ ಆರೋಪಿಸುತ್ತಾರೆ.

ಇದನ್ನೂ ಓದಿರಿ: ಪೆದ್ದನಹಳ್ಳಿ ದಲಿತರ ಹತ್ಯೆ ಪ್ರಕರಣ: ಅನುಮಾನಕ್ಕೆ ಆಸ್ಪದ ನೀಡಿದ ತನಿಖಾಧಿಕಾರಿಗಳ ಜಾತಿ, ಹಿನ್ನೆಲೆ; ಆರೋಪ

ಕುಟುಂಬ ಏನು ಹೇಳುತ್ತದೆ? ಆರೋಪಿಗಳು ಯಾರು?

ಮಹಾಲಕ್ಷ್ಮಮ್ಮ- ಮುತ್ತುರಾಯಪ್ಪ ಜಕ್ಕೇನಹಳ್ಳಿ ಗ್ರಾಮದ ದಂಪತಿ. ಇವರಿಗೆ ಮೂರು ಜನ ಹೆಣ್ಣು ಮಕ್ಕಳು. ಒಬ್ಬ ಗಂಡು ಮಗ. ಮೂವರು ಹೆಣ್ಣುಮಕ್ಕಳಲ್ಲಿ ನಡುಮಧ್ಯೆಯವರಾದ ಮುತ್ತಮ್ಮ ಅವರು ಜಕ್ಕೇನಹಳ್ಳಿಯ ಗ್ರಾಮದ ಒಕ್ಕಲಿಗ ಜಾತಿಯ ನಾಗರಾಜ್‌ (ಕೆಎಸ್‌ಆರ್‌ಟಿಸಿ ಡ್ರೈವರ್‌) ಎಂಬವರನ್ನು ಸುಮಾರು ಆರೇಳು ವರ್ಷಗಳ ಹಿಂದೆ ಮದುವೆಯಾಗುತ್ತಾರೆ. ನಾಗರಾಜ್‌- ಮುತ್ತಮ್ಮ ಕುಟುಂಬ ತುಮಕೂರಿನಲ್ಲೇ ವಾಸವಿತ್ತು.

ನಾಗರಾಜ್‌ ಅವರ ಬಾಮೈದ ಬಸವರಾಜನು ಮುತ್ತುರಾಜನ ಜೊತೆ ಆಗಾಗ್ಗೆ ಜಗಳವಾಡುತ್ತಿದ್ದನು. “ನಿಮ್ಮಕ್ಕ ನಮ್ಮ ಭಾವನನ್ನು ಮದುವೆಯಾದ ಕಾರಣ ನನಗೆ ಯಾರೂ ಹೆಣ್ಣು ಕೊಡುತ್ತಿಲ್ಲ” ಎಂದು ತಕರಾರು ತೆಗೆಯುತ್ತಿದ್ದನು. ಮುತ್ತರಾಜ ತನ್ನ ಅಕ್ಕನಲ್ಲಿ ಹೋಗಿ, “ಆಗಿದ್ದು ಆಗಿಹೋಯಿತು. ನಾನು ನಿನ್ನನ್ನು ಸಾಕಿಕೊಳ್ಳುತ್ತೇನೆ. ನಮ್ಮ ಮನೆಗೆ ಬಂದು ಬಿಡು” ಎಂದು ಕೇಳಿಕೊಂಡಿದ್ದ. ಅವರು ಬಂದಿರಲಿಲ್ಲ.

ಕೊಲೆಯಾಗುವ ಸಮಯದಲ್ಲಿ ಜಕ್ಕೇನಹಳ್ಳಿಯಲ್ಲಿ ಜಾತ್ರೆ ಇತ್ತು. ಅದಕ್ಕೂ ಐದಾರು ದಿನಗಳ ಮುಂಚೆ ಬಸವರಾಜನು ಮುತ್ತುರಾಜನೊಂದಿಗೆ ಚೆನ್ನಾಗಿ ಹೊಂದಾಣಿಕೆಯಿಂದ ಇದ್ದನು. ಏಪ್ರಿಲ್‌ 28ರ ಮಧ್ಯಾಹ್ನ 3 ಗಂಟೆಯ ಸಮಯದಲ್ಲಿ ಮನೆಯ ಬಳಿ ಬಂದ ಬಸವರಾಜ, ಮುತ್ತುರಾಜರನ್ನು ಕರೆದುಕೊಂಡು ಹೋಗುತ್ತಾನೆ. ಮುತ್ತುರಾಜ ಟವೆಲ್‌ ಧರಿಸಿದ್ದರು. ಸಂಜೆ ವೇಳೆಗೆ ಮತ್ತೆ ಒಬ್ಬನೇ ಮರಳಿದ ಬಸವರಾಜನು ಮುತ್ತುರಾಜನ ಟವೆಲ್ ವಾಪಸ್‌ ತಂದಿರುತ್ತಾನೆ. “ಟವಲ್‌ ಮಾತ್ರ ತಂದಿದ್ದೀಯ. ನಮ್ಮ ಹುಡುಗ ಎಲ್ಲೋ” ಎಂದು ಮಹಾಲಕ್ಷ್ಮಮ್ಮ  ಕೇಳುತ್ತಾರೆ. ಆದರೆ ಆತ, “ನನಗೆ ಮಾಹಿತಿ ಇಲ್ಲ” ಎಂದು ಹೇಳುತ್ತಾನೆ.

ಮುತ್ತುರಾಯಪ್ಪನವರ ಹೆಂಡತಿ ಮಹಾಲಕ್ಷ್ಮಮ್ಮ ತುಮಕೂರಿನ ನರಸಿಂಹಯ್ಯ ಆಸ್ಪತ್ರೆಯಲ್ಲಿ ಸ್ಲೀಪರ್‌ ಕೆಲಸ ಮಾಡುತ್ತಿದ್ದು, ರಾತ್ರಿ ಪಾಳಿಗೆಂದು ಅಂದು ಸಂಜೆ ಹೋಗಿರುತ್ತಾರೆ. ಬೆಳಿಗ್ಗೆ ವಾಪಸ್‌ ಮನೆಗೆ ಮರಳಿದಾಗ ಅವರಿಗೆ ಕೆಟ್ಟ ಸುದ್ದಿ ಕಾದಿರುತ್ತದೆ.

ಪೊಲೀಸರು ಬಂದು ಹೆಣವನ್ನು ಶವಾಗಾರಕ್ಕೆ ತೆಗೆದುಕೊಂಡು ಹೋಗುತ್ತಾರೆ. ಮರಣೋತ್ತರ ಪರೀಕ್ಷೆಯ ನಂತರ ಹೆಣವನ್ನು ಕುಟುಂಬಕ್ಕೆ ಹಸ್ತಾಂತರಿಸುತ್ತಾರೆ. ರಾತ್ರಿ ಅಂತ್ಯಸಂಸ್ಕಾರ ನಡೆಯುತ್ತದೆ. ಅಂದು ಹತ್ತು ಗಂಟೆಯ ಸಮಯದಲ್ಲಿ ನಾಗರಾಜ್‌ (ಮುತ್ತಮ್ಮನ ಗಂಡ) ಕುಡಿದ ಮತ್ತಲ್ಲಿ- “ನಾವೇ ಕೊಲೆ ಮಾಡಿದ್ದೀವಿ” ಎಂದು ಹೇಳಿದ್ದರು ಎಂದು ಕುಟುಂಬ ಆರೋಪಿಸುತ್ತದೆ.

ಎಸ್‌ಪಿಗೆ ದೂರು

ನ್ಯಾಚುರಲ್‌ ಡೆತ್‌ ಎಂದು ಹೇಳಲಾಗುತ್ತಿತ್ತು. ಆದರೆ ಕುಟುಂಬ ಇದನ್ನು ಒಪ್ಪಲಿಲ್ಲ. ವಿಷಯ ಅರಿತ ದಲಿತ ಸಂಘರ್ಷ ಸಮಿತಿ ಮುಖಂಡರು ಪ್ರಕರಣವನ್ನು ಮುಚ್ಚಿ ಹಾಕಲು ಬಿಡಲಿಲ್ಲ. ಮೇ 7ರಂದು ಎಸ್‌ಪಿಗೆ ವಿಷಯ ತಿಳಿಸಿದರು. ಬಳಿಕ ಮೇ 18ರಂದು ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮರು ದೂರು ನೀಡಿದ ಬಳಿಕ ಪ್ರಕರಣದ ದಾಖಲಾಗುತ್ತದೆ.

ಇದನ್ನೂ ಓದಿರಿ: ಪೆದ್ದನಹಳ್ಳಿ ಪ್ರಕರಣ: ಇಬ್ಬರು ದಲಿತ ಯುವಕರ ಹತ್ಯೆಯ ಸುತ್ತ ಎಷ್ಟೊಂದು ಸಂಕಟ!

“ನನ್ನ ಮಗನಿಗೆ ಈಜಲು ಬರುತ್ತಿತ್ತು. ಒಕ್ಕಲಿಗ ಜನಾಂಗಕ್ಕೆ ಸೇರಿದ ಬಸವರಾಜು ಮತ್ತು ಆತನ ಸ್ನೇಹಿತರು ಸೇರಿ ನನ್ನ ಮಗನಾದ ಮುತ್ತುರಾಜನನ್ನು ಕೊಲೆ ಮಾಡಿ ನಾಲೆಗೆ ಹಾಕಿರುತ್ತಾರೆ” ಎಂದು ಮುತ್ತುರಾಯಪ್ಪ ದೂರಿನಲ್ಲಿ ತಿಳಿಸಿದ್ದಾರೆ. ಐಪಿಸಿ ಹಾಗೂ ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಪ್ರಕರಣಕ್ಕೆ ಸಂಬಂಧಪಟ್ಟ ಡಿವೈಎಸ್‌ಪಿಯವರನ್ನು ‘ನಾನುಗೌರಿ.ಕಾಂ’ ಸಂಪರ್ಕಿಸಿತು. ಮಾಹಿತಿ ನೀಡಲು ನಿರಾಕರಿಸಿದ ಅವರು, ಎಸ್‌ಪಿಯವರನ್ನು ಸಂಪರ್ಕಿಸಿ ಎಂದು ಪ್ರತಿಕ್ರಿಯಿಸಿದರು.

“ಇಷ್ಟೆಲ್ಲ ಆದ ಮೇಲೆ, ಪ್ರಕರಣ ಏನಾಯಿತೆಂಬ ಮಾಹಿತಿ ದೊರಕುತ್ತಿಲ್ಲ. ಅವರಿವರಲ್ಲಿಗೆ ಓಡಾಡಲು ನಮ್ಮ ಬಳಿ ದುಡ್ಡು-ಕಾಸು ಇಲ್ಲ. ಏನು ಮಾಡಬೇಕೆಂದು ತೋಚುತ್ತಿಲ್ಲ. ತಪ್ಪಿತಸ್ಥರ ಬಂಧನವಾಗಿದೆಯೋ ಇಲ್ಲವೋ ಗೊತ್ತಿಲ್ಲ” ಎಂದು ಕುಟುಂಬ ಸದಸ್ಯರು ದುಃಖಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...