Homeದಲಿತ್ ಫೈಲ್ಸ್‘ದಲಿತನನ್ನು ಮದುವೆಗೆ ಕರೆದರು, ಸಹಪಂಕ್ತಿ ಭೋಜನ ಮಾಡಿದ್ದಕ್ಕೆ ಕೊಲೆ ಮಾಡಿದರು’

‘ದಲಿತನನ್ನು ಮದುವೆಗೆ ಕರೆದರು, ಸಹಪಂಕ್ತಿ ಭೋಜನ ಮಾಡಿದ್ದಕ್ಕೆ ಕೊಲೆ ಮಾಡಿದರು’

- Advertisement -
- Advertisement -

ಸಹಪಂಕ್ತಿ ಭೋಜನ ಮಾಡಿದ ಕಾರಣಕ್ಕೆ ದಲಿತ ವ್ಯಕ್ತಿಯನ್ನು ಹೊಡೆದು ಕೊಂದಿರುವ ಘಟನೆ ಉತ್ತರಖಾಂಡ್ ರಾಜ್ಯದ ಚಂಪಾಪತ್‌ ಜಿಲ್ಲೆಯ ಮದುವೆ ಕಾರ್ಯಕ್ರಮವೊಂದರಲ್ಲಿ ನಡೆದಿದೆ.

45 ವರ್ಷದ ದಲಿತ ವ್ಯಕ್ತಿ ‘ರಮೇಶ್‌ ರಾಮ್‌’ ಮೇಲ್ಜಾತಿಯವರೊಂದಿಗೆ ಮದುವೆಯಲ್ಲಿ ಊಟಕ್ಕೆ ಕುಳಿತ್ತಿದ್ದನ್ನು ನೋಡಿ, ಹಲವು ಗಂಟೆಗಳ ಕಾಲ ಚಿತ್ರಹಿಂಸೆ ನೀಡಲಾಗಿದೆ. ಬಳಿಕ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು ಅವರು ಮೃತಪಟ್ಟಿದ್ದಾರೆ ಎಂದು ‘ದಿ ವೈರ್’ ಸುದ್ದಿ ಜಾಲತಾಣ ವರದಿ ಮಾಡಿದೆ.

“ದೈಹಿಕವಾಗಿ ಹಲವು ಗಂಟೆಗಳ ಕಾಲ ಅವರಿಗೆ ಹಿಂಸೆ ನೀಡಲಾಯಿತು. ಲೋಹಾಘಾಟ್‌ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಹೆಚ್ಚಿನ ಚಿಕಿತ್ಸೆಗೆ ಹಲ್ದಾವನಿಯ ಮತ್ತೊಂದು ಆಸ್ಪತ್ರೆಗೆ ಸ್ಥಳಾಂತರಿಸಿದಾಗ ಅಸುನೀಗಿದರು” ಎಂದು ಸಂತ್ರಸ್ತ ಕುಟುಂಬ ಆರೋಪಿಸಿದೆ.

ಚಂಪಾವತ್ ಪೊಲೀಸರು ಕೊಲೆ ಪ್ರಕರಣವನ್ನು ದಾಖಲಿಸಿದ್ದಾರೆ. ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಗೆ ವಿವಿಧ ಸಂಬಂಧಿತ ಸೆಕ್ಷನ್‌ಗಳನ್ನು ಎಫ್‌ಐಆರ್‌ನಲ್ಲಿ ಸೇರಿಸಿದ್ದಾರೆ. ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ (ಪ್ರಥಮ ಮಾಹಿತಿ ವರದಿ) ದಾಖಲಿಸಲಾಗಿದೆ, ಆದರೆ ಇನ್ನೂ ಯಾರನ್ನೂ ಬಂಧಿಸಲಾಗಿಲ್ಲ.

ಸಂತ್ರಸ್ತೆಯ ಪತ್ನಿಯ ದೂರಿನ ಅನ್ವಯ ಪ್ರಕರಣ ದಾಖಲಾಗಿದೆ. ಚಂಪಾವತ್ ಪೊಲೀಸ್ ವರಿಷ್ಠಾಧಿಕಾರಿ ದೇವೇಂದ್ರ ಪಿಂಚಾ ಅವರು ‘ದಿ ವೈರ್‌’ಗೆ ಪ್ರತಿಕ್ರಿಯಿಸಿ, “ನಾವು ಪ್ರಕರಣವನ್ನು ಎಲ್ಲಾ ಆಯಾಮದಲ್ಲೂ ತನಿಖೆ ಮಾಡುತ್ತಿದ್ದೇವೆ. ಮದುವೆಯ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ. ಮದುವೆಗೆ ಆಗಮಿಸಿದ್ದ ಅತಿಥಿಗಳನ್ನೂ ವಿಚಾರಣೆಗೆ ಒಳಪಡಿಸಲಾಗುತ್ತಿದೆ” ಎಂದು ತಿಳಿಸಿದ್ದಾರೆ.

ಸಹಪಂಕ್ತಿ ಭೋಜನ ಮಾಡಿದ್ದಕ್ಕಾಗಿ ಕೊಲೆಯಾದ ರಮೇಶ್ ರಾಮ್ ಅವರ ಕುಟುಂಬದೊಂದಿಗೆ ಮುಖಂಡರು (PC: The Wire)

ಇದನ್ನೂ ಓದಿರಿ: ಜೇನುಕುರುಬ ಆದಿವಾಸಿ ಯುವಕನಿಗೆ ಅರಣ್ಯ ಸಿಬ್ಬಂದಿಯಿಂದ ಗುಂಡೇಟು: ಭುಗಿಲೆದ್ದ ಆಕ್ರೋಶ


ರಮೇಶ್ ರಾಮ್ ಅವರನ್ನು ಮದುವೆ ಸಮಾರಂಭಕ್ಕೆ ಕರೆಯಲಾಗಿತ್ತು ಎಂದು ಹೇಳಿರುವ ಪೊಲೀಸ್ ವರಿಷ್ಠಾಧಿಕಾರಿ, “ಮದುವೆಯನ್ನು ಹಮ್ಮಿಕೊಂಡಿದ್ದ ದುಂಗರ್ ಸಿಂಗ್ ಅವರ ಕುಟುಂಬವನ್ನು ಸ್ಥಳೀಯ ಪೊಲೀಸರು ವಿಚಾರಣೆ ಒಳಪಡಿಸಿದ್ದಾರೆ. ಆದರೆ ದುಂಗರ್‌ ಸಿಂಗ್‌ ಕುಟುಂಬವು ಸಂತ್ರಸ್ತ ಕುಟುಂಬದ ಆರೋಪಗಳನ್ನು ನಿರಾಕರಿಸಿದೆ” ಎಂದು ಮಾಹಿತಿ ನೀಡಿದ್ದಾರೆ.

“ನನ್ನ ಪತಿ ದೇವಿಧುರದ ಕೇದಾರನಾಥ ಗ್ರಾಮದಲ್ಲಿ ಟೈಲರ್ ಅಂಗಡಿಯನ್ನು ನಡೆಸುತ್ತಿದ್ದರು. ಅಂಗಡಿ, ಬಾಡಿಗೆ ಸ್ಥಳ, ದುಂಗರ್ ಸಿಂಗ್ ಮಾಲೀಕತ್ವದಲ್ಲಿದೆ. ಸಿಂಗ್ ಅವರ ಆಹ್ವಾನದ ಮೇರೆಗೆ ಅವರು ನವೆಂಬರ್ 28ರಂದು ಮದುವೆಗೆ ಹೋಗಿದ್ದರು” ಎಂದು ಕೊಲೆಯಾದ ರಮೇಶ್ ರಾಮ್ ಅವರ ಪತ್ನಿ ತುಳಸಿ ದೇವಿ ಅವರು ತಿಳಿಸಿರುವುದಾಗಿ ಎಫ್‌ಐಆರ್‌ನಲ್ಲಿ ಉಲ್ಲೇಖಿಸಿಲಾಗಿದೆ.

ರಾತ್ರಿಯಾದರೂ ರಾಮ್ ಮನೆಗೆ ಬಾರದಿದ್ದಾಗ ತುಳಿಸಿದೇವಿಯವರು ಗಂಡನಿಗೆ ಕರೆ ಮಾಡಿದ್ದು, ಕರೆ ಸ್ವೀಕರಿಸಿದ ಅಪರಿಚಿತ ವ್ಯಕ್ತಿಯೊಬ್ಬ, “ನಿಮ್ಮ ಪತಿ ಮದುವೆ ಸಮಾರಂಭದಲ್ಲಿದ್ದು, ಮರುದಿನ ಬೆಳಿಗ್ಗೆ ಮನೆಗೆ ಬರುತ್ತಾರೆ” ಎಂದು ತಿಳಿಸಿರುವುದಾಗಿ ಎಫ್‌ಐಆರ್‌ನಲ್ಲಿ ದಾಖಲಿಸಲಾಗಿದೆ.

ಬೆಳಿಗ್ಗೆ ತುಳಸಿ ದೇವಿ ಅವರಿಗೆ ಮತ್ತೊಂದು ಕರೆ ಬಂದಿದ್ದು, ಕರೆ ಮಾಡಿದ ವ್ಯಕ್ತಿಯು, “ನಿಮ್ಮ ಗಂಡ ಪ್ರಜ್ಞೆ ತಪ್ಪಿದ್ದಾರೆ. ಆಸ್ಪತ್ರೆಗೆ ಕರೆದೊಯ್ಯಲಾಗುವುದು ಎಂದನು. ಬೆಳಿಗ್ಗೆ ನನ್ನ ಮಗನಿಗೆ ಆಂಬ್ಯುಲೆನ್ಸ್ ಆಪರೇಟರ್‌ನಿಂದ ಕರೆ ಬಂದಿತು. ನಿಮ್ಮ ಗಂಡನನ್ನು ಲೋಹಾಘಾಟ್‌ನಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿದೆ, ಅಲ್ಲಿಗೆ ತಕ್ಷಣ ಬರಬೇಕು ಎಂದು ತಿಳಿಸಿದರು” ಎಂದು ತುಳಸಿದೇವಿ ವಿವರಿಸಿದ್ದಾರೆ.


ಇದನ್ನೂ ಓದಿರಿ: 2 ತಿಂಗಳಿನಿಂದ ವೇತನವಿಲ್ಲ: ಎಐಸಿಸಿಟಿಯು ನೇತೃತ್ವದಲ್ಲಿ ವಿಕ್ಟೋರಿಯಾ ಆಸ್ಪತ್ರೆ ಕಾರ್ಮಿಕರ ಪ್ರತಿಭಟನೆ


ನವೆಂಬರ್ 29ರಂದು ಬೆಳಿಗ್ಗೆ ಕುಟುಂಬವು ಲೋಹಘಾಟ್‌ನಲ್ಲಿರುವ ಆಸ್ಪತ್ರೆಗೆ ಧಾವಿಸಿದಾಗ, ಗಾಯಗೊಂಡ ವ್ಯಕ್ತಿ ನಿತ್ರಾಣರಾಗಿ ನೆಲದ ಮೇಲೆ ಮಲಗಿದ್ದರು. ನಂತರ, ಅಲ್ಲಿನ ವೈದ್ಯರು ರಾಮ್ ಅವರನ್ನು ಹಲ್ದಾವನಿಯ ಆಸ್ಪತ್ರೆಗೆ ಕರೆದೊಯ್ಯಲು ಸೂಚಿಸಿದರು ಎಂದು ಎಫ್‌ಐಆರ್‌ ಹೇಳಿದೆ.

“ನನ್ನ ತಂದೆಯ ಸ್ಥಿತಿಯನ್ನು ನೋಡಿ ನಮಗೆಲ್ಲರಿಗೂ ಆಘಾತವಾಯಿತು. ಅವರ ಮೈಮೇಲೆಲ್ಲ ಗಾಯದ ಗುರುತುಗಳಿದ್ದವು. ಎಲ್ಲರೊಂದಿಗೆ ಜೊತೆಯಲ್ಲಿ ಕುಳಿತು ಊಟ ಮಾಡಿದ್ದಕ್ಕಾಗಿ ಥಳಿಸಲಾಯಿತು ಎಂದು ಆಂಬ್ಯುಲೆನ್ಸ್‌ನಲ್ಲಿ ಹಲ್ದಾವನಿಗೆ ತೆರಳುವಾಗ ತಿಳಿದುಬಂತು” ಎಂದು ರಾಮ್ ಅವರ ಪುತ್ರ ಸಂಜಯ್ ಹೇಳಿದ್ದಾರೆ.

ಹಲ್ದಾವನಿಯ ಆಸ್ಪತ್ರೆಯಲ್ಲಿ ನವೆಂಬರ್‌ 29ರಂದು ರಾಮ್ ಮೃತಪಟ್ಟಿದ್ದು, ಕೊನೆಯುಸಿರೆಳೆಯುವ ಮೊದಲು ಸಿ.ಟಿ. ಸ್ಕ್ಯಾನ್‌ ಜೊತೆಗೆ ಕೆಲವು ಪರೀಕ್ಷೆಗಳನ್ನು ವೈದ್ಯರು ಮಾಡಿದ್ದಾರೆ.

“ಮದುವೆಯಲ್ಲಿ ಎಲ್ಲರೊಂದಿಗೆ ಊಟಕ್ಕೆ ಕುಳಿತ್ತಿದ್ದಕ್ಕೆ ನನ್ನ ಗಂಡನಿಗೆ ಚಿತ್ರ ಹಿಂಸೆ ನೀಡಲಾಯಿತು. ನವೆಂಬರ್ 28ರ ರಾತ್ರಿ ಅವರನ್ನು ಭೀಕರವಾಗಿ ಥಳಿಸಲಾಯಿತು. ನಮಗೆ ತಿಳಿಸದೆ ಮರುದಿನ ಬೆಳಿಗ್ಗೆ ಲೋಹಘಾಟ್ ಆಸ್ಪತ್ರೆಗೆ ಕರೆತರಲಾಯಿತು ಎಂಬುದು ನಮಗೆ ಖಚಿತವಾಗಿದೆ” ಎಂದು ತುಳಸಿ ದೇವಿ ಹೇಳಿಕೆ ನೀಡಿದ್ದಾರೆ.


ಇದನ್ನೂ ಓದಿರಿ: Manual Scavenging: ಮಲದ ಗುಂಡಿ ಸ್ವಚ್ಛಗೊಳಿಸುವವರಲ್ಲಿ 73.31% ಪರಿಶಿಷ್ಟ ಜಾತಿಯವರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...