Homeದಲಿತ್ ಫೈಲ್ಸ್‘ದಲಿತನನ್ನು ಮದುವೆಗೆ ಕರೆದರು, ಸಹಪಂಕ್ತಿ ಭೋಜನ ಮಾಡಿದ್ದಕ್ಕೆ ಕೊಲೆ ಮಾಡಿದರು’

‘ದಲಿತನನ್ನು ಮದುವೆಗೆ ಕರೆದರು, ಸಹಪಂಕ್ತಿ ಭೋಜನ ಮಾಡಿದ್ದಕ್ಕೆ ಕೊಲೆ ಮಾಡಿದರು’

- Advertisement -
- Advertisement -

ಸಹಪಂಕ್ತಿ ಭೋಜನ ಮಾಡಿದ ಕಾರಣಕ್ಕೆ ದಲಿತ ವ್ಯಕ್ತಿಯನ್ನು ಹೊಡೆದು ಕೊಂದಿರುವ ಘಟನೆ ಉತ್ತರಖಾಂಡ್ ರಾಜ್ಯದ ಚಂಪಾಪತ್‌ ಜಿಲ್ಲೆಯ ಮದುವೆ ಕಾರ್ಯಕ್ರಮವೊಂದರಲ್ಲಿ ನಡೆದಿದೆ.

45 ವರ್ಷದ ದಲಿತ ವ್ಯಕ್ತಿ ‘ರಮೇಶ್‌ ರಾಮ್‌’ ಮೇಲ್ಜಾತಿಯವರೊಂದಿಗೆ ಮದುವೆಯಲ್ಲಿ ಊಟಕ್ಕೆ ಕುಳಿತ್ತಿದ್ದನ್ನು ನೋಡಿ, ಹಲವು ಗಂಟೆಗಳ ಕಾಲ ಚಿತ್ರಹಿಂಸೆ ನೀಡಲಾಗಿದೆ. ಬಳಿಕ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು ಅವರು ಮೃತಪಟ್ಟಿದ್ದಾರೆ ಎಂದು ‘ದಿ ವೈರ್’ ಸುದ್ದಿ ಜಾಲತಾಣ ವರದಿ ಮಾಡಿದೆ.

“ದೈಹಿಕವಾಗಿ ಹಲವು ಗಂಟೆಗಳ ಕಾಲ ಅವರಿಗೆ ಹಿಂಸೆ ನೀಡಲಾಯಿತು. ಲೋಹಾಘಾಟ್‌ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಹೆಚ್ಚಿನ ಚಿಕಿತ್ಸೆಗೆ ಹಲ್ದಾವನಿಯ ಮತ್ತೊಂದು ಆಸ್ಪತ್ರೆಗೆ ಸ್ಥಳಾಂತರಿಸಿದಾಗ ಅಸುನೀಗಿದರು” ಎಂದು ಸಂತ್ರಸ್ತ ಕುಟುಂಬ ಆರೋಪಿಸಿದೆ.

ಚಂಪಾವತ್ ಪೊಲೀಸರು ಕೊಲೆ ಪ್ರಕರಣವನ್ನು ದಾಖಲಿಸಿದ್ದಾರೆ. ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಗೆ ವಿವಿಧ ಸಂಬಂಧಿತ ಸೆಕ್ಷನ್‌ಗಳನ್ನು ಎಫ್‌ಐಆರ್‌ನಲ್ಲಿ ಸೇರಿಸಿದ್ದಾರೆ. ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ (ಪ್ರಥಮ ಮಾಹಿತಿ ವರದಿ) ದಾಖಲಿಸಲಾಗಿದೆ, ಆದರೆ ಇನ್ನೂ ಯಾರನ್ನೂ ಬಂಧಿಸಲಾಗಿಲ್ಲ.

ಸಂತ್ರಸ್ತೆಯ ಪತ್ನಿಯ ದೂರಿನ ಅನ್ವಯ ಪ್ರಕರಣ ದಾಖಲಾಗಿದೆ. ಚಂಪಾವತ್ ಪೊಲೀಸ್ ವರಿಷ್ಠಾಧಿಕಾರಿ ದೇವೇಂದ್ರ ಪಿಂಚಾ ಅವರು ‘ದಿ ವೈರ್‌’ಗೆ ಪ್ರತಿಕ್ರಿಯಿಸಿ, “ನಾವು ಪ್ರಕರಣವನ್ನು ಎಲ್ಲಾ ಆಯಾಮದಲ್ಲೂ ತನಿಖೆ ಮಾಡುತ್ತಿದ್ದೇವೆ. ಮದುವೆಯ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ. ಮದುವೆಗೆ ಆಗಮಿಸಿದ್ದ ಅತಿಥಿಗಳನ್ನೂ ವಿಚಾರಣೆಗೆ ಒಳಪಡಿಸಲಾಗುತ್ತಿದೆ” ಎಂದು ತಿಳಿಸಿದ್ದಾರೆ.

ಸಹಪಂಕ್ತಿ ಭೋಜನ ಮಾಡಿದ್ದಕ್ಕಾಗಿ ಕೊಲೆಯಾದ ರಮೇಶ್ ರಾಮ್ ಅವರ ಕುಟುಂಬದೊಂದಿಗೆ ಮುಖಂಡರು (PC: The Wire)

ಇದನ್ನೂ ಓದಿರಿ: ಜೇನುಕುರುಬ ಆದಿವಾಸಿ ಯುವಕನಿಗೆ ಅರಣ್ಯ ಸಿಬ್ಬಂದಿಯಿಂದ ಗುಂಡೇಟು: ಭುಗಿಲೆದ್ದ ಆಕ್ರೋಶ


ರಮೇಶ್ ರಾಮ್ ಅವರನ್ನು ಮದುವೆ ಸಮಾರಂಭಕ್ಕೆ ಕರೆಯಲಾಗಿತ್ತು ಎಂದು ಹೇಳಿರುವ ಪೊಲೀಸ್ ವರಿಷ್ಠಾಧಿಕಾರಿ, “ಮದುವೆಯನ್ನು ಹಮ್ಮಿಕೊಂಡಿದ್ದ ದುಂಗರ್ ಸಿಂಗ್ ಅವರ ಕುಟುಂಬವನ್ನು ಸ್ಥಳೀಯ ಪೊಲೀಸರು ವಿಚಾರಣೆ ಒಳಪಡಿಸಿದ್ದಾರೆ. ಆದರೆ ದುಂಗರ್‌ ಸಿಂಗ್‌ ಕುಟುಂಬವು ಸಂತ್ರಸ್ತ ಕುಟುಂಬದ ಆರೋಪಗಳನ್ನು ನಿರಾಕರಿಸಿದೆ” ಎಂದು ಮಾಹಿತಿ ನೀಡಿದ್ದಾರೆ.

“ನನ್ನ ಪತಿ ದೇವಿಧುರದ ಕೇದಾರನಾಥ ಗ್ರಾಮದಲ್ಲಿ ಟೈಲರ್ ಅಂಗಡಿಯನ್ನು ನಡೆಸುತ್ತಿದ್ದರು. ಅಂಗಡಿ, ಬಾಡಿಗೆ ಸ್ಥಳ, ದುಂಗರ್ ಸಿಂಗ್ ಮಾಲೀಕತ್ವದಲ್ಲಿದೆ. ಸಿಂಗ್ ಅವರ ಆಹ್ವಾನದ ಮೇರೆಗೆ ಅವರು ನವೆಂಬರ್ 28ರಂದು ಮದುವೆಗೆ ಹೋಗಿದ್ದರು” ಎಂದು ಕೊಲೆಯಾದ ರಮೇಶ್ ರಾಮ್ ಅವರ ಪತ್ನಿ ತುಳಸಿ ದೇವಿ ಅವರು ತಿಳಿಸಿರುವುದಾಗಿ ಎಫ್‌ಐಆರ್‌ನಲ್ಲಿ ಉಲ್ಲೇಖಿಸಿಲಾಗಿದೆ.

ರಾತ್ರಿಯಾದರೂ ರಾಮ್ ಮನೆಗೆ ಬಾರದಿದ್ದಾಗ ತುಳಿಸಿದೇವಿಯವರು ಗಂಡನಿಗೆ ಕರೆ ಮಾಡಿದ್ದು, ಕರೆ ಸ್ವೀಕರಿಸಿದ ಅಪರಿಚಿತ ವ್ಯಕ್ತಿಯೊಬ್ಬ, “ನಿಮ್ಮ ಪತಿ ಮದುವೆ ಸಮಾರಂಭದಲ್ಲಿದ್ದು, ಮರುದಿನ ಬೆಳಿಗ್ಗೆ ಮನೆಗೆ ಬರುತ್ತಾರೆ” ಎಂದು ತಿಳಿಸಿರುವುದಾಗಿ ಎಫ್‌ಐಆರ್‌ನಲ್ಲಿ ದಾಖಲಿಸಲಾಗಿದೆ.

ಬೆಳಿಗ್ಗೆ ತುಳಸಿ ದೇವಿ ಅವರಿಗೆ ಮತ್ತೊಂದು ಕರೆ ಬಂದಿದ್ದು, ಕರೆ ಮಾಡಿದ ವ್ಯಕ್ತಿಯು, “ನಿಮ್ಮ ಗಂಡ ಪ್ರಜ್ಞೆ ತಪ್ಪಿದ್ದಾರೆ. ಆಸ್ಪತ್ರೆಗೆ ಕರೆದೊಯ್ಯಲಾಗುವುದು ಎಂದನು. ಬೆಳಿಗ್ಗೆ ನನ್ನ ಮಗನಿಗೆ ಆಂಬ್ಯುಲೆನ್ಸ್ ಆಪರೇಟರ್‌ನಿಂದ ಕರೆ ಬಂದಿತು. ನಿಮ್ಮ ಗಂಡನನ್ನು ಲೋಹಾಘಾಟ್‌ನಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿದೆ, ಅಲ್ಲಿಗೆ ತಕ್ಷಣ ಬರಬೇಕು ಎಂದು ತಿಳಿಸಿದರು” ಎಂದು ತುಳಸಿದೇವಿ ವಿವರಿಸಿದ್ದಾರೆ.


ಇದನ್ನೂ ಓದಿರಿ: 2 ತಿಂಗಳಿನಿಂದ ವೇತನವಿಲ್ಲ: ಎಐಸಿಸಿಟಿಯು ನೇತೃತ್ವದಲ್ಲಿ ವಿಕ್ಟೋರಿಯಾ ಆಸ್ಪತ್ರೆ ಕಾರ್ಮಿಕರ ಪ್ರತಿಭಟನೆ


ನವೆಂಬರ್ 29ರಂದು ಬೆಳಿಗ್ಗೆ ಕುಟುಂಬವು ಲೋಹಘಾಟ್‌ನಲ್ಲಿರುವ ಆಸ್ಪತ್ರೆಗೆ ಧಾವಿಸಿದಾಗ, ಗಾಯಗೊಂಡ ವ್ಯಕ್ತಿ ನಿತ್ರಾಣರಾಗಿ ನೆಲದ ಮೇಲೆ ಮಲಗಿದ್ದರು. ನಂತರ, ಅಲ್ಲಿನ ವೈದ್ಯರು ರಾಮ್ ಅವರನ್ನು ಹಲ್ದಾವನಿಯ ಆಸ್ಪತ್ರೆಗೆ ಕರೆದೊಯ್ಯಲು ಸೂಚಿಸಿದರು ಎಂದು ಎಫ್‌ಐಆರ್‌ ಹೇಳಿದೆ.

“ನನ್ನ ತಂದೆಯ ಸ್ಥಿತಿಯನ್ನು ನೋಡಿ ನಮಗೆಲ್ಲರಿಗೂ ಆಘಾತವಾಯಿತು. ಅವರ ಮೈಮೇಲೆಲ್ಲ ಗಾಯದ ಗುರುತುಗಳಿದ್ದವು. ಎಲ್ಲರೊಂದಿಗೆ ಜೊತೆಯಲ್ಲಿ ಕುಳಿತು ಊಟ ಮಾಡಿದ್ದಕ್ಕಾಗಿ ಥಳಿಸಲಾಯಿತು ಎಂದು ಆಂಬ್ಯುಲೆನ್ಸ್‌ನಲ್ಲಿ ಹಲ್ದಾವನಿಗೆ ತೆರಳುವಾಗ ತಿಳಿದುಬಂತು” ಎಂದು ರಾಮ್ ಅವರ ಪುತ್ರ ಸಂಜಯ್ ಹೇಳಿದ್ದಾರೆ.

ಹಲ್ದಾವನಿಯ ಆಸ್ಪತ್ರೆಯಲ್ಲಿ ನವೆಂಬರ್‌ 29ರಂದು ರಾಮ್ ಮೃತಪಟ್ಟಿದ್ದು, ಕೊನೆಯುಸಿರೆಳೆಯುವ ಮೊದಲು ಸಿ.ಟಿ. ಸ್ಕ್ಯಾನ್‌ ಜೊತೆಗೆ ಕೆಲವು ಪರೀಕ್ಷೆಗಳನ್ನು ವೈದ್ಯರು ಮಾಡಿದ್ದಾರೆ.

“ಮದುವೆಯಲ್ಲಿ ಎಲ್ಲರೊಂದಿಗೆ ಊಟಕ್ಕೆ ಕುಳಿತ್ತಿದ್ದಕ್ಕೆ ನನ್ನ ಗಂಡನಿಗೆ ಚಿತ್ರ ಹಿಂಸೆ ನೀಡಲಾಯಿತು. ನವೆಂಬರ್ 28ರ ರಾತ್ರಿ ಅವರನ್ನು ಭೀಕರವಾಗಿ ಥಳಿಸಲಾಯಿತು. ನಮಗೆ ತಿಳಿಸದೆ ಮರುದಿನ ಬೆಳಿಗ್ಗೆ ಲೋಹಘಾಟ್ ಆಸ್ಪತ್ರೆಗೆ ಕರೆತರಲಾಯಿತು ಎಂಬುದು ನಮಗೆ ಖಚಿತವಾಗಿದೆ” ಎಂದು ತುಳಸಿ ದೇವಿ ಹೇಳಿಕೆ ನೀಡಿದ್ದಾರೆ.


ಇದನ್ನೂ ಓದಿರಿ: Manual Scavenging: ಮಲದ ಗುಂಡಿ ಸ್ವಚ್ಛಗೊಳಿಸುವವರಲ್ಲಿ 73.31% ಪರಿಶಿಷ್ಟ ಜಾತಿಯವರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...