HomeUncategorizedದ್ವೇಷ ಹರಡುವ ಮಾಧ್ಯಮಗಳಿಂದ ಅಭದ್ರರಾಗಿರುವ ಕರ್ನಾಟಕದ ಮುಸ್ಲಿಮರು: ಕ್ವಿಂಟ್ ವಿಶೇಷ ವಿಡಿಯೋ ವರದಿ

ದ್ವೇಷ ಹರಡುವ ಮಾಧ್ಯಮಗಳಿಂದ ಅಭದ್ರರಾಗಿರುವ ಕರ್ನಾಟಕದ ಮುಸ್ಲಿಮರು: ಕ್ವಿಂಟ್ ವಿಶೇಷ ವಿಡಿಯೋ ವರದಿ

ಹೀಗೆ ಹಲ್ಲೆಯಾದವರ ಬಗ್ಗೆ ಅಂತರ್ಜಾಲ ಪತ್ರಿಕೆ "ಕ್ವಿಂಟ್" ವಿಶೇಷ ವರದಿಯನ್ನು ಮಾಡಿದೆ. ಅದರ ಮುಖ್ಯಾಂಶಗಳು ಇಲ್ಲಿವೆ.

- Advertisement -
- Advertisement -

ಕೊರೊನಾ ವೈರಸ್ ವಿಶ್ವದಾದ್ಯಂತ ತನ್ನ ಕರಿಛಾಯೆಯನ್ನು ಬೀರುತ್ತಿರುವಾಗ ಭಾರತವನ್ನೇನು ಬಿಟ್ಟು ಬಿಡುವುದಿಲ್ಲ. ಆದರೆ ಭಾರತದ ಸಂಧರ್ಭಕ್ಕೆ ಕೊರೊನ ಬರುವಾಗ ಅದು ಇಸ್ಲಾಂ ಧರ್ಮಕ್ಕೆ ಮತಾಂತರವಾಯಿತೇ ಎನ್ನುವ ಪ್ರಶ್ನೆಯನ್ನು ಜನರು ಕೇಳುತ್ತಿದ್ದಾರೆ. ನಮ್ಮ ಮುಖ್ಯವಾಹಿನಿಯ ದೃಶ್ಯ ಮಾಧ್ಯಮ, ಪತ್ರಿಕೆಯಾದಿಯಾಗಿ ಸಾಮಾಜಿಕ ಜಾಲತಾಣ ಕೂಡಾ ಸೇರಿಕೊಂಡು ಮಾಡಿದ ಅಪಪ್ರಚಾರದಿಂದಾಗಿ ಕರ್ನಾಟಕದಾದ್ಯಂತ ಮುಸ್ಲಿಮರು ಹಲ್ಲೆಗೊಳಗಾಗಬೇಕಾಯಿತು. ಹೀಗೆ ಹಲ್ಲೆಯಾದವರ ಬಗ್ಗೆ ಅಂತರ್ಜಾಲ ಪತ್ರಿಕೆ “ಕ್ವಿಂಟ್” ವಿಶೇಷ ವರದಿಯನ್ನು ಮಾಡಿದೆ. ಅದರ ಮುಖ್ಯಾಂಶಗಳು ಹೀಗಿವೆ…

ಬಾಗಲಕೋಟೆ ಜಿಲ್ಲೆಯ ಬಿರದಾರಿ ಗ್ರಾಮದಲ್ಲಿ ಹತ್ತರಿಂದ ಹದಿನೈದು ಜನರು ಕೈಯ್ಯಲ್ಲಿ ಕಬ್ಬಿಣದ ರಾಡುಗಳನ್ನು ಹಿಡಿದು ಮೂವರು ಮುಸ್ಲಿಮರನ್ನು ಸುತ್ತುವರೆದು ಗ್ರಾಮದಿಂದ ಹೊರ ಹೋಗುವಂತೆ ಕೂಗುತ್ತಿದ್ದಾರೆ. ಮೂವರಲ್ಲಿ ಒಬ್ಬ ವ್ಯಕ್ತಿ ತುಂಬಾ ದಯನೀಯವಾಗಿ ಬೇಡುತ್ತಿರುವಾಗ “ಅವರನ್ನು ಮುಟ್ಟಬೇಡಿ ರೋಗ ಹರಡುತ್ತಾರೆ” ಎಂದು ಹಲ್ಲೆಕೋರನೊಬ್ಬ ಕೂಗುವ ಶಬ್ದ ವಿಡಿಯೋದಲ್ಲಿ ಕೇಳಿಸುತ್ತದೆ.

Attacks blaming muslims for COVID-19 reported across KarnatakaFrom heckling to assault, there has been a stark rise in attacks on Muslims, Muslim volunteers and hate speech against the community in the last week, during the 21-day lockdown over coronavirus.Full story: https://bit.ly/2x2KQor#COVID19 #Lockdown #Lockdown21 #India

Posted by Shehzad Khan on Wednesday, April 8, 2020

ಕದರಕೊಪ್ಪ ಗ್ರಾಮದಲ್ಲಿ ಮಸೀದಿಯೊಳಗೆ ಇರುವ ಮೂವರು ವ್ಯಕ್ತಿಗಳನ್ನು ನಮಾಜ್ ಮಾಡುತ್ತಿದ್ದೀರಿ ಎಂದು ಆರೋಪಿಸಿ ಅವರ ಮೇಲೆ ಆಕ್ರಮಣ ಮಾಡುತ್ತಾರೆ. ಈ ವಿಡಿಯೋ ವೈರಲ್ ಆದ ಬಳಿಕ ಪೊಲೀಸರು ಹಲ್ಲೆಕೋರರ ವಿರುದ್ಧ ಕೇಸು ದಾಖಲಿಸುತ್ತಾರೆ.


ಇದನ್ನೂ ಓದಿ: ಮುಖ್ಯಮಂತ್ರಿಗಳ ಎಚ್ಚರಿಕೆಯ ನಂತರವೂ ಸುಳ್ಳು ಸುದ್ದಿ ಹರಡುತ್ತಿರುವ ಪೋಸ್ಟ್‌ ಕಾರ್ಡ್‌ ಕನ್ನಡ: ಕ್ರಮ ಯಾವಾಗ? 


ಬೆಂಗಳೂರಿನಲ್ಲಿ ನಡೆದ ಮತ್ತೊಂದು ಘಟನೆಯಲ್ಲಿ ಲಾಕ್ ಡೌನ್ ನಿಂದಾಗಿ ಕಷ್ಟಕ್ಕೊಳಗಾಗಿರುವ ಜನರಿಗೆ ಪಡಿತರ ಹಂಚುತ್ತಿದ್ದ ಸ್ವರಾಜ್ ಅಭಿಯಾನದ ಕಾರ್ಯಕರ್ತರಿಗೆ ಮುಸ್ಲಿಮರು ರೋಗ ಹರಡುತ್ತಿದ್ದಾರೆ ಎಂದು ಹೇಳಿ ಕ್ರಿಕೆಟ್ ಬ್ಯಾಟುಗಳಿಂದ ಹಲ್ಲೆ ನಡೆಸಿದ್ದಾರೆ. ಈ ಘಟನೆಯ ಬಗ್ಗೆ ಮಾತನಾಡಿದ ಸ್ವರಾಜ್ ಅಭಿಯಾನದ ಕಾರ್ಯಕರ್ತರಾದ ಸಯದ್ ತಬ್ರೀಜ್, ಪೋಲಿಸರಿಂದ ಅನುಮತಿ ಪಡೆದು ಪಡಿತರವನ್ನು ಹಂಚುವುದಕ್ಕೆ ಹೊರಟಾಗ ಹಿಂದಿನಿಂದ ಬಂದು ಬ್ಯಾಟ್ ಹಾಗೂ ಕೋಲುಗಳಿಂದ ಹಲ್ಲೆ ನಡೆಸಿದ್ದಾರೆ ಎಂದು ಹೇಳುತ್ತಾರೆ. ಅಮೃತಹಳ್ಳಿಯಿಂದ ದಾಸರಹಳ್ಳಿಗೆ ಹೋಗುತ್ತಿರುವಾಗ ಇದರ ಮದ್ಯೆ ಹದಿನೈದು ಮಂದಿ ನಮ್ಮ ಮೇಲೆ ಆಕ್ರಮಣ ನಡೆಸಿದ್ದಾರೆ, ಜೊತೆಗೆ ನಿಮ್ಮ ಪಡಿತರ ಮುಸ್ಲಿಮರಿಗೆ ಮಾತ್ರ ನೀಡಿ ಇಲ್ಲಿಗೆ ಅದರ ಅಗತ್ಯವಿಲ್ಲ ಎಂದು ಹೇಳಿ ನಮ್ಮ ಜೊತೆಯಿದ್ದ ಆರು ಮಂದಿಗೆ ಹದಿನೈದು ಮಂದಿ ಸೇರಿ ಹಲ್ಲೆ ನಡೆಸಿದ್ದಾರೆ ಎಂದು ಸ್ವರಾಜ್ ಅಭಿಯಾನದ ಕಾರ್ಯದರ್ಶಿ ಝರೀನ್ ತಾಜ್ ಹೇಳುತ್ತಾರೆ.

ಈ ಘಟನೆಗೂ ಮೊದಲು ಸ್ವರಾಜ್ ಅಭಿಯಾನದ ಪಡಿತರ ಬಂದಾಗಲೆ ಬಿಜೆಪಿ ನಾಯಕ ಇವರೊಂದಿಗೆ ನೀವು ಪಡಿತರ ಹಂಚುವಂತಿಲ್ಲ, ನೀವು ಭಯೋತ್ಪಾದಕರು, ನಿಮ್ಮಿಂದಾಗಿಯೇ ವೈರಸ್ ಹರಡುತ್ತಿದೆ ಎಂದು ಗಲಾಟೆ ಮಾಡಿದ್ದಾರೆ ಎಂದು ಹಲ್ಲೆಗೊಳಗಾದ ತಬ್ರೀಜ್ ಆರೋಪಿಸುತ್ತಾರೆ. ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದೇವೆ ಅವರು ಅನುಮತಿ ಕೊಟ್ಟ ನಂತರ ನಾವು ಪಡಿತರ ಹಂಚಿದ್ದೇವೆ ಎಂದು ಅವರು ಹೇಳುತ್ತಾರೆ.

ಈ ಘಟನೆಯ ವೀಡಿಯೊದಲ್ಲಿ ಆರೆಸ್ಸೆಸ್ಸಿನ ಸಮವಸ್ತ್ರ ಧರಿಸಿರುವ ವ್ಯಕ್ತಿಗಳು, ಇವರು ಸೋಂಕು ಹರಡುತ್ತಿದ್ದಾರೆ ಇವರಿಂದ ಪಡಿತರವನ್ನು ಪಡೆಯದಂತೆ ಜನರ ಹತ್ತಿರ ಹೇಳುತ್ತಿರುವುದು ಕಾಣಬಹುದಾಗಿದೆ.

ಮತ್ತೊಂದು ಘಟನೆ: ಬೆಳಗಾವಿ ಜಿಲ್ಲೆಯ ಯಮಕನಮರಡಿ ಮತ್ತು ಸದಲಗ ಎಂಬಲ್ಲಿ ಮಸೀದಿಯನ್ನು ಆಕ್ರಮಿಸಿ ಬೆಳಕು ನಂದಿಸಲಿಲ್ಲ ಎಂದು ಆರೋಪಿಸಿ ಗಲಾಟೆ ಮಾಡಿದ್ದಕ್ಕೆ ಪೊಲೀಸರು ಸುಮಾರು ಇಪ್ಪತ್ತು ಜನರನ್ನು ಬಂಧಿಸಿದ್ದಾರೆ.

ಅಲ್ಲದೆ ಮಂಗಳೂರಿನ ಹಲವೆಡೆ ಕೊರೊನಾ ವೈರಸ್ ಹೋಗುವವರೆಗೆ ಮುಸ್ಲಿಮ್ ವ್ಯಾಪಾರಿಗಳಿಗೆ ಊರಿಗೆ ಪ್ರವೇಶವಿಲ್ಲ ಎಂದು ನಿಷೇಧ ಹೇರಿ ನೋಟಿಸುಗಳನ್ನು ಹಾಕಲಾಗಿದೆ.


ಇದನ್ನೂ ಓದಿ: ಕೆ.ಆರ್‌ ಪೇಟೆಯಲ್ಲಿ ಮುಸ್ಲಿಂ ಯುವಕರ ಬಗ್ಗೆ ಸುಳ್ಳು ಸುದ್ದಿ: ಕೊನೆಗೆ ಸಿಕ್ಕ ಆರೋಪಿಗಳು ಬೇರೆ ಧರ್ಮದವರು! 


ಮುಖ್ಯಮಂತ್ರಿ ಯಡಿಯೂರಪ್ಪ ಈಗಾಗಲೆ ಅಲ್ಪಸಂಖ್ಯಾತ ಮುಸ್ಲಿಮರ ಮೇಲೆ ದ್ವೇಷ ಹರಡುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ. ಆದರೂ ಮುಸ್ಲಿಂ ಸಮುದಾಯದ ವಿರುದ್ಧ ಸುಳ್ಳುಗಳು, ಅಪಪ್ರಚಾರಗಳು ಎಗ್ಗಿಲ್ಲದೇ ನಡೆಯುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...