Homeದಲಿತ್ ಫೈಲ್ಸ್‘ದಲಿತನನ್ನು ಮದುವೆಗೆ ಕರೆದರು, ಸಹಪಂಕ್ತಿ ಭೋಜನ ಮಾಡಿದ್ದಕ್ಕೆ ಕೊಲೆ ಮಾಡಿದರು’

‘ದಲಿತನನ್ನು ಮದುವೆಗೆ ಕರೆದರು, ಸಹಪಂಕ್ತಿ ಭೋಜನ ಮಾಡಿದ್ದಕ್ಕೆ ಕೊಲೆ ಮಾಡಿದರು’

- Advertisement -
- Advertisement -

ಸಹಪಂಕ್ತಿ ಭೋಜನ ಮಾಡಿದ ಕಾರಣಕ್ಕೆ ದಲಿತ ವ್ಯಕ್ತಿಯನ್ನು ಹೊಡೆದು ಕೊಂದಿರುವ ಘಟನೆ ಉತ್ತರಖಾಂಡ್ ರಾಜ್ಯದ ಚಂಪಾಪತ್‌ ಜಿಲ್ಲೆಯ ಮದುವೆ ಕಾರ್ಯಕ್ರಮವೊಂದರಲ್ಲಿ ನಡೆದಿದೆ.

45 ವರ್ಷದ ದಲಿತ ವ್ಯಕ್ತಿ ‘ರಮೇಶ್‌ ರಾಮ್‌’ ಮೇಲ್ಜಾತಿಯವರೊಂದಿಗೆ ಮದುವೆಯಲ್ಲಿ ಊಟಕ್ಕೆ ಕುಳಿತ್ತಿದ್ದನ್ನು ನೋಡಿ, ಹಲವು ಗಂಟೆಗಳ ಕಾಲ ಚಿತ್ರಹಿಂಸೆ ನೀಡಲಾಗಿದೆ. ಬಳಿಕ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು ಅವರು ಮೃತಪಟ್ಟಿದ್ದಾರೆ ಎಂದು ‘ದಿ ವೈರ್’ ಸುದ್ದಿ ಜಾಲತಾಣ ವರದಿ ಮಾಡಿದೆ.

“ದೈಹಿಕವಾಗಿ ಹಲವು ಗಂಟೆಗಳ ಕಾಲ ಅವರಿಗೆ ಹಿಂಸೆ ನೀಡಲಾಯಿತು. ಲೋಹಾಘಾಟ್‌ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಹೆಚ್ಚಿನ ಚಿಕಿತ್ಸೆಗೆ ಹಲ್ದಾವನಿಯ ಮತ್ತೊಂದು ಆಸ್ಪತ್ರೆಗೆ ಸ್ಥಳಾಂತರಿಸಿದಾಗ ಅಸುನೀಗಿದರು” ಎಂದು ಸಂತ್ರಸ್ತ ಕುಟುಂಬ ಆರೋಪಿಸಿದೆ.

ಚಂಪಾವತ್ ಪೊಲೀಸರು ಕೊಲೆ ಪ್ರಕರಣವನ್ನು ದಾಖಲಿಸಿದ್ದಾರೆ. ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಗೆ ವಿವಿಧ ಸಂಬಂಧಿತ ಸೆಕ್ಷನ್‌ಗಳನ್ನು ಎಫ್‌ಐಆರ್‌ನಲ್ಲಿ ಸೇರಿಸಿದ್ದಾರೆ. ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ (ಪ್ರಥಮ ಮಾಹಿತಿ ವರದಿ) ದಾಖಲಿಸಲಾಗಿದೆ, ಆದರೆ ಇನ್ನೂ ಯಾರನ್ನೂ ಬಂಧಿಸಲಾಗಿಲ್ಲ.

ಸಂತ್ರಸ್ತೆಯ ಪತ್ನಿಯ ದೂರಿನ ಅನ್ವಯ ಪ್ರಕರಣ ದಾಖಲಾಗಿದೆ. ಚಂಪಾವತ್ ಪೊಲೀಸ್ ವರಿಷ್ಠಾಧಿಕಾರಿ ದೇವೇಂದ್ರ ಪಿಂಚಾ ಅವರು ‘ದಿ ವೈರ್‌’ಗೆ ಪ್ರತಿಕ್ರಿಯಿಸಿ, “ನಾವು ಪ್ರಕರಣವನ್ನು ಎಲ್ಲಾ ಆಯಾಮದಲ್ಲೂ ತನಿಖೆ ಮಾಡುತ್ತಿದ್ದೇವೆ. ಮದುವೆಯ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ. ಮದುವೆಗೆ ಆಗಮಿಸಿದ್ದ ಅತಿಥಿಗಳನ್ನೂ ವಿಚಾರಣೆಗೆ ಒಳಪಡಿಸಲಾಗುತ್ತಿದೆ” ಎಂದು ತಿಳಿಸಿದ್ದಾರೆ.

ಸಹಪಂಕ್ತಿ ಭೋಜನ ಮಾಡಿದ್ದಕ್ಕಾಗಿ ಕೊಲೆಯಾದ ರಮೇಶ್ ರಾಮ್ ಅವರ ಕುಟುಂಬದೊಂದಿಗೆ ಮುಖಂಡರು (PC: The Wire)

ಇದನ್ನೂ ಓದಿರಿ: ಜೇನುಕುರುಬ ಆದಿವಾಸಿ ಯುವಕನಿಗೆ ಅರಣ್ಯ ಸಿಬ್ಬಂದಿಯಿಂದ ಗುಂಡೇಟು: ಭುಗಿಲೆದ್ದ ಆಕ್ರೋಶ


ರಮೇಶ್ ರಾಮ್ ಅವರನ್ನು ಮದುವೆ ಸಮಾರಂಭಕ್ಕೆ ಕರೆಯಲಾಗಿತ್ತು ಎಂದು ಹೇಳಿರುವ ಪೊಲೀಸ್ ವರಿಷ್ಠಾಧಿಕಾರಿ, “ಮದುವೆಯನ್ನು ಹಮ್ಮಿಕೊಂಡಿದ್ದ ದುಂಗರ್ ಸಿಂಗ್ ಅವರ ಕುಟುಂಬವನ್ನು ಸ್ಥಳೀಯ ಪೊಲೀಸರು ವಿಚಾರಣೆ ಒಳಪಡಿಸಿದ್ದಾರೆ. ಆದರೆ ದುಂಗರ್‌ ಸಿಂಗ್‌ ಕುಟುಂಬವು ಸಂತ್ರಸ್ತ ಕುಟುಂಬದ ಆರೋಪಗಳನ್ನು ನಿರಾಕರಿಸಿದೆ” ಎಂದು ಮಾಹಿತಿ ನೀಡಿದ್ದಾರೆ.

“ನನ್ನ ಪತಿ ದೇವಿಧುರದ ಕೇದಾರನಾಥ ಗ್ರಾಮದಲ್ಲಿ ಟೈಲರ್ ಅಂಗಡಿಯನ್ನು ನಡೆಸುತ್ತಿದ್ದರು. ಅಂಗಡಿ, ಬಾಡಿಗೆ ಸ್ಥಳ, ದುಂಗರ್ ಸಿಂಗ್ ಮಾಲೀಕತ್ವದಲ್ಲಿದೆ. ಸಿಂಗ್ ಅವರ ಆಹ್ವಾನದ ಮೇರೆಗೆ ಅವರು ನವೆಂಬರ್ 28ರಂದು ಮದುವೆಗೆ ಹೋಗಿದ್ದರು” ಎಂದು ಕೊಲೆಯಾದ ರಮೇಶ್ ರಾಮ್ ಅವರ ಪತ್ನಿ ತುಳಸಿ ದೇವಿ ಅವರು ತಿಳಿಸಿರುವುದಾಗಿ ಎಫ್‌ಐಆರ್‌ನಲ್ಲಿ ಉಲ್ಲೇಖಿಸಿಲಾಗಿದೆ.

ರಾತ್ರಿಯಾದರೂ ರಾಮ್ ಮನೆಗೆ ಬಾರದಿದ್ದಾಗ ತುಳಿಸಿದೇವಿಯವರು ಗಂಡನಿಗೆ ಕರೆ ಮಾಡಿದ್ದು, ಕರೆ ಸ್ವೀಕರಿಸಿದ ಅಪರಿಚಿತ ವ್ಯಕ್ತಿಯೊಬ್ಬ, “ನಿಮ್ಮ ಪತಿ ಮದುವೆ ಸಮಾರಂಭದಲ್ಲಿದ್ದು, ಮರುದಿನ ಬೆಳಿಗ್ಗೆ ಮನೆಗೆ ಬರುತ್ತಾರೆ” ಎಂದು ತಿಳಿಸಿರುವುದಾಗಿ ಎಫ್‌ಐಆರ್‌ನಲ್ಲಿ ದಾಖಲಿಸಲಾಗಿದೆ.

ಬೆಳಿಗ್ಗೆ ತುಳಸಿ ದೇವಿ ಅವರಿಗೆ ಮತ್ತೊಂದು ಕರೆ ಬಂದಿದ್ದು, ಕರೆ ಮಾಡಿದ ವ್ಯಕ್ತಿಯು, “ನಿಮ್ಮ ಗಂಡ ಪ್ರಜ್ಞೆ ತಪ್ಪಿದ್ದಾರೆ. ಆಸ್ಪತ್ರೆಗೆ ಕರೆದೊಯ್ಯಲಾಗುವುದು ಎಂದನು. ಬೆಳಿಗ್ಗೆ ನನ್ನ ಮಗನಿಗೆ ಆಂಬ್ಯುಲೆನ್ಸ್ ಆಪರೇಟರ್‌ನಿಂದ ಕರೆ ಬಂದಿತು. ನಿಮ್ಮ ಗಂಡನನ್ನು ಲೋಹಾಘಾಟ್‌ನಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿದೆ, ಅಲ್ಲಿಗೆ ತಕ್ಷಣ ಬರಬೇಕು ಎಂದು ತಿಳಿಸಿದರು” ಎಂದು ತುಳಸಿದೇವಿ ವಿವರಿಸಿದ್ದಾರೆ.


ಇದನ್ನೂ ಓದಿರಿ: 2 ತಿಂಗಳಿನಿಂದ ವೇತನವಿಲ್ಲ: ಎಐಸಿಸಿಟಿಯು ನೇತೃತ್ವದಲ್ಲಿ ವಿಕ್ಟೋರಿಯಾ ಆಸ್ಪತ್ರೆ ಕಾರ್ಮಿಕರ ಪ್ರತಿಭಟನೆ


ನವೆಂಬರ್ 29ರಂದು ಬೆಳಿಗ್ಗೆ ಕುಟುಂಬವು ಲೋಹಘಾಟ್‌ನಲ್ಲಿರುವ ಆಸ್ಪತ್ರೆಗೆ ಧಾವಿಸಿದಾಗ, ಗಾಯಗೊಂಡ ವ್ಯಕ್ತಿ ನಿತ್ರಾಣರಾಗಿ ನೆಲದ ಮೇಲೆ ಮಲಗಿದ್ದರು. ನಂತರ, ಅಲ್ಲಿನ ವೈದ್ಯರು ರಾಮ್ ಅವರನ್ನು ಹಲ್ದಾವನಿಯ ಆಸ್ಪತ್ರೆಗೆ ಕರೆದೊಯ್ಯಲು ಸೂಚಿಸಿದರು ಎಂದು ಎಫ್‌ಐಆರ್‌ ಹೇಳಿದೆ.

“ನನ್ನ ತಂದೆಯ ಸ್ಥಿತಿಯನ್ನು ನೋಡಿ ನಮಗೆಲ್ಲರಿಗೂ ಆಘಾತವಾಯಿತು. ಅವರ ಮೈಮೇಲೆಲ್ಲ ಗಾಯದ ಗುರುತುಗಳಿದ್ದವು. ಎಲ್ಲರೊಂದಿಗೆ ಜೊತೆಯಲ್ಲಿ ಕುಳಿತು ಊಟ ಮಾಡಿದ್ದಕ್ಕಾಗಿ ಥಳಿಸಲಾಯಿತು ಎಂದು ಆಂಬ್ಯುಲೆನ್ಸ್‌ನಲ್ಲಿ ಹಲ್ದಾವನಿಗೆ ತೆರಳುವಾಗ ತಿಳಿದುಬಂತು” ಎಂದು ರಾಮ್ ಅವರ ಪುತ್ರ ಸಂಜಯ್ ಹೇಳಿದ್ದಾರೆ.

ಹಲ್ದಾವನಿಯ ಆಸ್ಪತ್ರೆಯಲ್ಲಿ ನವೆಂಬರ್‌ 29ರಂದು ರಾಮ್ ಮೃತಪಟ್ಟಿದ್ದು, ಕೊನೆಯುಸಿರೆಳೆಯುವ ಮೊದಲು ಸಿ.ಟಿ. ಸ್ಕ್ಯಾನ್‌ ಜೊತೆಗೆ ಕೆಲವು ಪರೀಕ್ಷೆಗಳನ್ನು ವೈದ್ಯರು ಮಾಡಿದ್ದಾರೆ.

“ಮದುವೆಯಲ್ಲಿ ಎಲ್ಲರೊಂದಿಗೆ ಊಟಕ್ಕೆ ಕುಳಿತ್ತಿದ್ದಕ್ಕೆ ನನ್ನ ಗಂಡನಿಗೆ ಚಿತ್ರ ಹಿಂಸೆ ನೀಡಲಾಯಿತು. ನವೆಂಬರ್ 28ರ ರಾತ್ರಿ ಅವರನ್ನು ಭೀಕರವಾಗಿ ಥಳಿಸಲಾಯಿತು. ನಮಗೆ ತಿಳಿಸದೆ ಮರುದಿನ ಬೆಳಿಗ್ಗೆ ಲೋಹಘಾಟ್ ಆಸ್ಪತ್ರೆಗೆ ಕರೆತರಲಾಯಿತು ಎಂಬುದು ನಮಗೆ ಖಚಿತವಾಗಿದೆ” ಎಂದು ತುಳಸಿ ದೇವಿ ಹೇಳಿಕೆ ನೀಡಿದ್ದಾರೆ.


ಇದನ್ನೂ ಓದಿರಿ: Manual Scavenging: ಮಲದ ಗುಂಡಿ ಸ್ವಚ್ಛಗೊಳಿಸುವವರಲ್ಲಿ 73.31% ಪರಿಶಿಷ್ಟ ಜಾತಿಯವರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...