Homeದಲಿತ್ ಫೈಲ್ಸ್ತುಮಕೂರು: ಮುಚ್ಚಿ ಹೋಗುತ್ತಿದೆಯೇ ಮತ್ತೊಬ್ಬ ದಲಿತನ ಕೊಲೆ ಪ್ರಕರಣ?

ತುಮಕೂರು: ಮುಚ್ಚಿ ಹೋಗುತ್ತಿದೆಯೇ ಮತ್ತೊಬ್ಬ ದಲಿತನ ಕೊಲೆ ಪ್ರಕರಣ?

- Advertisement -
- Advertisement -

ತುಮಕೂರು ತಾಲ್ಲೂಕು ಕೋರಾ ಹೋಬಳಿ ಜಕ್ಕೇನಹಳ್ಳಿ ಗ್ರಾಮದಲ್ಲಿ ಏಪ್ರಿಲ್‌ 29ನೇ ತಾರೀಕಿನಿಂದ ಈ ಪ್ರಕರಣ ತೆರೆದುಕೊಳ್ಳುತ್ತದೆ. ಊರಿನ ಬಳಿ ನಡೆಯುತ್ತಿರುವ ಎತ್ತಿನಹೊಳೆ ಕಾಮಗಾರಿಯ ಚಾನೆಲ್‌ನಲ್ಲಿ ಮಾದಿಗ ಸಮುದಾಯದ ಮುತ್ತುರಾಜ (26) ಎಂಬ ಯುವಕನ ಶವ ಪತ್ತೆಯಾಗುತ್ತದೆ. ಅಂದು ಮುತ್ತುರಾಜನ ತಂದೆ ಮುತ್ತುರಾಯಪ್ಪ (65) ನೀಡಿದ ದೂರು ದಾಖಲಾಗುತ್ತದೆ. ಆದರೆ ದೂರಿನಲ್ಲಿ ಏನು ಬರೆದಿದೆ ಎಂಬುದೇ ಗೊತ್ತಾಗದ, ಕೇವಲ ಸಹಿ ಮಾಡಲು ಬರುವ ಮುತ್ತುರಾಯಪ್ಪ ಮತ್ತೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಚೇರಿಯ ಮೆಟ್ಟಿಲೇರುತ್ತಾರೆ.

ಶವವಾಗಿ ಪತ್ತೆಯಾದ ಮುತ್ತುರಾಜನನ್ನು ಸವರ್ಣೀಯ ಜಾತಿಯವರು ಕೊಂದಿದ್ದಾರೆ ಎಂಬುದು ಮುತ್ತುರಾಯಪ್ಪನವರ ಕುಟುಂಬದ ಆರೋಪ. ಜಕ್ಕೇನಹಳ್ಳಿಯ ಜಿಲ್ಲಾ ಪೊಲೀಸ್ ಕಚೇರಿಗೆ ಜೂನ್‌ 7ರಂದು ತೆರಳಿದ ಮುತ್ತುರಾಯಪ್ಪ ಹೀಗೆ ದೂರು ನೀಡುತ್ತಾರೆ:

“ತುಮಕೂರು ಗ್ರಾಮಾಂತರ ಪೊಲೀಸ್‌ ಠಾಣಾಧಿಕಾರಿಗಳು ನಾನು ನೀಡಿದ್ದ ಕೈ ಬರವಣಿಗೆಯ ದೂರನ್ನು ಮರೆಮಾಚಿ ಪೊಲೀಸ್‌ನವರೇ ಒಂದು ದೂರನ್ನು ಸೃಷ್ಟಿ ಮಾಡಿಕೊಂಡು ಅನಕ್ಷರಸ್ಥನಾದ ನನ್ನ ಸಹಿಯನ್ನು ಪಡೆದುಕೊಂಡು ನನಗೆ ಅನ್ಯಾಯ ಮಾಡಿದ್ದಾರೆ. ಇದರ ವಿರುದ್ಧ ಕ್ರಮ ಜರುಗಿಸಬೇಕು” ಎಂದು ಒತ್ತಾಯಿಸುತ್ತಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಜಕ್ಕೇನಹಳ್ಳಿ  ಗ್ರಾಮದ ಬಳಿ ನಡೆಯುತ್ತಿರುವ ಎತ್ತಿನಹೊಳೆ ಕಾಮಗಾರಿ ಚಾನಲ್‌ನಲ್ಲಿ ನನ್ನ ಮಗನಾದ ಮುತ್ತುರಾಜನ ಮೃತದೇಹವು ತೇಲುತ್ತಿತ್ತು. ಸಾರ್ವಜನಿಕರು ಗಮನಿಸಿ ವಿಚಾರ ತಿಳಿಸಿದರು. ಪೊಲೀಸರು ಮಾಹಿತಿ ತಿಳಿದು ಸ್ಥಳಕ್ಕೆ ಬಂದರು. ಪೊಲೀಸ್‌ನವರ ಸಮಕ್ಷಮ ಮೃತ ದೇಹವನ್ನು ಹೊರತೆಗೆದು ತುಮಕೂರಿನ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿತ್ತು. ಮೃತದೇಹವನ್ನು ನಮ್ಮ ವಶಕ್ಕೆ ಕೇಳಿದಾಗ ಪೊಲೀಸರ ಕಂಪ್ಲೇಟ್ ಅಗತ್ಯವೆಂದರು. ಆ ದಿನ ನಾನು ತುಂಬ ದುಃಖಿತನಾಗಿದ್ದೆ. ಏನನ್ನೂ ಸರಿಯಾಗಿ ಹೇಳುವ ಪರಿಸ್ಥಿತಿಯಲ್ಲಿ ಇರಲಿಲ್ಲ. ಆದರೆ ನಾನು ನನಗೆ ಗೊತ್ತಿರುವ ಒಬ್ಬರಿಂದ ಒಂದು ದೂರನ್ನು ಕೈಯಲ್ಲಿ ಬರೆಯಿಸಿ ಆ ದೂರಿಗೆ ನಾನು ಸಹಿ ಮಾಡಿರುತ್ತೇನೆ. ನಾನು ಸಹಿ ಮಾಡುವುದನ್ನು ಮಾತ್ರ ಕಲಿತಿರುತ್ತೇನೆ. ಓದಲು, ಬರೆಯಲು ಬರುವುದಿಲ್ಲ. ಆದರೆ ಪೊಲೀಸ್‌ನವರು ನಾನು ನೀಡಿದ್ದ ದೂರನ್ನು ಮರೆಮಾಚಿ ಈ ಪ್ರಕರಣದಲ್ಲಿ ಭಾಗಿಯಾಗಿರುವ ಅನುಮಾನಾಸ್ಪದ ವ್ಯಕ್ತಿಗಳನ್ನು ಕಾಪಾಡುವ ಸಲುವಾಗಿ ಅಮಾಯಕನಾದ ನನಗೆ ಮೋಸ ಮಾಡಿರುತ್ತಾರೆ” ಎಂದು ಮುತ್ತುರಾಯಪ್ಪ ಆರೋಪಿಸುತ್ತಾರೆ.

ಇದನ್ನೂ ಓದಿರಿ: ಪೆದ್ದನಹಳ್ಳಿ ದಲಿತರ ಹತ್ಯೆ ಪ್ರಕರಣ: ಅನುಮಾನಕ್ಕೆ ಆಸ್ಪದ ನೀಡಿದ ತನಿಖಾಧಿಕಾರಿಗಳ ಜಾತಿ, ಹಿನ್ನೆಲೆ; ಆರೋಪ

ಕುಟುಂಬ ಏನು ಹೇಳುತ್ತದೆ? ಆರೋಪಿಗಳು ಯಾರು?

ಮಹಾಲಕ್ಷ್ಮಮ್ಮ- ಮುತ್ತುರಾಯಪ್ಪ ಜಕ್ಕೇನಹಳ್ಳಿ ಗ್ರಾಮದ ದಂಪತಿ. ಇವರಿಗೆ ಮೂರು ಜನ ಹೆಣ್ಣು ಮಕ್ಕಳು. ಒಬ್ಬ ಗಂಡು ಮಗ. ಮೂವರು ಹೆಣ್ಣುಮಕ್ಕಳಲ್ಲಿ ನಡುಮಧ್ಯೆಯವರಾದ ಮುತ್ತಮ್ಮ ಅವರು ಜಕ್ಕೇನಹಳ್ಳಿಯ ಗ್ರಾಮದ ಒಕ್ಕಲಿಗ ಜಾತಿಯ ನಾಗರಾಜ್‌ (ಕೆಎಸ್‌ಆರ್‌ಟಿಸಿ ಡ್ರೈವರ್‌) ಎಂಬವರನ್ನು ಸುಮಾರು ಆರೇಳು ವರ್ಷಗಳ ಹಿಂದೆ ಮದುವೆಯಾಗುತ್ತಾರೆ. ನಾಗರಾಜ್‌- ಮುತ್ತಮ್ಮ ಕುಟುಂಬ ತುಮಕೂರಿನಲ್ಲೇ ವಾಸವಿತ್ತು.

ನಾಗರಾಜ್‌ ಅವರ ಬಾಮೈದ ಬಸವರಾಜನು ಮುತ್ತುರಾಜನ ಜೊತೆ ಆಗಾಗ್ಗೆ ಜಗಳವಾಡುತ್ತಿದ್ದನು. “ನಿಮ್ಮಕ್ಕ ನಮ್ಮ ಭಾವನನ್ನು ಮದುವೆಯಾದ ಕಾರಣ ನನಗೆ ಯಾರೂ ಹೆಣ್ಣು ಕೊಡುತ್ತಿಲ್ಲ” ಎಂದು ತಕರಾರು ತೆಗೆಯುತ್ತಿದ್ದನು. ಮುತ್ತರಾಜ ತನ್ನ ಅಕ್ಕನಲ್ಲಿ ಹೋಗಿ, “ಆಗಿದ್ದು ಆಗಿಹೋಯಿತು. ನಾನು ನಿನ್ನನ್ನು ಸಾಕಿಕೊಳ್ಳುತ್ತೇನೆ. ನಮ್ಮ ಮನೆಗೆ ಬಂದು ಬಿಡು” ಎಂದು ಕೇಳಿಕೊಂಡಿದ್ದ. ಅವರು ಬಂದಿರಲಿಲ್ಲ.

ಕೊಲೆಯಾಗುವ ಸಮಯದಲ್ಲಿ ಜಕ್ಕೇನಹಳ್ಳಿಯಲ್ಲಿ ಜಾತ್ರೆ ಇತ್ತು. ಅದಕ್ಕೂ ಐದಾರು ದಿನಗಳ ಮುಂಚೆ ಬಸವರಾಜನು ಮುತ್ತುರಾಜನೊಂದಿಗೆ ಚೆನ್ನಾಗಿ ಹೊಂದಾಣಿಕೆಯಿಂದ ಇದ್ದನು. ಏಪ್ರಿಲ್‌ 28ರ ಮಧ್ಯಾಹ್ನ 3 ಗಂಟೆಯ ಸಮಯದಲ್ಲಿ ಮನೆಯ ಬಳಿ ಬಂದ ಬಸವರಾಜ, ಮುತ್ತುರಾಜರನ್ನು ಕರೆದುಕೊಂಡು ಹೋಗುತ್ತಾನೆ. ಮುತ್ತುರಾಜ ಟವೆಲ್‌ ಧರಿಸಿದ್ದರು. ಸಂಜೆ ವೇಳೆಗೆ ಮತ್ತೆ ಒಬ್ಬನೇ ಮರಳಿದ ಬಸವರಾಜನು ಮುತ್ತುರಾಜನ ಟವೆಲ್ ವಾಪಸ್‌ ತಂದಿರುತ್ತಾನೆ. “ಟವಲ್‌ ಮಾತ್ರ ತಂದಿದ್ದೀಯ. ನಮ್ಮ ಹುಡುಗ ಎಲ್ಲೋ” ಎಂದು ಮಹಾಲಕ್ಷ್ಮಮ್ಮ  ಕೇಳುತ್ತಾರೆ. ಆದರೆ ಆತ, “ನನಗೆ ಮಾಹಿತಿ ಇಲ್ಲ” ಎಂದು ಹೇಳುತ್ತಾನೆ.

ಮುತ್ತುರಾಯಪ್ಪನವರ ಹೆಂಡತಿ ಮಹಾಲಕ್ಷ್ಮಮ್ಮ ತುಮಕೂರಿನ ನರಸಿಂಹಯ್ಯ ಆಸ್ಪತ್ರೆಯಲ್ಲಿ ಸ್ಲೀಪರ್‌ ಕೆಲಸ ಮಾಡುತ್ತಿದ್ದು, ರಾತ್ರಿ ಪಾಳಿಗೆಂದು ಅಂದು ಸಂಜೆ ಹೋಗಿರುತ್ತಾರೆ. ಬೆಳಿಗ್ಗೆ ವಾಪಸ್‌ ಮನೆಗೆ ಮರಳಿದಾಗ ಅವರಿಗೆ ಕೆಟ್ಟ ಸುದ್ದಿ ಕಾದಿರುತ್ತದೆ.

ಪೊಲೀಸರು ಬಂದು ಹೆಣವನ್ನು ಶವಾಗಾರಕ್ಕೆ ತೆಗೆದುಕೊಂಡು ಹೋಗುತ್ತಾರೆ. ಮರಣೋತ್ತರ ಪರೀಕ್ಷೆಯ ನಂತರ ಹೆಣವನ್ನು ಕುಟುಂಬಕ್ಕೆ ಹಸ್ತಾಂತರಿಸುತ್ತಾರೆ. ರಾತ್ರಿ ಅಂತ್ಯಸಂಸ್ಕಾರ ನಡೆಯುತ್ತದೆ. ಅಂದು ಹತ್ತು ಗಂಟೆಯ ಸಮಯದಲ್ಲಿ ನಾಗರಾಜ್‌ (ಮುತ್ತಮ್ಮನ ಗಂಡ) ಕುಡಿದ ಮತ್ತಲ್ಲಿ- “ನಾವೇ ಕೊಲೆ ಮಾಡಿದ್ದೀವಿ” ಎಂದು ಹೇಳಿದ್ದರು ಎಂದು ಕುಟುಂಬ ಆರೋಪಿಸುತ್ತದೆ.

ಎಸ್‌ಪಿಗೆ ದೂರು

ನ್ಯಾಚುರಲ್‌ ಡೆತ್‌ ಎಂದು ಹೇಳಲಾಗುತ್ತಿತ್ತು. ಆದರೆ ಕುಟುಂಬ ಇದನ್ನು ಒಪ್ಪಲಿಲ್ಲ. ವಿಷಯ ಅರಿತ ದಲಿತ ಸಂಘರ್ಷ ಸಮಿತಿ ಮುಖಂಡರು ಪ್ರಕರಣವನ್ನು ಮುಚ್ಚಿ ಹಾಕಲು ಬಿಡಲಿಲ್ಲ. ಮೇ 7ರಂದು ಎಸ್‌ಪಿಗೆ ವಿಷಯ ತಿಳಿಸಿದರು. ಬಳಿಕ ಮೇ 18ರಂದು ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮರು ದೂರು ನೀಡಿದ ಬಳಿಕ ಪ್ರಕರಣದ ದಾಖಲಾಗುತ್ತದೆ.

ಇದನ್ನೂ ಓದಿರಿ: ಪೆದ್ದನಹಳ್ಳಿ ಪ್ರಕರಣ: ಇಬ್ಬರು ದಲಿತ ಯುವಕರ ಹತ್ಯೆಯ ಸುತ್ತ ಎಷ್ಟೊಂದು ಸಂಕಟ!

“ನನ್ನ ಮಗನಿಗೆ ಈಜಲು ಬರುತ್ತಿತ್ತು. ಒಕ್ಕಲಿಗ ಜನಾಂಗಕ್ಕೆ ಸೇರಿದ ಬಸವರಾಜು ಮತ್ತು ಆತನ ಸ್ನೇಹಿತರು ಸೇರಿ ನನ್ನ ಮಗನಾದ ಮುತ್ತುರಾಜನನ್ನು ಕೊಲೆ ಮಾಡಿ ನಾಲೆಗೆ ಹಾಕಿರುತ್ತಾರೆ” ಎಂದು ಮುತ್ತುರಾಯಪ್ಪ ದೂರಿನಲ್ಲಿ ತಿಳಿಸಿದ್ದಾರೆ. ಐಪಿಸಿ ಹಾಗೂ ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಪ್ರಕರಣಕ್ಕೆ ಸಂಬಂಧಪಟ್ಟ ಡಿವೈಎಸ್‌ಪಿಯವರನ್ನು ‘ನಾನುಗೌರಿ.ಕಾಂ’ ಸಂಪರ್ಕಿಸಿತು. ಮಾಹಿತಿ ನೀಡಲು ನಿರಾಕರಿಸಿದ ಅವರು, ಎಸ್‌ಪಿಯವರನ್ನು ಸಂಪರ್ಕಿಸಿ ಎಂದು ಪ್ರತಿಕ್ರಿಯಿಸಿದರು.

“ಇಷ್ಟೆಲ್ಲ ಆದ ಮೇಲೆ, ಪ್ರಕರಣ ಏನಾಯಿತೆಂಬ ಮಾಹಿತಿ ದೊರಕುತ್ತಿಲ್ಲ. ಅವರಿವರಲ್ಲಿಗೆ ಓಡಾಡಲು ನಮ್ಮ ಬಳಿ ದುಡ್ಡು-ಕಾಸು ಇಲ್ಲ. ಏನು ಮಾಡಬೇಕೆಂದು ತೋಚುತ್ತಿಲ್ಲ. ತಪ್ಪಿತಸ್ಥರ ಬಂಧನವಾಗಿದೆಯೋ ಇಲ್ಲವೋ ಗೊತ್ತಿಲ್ಲ” ಎಂದು ಕುಟುಂಬ ಸದಸ್ಯರು ದುಃಖಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...