Homeಕರ್ನಾಟಕದಲಿತ ವ್ಯಕ್ತಿಯ ನಿಗೂಢ ಸಾವು ಪ್ರಕರಣ: ಹಾಲಿ, ಮಾಜಿ ಶಾಸಕರ ಜಾಣಮೌನ

ದಲಿತ ವ್ಯಕ್ತಿಯ ನಿಗೂಢ ಸಾವು ಪ್ರಕರಣ: ಹಾಲಿ, ಮಾಜಿ ಶಾಸಕರ ಜಾಣಮೌನ

- Advertisement -
- Advertisement -

ತುಮಕೂರು ಜಿಲ್ಲೆಯಲ್ಲಿ ದಲಿತರ ಮೇಲಿನ ದೌರ್ಜನ್ಯ, ಹತ್ಯೆ ಪ್ರಕರಣಗಳು ಹೆಚ್ಚುತ್ತಿದ್ದರೂ ಜನಪ್ರತಿನಿಧಿಗಳು ಮತ್ತು ಜಿಲ್ಲಾಡಳಿತ ಜಾಣಮೌನಕ್ಕೆ ಶರಣಾಗಿದೆ. ಚುನಾವಣೆ ಬಂದಾಗ ಓಟಿಗಾಗಿ ದಲಿತರ ಜಪ ಮಾಡುವ ಸರ್ಕಾರ, ಜನಪತ್ರಿನಿಧಿಗಳು ನಂತರ ಮತದಾರರನ್ನು ಮರೆತುಬಿಡುತ್ತಾರೆಂಬುದಕ್ಕೆ ಜಿಲ್ಲೆಯಲ್ಲಿ ನಡೆಯುತ್ತಿರುವ ಘಟನೆಗಳೇ ಸಾಕ್ಷಿ ಎಂದು ದಲಿತ ಸಂಘಟನೆಗಳು ದೂರಿವೆ.

ಪ್ರಮುಖ ದಲಿತ ಅಧಿಕಾರಿಗಳ ಎತ್ತಂಗಡಿ ಒಂದೆಡೆಯಾದರೆ, ತುರುವೇಕೆರೆ, ಚಿಕ್ಕನಾಯಕನಹಳ್ಳಿ, ಕುಣಿಗಲ್ ಮತ್ತು ಮಧುಗಿರಿ ತಾಲೂಕುಗಳಲ್ಲಿ ದಲಿತರ ಮೇಲೆ ಮಾರಣಾಂತಿಕ ಹಲ್ಲೆಗಳು ನಡೆದಿವೆ. ತುರುವೇಕೆರೆಯ ಗಿರಿಯನಹಳ್ಳಿಯ ದಲಿತ ವ್ಯಕ್ತಿ ಕೆಂಪಯ್ಯ ನಿಗೂಢ ಸಾವನ್ನಪ್ಪಿ ಮೂರು ತಿಂಗಳು ಕಳೆದರೂ ಸ್ಥಳೀಯ ಶಾಸಕರು ತುಟಿ ಬಿಚ್ಚಿಲ್ಲದಿರುವುದಕ್ಕೆ ಮತ್ತು ಪರಸ್ಪರ ಕಚ್ಚಾಡುತ್ತಿರುವುದಕ್ಕೆ ಜನರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ತುರುವೇಕೆರೆಯ ಮಾಜಿ ಶಾಸಕ ಎಂ.ಟಿ.ಕೃಷ್ಣಪ್ಪ ಮತ್ತು ಹಾಲಿ ಶಾಸಕ ಮಸಾಲ ಜಯರಾಂ, ದಲಿತ ವ್ಯಕ್ತಿ ಕೆಂಪಯ್ಯ ನಿಗೂಢ ಸಾವಿನ ಕುರಿತು ಒಂದು ಮಾತನ್ನು ಆಡಿಲ್ಲ. ಹಾಲಿ ಮತ್ತು ಮಾಜಿ ಶಾಸಕರು ಪ್ರತಿಷ್ಠೆಗೆ ಬಿದ್ದು ಜನರನ್ನು ಮರೆತಿದ್ದಾರೆ. ದಲಿತರನ್ನು ಕಡೆಗಣಿಸುತ್ತಿದ್ದಾರೆ ಎಂದು ದಲಿತ ಸಂಘಟನೆಗಳು ದೂರಿವೆ. ಕೂಡಲೇ ಹಾಲಿ ಮತ್ತು ಮಾಜಿ ಶಾಸಕರು ಕೆಂಪಯ್ಯ ಪ್ರಕರಣದ ಕುರಿತು ತಮ್ಮ ನಿಲುವೇನೆಂಬುದನ್ನು ವ್ಯಕ್ತಪಡಿಸಬೇಕೆಂದು ಆಗ್ರಹಿಸಿವೆ.

ಸರ್ಕಾರ ಮತ್ತು ಪೊಲೀಸ್ ವೈಫಲ್ಯ

ಕೆಂಪಯ್ಯ ನಿಗೂಢ ಸಾವು ಪ್ರಕರಣದಲ್ಲಿ ಪೊಲೀಸರು ದೂರುದಾರರ ಮನವಿಯ ಅಂಶಗಳನ್ನ ಪರಿಗಣಿಸಿಲ್ಲ. ತನಿಖೆಯ ಪ್ರಾಥಮಿಕ ಹಂತದ ಕ್ರಮಗಳನ್ನು ಅನುಸರಿಸಿಲ್ಲ. ಅಶಕ್ತ ಕುಟುಂಬದ ರಕ್ಷಣೆಗೆ ಮುಂದಾಗಿಲ್ಲ. ಪ್ರಕರಣದ ತನಿಖೆಯನ್ನು ಸಮರ್ಪಕವಾಗಿ ನಡೆಸುತ್ತಿಲ್ಲ. ಹಾಗಾಗಿ ಪೊಲೀಸ್ ಇಲಾಖೆ, ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರ ಈ ಪ್ರಕರಣದ ತನಿಖೆ ನಡೆಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಸತ್ಯಶೋಧನ ಸಮಿತಿಯ ಸದಸ್ಯ ಮತ್ತು ಪಿಯುಸಿಎಲ್ ಅಧ್ಯಕ್ಷ ಕೆ.ದೊರೈರಾಜ್ ಆರೋಪಿಸಿದ್ದಾರೆ.

ಪಿಯುಸಿಎಲ್ ಮತ್ತು ಪರ್ಯಾಯ ಕಾನೂನು ವೇದಿಕೆ ಸದಸ್ಯರು ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರದ ಸ್ವತ್ತನ್ನು ರಕ್ಷಿಸಲು ಮುಂದಾದ ನೌಕರರಿಗೆ ರಕ್ಷಣೆ ನೀಡಿಲ್ಲ. ಇದು ಸರ್ಕಾರದ ವೈಫಲ್ಯ. ಮೃತನ ಕುಟುಂಬದಲ್ಲಿ ಹೆಣ್ಣುಮಕ್ಕಳೇ ಇದ್ದು ಅವರಿಗೆ ರಕ್ಷಣೆ ಕೊಡಬೇಕಾದ ಪೊಲೀಸ್ ಇಲಾಖೆ ಕೈಚೆಲ್ಲಿ ಕುಳಿತಿದೆ.  ತರುವೇಕೆರೆಯಲ್ಲಿ ದೌರ್ಜನ್ಯಗಳು ನಡೆಯುತ್ತಿದ್ದರೂ ಬಡವರ ಗೋಳನ್ನು ಕೇಳುವವರೇ ಇಲ್ಲ. ಹಾಗಾಗಿ ಮೃತನ ಕುಟುಂಬಕ್ಕೆ ರಕ್ಷಣೆ ನೀಡಬೇಕು. ಕೆಂಪಯ್ಯ ನಿಗೂಢ ಸಾವು ಪ್ರಕರಣವನ್ನು ಸಿಐಡಿಗೆ ವಹಿಸಬೇಕು, ಬಡಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.

ಪರ್ಯಾಯ ಕಾನೂನು ವೇದಿಕೆಯ ಸದಸ್ಯ ಹಾಗೂ ಹೈಕೋರ್ಟ್ ವಕೀಲ ಎಸ್. ಶಿವಮಣಿಥನ್ ಮಾತನಾಡಿ ಕೆಂಪಯ್ಯ ನಿಗೂಡ ಸಾವು ಪ್ರಕರಣದಲ್ಲಿ ಸ್ಥಳ ಮಹಜರು ಮಾಡಿಲ್ಲ. ಎ.ಎಸ್.ಪಿ. ಘಟನೆ ಸ್ಥಳದಲ್ಲಿ ಹೇಳಿಕೆ ಪಡೆಯದೇ ಸಾಕ್ಷ್ಯಗಳನ್ನು ತುಮಕೂರಿಗೆ ಕರೆಸಿಕೊಂಡು ಹೇಳಿಕೆ ಪಡೆದಿದ್ದಾರೆ. ಯಾವುದೇ ಪ್ರಕರಣವಾದರೂ ಸ್ಥಳ ತನಿಖೆ ನಡೆಸಿ ಸ್ಥಳದಲ್ಲೇ ಸಾಕ್ಷ್ಯಗಳ ಹೇಳಿಕೆ ಮತ್ತು ಸಹಿ ಪಡೆಯಬೇಕು. ಮಹಜರು ಮಾಡಬೇಕಾದಾಗ ಅನುಸರಿಸಬೇಕಾದ ಕ್ರಮಗಳನ್ನು ಅನುಸರಿಸಿಲ್ಲ. ಇದರಲ್ಲಿ ಪೊಲೀಸರ ವೈಫಲ್ಯ ಎದ್ದುಕಾಣುತ್ತದೆ ಎಂದು ಆರೋಪಿಸಿದ್ದಾರೆ.

ದಂಡಿನಶಿವರ ಪೊಲೀಸ್ ಠಾಣೆಯ ಹೆಡ್ ಕಾನ್ ಸ್ಟೇಬಲ್ ಗಂಗಣ್ಣ ಒತ್ತಾಯಪೂರಕವಾಗಿ ದೂರು ನೀಡಲು ವಿಳಂಬಕ್ಕೆ ಸಂಬಂಧಿಕರ ಜೊತೆ ಚರ್ಚಿಸಿದ್ದು ಕಾರಣ ಎಂದು ದೂರುದಾರರಿಂದ ಬರೆಸಿಕೊಂಡಿದ್ದಾರೆ. ದೂರು ದಾಖಲಿಸಲು ಮತ್ತು ಎಫ್ಐಆರ್ ದಾಖಲಿಸಲು ವಿಳಂಬಕ್ಕೆ ಪೊಲೀಸರೇ ಕಾರಣ. ಸಾರ್ವಜನಿಕ ಆಸ್ತಿ ರಕ್ಷಣೆಗೆ ಕ್ರಮ ಕೈಗೊಳ್ಳಬೇಕೆಂದು ಕೆಂಪಯ್ಯ ತಹಶೀಲ್ದಾರ್ ಅವರಿಗೆ ತಿಳಿಸಿದ್ದಾರೆ. ಹಾಗಾಗಿ ಗ್ರಾಮಲೆಕ್ಕಿಗರನ್ನು ಸ್ಥಳಕ್ಕೆ ಕಳುಹಿಸಿ ಮಣ್ಣು ಗಣಿ ನಡೆಸುತ್ತಿದ್ದವರಿಗೆ ಎಚ್ಚರಿಕೆ ನೀಡಲಾಗಿದೆ. ಆನಂತರ ಕೆಂಪಯ್ಯ ಅವರಿಗೆ ಅರೋಪಿಗಳು ಜೀವಬೆದರಿಕೆ ಹಾಕಿದ್ದು ಈ ಮಾಹಿತಿಯನ್ನು ಕಂದಾಯ ಅಧಿಕಾರಿಗೆ ತಿಳಿಸಿದ್ದಾರೆ. ಆದರೆ ಕಂದಾಯ ಅಧಿಕಾರಿ ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಪಾದಿಸಿದ್ದಾರೆ.

ಘಟನೆ ಸಂಬಂಧ ಸಾಕ್ಷ್ಯ ಸಂಗ್ರಹ ಮಾಡಿಲ್ಲ. ಆರೋಪಿಗಳು ಸ್ಥಳದಲ್ಲಿದ್ದರೂ ಅವರ ಸಿಮ್ ಮತ್ತು ಕಾಲರ್ ಐಡಿ ಡಿಟೈಲ್ ಸಂಗ್ರಹಿಸಿಲ್ಲ. ಎ.ಎಸ್.ಪಿ ಚಾರ್ಜ್ ಶೀಟ್ ಸಲ್ಲಿಸಿಲ್ಲ. ಕುಟುಂಬದ ಸದಸ್ಯರಿಗೆ ಮರಣೋತ್ತರ ಪರೀಕ್ಷೆಯ ವರದಿ ನೀಡಿಲ್ಲ. ಇದನ್ನು ನೋಡಿದರೆ ಪೊಲೀಸರೊಂದಿಗೆ ವೈದ್ಯರು ಶಾಮೀಲಾಗಿದ್ದಾರೆ. ಪೊಲೀಸ್, ವೈದ್ಯರ ಲೋಪಗಳು ಎದ್ದುಕಾಣುತ್ತವೆ. ಎಫ್‌ಐಆರ್ ದಾಖಲಿಸಿ ತಿಂಗಳು ಕಳೆದರೂ ಚಾರ್ಜ್ ಶೀಟ್ ಏಕೆ ಸಲ್ಲಿಸಿಲ್ಲ ಎಂದು ಟೀಕಿಸಿದ್ದಾರೆ.

ಮೃತ ಕೆಂಪಯ್ಯ ಪುತ್ರಿ ಚೈತ್ರಾ ಮಾತನಾಡಿ, ನಮಗೆ ಪ್ರಾಣ ಬೆದರಿಕೆ ಇದೆ. ಪೊಲೀಸರು ರಕ್ಷಣೆ ಕೊಡುತ್ತಿಲ್ಲ. ನಾವು ಗ್ರಾಮದಲ್ಲಿ ವಾಸ ಮಾಡಲು ಕಷ್ಟವಾಗುತ್ತಿದೆ. ತಂದೆಯ ಮರಣೋತ್ತರ ಪರೀಕ್ಷೆಯ ವರದಿಯನ್ನು ಕೇಳಿದರೆ ಕೊಡುತ್ತಿಲ್ಲ. ಮನೆಯಲ್ಲಿ ಎಲ್ಲರೂ ಹೆಣ್ಣುಮಕ್ಕಳೇ ಇದ್ದೇವೆ. ನಮಗೆ ರಕ್ಷಣೆ ಬೇಕು. ನ್ಯಾಯ ಬೇಕು. ನಮ್ಮ ತಂದೆಯ ಸಾವಿಗೆ ಕಾರಣರಾರಿಗೆ ಕಾನೂನು ರೀತಿ ಶಿಕ್ಷೆಗೆ ಗುರಿಪಡಿಸಬೇಕು ಎಂದು ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಸ್ಲಂ ಜನಾಂದೋಲನ ಕರ್ನಾಟಕ ಸಂಚಾಲಕ ಎ.ನರಸಿಂಹಮೂರ್ತಿ, ಸತ್ಯಶೋಧನ ಸಮಿತಿಯ ಸದಸ್ಯ ಟಿ.ವಿ.ನರಸಿಂಹಪ್ಪ, ಪರ್ಯಾಯ ಕಾನೂನು ವೇದಿಕೆಯ ಬಸವಪ್ರಸಾದ್ ಕುನಾಲೆ, ಪಿಯುಸಿಎಲ್ ಉಪಾಧ್ಯಕ್ಷೆ ದೀಪಿಕ, ಸಿಐಟಿಯು ಜಿಲ್ಲಾಧ್ಯಕ್ಷ ಸೈಯದ್ ಮುಜೀಬ್, ಎನ್.ಕೆ.ಸುಬ್ರಮಣ್ಯ ಹಾಜರಿದ್ದರು.


ಇದನ್ನೂ ಓದಿ; ಬೋರ್‌ವೆಲ್ ಕೊರೆಸಿದ್ದಕ್ಕೆ ದಲಿತನ ಮೇಲೆ ಹಲ್ಲೆ: ಆರೋಪಿಗಳ ಬೆಂಬಲಕ್ಕೆ ನಿಂತ ರಾಜಕಾರಣಿ?

ಇದನ್ನೂ ಓದಿ: ತುರುವೇಕೆರೆಯಲ್ಲಿ ದಲಿತ ಮುಖಂಡನ ಸಂಶಯಾಸ್ಪದ ಸಾವು – ಪೊಲೀಸ್ ವೈಫಲ್ಯವೆಂದ ಪಿಯುಸಿಎಲ್ ಸತ್ಯಶೋಧನ ಸಮಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...