HomeUncategorizedದ್ವೇಷ ಹರಡುವ ಮಾಧ್ಯಮಗಳಿಂದ ಅಭದ್ರರಾಗಿರುವ ಕರ್ನಾಟಕದ ಮುಸ್ಲಿಮರು: ಕ್ವಿಂಟ್ ವಿಶೇಷ ವಿಡಿಯೋ ವರದಿ

ದ್ವೇಷ ಹರಡುವ ಮಾಧ್ಯಮಗಳಿಂದ ಅಭದ್ರರಾಗಿರುವ ಕರ್ನಾಟಕದ ಮುಸ್ಲಿಮರು: ಕ್ವಿಂಟ್ ವಿಶೇಷ ವಿಡಿಯೋ ವರದಿ

ಹೀಗೆ ಹಲ್ಲೆಯಾದವರ ಬಗ್ಗೆ ಅಂತರ್ಜಾಲ ಪತ್ರಿಕೆ "ಕ್ವಿಂಟ್" ವಿಶೇಷ ವರದಿಯನ್ನು ಮಾಡಿದೆ. ಅದರ ಮುಖ್ಯಾಂಶಗಳು ಇಲ್ಲಿವೆ.

- Advertisement -
- Advertisement -

ಕೊರೊನಾ ವೈರಸ್ ವಿಶ್ವದಾದ್ಯಂತ ತನ್ನ ಕರಿಛಾಯೆಯನ್ನು ಬೀರುತ್ತಿರುವಾಗ ಭಾರತವನ್ನೇನು ಬಿಟ್ಟು ಬಿಡುವುದಿಲ್ಲ. ಆದರೆ ಭಾರತದ ಸಂಧರ್ಭಕ್ಕೆ ಕೊರೊನ ಬರುವಾಗ ಅದು ಇಸ್ಲಾಂ ಧರ್ಮಕ್ಕೆ ಮತಾಂತರವಾಯಿತೇ ಎನ್ನುವ ಪ್ರಶ್ನೆಯನ್ನು ಜನರು ಕೇಳುತ್ತಿದ್ದಾರೆ. ನಮ್ಮ ಮುಖ್ಯವಾಹಿನಿಯ ದೃಶ್ಯ ಮಾಧ್ಯಮ, ಪತ್ರಿಕೆಯಾದಿಯಾಗಿ ಸಾಮಾಜಿಕ ಜಾಲತಾಣ ಕೂಡಾ ಸೇರಿಕೊಂಡು ಮಾಡಿದ ಅಪಪ್ರಚಾರದಿಂದಾಗಿ ಕರ್ನಾಟಕದಾದ್ಯಂತ ಮುಸ್ಲಿಮರು ಹಲ್ಲೆಗೊಳಗಾಗಬೇಕಾಯಿತು. ಹೀಗೆ ಹಲ್ಲೆಯಾದವರ ಬಗ್ಗೆ ಅಂತರ್ಜಾಲ ಪತ್ರಿಕೆ “ಕ್ವಿಂಟ್” ವಿಶೇಷ ವರದಿಯನ್ನು ಮಾಡಿದೆ. ಅದರ ಮುಖ್ಯಾಂಶಗಳು ಹೀಗಿವೆ…

ಬಾಗಲಕೋಟೆ ಜಿಲ್ಲೆಯ ಬಿರದಾರಿ ಗ್ರಾಮದಲ್ಲಿ ಹತ್ತರಿಂದ ಹದಿನೈದು ಜನರು ಕೈಯ್ಯಲ್ಲಿ ಕಬ್ಬಿಣದ ರಾಡುಗಳನ್ನು ಹಿಡಿದು ಮೂವರು ಮುಸ್ಲಿಮರನ್ನು ಸುತ್ತುವರೆದು ಗ್ರಾಮದಿಂದ ಹೊರ ಹೋಗುವಂತೆ ಕೂಗುತ್ತಿದ್ದಾರೆ. ಮೂವರಲ್ಲಿ ಒಬ್ಬ ವ್ಯಕ್ತಿ ತುಂಬಾ ದಯನೀಯವಾಗಿ ಬೇಡುತ್ತಿರುವಾಗ “ಅವರನ್ನು ಮುಟ್ಟಬೇಡಿ ರೋಗ ಹರಡುತ್ತಾರೆ” ಎಂದು ಹಲ್ಲೆಕೋರನೊಬ್ಬ ಕೂಗುವ ಶಬ್ದ ವಿಡಿಯೋದಲ್ಲಿ ಕೇಳಿಸುತ್ತದೆ.

Attacks blaming muslims for COVID-19 reported across KarnatakaFrom heckling to assault, there has been a stark rise in attacks on Muslims, Muslim volunteers and hate speech against the community in the last week, during the 21-day lockdown over coronavirus.Full story: https://bit.ly/2x2KQor#COVID19 #Lockdown #Lockdown21 #India

Posted by Shehzad Khan on Wednesday, April 8, 2020

ಕದರಕೊಪ್ಪ ಗ್ರಾಮದಲ್ಲಿ ಮಸೀದಿಯೊಳಗೆ ಇರುವ ಮೂವರು ವ್ಯಕ್ತಿಗಳನ್ನು ನಮಾಜ್ ಮಾಡುತ್ತಿದ್ದೀರಿ ಎಂದು ಆರೋಪಿಸಿ ಅವರ ಮೇಲೆ ಆಕ್ರಮಣ ಮಾಡುತ್ತಾರೆ. ಈ ವಿಡಿಯೋ ವೈರಲ್ ಆದ ಬಳಿಕ ಪೊಲೀಸರು ಹಲ್ಲೆಕೋರರ ವಿರುದ್ಧ ಕೇಸು ದಾಖಲಿಸುತ್ತಾರೆ.


ಇದನ್ನೂ ಓದಿ: ಮುಖ್ಯಮಂತ್ರಿಗಳ ಎಚ್ಚರಿಕೆಯ ನಂತರವೂ ಸುಳ್ಳು ಸುದ್ದಿ ಹರಡುತ್ತಿರುವ ಪೋಸ್ಟ್‌ ಕಾರ್ಡ್‌ ಕನ್ನಡ: ಕ್ರಮ ಯಾವಾಗ? 


ಬೆಂಗಳೂರಿನಲ್ಲಿ ನಡೆದ ಮತ್ತೊಂದು ಘಟನೆಯಲ್ಲಿ ಲಾಕ್ ಡೌನ್ ನಿಂದಾಗಿ ಕಷ್ಟಕ್ಕೊಳಗಾಗಿರುವ ಜನರಿಗೆ ಪಡಿತರ ಹಂಚುತ್ತಿದ್ದ ಸ್ವರಾಜ್ ಅಭಿಯಾನದ ಕಾರ್ಯಕರ್ತರಿಗೆ ಮುಸ್ಲಿಮರು ರೋಗ ಹರಡುತ್ತಿದ್ದಾರೆ ಎಂದು ಹೇಳಿ ಕ್ರಿಕೆಟ್ ಬ್ಯಾಟುಗಳಿಂದ ಹಲ್ಲೆ ನಡೆಸಿದ್ದಾರೆ. ಈ ಘಟನೆಯ ಬಗ್ಗೆ ಮಾತನಾಡಿದ ಸ್ವರಾಜ್ ಅಭಿಯಾನದ ಕಾರ್ಯಕರ್ತರಾದ ಸಯದ್ ತಬ್ರೀಜ್, ಪೋಲಿಸರಿಂದ ಅನುಮತಿ ಪಡೆದು ಪಡಿತರವನ್ನು ಹಂಚುವುದಕ್ಕೆ ಹೊರಟಾಗ ಹಿಂದಿನಿಂದ ಬಂದು ಬ್ಯಾಟ್ ಹಾಗೂ ಕೋಲುಗಳಿಂದ ಹಲ್ಲೆ ನಡೆಸಿದ್ದಾರೆ ಎಂದು ಹೇಳುತ್ತಾರೆ. ಅಮೃತಹಳ್ಳಿಯಿಂದ ದಾಸರಹಳ್ಳಿಗೆ ಹೋಗುತ್ತಿರುವಾಗ ಇದರ ಮದ್ಯೆ ಹದಿನೈದು ಮಂದಿ ನಮ್ಮ ಮೇಲೆ ಆಕ್ರಮಣ ನಡೆಸಿದ್ದಾರೆ, ಜೊತೆಗೆ ನಿಮ್ಮ ಪಡಿತರ ಮುಸ್ಲಿಮರಿಗೆ ಮಾತ್ರ ನೀಡಿ ಇಲ್ಲಿಗೆ ಅದರ ಅಗತ್ಯವಿಲ್ಲ ಎಂದು ಹೇಳಿ ನಮ್ಮ ಜೊತೆಯಿದ್ದ ಆರು ಮಂದಿಗೆ ಹದಿನೈದು ಮಂದಿ ಸೇರಿ ಹಲ್ಲೆ ನಡೆಸಿದ್ದಾರೆ ಎಂದು ಸ್ವರಾಜ್ ಅಭಿಯಾನದ ಕಾರ್ಯದರ್ಶಿ ಝರೀನ್ ತಾಜ್ ಹೇಳುತ್ತಾರೆ.

ಈ ಘಟನೆಗೂ ಮೊದಲು ಸ್ವರಾಜ್ ಅಭಿಯಾನದ ಪಡಿತರ ಬಂದಾಗಲೆ ಬಿಜೆಪಿ ನಾಯಕ ಇವರೊಂದಿಗೆ ನೀವು ಪಡಿತರ ಹಂಚುವಂತಿಲ್ಲ, ನೀವು ಭಯೋತ್ಪಾದಕರು, ನಿಮ್ಮಿಂದಾಗಿಯೇ ವೈರಸ್ ಹರಡುತ್ತಿದೆ ಎಂದು ಗಲಾಟೆ ಮಾಡಿದ್ದಾರೆ ಎಂದು ಹಲ್ಲೆಗೊಳಗಾದ ತಬ್ರೀಜ್ ಆರೋಪಿಸುತ್ತಾರೆ. ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದೇವೆ ಅವರು ಅನುಮತಿ ಕೊಟ್ಟ ನಂತರ ನಾವು ಪಡಿತರ ಹಂಚಿದ್ದೇವೆ ಎಂದು ಅವರು ಹೇಳುತ್ತಾರೆ.

ಈ ಘಟನೆಯ ವೀಡಿಯೊದಲ್ಲಿ ಆರೆಸ್ಸೆಸ್ಸಿನ ಸಮವಸ್ತ್ರ ಧರಿಸಿರುವ ವ್ಯಕ್ತಿಗಳು, ಇವರು ಸೋಂಕು ಹರಡುತ್ತಿದ್ದಾರೆ ಇವರಿಂದ ಪಡಿತರವನ್ನು ಪಡೆಯದಂತೆ ಜನರ ಹತ್ತಿರ ಹೇಳುತ್ತಿರುವುದು ಕಾಣಬಹುದಾಗಿದೆ.

ಮತ್ತೊಂದು ಘಟನೆ: ಬೆಳಗಾವಿ ಜಿಲ್ಲೆಯ ಯಮಕನಮರಡಿ ಮತ್ತು ಸದಲಗ ಎಂಬಲ್ಲಿ ಮಸೀದಿಯನ್ನು ಆಕ್ರಮಿಸಿ ಬೆಳಕು ನಂದಿಸಲಿಲ್ಲ ಎಂದು ಆರೋಪಿಸಿ ಗಲಾಟೆ ಮಾಡಿದ್ದಕ್ಕೆ ಪೊಲೀಸರು ಸುಮಾರು ಇಪ್ಪತ್ತು ಜನರನ್ನು ಬಂಧಿಸಿದ್ದಾರೆ.

ಅಲ್ಲದೆ ಮಂಗಳೂರಿನ ಹಲವೆಡೆ ಕೊರೊನಾ ವೈರಸ್ ಹೋಗುವವರೆಗೆ ಮುಸ್ಲಿಮ್ ವ್ಯಾಪಾರಿಗಳಿಗೆ ಊರಿಗೆ ಪ್ರವೇಶವಿಲ್ಲ ಎಂದು ನಿಷೇಧ ಹೇರಿ ನೋಟಿಸುಗಳನ್ನು ಹಾಕಲಾಗಿದೆ.


ಇದನ್ನೂ ಓದಿ: ಕೆ.ಆರ್‌ ಪೇಟೆಯಲ್ಲಿ ಮುಸ್ಲಿಂ ಯುವಕರ ಬಗ್ಗೆ ಸುಳ್ಳು ಸುದ್ದಿ: ಕೊನೆಗೆ ಸಿಕ್ಕ ಆರೋಪಿಗಳು ಬೇರೆ ಧರ್ಮದವರು! 


ಮುಖ್ಯಮಂತ್ರಿ ಯಡಿಯೂರಪ್ಪ ಈಗಾಗಲೆ ಅಲ್ಪಸಂಖ್ಯಾತ ಮುಸ್ಲಿಮರ ಮೇಲೆ ದ್ವೇಷ ಹರಡುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ. ಆದರೂ ಮುಸ್ಲಿಂ ಸಮುದಾಯದ ವಿರುದ್ಧ ಸುಳ್ಳುಗಳು, ಅಪಪ್ರಚಾರಗಳು ಎಗ್ಗಿಲ್ಲದೇ ನಡೆಯುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...