Homeದಲಿತ್ ಫೈಲ್ಸ್‘ದಲಿತನನ್ನು ಮದುವೆಗೆ ಕರೆದರು, ಸಹಪಂಕ್ತಿ ಭೋಜನ ಮಾಡಿದ್ದಕ್ಕೆ ಕೊಲೆ ಮಾಡಿದರು’

‘ದಲಿತನನ್ನು ಮದುವೆಗೆ ಕರೆದರು, ಸಹಪಂಕ್ತಿ ಭೋಜನ ಮಾಡಿದ್ದಕ್ಕೆ ಕೊಲೆ ಮಾಡಿದರು’

- Advertisement -
- Advertisement -

ಸಹಪಂಕ್ತಿ ಭೋಜನ ಮಾಡಿದ ಕಾರಣಕ್ಕೆ ದಲಿತ ವ್ಯಕ್ತಿಯನ್ನು ಹೊಡೆದು ಕೊಂದಿರುವ ಘಟನೆ ಉತ್ತರಖಾಂಡ್ ರಾಜ್ಯದ ಚಂಪಾಪತ್‌ ಜಿಲ್ಲೆಯ ಮದುವೆ ಕಾರ್ಯಕ್ರಮವೊಂದರಲ್ಲಿ ನಡೆದಿದೆ.

45 ವರ್ಷದ ದಲಿತ ವ್ಯಕ್ತಿ ‘ರಮೇಶ್‌ ರಾಮ್‌’ ಮೇಲ್ಜಾತಿಯವರೊಂದಿಗೆ ಮದುವೆಯಲ್ಲಿ ಊಟಕ್ಕೆ ಕುಳಿತ್ತಿದ್ದನ್ನು ನೋಡಿ, ಹಲವು ಗಂಟೆಗಳ ಕಾಲ ಚಿತ್ರಹಿಂಸೆ ನೀಡಲಾಗಿದೆ. ಬಳಿಕ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು ಅವರು ಮೃತಪಟ್ಟಿದ್ದಾರೆ ಎಂದು ‘ದಿ ವೈರ್’ ಸುದ್ದಿ ಜಾಲತಾಣ ವರದಿ ಮಾಡಿದೆ.

“ದೈಹಿಕವಾಗಿ ಹಲವು ಗಂಟೆಗಳ ಕಾಲ ಅವರಿಗೆ ಹಿಂಸೆ ನೀಡಲಾಯಿತು. ಲೋಹಾಘಾಟ್‌ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಹೆಚ್ಚಿನ ಚಿಕಿತ್ಸೆಗೆ ಹಲ್ದಾವನಿಯ ಮತ್ತೊಂದು ಆಸ್ಪತ್ರೆಗೆ ಸ್ಥಳಾಂತರಿಸಿದಾಗ ಅಸುನೀಗಿದರು” ಎಂದು ಸಂತ್ರಸ್ತ ಕುಟುಂಬ ಆರೋಪಿಸಿದೆ.

ಚಂಪಾವತ್ ಪೊಲೀಸರು ಕೊಲೆ ಪ್ರಕರಣವನ್ನು ದಾಖಲಿಸಿದ್ದಾರೆ. ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಗೆ ವಿವಿಧ ಸಂಬಂಧಿತ ಸೆಕ್ಷನ್‌ಗಳನ್ನು ಎಫ್‌ಐಆರ್‌ನಲ್ಲಿ ಸೇರಿಸಿದ್ದಾರೆ. ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ (ಪ್ರಥಮ ಮಾಹಿತಿ ವರದಿ) ದಾಖಲಿಸಲಾಗಿದೆ, ಆದರೆ ಇನ್ನೂ ಯಾರನ್ನೂ ಬಂಧಿಸಲಾಗಿಲ್ಲ.

ಸಂತ್ರಸ್ತೆಯ ಪತ್ನಿಯ ದೂರಿನ ಅನ್ವಯ ಪ್ರಕರಣ ದಾಖಲಾಗಿದೆ. ಚಂಪಾವತ್ ಪೊಲೀಸ್ ವರಿಷ್ಠಾಧಿಕಾರಿ ದೇವೇಂದ್ರ ಪಿಂಚಾ ಅವರು ‘ದಿ ವೈರ್‌’ಗೆ ಪ್ರತಿಕ್ರಿಯಿಸಿ, “ನಾವು ಪ್ರಕರಣವನ್ನು ಎಲ್ಲಾ ಆಯಾಮದಲ್ಲೂ ತನಿಖೆ ಮಾಡುತ್ತಿದ್ದೇವೆ. ಮದುವೆಯ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ. ಮದುವೆಗೆ ಆಗಮಿಸಿದ್ದ ಅತಿಥಿಗಳನ್ನೂ ವಿಚಾರಣೆಗೆ ಒಳಪಡಿಸಲಾಗುತ್ತಿದೆ” ಎಂದು ತಿಳಿಸಿದ್ದಾರೆ.

ಸಹಪಂಕ್ತಿ ಭೋಜನ ಮಾಡಿದ್ದಕ್ಕಾಗಿ ಕೊಲೆಯಾದ ರಮೇಶ್ ರಾಮ್ ಅವರ ಕುಟುಂಬದೊಂದಿಗೆ ಮುಖಂಡರು (PC: The Wire)

ಇದನ್ನೂ ಓದಿರಿ: ಜೇನುಕುರುಬ ಆದಿವಾಸಿ ಯುವಕನಿಗೆ ಅರಣ್ಯ ಸಿಬ್ಬಂದಿಯಿಂದ ಗುಂಡೇಟು: ಭುಗಿಲೆದ್ದ ಆಕ್ರೋಶ


ರಮೇಶ್ ರಾಮ್ ಅವರನ್ನು ಮದುವೆ ಸಮಾರಂಭಕ್ಕೆ ಕರೆಯಲಾಗಿತ್ತು ಎಂದು ಹೇಳಿರುವ ಪೊಲೀಸ್ ವರಿಷ್ಠಾಧಿಕಾರಿ, “ಮದುವೆಯನ್ನು ಹಮ್ಮಿಕೊಂಡಿದ್ದ ದುಂಗರ್ ಸಿಂಗ್ ಅವರ ಕುಟುಂಬವನ್ನು ಸ್ಥಳೀಯ ಪೊಲೀಸರು ವಿಚಾರಣೆ ಒಳಪಡಿಸಿದ್ದಾರೆ. ಆದರೆ ದುಂಗರ್‌ ಸಿಂಗ್‌ ಕುಟುಂಬವು ಸಂತ್ರಸ್ತ ಕುಟುಂಬದ ಆರೋಪಗಳನ್ನು ನಿರಾಕರಿಸಿದೆ” ಎಂದು ಮಾಹಿತಿ ನೀಡಿದ್ದಾರೆ.

“ನನ್ನ ಪತಿ ದೇವಿಧುರದ ಕೇದಾರನಾಥ ಗ್ರಾಮದಲ್ಲಿ ಟೈಲರ್ ಅಂಗಡಿಯನ್ನು ನಡೆಸುತ್ತಿದ್ದರು. ಅಂಗಡಿ, ಬಾಡಿಗೆ ಸ್ಥಳ, ದುಂಗರ್ ಸಿಂಗ್ ಮಾಲೀಕತ್ವದಲ್ಲಿದೆ. ಸಿಂಗ್ ಅವರ ಆಹ್ವಾನದ ಮೇರೆಗೆ ಅವರು ನವೆಂಬರ್ 28ರಂದು ಮದುವೆಗೆ ಹೋಗಿದ್ದರು” ಎಂದು ಕೊಲೆಯಾದ ರಮೇಶ್ ರಾಮ್ ಅವರ ಪತ್ನಿ ತುಳಸಿ ದೇವಿ ಅವರು ತಿಳಿಸಿರುವುದಾಗಿ ಎಫ್‌ಐಆರ್‌ನಲ್ಲಿ ಉಲ್ಲೇಖಿಸಿಲಾಗಿದೆ.

ರಾತ್ರಿಯಾದರೂ ರಾಮ್ ಮನೆಗೆ ಬಾರದಿದ್ದಾಗ ತುಳಿಸಿದೇವಿಯವರು ಗಂಡನಿಗೆ ಕರೆ ಮಾಡಿದ್ದು, ಕರೆ ಸ್ವೀಕರಿಸಿದ ಅಪರಿಚಿತ ವ್ಯಕ್ತಿಯೊಬ್ಬ, “ನಿಮ್ಮ ಪತಿ ಮದುವೆ ಸಮಾರಂಭದಲ್ಲಿದ್ದು, ಮರುದಿನ ಬೆಳಿಗ್ಗೆ ಮನೆಗೆ ಬರುತ್ತಾರೆ” ಎಂದು ತಿಳಿಸಿರುವುದಾಗಿ ಎಫ್‌ಐಆರ್‌ನಲ್ಲಿ ದಾಖಲಿಸಲಾಗಿದೆ.

ಬೆಳಿಗ್ಗೆ ತುಳಸಿ ದೇವಿ ಅವರಿಗೆ ಮತ್ತೊಂದು ಕರೆ ಬಂದಿದ್ದು, ಕರೆ ಮಾಡಿದ ವ್ಯಕ್ತಿಯು, “ನಿಮ್ಮ ಗಂಡ ಪ್ರಜ್ಞೆ ತಪ್ಪಿದ್ದಾರೆ. ಆಸ್ಪತ್ರೆಗೆ ಕರೆದೊಯ್ಯಲಾಗುವುದು ಎಂದನು. ಬೆಳಿಗ್ಗೆ ನನ್ನ ಮಗನಿಗೆ ಆಂಬ್ಯುಲೆನ್ಸ್ ಆಪರೇಟರ್‌ನಿಂದ ಕರೆ ಬಂದಿತು. ನಿಮ್ಮ ಗಂಡನನ್ನು ಲೋಹಾಘಾಟ್‌ನಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿದೆ, ಅಲ್ಲಿಗೆ ತಕ್ಷಣ ಬರಬೇಕು ಎಂದು ತಿಳಿಸಿದರು” ಎಂದು ತುಳಸಿದೇವಿ ವಿವರಿಸಿದ್ದಾರೆ.


ಇದನ್ನೂ ಓದಿರಿ: 2 ತಿಂಗಳಿನಿಂದ ವೇತನವಿಲ್ಲ: ಎಐಸಿಸಿಟಿಯು ನೇತೃತ್ವದಲ್ಲಿ ವಿಕ್ಟೋರಿಯಾ ಆಸ್ಪತ್ರೆ ಕಾರ್ಮಿಕರ ಪ್ರತಿಭಟನೆ


ನವೆಂಬರ್ 29ರಂದು ಬೆಳಿಗ್ಗೆ ಕುಟುಂಬವು ಲೋಹಘಾಟ್‌ನಲ್ಲಿರುವ ಆಸ್ಪತ್ರೆಗೆ ಧಾವಿಸಿದಾಗ, ಗಾಯಗೊಂಡ ವ್ಯಕ್ತಿ ನಿತ್ರಾಣರಾಗಿ ನೆಲದ ಮೇಲೆ ಮಲಗಿದ್ದರು. ನಂತರ, ಅಲ್ಲಿನ ವೈದ್ಯರು ರಾಮ್ ಅವರನ್ನು ಹಲ್ದಾವನಿಯ ಆಸ್ಪತ್ರೆಗೆ ಕರೆದೊಯ್ಯಲು ಸೂಚಿಸಿದರು ಎಂದು ಎಫ್‌ಐಆರ್‌ ಹೇಳಿದೆ.

“ನನ್ನ ತಂದೆಯ ಸ್ಥಿತಿಯನ್ನು ನೋಡಿ ನಮಗೆಲ್ಲರಿಗೂ ಆಘಾತವಾಯಿತು. ಅವರ ಮೈಮೇಲೆಲ್ಲ ಗಾಯದ ಗುರುತುಗಳಿದ್ದವು. ಎಲ್ಲರೊಂದಿಗೆ ಜೊತೆಯಲ್ಲಿ ಕುಳಿತು ಊಟ ಮಾಡಿದ್ದಕ್ಕಾಗಿ ಥಳಿಸಲಾಯಿತು ಎಂದು ಆಂಬ್ಯುಲೆನ್ಸ್‌ನಲ್ಲಿ ಹಲ್ದಾವನಿಗೆ ತೆರಳುವಾಗ ತಿಳಿದುಬಂತು” ಎಂದು ರಾಮ್ ಅವರ ಪುತ್ರ ಸಂಜಯ್ ಹೇಳಿದ್ದಾರೆ.

ಹಲ್ದಾವನಿಯ ಆಸ್ಪತ್ರೆಯಲ್ಲಿ ನವೆಂಬರ್‌ 29ರಂದು ರಾಮ್ ಮೃತಪಟ್ಟಿದ್ದು, ಕೊನೆಯುಸಿರೆಳೆಯುವ ಮೊದಲು ಸಿ.ಟಿ. ಸ್ಕ್ಯಾನ್‌ ಜೊತೆಗೆ ಕೆಲವು ಪರೀಕ್ಷೆಗಳನ್ನು ವೈದ್ಯರು ಮಾಡಿದ್ದಾರೆ.

“ಮದುವೆಯಲ್ಲಿ ಎಲ್ಲರೊಂದಿಗೆ ಊಟಕ್ಕೆ ಕುಳಿತ್ತಿದ್ದಕ್ಕೆ ನನ್ನ ಗಂಡನಿಗೆ ಚಿತ್ರ ಹಿಂಸೆ ನೀಡಲಾಯಿತು. ನವೆಂಬರ್ 28ರ ರಾತ್ರಿ ಅವರನ್ನು ಭೀಕರವಾಗಿ ಥಳಿಸಲಾಯಿತು. ನಮಗೆ ತಿಳಿಸದೆ ಮರುದಿನ ಬೆಳಿಗ್ಗೆ ಲೋಹಘಾಟ್ ಆಸ್ಪತ್ರೆಗೆ ಕರೆತರಲಾಯಿತು ಎಂಬುದು ನಮಗೆ ಖಚಿತವಾಗಿದೆ” ಎಂದು ತುಳಸಿ ದೇವಿ ಹೇಳಿಕೆ ನೀಡಿದ್ದಾರೆ.


ಇದನ್ನೂ ಓದಿರಿ: Manual Scavenging: ಮಲದ ಗುಂಡಿ ಸ್ವಚ್ಛಗೊಳಿಸುವವರಲ್ಲಿ 73.31% ಪರಿಶಿಷ್ಟ ಜಾತಿಯವರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...