HomeUncategorizedದ್ವೇಷ ಹರಡುವ ಮಾಧ್ಯಮಗಳಿಂದ ಅಭದ್ರರಾಗಿರುವ ಕರ್ನಾಟಕದ ಮುಸ್ಲಿಮರು: ಕ್ವಿಂಟ್ ವಿಶೇಷ ವಿಡಿಯೋ ವರದಿ

ದ್ವೇಷ ಹರಡುವ ಮಾಧ್ಯಮಗಳಿಂದ ಅಭದ್ರರಾಗಿರುವ ಕರ್ನಾಟಕದ ಮುಸ್ಲಿಮರು: ಕ್ವಿಂಟ್ ವಿಶೇಷ ವಿಡಿಯೋ ವರದಿ

ಹೀಗೆ ಹಲ್ಲೆಯಾದವರ ಬಗ್ಗೆ ಅಂತರ್ಜಾಲ ಪತ್ರಿಕೆ "ಕ್ವಿಂಟ್" ವಿಶೇಷ ವರದಿಯನ್ನು ಮಾಡಿದೆ. ಅದರ ಮುಖ್ಯಾಂಶಗಳು ಇಲ್ಲಿವೆ.

- Advertisement -
- Advertisement -

ಕೊರೊನಾ ವೈರಸ್ ವಿಶ್ವದಾದ್ಯಂತ ತನ್ನ ಕರಿಛಾಯೆಯನ್ನು ಬೀರುತ್ತಿರುವಾಗ ಭಾರತವನ್ನೇನು ಬಿಟ್ಟು ಬಿಡುವುದಿಲ್ಲ. ಆದರೆ ಭಾರತದ ಸಂಧರ್ಭಕ್ಕೆ ಕೊರೊನ ಬರುವಾಗ ಅದು ಇಸ್ಲಾಂ ಧರ್ಮಕ್ಕೆ ಮತಾಂತರವಾಯಿತೇ ಎನ್ನುವ ಪ್ರಶ್ನೆಯನ್ನು ಜನರು ಕೇಳುತ್ತಿದ್ದಾರೆ. ನಮ್ಮ ಮುಖ್ಯವಾಹಿನಿಯ ದೃಶ್ಯ ಮಾಧ್ಯಮ, ಪತ್ರಿಕೆಯಾದಿಯಾಗಿ ಸಾಮಾಜಿಕ ಜಾಲತಾಣ ಕೂಡಾ ಸೇರಿಕೊಂಡು ಮಾಡಿದ ಅಪಪ್ರಚಾರದಿಂದಾಗಿ ಕರ್ನಾಟಕದಾದ್ಯಂತ ಮುಸ್ಲಿಮರು ಹಲ್ಲೆಗೊಳಗಾಗಬೇಕಾಯಿತು. ಹೀಗೆ ಹಲ್ಲೆಯಾದವರ ಬಗ್ಗೆ ಅಂತರ್ಜಾಲ ಪತ್ರಿಕೆ “ಕ್ವಿಂಟ್” ವಿಶೇಷ ವರದಿಯನ್ನು ಮಾಡಿದೆ. ಅದರ ಮುಖ್ಯಾಂಶಗಳು ಹೀಗಿವೆ…

ಬಾಗಲಕೋಟೆ ಜಿಲ್ಲೆಯ ಬಿರದಾರಿ ಗ್ರಾಮದಲ್ಲಿ ಹತ್ತರಿಂದ ಹದಿನೈದು ಜನರು ಕೈಯ್ಯಲ್ಲಿ ಕಬ್ಬಿಣದ ರಾಡುಗಳನ್ನು ಹಿಡಿದು ಮೂವರು ಮುಸ್ಲಿಮರನ್ನು ಸುತ್ತುವರೆದು ಗ್ರಾಮದಿಂದ ಹೊರ ಹೋಗುವಂತೆ ಕೂಗುತ್ತಿದ್ದಾರೆ. ಮೂವರಲ್ಲಿ ಒಬ್ಬ ವ್ಯಕ್ತಿ ತುಂಬಾ ದಯನೀಯವಾಗಿ ಬೇಡುತ್ತಿರುವಾಗ “ಅವರನ್ನು ಮುಟ್ಟಬೇಡಿ ರೋಗ ಹರಡುತ್ತಾರೆ” ಎಂದು ಹಲ್ಲೆಕೋರನೊಬ್ಬ ಕೂಗುವ ಶಬ್ದ ವಿಡಿಯೋದಲ್ಲಿ ಕೇಳಿಸುತ್ತದೆ.

Attacks blaming muslims for COVID-19 reported across KarnatakaFrom heckling to assault, there has been a stark rise in attacks on Muslims, Muslim volunteers and hate speech against the community in the last week, during the 21-day lockdown over coronavirus.Full story: https://bit.ly/2x2KQor#COVID19 #Lockdown #Lockdown21 #India

Posted by Shehzad Khan on Wednesday, April 8, 2020

ಕದರಕೊಪ್ಪ ಗ್ರಾಮದಲ್ಲಿ ಮಸೀದಿಯೊಳಗೆ ಇರುವ ಮೂವರು ವ್ಯಕ್ತಿಗಳನ್ನು ನಮಾಜ್ ಮಾಡುತ್ತಿದ್ದೀರಿ ಎಂದು ಆರೋಪಿಸಿ ಅವರ ಮೇಲೆ ಆಕ್ರಮಣ ಮಾಡುತ್ತಾರೆ. ಈ ವಿಡಿಯೋ ವೈರಲ್ ಆದ ಬಳಿಕ ಪೊಲೀಸರು ಹಲ್ಲೆಕೋರರ ವಿರುದ್ಧ ಕೇಸು ದಾಖಲಿಸುತ್ತಾರೆ.


ಇದನ್ನೂ ಓದಿ: ಮುಖ್ಯಮಂತ್ರಿಗಳ ಎಚ್ಚರಿಕೆಯ ನಂತರವೂ ಸುಳ್ಳು ಸುದ್ದಿ ಹರಡುತ್ತಿರುವ ಪೋಸ್ಟ್‌ ಕಾರ್ಡ್‌ ಕನ್ನಡ: ಕ್ರಮ ಯಾವಾಗ? 


ಬೆಂಗಳೂರಿನಲ್ಲಿ ನಡೆದ ಮತ್ತೊಂದು ಘಟನೆಯಲ್ಲಿ ಲಾಕ್ ಡೌನ್ ನಿಂದಾಗಿ ಕಷ್ಟಕ್ಕೊಳಗಾಗಿರುವ ಜನರಿಗೆ ಪಡಿತರ ಹಂಚುತ್ತಿದ್ದ ಸ್ವರಾಜ್ ಅಭಿಯಾನದ ಕಾರ್ಯಕರ್ತರಿಗೆ ಮುಸ್ಲಿಮರು ರೋಗ ಹರಡುತ್ತಿದ್ದಾರೆ ಎಂದು ಹೇಳಿ ಕ್ರಿಕೆಟ್ ಬ್ಯಾಟುಗಳಿಂದ ಹಲ್ಲೆ ನಡೆಸಿದ್ದಾರೆ. ಈ ಘಟನೆಯ ಬಗ್ಗೆ ಮಾತನಾಡಿದ ಸ್ವರಾಜ್ ಅಭಿಯಾನದ ಕಾರ್ಯಕರ್ತರಾದ ಸಯದ್ ತಬ್ರೀಜ್, ಪೋಲಿಸರಿಂದ ಅನುಮತಿ ಪಡೆದು ಪಡಿತರವನ್ನು ಹಂಚುವುದಕ್ಕೆ ಹೊರಟಾಗ ಹಿಂದಿನಿಂದ ಬಂದು ಬ್ಯಾಟ್ ಹಾಗೂ ಕೋಲುಗಳಿಂದ ಹಲ್ಲೆ ನಡೆಸಿದ್ದಾರೆ ಎಂದು ಹೇಳುತ್ತಾರೆ. ಅಮೃತಹಳ್ಳಿಯಿಂದ ದಾಸರಹಳ್ಳಿಗೆ ಹೋಗುತ್ತಿರುವಾಗ ಇದರ ಮದ್ಯೆ ಹದಿನೈದು ಮಂದಿ ನಮ್ಮ ಮೇಲೆ ಆಕ್ರಮಣ ನಡೆಸಿದ್ದಾರೆ, ಜೊತೆಗೆ ನಿಮ್ಮ ಪಡಿತರ ಮುಸ್ಲಿಮರಿಗೆ ಮಾತ್ರ ನೀಡಿ ಇಲ್ಲಿಗೆ ಅದರ ಅಗತ್ಯವಿಲ್ಲ ಎಂದು ಹೇಳಿ ನಮ್ಮ ಜೊತೆಯಿದ್ದ ಆರು ಮಂದಿಗೆ ಹದಿನೈದು ಮಂದಿ ಸೇರಿ ಹಲ್ಲೆ ನಡೆಸಿದ್ದಾರೆ ಎಂದು ಸ್ವರಾಜ್ ಅಭಿಯಾನದ ಕಾರ್ಯದರ್ಶಿ ಝರೀನ್ ತಾಜ್ ಹೇಳುತ್ತಾರೆ.

ಈ ಘಟನೆಗೂ ಮೊದಲು ಸ್ವರಾಜ್ ಅಭಿಯಾನದ ಪಡಿತರ ಬಂದಾಗಲೆ ಬಿಜೆಪಿ ನಾಯಕ ಇವರೊಂದಿಗೆ ನೀವು ಪಡಿತರ ಹಂಚುವಂತಿಲ್ಲ, ನೀವು ಭಯೋತ್ಪಾದಕರು, ನಿಮ್ಮಿಂದಾಗಿಯೇ ವೈರಸ್ ಹರಡುತ್ತಿದೆ ಎಂದು ಗಲಾಟೆ ಮಾಡಿದ್ದಾರೆ ಎಂದು ಹಲ್ಲೆಗೊಳಗಾದ ತಬ್ರೀಜ್ ಆರೋಪಿಸುತ್ತಾರೆ. ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದೇವೆ ಅವರು ಅನುಮತಿ ಕೊಟ್ಟ ನಂತರ ನಾವು ಪಡಿತರ ಹಂಚಿದ್ದೇವೆ ಎಂದು ಅವರು ಹೇಳುತ್ತಾರೆ.

ಈ ಘಟನೆಯ ವೀಡಿಯೊದಲ್ಲಿ ಆರೆಸ್ಸೆಸ್ಸಿನ ಸಮವಸ್ತ್ರ ಧರಿಸಿರುವ ವ್ಯಕ್ತಿಗಳು, ಇವರು ಸೋಂಕು ಹರಡುತ್ತಿದ್ದಾರೆ ಇವರಿಂದ ಪಡಿತರವನ್ನು ಪಡೆಯದಂತೆ ಜನರ ಹತ್ತಿರ ಹೇಳುತ್ತಿರುವುದು ಕಾಣಬಹುದಾಗಿದೆ.

ಮತ್ತೊಂದು ಘಟನೆ: ಬೆಳಗಾವಿ ಜಿಲ್ಲೆಯ ಯಮಕನಮರಡಿ ಮತ್ತು ಸದಲಗ ಎಂಬಲ್ಲಿ ಮಸೀದಿಯನ್ನು ಆಕ್ರಮಿಸಿ ಬೆಳಕು ನಂದಿಸಲಿಲ್ಲ ಎಂದು ಆರೋಪಿಸಿ ಗಲಾಟೆ ಮಾಡಿದ್ದಕ್ಕೆ ಪೊಲೀಸರು ಸುಮಾರು ಇಪ್ಪತ್ತು ಜನರನ್ನು ಬಂಧಿಸಿದ್ದಾರೆ.

ಅಲ್ಲದೆ ಮಂಗಳೂರಿನ ಹಲವೆಡೆ ಕೊರೊನಾ ವೈರಸ್ ಹೋಗುವವರೆಗೆ ಮುಸ್ಲಿಮ್ ವ್ಯಾಪಾರಿಗಳಿಗೆ ಊರಿಗೆ ಪ್ರವೇಶವಿಲ್ಲ ಎಂದು ನಿಷೇಧ ಹೇರಿ ನೋಟಿಸುಗಳನ್ನು ಹಾಕಲಾಗಿದೆ.


ಇದನ್ನೂ ಓದಿ: ಕೆ.ಆರ್‌ ಪೇಟೆಯಲ್ಲಿ ಮುಸ್ಲಿಂ ಯುವಕರ ಬಗ್ಗೆ ಸುಳ್ಳು ಸುದ್ದಿ: ಕೊನೆಗೆ ಸಿಕ್ಕ ಆರೋಪಿಗಳು ಬೇರೆ ಧರ್ಮದವರು! 


ಮುಖ್ಯಮಂತ್ರಿ ಯಡಿಯೂರಪ್ಪ ಈಗಾಗಲೆ ಅಲ್ಪಸಂಖ್ಯಾತ ಮುಸ್ಲಿಮರ ಮೇಲೆ ದ್ವೇಷ ಹರಡುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ. ಆದರೂ ಮುಸ್ಲಿಂ ಸಮುದಾಯದ ವಿರುದ್ಧ ಸುಳ್ಳುಗಳು, ಅಪಪ್ರಚಾರಗಳು ಎಗ್ಗಿಲ್ಲದೇ ನಡೆಯುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...