HomeUncategorizedದ್ವೇಷ ಹರಡುವ ಮಾಧ್ಯಮಗಳಿಂದ ಅಭದ್ರರಾಗಿರುವ ಕರ್ನಾಟಕದ ಮುಸ್ಲಿಮರು: ಕ್ವಿಂಟ್ ವಿಶೇಷ ವಿಡಿಯೋ ವರದಿ

ದ್ವೇಷ ಹರಡುವ ಮಾಧ್ಯಮಗಳಿಂದ ಅಭದ್ರರಾಗಿರುವ ಕರ್ನಾಟಕದ ಮುಸ್ಲಿಮರು: ಕ್ವಿಂಟ್ ವಿಶೇಷ ವಿಡಿಯೋ ವರದಿ

ಹೀಗೆ ಹಲ್ಲೆಯಾದವರ ಬಗ್ಗೆ ಅಂತರ್ಜಾಲ ಪತ್ರಿಕೆ "ಕ್ವಿಂಟ್" ವಿಶೇಷ ವರದಿಯನ್ನು ಮಾಡಿದೆ. ಅದರ ಮುಖ್ಯಾಂಶಗಳು ಇಲ್ಲಿವೆ.

- Advertisement -
- Advertisement -

ಕೊರೊನಾ ವೈರಸ್ ವಿಶ್ವದಾದ್ಯಂತ ತನ್ನ ಕರಿಛಾಯೆಯನ್ನು ಬೀರುತ್ತಿರುವಾಗ ಭಾರತವನ್ನೇನು ಬಿಟ್ಟು ಬಿಡುವುದಿಲ್ಲ. ಆದರೆ ಭಾರತದ ಸಂಧರ್ಭಕ್ಕೆ ಕೊರೊನ ಬರುವಾಗ ಅದು ಇಸ್ಲಾಂ ಧರ್ಮಕ್ಕೆ ಮತಾಂತರವಾಯಿತೇ ಎನ್ನುವ ಪ್ರಶ್ನೆಯನ್ನು ಜನರು ಕೇಳುತ್ತಿದ್ದಾರೆ. ನಮ್ಮ ಮುಖ್ಯವಾಹಿನಿಯ ದೃಶ್ಯ ಮಾಧ್ಯಮ, ಪತ್ರಿಕೆಯಾದಿಯಾಗಿ ಸಾಮಾಜಿಕ ಜಾಲತಾಣ ಕೂಡಾ ಸೇರಿಕೊಂಡು ಮಾಡಿದ ಅಪಪ್ರಚಾರದಿಂದಾಗಿ ಕರ್ನಾಟಕದಾದ್ಯಂತ ಮುಸ್ಲಿಮರು ಹಲ್ಲೆಗೊಳಗಾಗಬೇಕಾಯಿತು. ಹೀಗೆ ಹಲ್ಲೆಯಾದವರ ಬಗ್ಗೆ ಅಂತರ್ಜಾಲ ಪತ್ರಿಕೆ “ಕ್ವಿಂಟ್” ವಿಶೇಷ ವರದಿಯನ್ನು ಮಾಡಿದೆ. ಅದರ ಮುಖ್ಯಾಂಶಗಳು ಹೀಗಿವೆ…

ಬಾಗಲಕೋಟೆ ಜಿಲ್ಲೆಯ ಬಿರದಾರಿ ಗ್ರಾಮದಲ್ಲಿ ಹತ್ತರಿಂದ ಹದಿನೈದು ಜನರು ಕೈಯ್ಯಲ್ಲಿ ಕಬ್ಬಿಣದ ರಾಡುಗಳನ್ನು ಹಿಡಿದು ಮೂವರು ಮುಸ್ಲಿಮರನ್ನು ಸುತ್ತುವರೆದು ಗ್ರಾಮದಿಂದ ಹೊರ ಹೋಗುವಂತೆ ಕೂಗುತ್ತಿದ್ದಾರೆ. ಮೂವರಲ್ಲಿ ಒಬ್ಬ ವ್ಯಕ್ತಿ ತುಂಬಾ ದಯನೀಯವಾಗಿ ಬೇಡುತ್ತಿರುವಾಗ “ಅವರನ್ನು ಮುಟ್ಟಬೇಡಿ ರೋಗ ಹರಡುತ್ತಾರೆ” ಎಂದು ಹಲ್ಲೆಕೋರನೊಬ್ಬ ಕೂಗುವ ಶಬ್ದ ವಿಡಿಯೋದಲ್ಲಿ ಕೇಳಿಸುತ್ತದೆ.

Attacks blaming muslims for COVID-19 reported across KarnatakaFrom heckling to assault, there has been a stark rise in attacks on Muslims, Muslim volunteers and hate speech against the community in the last week, during the 21-day lockdown over coronavirus.Full story: https://bit.ly/2x2KQor#COVID19 #Lockdown #Lockdown21 #India

Posted by Shehzad Khan on Wednesday, April 8, 2020

ಕದರಕೊಪ್ಪ ಗ್ರಾಮದಲ್ಲಿ ಮಸೀದಿಯೊಳಗೆ ಇರುವ ಮೂವರು ವ್ಯಕ್ತಿಗಳನ್ನು ನಮಾಜ್ ಮಾಡುತ್ತಿದ್ದೀರಿ ಎಂದು ಆರೋಪಿಸಿ ಅವರ ಮೇಲೆ ಆಕ್ರಮಣ ಮಾಡುತ್ತಾರೆ. ಈ ವಿಡಿಯೋ ವೈರಲ್ ಆದ ಬಳಿಕ ಪೊಲೀಸರು ಹಲ್ಲೆಕೋರರ ವಿರುದ್ಧ ಕೇಸು ದಾಖಲಿಸುತ್ತಾರೆ.


ಇದನ್ನೂ ಓದಿ: ಮುಖ್ಯಮಂತ್ರಿಗಳ ಎಚ್ಚರಿಕೆಯ ನಂತರವೂ ಸುಳ್ಳು ಸುದ್ದಿ ಹರಡುತ್ತಿರುವ ಪೋಸ್ಟ್‌ ಕಾರ್ಡ್‌ ಕನ್ನಡ: ಕ್ರಮ ಯಾವಾಗ? 


ಬೆಂಗಳೂರಿನಲ್ಲಿ ನಡೆದ ಮತ್ತೊಂದು ಘಟನೆಯಲ್ಲಿ ಲಾಕ್ ಡೌನ್ ನಿಂದಾಗಿ ಕಷ್ಟಕ್ಕೊಳಗಾಗಿರುವ ಜನರಿಗೆ ಪಡಿತರ ಹಂಚುತ್ತಿದ್ದ ಸ್ವರಾಜ್ ಅಭಿಯಾನದ ಕಾರ್ಯಕರ್ತರಿಗೆ ಮುಸ್ಲಿಮರು ರೋಗ ಹರಡುತ್ತಿದ್ದಾರೆ ಎಂದು ಹೇಳಿ ಕ್ರಿಕೆಟ್ ಬ್ಯಾಟುಗಳಿಂದ ಹಲ್ಲೆ ನಡೆಸಿದ್ದಾರೆ. ಈ ಘಟನೆಯ ಬಗ್ಗೆ ಮಾತನಾಡಿದ ಸ್ವರಾಜ್ ಅಭಿಯಾನದ ಕಾರ್ಯಕರ್ತರಾದ ಸಯದ್ ತಬ್ರೀಜ್, ಪೋಲಿಸರಿಂದ ಅನುಮತಿ ಪಡೆದು ಪಡಿತರವನ್ನು ಹಂಚುವುದಕ್ಕೆ ಹೊರಟಾಗ ಹಿಂದಿನಿಂದ ಬಂದು ಬ್ಯಾಟ್ ಹಾಗೂ ಕೋಲುಗಳಿಂದ ಹಲ್ಲೆ ನಡೆಸಿದ್ದಾರೆ ಎಂದು ಹೇಳುತ್ತಾರೆ. ಅಮೃತಹಳ್ಳಿಯಿಂದ ದಾಸರಹಳ್ಳಿಗೆ ಹೋಗುತ್ತಿರುವಾಗ ಇದರ ಮದ್ಯೆ ಹದಿನೈದು ಮಂದಿ ನಮ್ಮ ಮೇಲೆ ಆಕ್ರಮಣ ನಡೆಸಿದ್ದಾರೆ, ಜೊತೆಗೆ ನಿಮ್ಮ ಪಡಿತರ ಮುಸ್ಲಿಮರಿಗೆ ಮಾತ್ರ ನೀಡಿ ಇಲ್ಲಿಗೆ ಅದರ ಅಗತ್ಯವಿಲ್ಲ ಎಂದು ಹೇಳಿ ನಮ್ಮ ಜೊತೆಯಿದ್ದ ಆರು ಮಂದಿಗೆ ಹದಿನೈದು ಮಂದಿ ಸೇರಿ ಹಲ್ಲೆ ನಡೆಸಿದ್ದಾರೆ ಎಂದು ಸ್ವರಾಜ್ ಅಭಿಯಾನದ ಕಾರ್ಯದರ್ಶಿ ಝರೀನ್ ತಾಜ್ ಹೇಳುತ್ತಾರೆ.

ಈ ಘಟನೆಗೂ ಮೊದಲು ಸ್ವರಾಜ್ ಅಭಿಯಾನದ ಪಡಿತರ ಬಂದಾಗಲೆ ಬಿಜೆಪಿ ನಾಯಕ ಇವರೊಂದಿಗೆ ನೀವು ಪಡಿತರ ಹಂಚುವಂತಿಲ್ಲ, ನೀವು ಭಯೋತ್ಪಾದಕರು, ನಿಮ್ಮಿಂದಾಗಿಯೇ ವೈರಸ್ ಹರಡುತ್ತಿದೆ ಎಂದು ಗಲಾಟೆ ಮಾಡಿದ್ದಾರೆ ಎಂದು ಹಲ್ಲೆಗೊಳಗಾದ ತಬ್ರೀಜ್ ಆರೋಪಿಸುತ್ತಾರೆ. ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದೇವೆ ಅವರು ಅನುಮತಿ ಕೊಟ್ಟ ನಂತರ ನಾವು ಪಡಿತರ ಹಂಚಿದ್ದೇವೆ ಎಂದು ಅವರು ಹೇಳುತ್ತಾರೆ.

ಈ ಘಟನೆಯ ವೀಡಿಯೊದಲ್ಲಿ ಆರೆಸ್ಸೆಸ್ಸಿನ ಸಮವಸ್ತ್ರ ಧರಿಸಿರುವ ವ್ಯಕ್ತಿಗಳು, ಇವರು ಸೋಂಕು ಹರಡುತ್ತಿದ್ದಾರೆ ಇವರಿಂದ ಪಡಿತರವನ್ನು ಪಡೆಯದಂತೆ ಜನರ ಹತ್ತಿರ ಹೇಳುತ್ತಿರುವುದು ಕಾಣಬಹುದಾಗಿದೆ.

ಮತ್ತೊಂದು ಘಟನೆ: ಬೆಳಗಾವಿ ಜಿಲ್ಲೆಯ ಯಮಕನಮರಡಿ ಮತ್ತು ಸದಲಗ ಎಂಬಲ್ಲಿ ಮಸೀದಿಯನ್ನು ಆಕ್ರಮಿಸಿ ಬೆಳಕು ನಂದಿಸಲಿಲ್ಲ ಎಂದು ಆರೋಪಿಸಿ ಗಲಾಟೆ ಮಾಡಿದ್ದಕ್ಕೆ ಪೊಲೀಸರು ಸುಮಾರು ಇಪ್ಪತ್ತು ಜನರನ್ನು ಬಂಧಿಸಿದ್ದಾರೆ.

ಅಲ್ಲದೆ ಮಂಗಳೂರಿನ ಹಲವೆಡೆ ಕೊರೊನಾ ವೈರಸ್ ಹೋಗುವವರೆಗೆ ಮುಸ್ಲಿಮ್ ವ್ಯಾಪಾರಿಗಳಿಗೆ ಊರಿಗೆ ಪ್ರವೇಶವಿಲ್ಲ ಎಂದು ನಿಷೇಧ ಹೇರಿ ನೋಟಿಸುಗಳನ್ನು ಹಾಕಲಾಗಿದೆ.


ಇದನ್ನೂ ಓದಿ: ಕೆ.ಆರ್‌ ಪೇಟೆಯಲ್ಲಿ ಮುಸ್ಲಿಂ ಯುವಕರ ಬಗ್ಗೆ ಸುಳ್ಳು ಸುದ್ದಿ: ಕೊನೆಗೆ ಸಿಕ್ಕ ಆರೋಪಿಗಳು ಬೇರೆ ಧರ್ಮದವರು! 


ಮುಖ್ಯಮಂತ್ರಿ ಯಡಿಯೂರಪ್ಪ ಈಗಾಗಲೆ ಅಲ್ಪಸಂಖ್ಯಾತ ಮುಸ್ಲಿಮರ ಮೇಲೆ ದ್ವೇಷ ಹರಡುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ. ಆದರೂ ಮುಸ್ಲಿಂ ಸಮುದಾಯದ ವಿರುದ್ಧ ಸುಳ್ಳುಗಳು, ಅಪಪ್ರಚಾರಗಳು ಎಗ್ಗಿಲ್ಲದೇ ನಡೆಯುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...