Homeದಲಿತ್ ಫೈಲ್ಸ್‘ದಲಿತನನ್ನು ಮದುವೆಗೆ ಕರೆದರು, ಸಹಪಂಕ್ತಿ ಭೋಜನ ಮಾಡಿದ್ದಕ್ಕೆ ಕೊಲೆ ಮಾಡಿದರು’

‘ದಲಿತನನ್ನು ಮದುವೆಗೆ ಕರೆದರು, ಸಹಪಂಕ್ತಿ ಭೋಜನ ಮಾಡಿದ್ದಕ್ಕೆ ಕೊಲೆ ಮಾಡಿದರು’

- Advertisement -
- Advertisement -

ಸಹಪಂಕ್ತಿ ಭೋಜನ ಮಾಡಿದ ಕಾರಣಕ್ಕೆ ದಲಿತ ವ್ಯಕ್ತಿಯನ್ನು ಹೊಡೆದು ಕೊಂದಿರುವ ಘಟನೆ ಉತ್ತರಖಾಂಡ್ ರಾಜ್ಯದ ಚಂಪಾಪತ್‌ ಜಿಲ್ಲೆಯ ಮದುವೆ ಕಾರ್ಯಕ್ರಮವೊಂದರಲ್ಲಿ ನಡೆದಿದೆ.

45 ವರ್ಷದ ದಲಿತ ವ್ಯಕ್ತಿ ‘ರಮೇಶ್‌ ರಾಮ್‌’ ಮೇಲ್ಜಾತಿಯವರೊಂದಿಗೆ ಮದುವೆಯಲ್ಲಿ ಊಟಕ್ಕೆ ಕುಳಿತ್ತಿದ್ದನ್ನು ನೋಡಿ, ಹಲವು ಗಂಟೆಗಳ ಕಾಲ ಚಿತ್ರಹಿಂಸೆ ನೀಡಲಾಗಿದೆ. ಬಳಿಕ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು ಅವರು ಮೃತಪಟ್ಟಿದ್ದಾರೆ ಎಂದು ‘ದಿ ವೈರ್’ ಸುದ್ದಿ ಜಾಲತಾಣ ವರದಿ ಮಾಡಿದೆ.

“ದೈಹಿಕವಾಗಿ ಹಲವು ಗಂಟೆಗಳ ಕಾಲ ಅವರಿಗೆ ಹಿಂಸೆ ನೀಡಲಾಯಿತು. ಲೋಹಾಘಾಟ್‌ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಹೆಚ್ಚಿನ ಚಿಕಿತ್ಸೆಗೆ ಹಲ್ದಾವನಿಯ ಮತ್ತೊಂದು ಆಸ್ಪತ್ರೆಗೆ ಸ್ಥಳಾಂತರಿಸಿದಾಗ ಅಸುನೀಗಿದರು” ಎಂದು ಸಂತ್ರಸ್ತ ಕುಟುಂಬ ಆರೋಪಿಸಿದೆ.

ಚಂಪಾವತ್ ಪೊಲೀಸರು ಕೊಲೆ ಪ್ರಕರಣವನ್ನು ದಾಖಲಿಸಿದ್ದಾರೆ. ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಗೆ ವಿವಿಧ ಸಂಬಂಧಿತ ಸೆಕ್ಷನ್‌ಗಳನ್ನು ಎಫ್‌ಐಆರ್‌ನಲ್ಲಿ ಸೇರಿಸಿದ್ದಾರೆ. ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ (ಪ್ರಥಮ ಮಾಹಿತಿ ವರದಿ) ದಾಖಲಿಸಲಾಗಿದೆ, ಆದರೆ ಇನ್ನೂ ಯಾರನ್ನೂ ಬಂಧಿಸಲಾಗಿಲ್ಲ.

ಸಂತ್ರಸ್ತೆಯ ಪತ್ನಿಯ ದೂರಿನ ಅನ್ವಯ ಪ್ರಕರಣ ದಾಖಲಾಗಿದೆ. ಚಂಪಾವತ್ ಪೊಲೀಸ್ ವರಿಷ್ಠಾಧಿಕಾರಿ ದೇವೇಂದ್ರ ಪಿಂಚಾ ಅವರು ‘ದಿ ವೈರ್‌’ಗೆ ಪ್ರತಿಕ್ರಿಯಿಸಿ, “ನಾವು ಪ್ರಕರಣವನ್ನು ಎಲ್ಲಾ ಆಯಾಮದಲ್ಲೂ ತನಿಖೆ ಮಾಡುತ್ತಿದ್ದೇವೆ. ಮದುವೆಯ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ. ಮದುವೆಗೆ ಆಗಮಿಸಿದ್ದ ಅತಿಥಿಗಳನ್ನೂ ವಿಚಾರಣೆಗೆ ಒಳಪಡಿಸಲಾಗುತ್ತಿದೆ” ಎಂದು ತಿಳಿಸಿದ್ದಾರೆ.

ಸಹಪಂಕ್ತಿ ಭೋಜನ ಮಾಡಿದ್ದಕ್ಕಾಗಿ ಕೊಲೆಯಾದ ರಮೇಶ್ ರಾಮ್ ಅವರ ಕುಟುಂಬದೊಂದಿಗೆ ಮುಖಂಡರು (PC: The Wire)

ಇದನ್ನೂ ಓದಿರಿ: ಜೇನುಕುರುಬ ಆದಿವಾಸಿ ಯುವಕನಿಗೆ ಅರಣ್ಯ ಸಿಬ್ಬಂದಿಯಿಂದ ಗುಂಡೇಟು: ಭುಗಿಲೆದ್ದ ಆಕ್ರೋಶ


ರಮೇಶ್ ರಾಮ್ ಅವರನ್ನು ಮದುವೆ ಸಮಾರಂಭಕ್ಕೆ ಕರೆಯಲಾಗಿತ್ತು ಎಂದು ಹೇಳಿರುವ ಪೊಲೀಸ್ ವರಿಷ್ಠಾಧಿಕಾರಿ, “ಮದುವೆಯನ್ನು ಹಮ್ಮಿಕೊಂಡಿದ್ದ ದುಂಗರ್ ಸಿಂಗ್ ಅವರ ಕುಟುಂಬವನ್ನು ಸ್ಥಳೀಯ ಪೊಲೀಸರು ವಿಚಾರಣೆ ಒಳಪಡಿಸಿದ್ದಾರೆ. ಆದರೆ ದುಂಗರ್‌ ಸಿಂಗ್‌ ಕುಟುಂಬವು ಸಂತ್ರಸ್ತ ಕುಟುಂಬದ ಆರೋಪಗಳನ್ನು ನಿರಾಕರಿಸಿದೆ” ಎಂದು ಮಾಹಿತಿ ನೀಡಿದ್ದಾರೆ.

“ನನ್ನ ಪತಿ ದೇವಿಧುರದ ಕೇದಾರನಾಥ ಗ್ರಾಮದಲ್ಲಿ ಟೈಲರ್ ಅಂಗಡಿಯನ್ನು ನಡೆಸುತ್ತಿದ್ದರು. ಅಂಗಡಿ, ಬಾಡಿಗೆ ಸ್ಥಳ, ದುಂಗರ್ ಸಿಂಗ್ ಮಾಲೀಕತ್ವದಲ್ಲಿದೆ. ಸಿಂಗ್ ಅವರ ಆಹ್ವಾನದ ಮೇರೆಗೆ ಅವರು ನವೆಂಬರ್ 28ರಂದು ಮದುವೆಗೆ ಹೋಗಿದ್ದರು” ಎಂದು ಕೊಲೆಯಾದ ರಮೇಶ್ ರಾಮ್ ಅವರ ಪತ್ನಿ ತುಳಸಿ ದೇವಿ ಅವರು ತಿಳಿಸಿರುವುದಾಗಿ ಎಫ್‌ಐಆರ್‌ನಲ್ಲಿ ಉಲ್ಲೇಖಿಸಿಲಾಗಿದೆ.

ರಾತ್ರಿಯಾದರೂ ರಾಮ್ ಮನೆಗೆ ಬಾರದಿದ್ದಾಗ ತುಳಿಸಿದೇವಿಯವರು ಗಂಡನಿಗೆ ಕರೆ ಮಾಡಿದ್ದು, ಕರೆ ಸ್ವೀಕರಿಸಿದ ಅಪರಿಚಿತ ವ್ಯಕ್ತಿಯೊಬ್ಬ, “ನಿಮ್ಮ ಪತಿ ಮದುವೆ ಸಮಾರಂಭದಲ್ಲಿದ್ದು, ಮರುದಿನ ಬೆಳಿಗ್ಗೆ ಮನೆಗೆ ಬರುತ್ತಾರೆ” ಎಂದು ತಿಳಿಸಿರುವುದಾಗಿ ಎಫ್‌ಐಆರ್‌ನಲ್ಲಿ ದಾಖಲಿಸಲಾಗಿದೆ.

ಬೆಳಿಗ್ಗೆ ತುಳಸಿ ದೇವಿ ಅವರಿಗೆ ಮತ್ತೊಂದು ಕರೆ ಬಂದಿದ್ದು, ಕರೆ ಮಾಡಿದ ವ್ಯಕ್ತಿಯು, “ನಿಮ್ಮ ಗಂಡ ಪ್ರಜ್ಞೆ ತಪ್ಪಿದ್ದಾರೆ. ಆಸ್ಪತ್ರೆಗೆ ಕರೆದೊಯ್ಯಲಾಗುವುದು ಎಂದನು. ಬೆಳಿಗ್ಗೆ ನನ್ನ ಮಗನಿಗೆ ಆಂಬ್ಯುಲೆನ್ಸ್ ಆಪರೇಟರ್‌ನಿಂದ ಕರೆ ಬಂದಿತು. ನಿಮ್ಮ ಗಂಡನನ್ನು ಲೋಹಾಘಾಟ್‌ನಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿದೆ, ಅಲ್ಲಿಗೆ ತಕ್ಷಣ ಬರಬೇಕು ಎಂದು ತಿಳಿಸಿದರು” ಎಂದು ತುಳಸಿದೇವಿ ವಿವರಿಸಿದ್ದಾರೆ.


ಇದನ್ನೂ ಓದಿರಿ: 2 ತಿಂಗಳಿನಿಂದ ವೇತನವಿಲ್ಲ: ಎಐಸಿಸಿಟಿಯು ನೇತೃತ್ವದಲ್ಲಿ ವಿಕ್ಟೋರಿಯಾ ಆಸ್ಪತ್ರೆ ಕಾರ್ಮಿಕರ ಪ್ರತಿಭಟನೆ


ನವೆಂಬರ್ 29ರಂದು ಬೆಳಿಗ್ಗೆ ಕುಟುಂಬವು ಲೋಹಘಾಟ್‌ನಲ್ಲಿರುವ ಆಸ್ಪತ್ರೆಗೆ ಧಾವಿಸಿದಾಗ, ಗಾಯಗೊಂಡ ವ್ಯಕ್ತಿ ನಿತ್ರಾಣರಾಗಿ ನೆಲದ ಮೇಲೆ ಮಲಗಿದ್ದರು. ನಂತರ, ಅಲ್ಲಿನ ವೈದ್ಯರು ರಾಮ್ ಅವರನ್ನು ಹಲ್ದಾವನಿಯ ಆಸ್ಪತ್ರೆಗೆ ಕರೆದೊಯ್ಯಲು ಸೂಚಿಸಿದರು ಎಂದು ಎಫ್‌ಐಆರ್‌ ಹೇಳಿದೆ.

“ನನ್ನ ತಂದೆಯ ಸ್ಥಿತಿಯನ್ನು ನೋಡಿ ನಮಗೆಲ್ಲರಿಗೂ ಆಘಾತವಾಯಿತು. ಅವರ ಮೈಮೇಲೆಲ್ಲ ಗಾಯದ ಗುರುತುಗಳಿದ್ದವು. ಎಲ್ಲರೊಂದಿಗೆ ಜೊತೆಯಲ್ಲಿ ಕುಳಿತು ಊಟ ಮಾಡಿದ್ದಕ್ಕಾಗಿ ಥಳಿಸಲಾಯಿತು ಎಂದು ಆಂಬ್ಯುಲೆನ್ಸ್‌ನಲ್ಲಿ ಹಲ್ದಾವನಿಗೆ ತೆರಳುವಾಗ ತಿಳಿದುಬಂತು” ಎಂದು ರಾಮ್ ಅವರ ಪುತ್ರ ಸಂಜಯ್ ಹೇಳಿದ್ದಾರೆ.

ಹಲ್ದಾವನಿಯ ಆಸ್ಪತ್ರೆಯಲ್ಲಿ ನವೆಂಬರ್‌ 29ರಂದು ರಾಮ್ ಮೃತಪಟ್ಟಿದ್ದು, ಕೊನೆಯುಸಿರೆಳೆಯುವ ಮೊದಲು ಸಿ.ಟಿ. ಸ್ಕ್ಯಾನ್‌ ಜೊತೆಗೆ ಕೆಲವು ಪರೀಕ್ಷೆಗಳನ್ನು ವೈದ್ಯರು ಮಾಡಿದ್ದಾರೆ.

“ಮದುವೆಯಲ್ಲಿ ಎಲ್ಲರೊಂದಿಗೆ ಊಟಕ್ಕೆ ಕುಳಿತ್ತಿದ್ದಕ್ಕೆ ನನ್ನ ಗಂಡನಿಗೆ ಚಿತ್ರ ಹಿಂಸೆ ನೀಡಲಾಯಿತು. ನವೆಂಬರ್ 28ರ ರಾತ್ರಿ ಅವರನ್ನು ಭೀಕರವಾಗಿ ಥಳಿಸಲಾಯಿತು. ನಮಗೆ ತಿಳಿಸದೆ ಮರುದಿನ ಬೆಳಿಗ್ಗೆ ಲೋಹಘಾಟ್ ಆಸ್ಪತ್ರೆಗೆ ಕರೆತರಲಾಯಿತು ಎಂಬುದು ನಮಗೆ ಖಚಿತವಾಗಿದೆ” ಎಂದು ತುಳಸಿ ದೇವಿ ಹೇಳಿಕೆ ನೀಡಿದ್ದಾರೆ.


ಇದನ್ನೂ ಓದಿರಿ: Manual Scavenging: ಮಲದ ಗುಂಡಿ ಸ್ವಚ್ಛಗೊಳಿಸುವವರಲ್ಲಿ 73.31% ಪರಿಶಿಷ್ಟ ಜಾತಿಯವರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಆಟೋ ಚಾಲಕನಾಗಿ ಕೆಲಸ ಮಾಡುವ ತಂದೆಯೊಬ್ಬರು ಕೈಯಲ್ಲಿ ಸಿಹಿ ತಿಂಡಿಯ ಪೆಟ್ಟಿಗೆಯೊಂದಿಗೆ ಮನೆಗೆ ಹೆಜ್ಜೆ ಹಾಕುತ್ತಾರೆ. ಅದನ್ನು ನೋಡಿದ ಮಗಳು, "ಏನಪ್ಪಾ ವಿಶೇಷ, ಇವತ್ತು ಹುಟ್ಟುಹಬ್ಬನಾ, ಹಬ್ಬನಾ ಅಥವಾ ಕುಟುಂಬದ ಸಂಭ್ರಮನಾ?" ಎಂದು...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...