HomeUncategorizedದ್ವೇಷ ಹರಡುವ ಮಾಧ್ಯಮಗಳಿಂದ ಅಭದ್ರರಾಗಿರುವ ಕರ್ನಾಟಕದ ಮುಸ್ಲಿಮರು: ಕ್ವಿಂಟ್ ವಿಶೇಷ ವಿಡಿಯೋ ವರದಿ

ದ್ವೇಷ ಹರಡುವ ಮಾಧ್ಯಮಗಳಿಂದ ಅಭದ್ರರಾಗಿರುವ ಕರ್ನಾಟಕದ ಮುಸ್ಲಿಮರು: ಕ್ವಿಂಟ್ ವಿಶೇಷ ವಿಡಿಯೋ ವರದಿ

ಹೀಗೆ ಹಲ್ಲೆಯಾದವರ ಬಗ್ಗೆ ಅಂತರ್ಜಾಲ ಪತ್ರಿಕೆ "ಕ್ವಿಂಟ್" ವಿಶೇಷ ವರದಿಯನ್ನು ಮಾಡಿದೆ. ಅದರ ಮುಖ್ಯಾಂಶಗಳು ಇಲ್ಲಿವೆ.

- Advertisement -
- Advertisement -

ಕೊರೊನಾ ವೈರಸ್ ವಿಶ್ವದಾದ್ಯಂತ ತನ್ನ ಕರಿಛಾಯೆಯನ್ನು ಬೀರುತ್ತಿರುವಾಗ ಭಾರತವನ್ನೇನು ಬಿಟ್ಟು ಬಿಡುವುದಿಲ್ಲ. ಆದರೆ ಭಾರತದ ಸಂಧರ್ಭಕ್ಕೆ ಕೊರೊನ ಬರುವಾಗ ಅದು ಇಸ್ಲಾಂ ಧರ್ಮಕ್ಕೆ ಮತಾಂತರವಾಯಿತೇ ಎನ್ನುವ ಪ್ರಶ್ನೆಯನ್ನು ಜನರು ಕೇಳುತ್ತಿದ್ದಾರೆ. ನಮ್ಮ ಮುಖ್ಯವಾಹಿನಿಯ ದೃಶ್ಯ ಮಾಧ್ಯಮ, ಪತ್ರಿಕೆಯಾದಿಯಾಗಿ ಸಾಮಾಜಿಕ ಜಾಲತಾಣ ಕೂಡಾ ಸೇರಿಕೊಂಡು ಮಾಡಿದ ಅಪಪ್ರಚಾರದಿಂದಾಗಿ ಕರ್ನಾಟಕದಾದ್ಯಂತ ಮುಸ್ಲಿಮರು ಹಲ್ಲೆಗೊಳಗಾಗಬೇಕಾಯಿತು. ಹೀಗೆ ಹಲ್ಲೆಯಾದವರ ಬಗ್ಗೆ ಅಂತರ್ಜಾಲ ಪತ್ರಿಕೆ “ಕ್ವಿಂಟ್” ವಿಶೇಷ ವರದಿಯನ್ನು ಮಾಡಿದೆ. ಅದರ ಮುಖ್ಯಾಂಶಗಳು ಹೀಗಿವೆ…

ಬಾಗಲಕೋಟೆ ಜಿಲ್ಲೆಯ ಬಿರದಾರಿ ಗ್ರಾಮದಲ್ಲಿ ಹತ್ತರಿಂದ ಹದಿನೈದು ಜನರು ಕೈಯ್ಯಲ್ಲಿ ಕಬ್ಬಿಣದ ರಾಡುಗಳನ್ನು ಹಿಡಿದು ಮೂವರು ಮುಸ್ಲಿಮರನ್ನು ಸುತ್ತುವರೆದು ಗ್ರಾಮದಿಂದ ಹೊರ ಹೋಗುವಂತೆ ಕೂಗುತ್ತಿದ್ದಾರೆ. ಮೂವರಲ್ಲಿ ಒಬ್ಬ ವ್ಯಕ್ತಿ ತುಂಬಾ ದಯನೀಯವಾಗಿ ಬೇಡುತ್ತಿರುವಾಗ “ಅವರನ್ನು ಮುಟ್ಟಬೇಡಿ ರೋಗ ಹರಡುತ್ತಾರೆ” ಎಂದು ಹಲ್ಲೆಕೋರನೊಬ್ಬ ಕೂಗುವ ಶಬ್ದ ವಿಡಿಯೋದಲ್ಲಿ ಕೇಳಿಸುತ್ತದೆ.

Attacks blaming muslims for COVID-19 reported across KarnatakaFrom heckling to assault, there has been a stark rise in attacks on Muslims, Muslim volunteers and hate speech against the community in the last week, during the 21-day lockdown over coronavirus.Full story: https://bit.ly/2x2KQor#COVID19 #Lockdown #Lockdown21 #India

Posted by Shehzad Khan on Wednesday, April 8, 2020

ಕದರಕೊಪ್ಪ ಗ್ರಾಮದಲ್ಲಿ ಮಸೀದಿಯೊಳಗೆ ಇರುವ ಮೂವರು ವ್ಯಕ್ತಿಗಳನ್ನು ನಮಾಜ್ ಮಾಡುತ್ತಿದ್ದೀರಿ ಎಂದು ಆರೋಪಿಸಿ ಅವರ ಮೇಲೆ ಆಕ್ರಮಣ ಮಾಡುತ್ತಾರೆ. ಈ ವಿಡಿಯೋ ವೈರಲ್ ಆದ ಬಳಿಕ ಪೊಲೀಸರು ಹಲ್ಲೆಕೋರರ ವಿರುದ್ಧ ಕೇಸು ದಾಖಲಿಸುತ್ತಾರೆ.


ಇದನ್ನೂ ಓದಿ: ಮುಖ್ಯಮಂತ್ರಿಗಳ ಎಚ್ಚರಿಕೆಯ ನಂತರವೂ ಸುಳ್ಳು ಸುದ್ದಿ ಹರಡುತ್ತಿರುವ ಪೋಸ್ಟ್‌ ಕಾರ್ಡ್‌ ಕನ್ನಡ: ಕ್ರಮ ಯಾವಾಗ? 


ಬೆಂಗಳೂರಿನಲ್ಲಿ ನಡೆದ ಮತ್ತೊಂದು ಘಟನೆಯಲ್ಲಿ ಲಾಕ್ ಡೌನ್ ನಿಂದಾಗಿ ಕಷ್ಟಕ್ಕೊಳಗಾಗಿರುವ ಜನರಿಗೆ ಪಡಿತರ ಹಂಚುತ್ತಿದ್ದ ಸ್ವರಾಜ್ ಅಭಿಯಾನದ ಕಾರ್ಯಕರ್ತರಿಗೆ ಮುಸ್ಲಿಮರು ರೋಗ ಹರಡುತ್ತಿದ್ದಾರೆ ಎಂದು ಹೇಳಿ ಕ್ರಿಕೆಟ್ ಬ್ಯಾಟುಗಳಿಂದ ಹಲ್ಲೆ ನಡೆಸಿದ್ದಾರೆ. ಈ ಘಟನೆಯ ಬಗ್ಗೆ ಮಾತನಾಡಿದ ಸ್ವರಾಜ್ ಅಭಿಯಾನದ ಕಾರ್ಯಕರ್ತರಾದ ಸಯದ್ ತಬ್ರೀಜ್, ಪೋಲಿಸರಿಂದ ಅನುಮತಿ ಪಡೆದು ಪಡಿತರವನ್ನು ಹಂಚುವುದಕ್ಕೆ ಹೊರಟಾಗ ಹಿಂದಿನಿಂದ ಬಂದು ಬ್ಯಾಟ್ ಹಾಗೂ ಕೋಲುಗಳಿಂದ ಹಲ್ಲೆ ನಡೆಸಿದ್ದಾರೆ ಎಂದು ಹೇಳುತ್ತಾರೆ. ಅಮೃತಹಳ್ಳಿಯಿಂದ ದಾಸರಹಳ್ಳಿಗೆ ಹೋಗುತ್ತಿರುವಾಗ ಇದರ ಮದ್ಯೆ ಹದಿನೈದು ಮಂದಿ ನಮ್ಮ ಮೇಲೆ ಆಕ್ರಮಣ ನಡೆಸಿದ್ದಾರೆ, ಜೊತೆಗೆ ನಿಮ್ಮ ಪಡಿತರ ಮುಸ್ಲಿಮರಿಗೆ ಮಾತ್ರ ನೀಡಿ ಇಲ್ಲಿಗೆ ಅದರ ಅಗತ್ಯವಿಲ್ಲ ಎಂದು ಹೇಳಿ ನಮ್ಮ ಜೊತೆಯಿದ್ದ ಆರು ಮಂದಿಗೆ ಹದಿನೈದು ಮಂದಿ ಸೇರಿ ಹಲ್ಲೆ ನಡೆಸಿದ್ದಾರೆ ಎಂದು ಸ್ವರಾಜ್ ಅಭಿಯಾನದ ಕಾರ್ಯದರ್ಶಿ ಝರೀನ್ ತಾಜ್ ಹೇಳುತ್ತಾರೆ.

ಈ ಘಟನೆಗೂ ಮೊದಲು ಸ್ವರಾಜ್ ಅಭಿಯಾನದ ಪಡಿತರ ಬಂದಾಗಲೆ ಬಿಜೆಪಿ ನಾಯಕ ಇವರೊಂದಿಗೆ ನೀವು ಪಡಿತರ ಹಂಚುವಂತಿಲ್ಲ, ನೀವು ಭಯೋತ್ಪಾದಕರು, ನಿಮ್ಮಿಂದಾಗಿಯೇ ವೈರಸ್ ಹರಡುತ್ತಿದೆ ಎಂದು ಗಲಾಟೆ ಮಾಡಿದ್ದಾರೆ ಎಂದು ಹಲ್ಲೆಗೊಳಗಾದ ತಬ್ರೀಜ್ ಆರೋಪಿಸುತ್ತಾರೆ. ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದೇವೆ ಅವರು ಅನುಮತಿ ಕೊಟ್ಟ ನಂತರ ನಾವು ಪಡಿತರ ಹಂಚಿದ್ದೇವೆ ಎಂದು ಅವರು ಹೇಳುತ್ತಾರೆ.

ಈ ಘಟನೆಯ ವೀಡಿಯೊದಲ್ಲಿ ಆರೆಸ್ಸೆಸ್ಸಿನ ಸಮವಸ್ತ್ರ ಧರಿಸಿರುವ ವ್ಯಕ್ತಿಗಳು, ಇವರು ಸೋಂಕು ಹರಡುತ್ತಿದ್ದಾರೆ ಇವರಿಂದ ಪಡಿತರವನ್ನು ಪಡೆಯದಂತೆ ಜನರ ಹತ್ತಿರ ಹೇಳುತ್ತಿರುವುದು ಕಾಣಬಹುದಾಗಿದೆ.

ಮತ್ತೊಂದು ಘಟನೆ: ಬೆಳಗಾವಿ ಜಿಲ್ಲೆಯ ಯಮಕನಮರಡಿ ಮತ್ತು ಸದಲಗ ಎಂಬಲ್ಲಿ ಮಸೀದಿಯನ್ನು ಆಕ್ರಮಿಸಿ ಬೆಳಕು ನಂದಿಸಲಿಲ್ಲ ಎಂದು ಆರೋಪಿಸಿ ಗಲಾಟೆ ಮಾಡಿದ್ದಕ್ಕೆ ಪೊಲೀಸರು ಸುಮಾರು ಇಪ್ಪತ್ತು ಜನರನ್ನು ಬಂಧಿಸಿದ್ದಾರೆ.

ಅಲ್ಲದೆ ಮಂಗಳೂರಿನ ಹಲವೆಡೆ ಕೊರೊನಾ ವೈರಸ್ ಹೋಗುವವರೆಗೆ ಮುಸ್ಲಿಮ್ ವ್ಯಾಪಾರಿಗಳಿಗೆ ಊರಿಗೆ ಪ್ರವೇಶವಿಲ್ಲ ಎಂದು ನಿಷೇಧ ಹೇರಿ ನೋಟಿಸುಗಳನ್ನು ಹಾಕಲಾಗಿದೆ.


ಇದನ್ನೂ ಓದಿ: ಕೆ.ಆರ್‌ ಪೇಟೆಯಲ್ಲಿ ಮುಸ್ಲಿಂ ಯುವಕರ ಬಗ್ಗೆ ಸುಳ್ಳು ಸುದ್ದಿ: ಕೊನೆಗೆ ಸಿಕ್ಕ ಆರೋಪಿಗಳು ಬೇರೆ ಧರ್ಮದವರು! 


ಮುಖ್ಯಮಂತ್ರಿ ಯಡಿಯೂರಪ್ಪ ಈಗಾಗಲೆ ಅಲ್ಪಸಂಖ್ಯಾತ ಮುಸ್ಲಿಮರ ಮೇಲೆ ದ್ವೇಷ ಹರಡುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ. ಆದರೂ ಮುಸ್ಲಿಂ ಸಮುದಾಯದ ವಿರುದ್ಧ ಸುಳ್ಳುಗಳು, ಅಪಪ್ರಚಾರಗಳು ಎಗ್ಗಿಲ್ಲದೇ ನಡೆಯುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...