Homeಕರ್ನಾಟಕನಾಗಮೋಹನ್ ದಾಸ್ ಆಯೋಗವು ಸಮೀಕ್ಷೆ ಅವಧಿ ವಿಸ್ತರಿಸದೆ ವರದಿ ನೀಡಿ, ಒಳಮೀಸಲಾತಿ ಅನುಷ್ಠಾನಗೊಳಿಸಲಿ: ಬಸವರಾಜ್ ಕೌತಾಳ್

ನಾಗಮೋಹನ್ ದಾಸ್ ಆಯೋಗವು ಸಮೀಕ್ಷೆ ಅವಧಿ ವಿಸ್ತರಿಸದೆ ವರದಿ ನೀಡಿ, ಒಳಮೀಸಲಾತಿ ಅನುಷ್ಠಾನಗೊಳಿಸಲಿ: ಬಸವರಾಜ್ ಕೌತಾಳ್

- Advertisement -
- Advertisement -

ಬೆಂಗಳೂರು: ನಾಗಮೋಹನ್ ದಾಸ್ ಆಯೋಗವು ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಅನುಷ್ಠಾನಕ್ಕಾಗಿ ನಡೆಸುತ್ತಿರುವ ಸಮೀಕ್ಷೆ ಅವಧಿಯನ್ನು ವಿಸ್ತರಿಸದೆ ಅದಷ್ಟು ಬೇಗ ವರದಿ ನೀಡಿ, ಒಳಮೀಸಲಾತಿ ಅನುಷ್ಠಾನಗೊಳಿಸಬೇಕೆಂದು ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟದ ಬಸವರಾಜ್‌ ಕೌತಾಳ್‌ ಒತ್ತಾಯಿಸಿದ್ದಾರೆ.

ಇಂದು (ಜೂ.20) ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, 2025ರ ಮೇ 5ರಂದು ಹೊಸ ತಂತ್ರಜ್ಞಾನ ಸಹಾಯದಿಂದ ಜಿಪಿಎಸ್‌ ಬಳಸಿ ವೈಜ್ಞಾನಿಕವಾಗಿ ಸಮೀಕ್ಷೆ ಕೆಲಸ ಆರಂಭಿಸಿದ ಆಯೋಗವು ಎರಡು ಬಾರಿ ಅವದಿಯನ್ನು ವಿಸ್ತರಣೆ ಮಾಡಿದೆ. 2011ರ ಜನಗಣತಿಯ ಆಧಾರದಲ್ಲಿ ಆಯಾ ಜಿಲ್ಲೆಗಳ ಪರಿಶಿಷ್ಟರ ಜನಗಣತಿಯನ್ನು ನಡೆಸಿದೆ. ಸಮೀಕ್ಷೆಯಲ್ಲಿ ಕೆಲವು ಜಿಲ್ಲೆಗಳಲ್ಲಿ 100ರಷ್ಟು ಸಮೀಕ್ಷೆಯಲ್ಲಿ ಪಾಲ್ಗೊಂಡು ಮಾಹಿತಿಯನ್ನು ಒದಗಿಸಿದ್ದಾರೆ. ಕೆಲವು ಜಿಲ್ಲೆಗಳಲ್ಲಿ 100ರಷ್ಟು ಸಮೀಕ್ಷೆ ನಡೆಸಲು ಸಾಧ್ಯವಾಗಲಿಲ್ಲ. ಒಟ್ಟಾರೆಯಾಗಿ ಶೇ.91-92ರಷ್ಟು ಸಮೀಕ್ಷೆ ಮುಗಿದಿದೆ ಎಂದು ಆಯೋಗವು ಹೇಳುತ್ತಿದೆ. ಇದರ ಕುರಿತೂ ಆಯೋಗವು ಸಮುದಾಯಗಳ ಮುಖಂಡರನ್ನು ಸಮೀಕ್ಷೆಯಲ್ಲಿ ಸಹಕರಿಸುವಂತೆ ಕೋರಿತ್ತು. ಈಗ ಸಮೀಕ್ಷೆಯ ಕಾಲಾವಧಿಯು ಮುಗಿಯುತ್ತಿದ್ದು, ಅವಧಿಯನ್ನು ವಿಸ್ತರಿಸಬೇಕೆಂಬ ಕೂಗು ಕೇಳಿಬರುತ್ತಿದೆ. ಈ ಅವಧಿಯನ್ನು ವಿಸ್ತರಿಸಬಾರದು ಎಂದು ಕೌತಾಳ್ ಆಗ್ರಹಿಸಿದರು.

ಒಳಮೀಸಲಾತಿ ಅನುಷ್ಠಾನ ಸಂಬಂಧ 2024ರ ನವೆಂಬರ್‌ 13ರಂದು ಸರ್ಕಾರದ ಸಚಿವ ಸಂಪುಟ ಸಭೆಯು ಜಸ್ಟೀಸ್‌ ನಾಗಮೋಹನ್‌ ದಾಸ್‌ರವರ ಏಕಸದಸ್ಯ ಆಯೋಗವನ್ನು ನೇಮಿಸಿ 2 ತಿಂಗಳ ಕಾಲಾವಕಾಶ ನೀಡಿತ್ತು. ಅಲ್ಲದೇ ವರದಿ ಬರುವವರೆಗೂ, ಒಳಮೀಸಲಾತಿ ಜಾರಿಯಾಗುವವರೆಗೂ ಯಾವುದೇ ಹೊಸ ನೇಮಕಾತಿಯನ್ನು ನಡೆಸದಂತೆ ತೀರ್ಮಾನಿಸಿತ್ತು. 3 ತಿಂಗಳ ಕಾಲಾವಧಿಯ ನಂತರದಲ್ಲಿ ಪರಿಶಿಷ್ಟ ಜಾತಿಗಳ ಒತ್ತಡ ಹೆಚ್ಚಾದ ಕಾರಣ ಜಸ್ಟೀಸ್‌ ನಾಗಮೋಹನ್‌ ದಾಸ್‌ ಏಕಸದಸ್ಯ ಆಯೋಗವು ಮಧ್ಯಂತರ ವರದಿಯನ್ನು 2025ರ ಮಾ.27ರಂದು ಸರ್ಕಾರಕ್ಕೆ ಸಲ್ಲಿಸಿತ್ತು ಎಂದು ಹೇಳಿದರು.

ಈ ಮಧ್ಯಂತರ ವರದಿಯ ಶಿಫಾರಸ್ಸುಗಳಲ್ಲಿ ಮುಖ್ಯವಾಗಿ ಈಗ ಲಭ್ಯವಿರುವ ಯಾವುದೇ ವರದಿ, ದತ್ತಾಂಶಗಳಲ್ಲಿ ವೈಜ್ಞಾನಿಕ ಜನಸಂಖ್ಯೆಯ ಮಾಹಿತಿ ಇಲ್ಲದ ಕಾರಣ ಪರಿಶಿಷ್ಟ ಜಾತಿಗಳ ಸಮೀಕ್ಷೆ ನಡೆಸಬೇಕೆಂದು ತಿಳಿಸಿತ್ತು. ಇದಕ್ಕೆ ಶಾಶ್ವತ ಪರಿಹಾರವೆಂದೇ ಅರಿತಿದ್ದ ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟವು ನಿರಂತರವಾಗಿ ವೈಜ್ಞಾನಿಕ ಸಮೀಕ್ಷೆ ನಡೆಸಿ 101 ಜಾತಿಗಳಿಗೂ ಜನಸಂಖ್ಯೆಯ ಆಧಾರದಲ್ಲಿ ಒಳಮೀಸಲಾತಿಯನ್ನು ಜಾರಿ ಮಾಡುವಂತೆ ಒತ್ತಾಯಿಸಿತ್ತು. ಸರ್ಕಾರವು ಜಸ್ಟೀಸ್‌ ನಾಗಮೋಹನ್‌ ದಾಸ್‌ ನೇತೃತ್ವದಲ್ಲಿ 60 ದಿನಗಳ ಕಾಲಾವಕಾಶ ನೀಡಿ ಸಮೀಕ್ಷೆ ನಡೆಸಲು ಆದೇಶ ನೀಡಿತ್ತು ಎಂದು ಮಾಹಿತಿ ನೀಡಿದರು.

ಈಗಾಗಲೇ ಸರ್ವೋಚ್ಚ ನ್ಯಾಯಾಲಯವು ಆದೇಶ ನೀಡಿ ಒಂದು ವರ್ಷವಾಗುತ್ತಿರುವ ಹಿನ್ನೆಲೆಯಲ್ಲಿ ಇನ್ನಷ್ಟು ವಿಳಂಬವನ್ನು ಮಾಡದೆ, ಒಳಮೀಸಲಾತಿ ಜಾರಿ ಮಾಡಲು ಸರ್ಕಾರ ಮುಂದಾಗಬೇಕಿದೆ. ಯಾವ ಕಾರಣಕ್ಕೂ ಸಮೀಕ್ಷೆಯ ಅವಧಿಯನ್ನು ವಿಸ್ತರಣೆ ಮಾಡಬಾರದೆಂದು ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟವು ಸರ್ಕಾರವನ್ನೂ ಹಾಗೂ ಜಸ್ಟೀಸ್‌ ನಾಗಮೋಹನ್‌ದಾಸ್‌ ಆಯೋಗವನ್ನು ಒತ್ತಾಯಿಸುತ್ತದೆ ಎಂದು ಅವರು ಹೇಳಿದರು.

30 ವರ್ಷಗಳ ಒಳಮೀಸಲಾತಿಗಾಗಿ ನಡೆದ ಹೋರಾಟವನ್ನು ಪರಿಗಣಿಸಿ  ಸರ್ವೋಚ್ಚ ನ್ಯಾಯಾಲಯವು 2024ರ ಆಗಸ್ಟ್ 1ರಂದು ಒಳಮೀಸಲಾತಿ ಜಾರಿ ಮಾಡುವ ಅಧಿಕಾರವನ್ನು ರಾಜ್ಯ ಸರ್ಕಾರಗಳಿಗೆ ನೀಡಿ ತೀರ್ಪು ನೀಡಿದೆ. ಅಲ್ಲದೇ ಸೂಕ್ತ ದತ್ತಾಂಶಗಳ ಸಹಾಯದಿಂದ ಒಳಮೀಸಲಾತಿಯನ್ನು ಜಾರಿ ಮಾಡುವಂತೆಯೂ ತನ್ನ ತೀರ್ಪಿನಲ್ಲಿ ಉಲ್ಲೇಖಿಸಿದೆ. ಕರ್ನಾಟಕದಲ್ಲಿ ಈಗಾಗಲೇ ಪರಿಶಿಷ್ಟ ಜಾತಿಗಳ ಜನಸಂಖ್ಯೆಯನ್ನು ಅಧ್ಯಯನ ಮಾಡಲು ನೇಮಿಸಿದ್ದ ನ್ಯಾ. ಎ.ಜೆ ಸದಾಶಿವ ಆಯೋಗದ ವರದಿಯನ್ನು ಸರಿಯಾದ ವೈಜ್ಞಾನಿಕ ದತ್ತಾಂಶಗಳು ಇಲ್ಲದ ಕಾರಣ ಹಲವು ಪರಿಶಿಷ್ಟ ಜಾತಿಗಳು ವಿರೋಧಿಸಿದ್ದವು. ಒತ್ತಡಕ್ಕೆ ಮಣಿದ ಸರ್ಕಾರ ನಿವೃತ್ತ ನ್ಯಾಯಾಧೀಶರಾದ ನಾಗಮೋಹನ್‌ ದಾಸ್‌ ರವರ ಅಧ್ಯಕ್ಷತೆಯಲ್ಲಿ ಏಕಸದಸ್ಯ ಆಯೋಗವನ್ನು ರಚಿಸಿ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ಆದೇಶಿಸಿತ್ತು. ಆಯೋಗಕ್ಕೆ ಸೂಕ್ತ ಕಾರ್ಯಸೂಚಿ ನೀಡಲು, ಕಛೇರಿಯನ್ನು ಒದಗಿಸಲೂ ಹೋರಾಟ ನಡೆಸಬೇಕಾಗಿಯಿತು ಎಂದು ಮಾಹಿತಿ ಕೌತಳ್ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಶಿವಣ್ಣ ಕನಕಪುರ, ಚಂದ್ರು ತರಹುಣಿಸೆ, ವೇಣುಗೋಪಾಲ್‌ ಮೌರ್ಯ ಉಪಸ್ಥಿತರಿದ್ದರು.

ಗಾಜಾ ನರಮೇಧ: ಹೈದರಾಬಾದ್‌ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಎದುರು ಪ್ರತಿಭಟನೆ; ವಿದ್ಯಾರ್ಥಿಗಳ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...

ಬೆಂಗಳೂರಿನಲ್ಲಿ ಮಾದಕ ವಸ್ತು ಜಾಲ ಪತ್ತೆ; 10 ಜನರ ಬಂಧನ, 23.6 ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ಬೃಹತ್ ಮಾದಕ ವಸ್ತು ಜಾಲ ಪತ್ತೆಯಾಗಿದ್ದು, ಬೆಂಗಳೂರು ನಗರ ಪೊಲೀಸರು 10 ಜನ ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಅಂದಾಜು 23.63 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಕೆಲವು...

‘ಮತ ಚಲಾಯಿಸದವರನ್ನು ಶಿಕ್ಷಿಸಲು ಸಾಧ್ಯವಿಲ್ಲ’: ಮತದಾನ ಕಡ್ಡಾಯಗೊಳಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಮತ ಚಲಾಯಿಸುವುದನ್ನು ಕಡ್ಡಾಯಗೊಳಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಗುರುವಾರ (ಏ. 16) ವಜಾಗೊಳಿಸಿದೆ ಮತ್ತು ಉದ್ದೇಶಪೂರ್ವಕವಾಗಿ ಮತದಾನದಿಂದ ದೂರ ಉಳಿಯುವ ನಾಗರಿಕರಿಗೆ ದಂಡ ವಿಧಿಸಲು...

ಆರ್‌ಎಸ್‌ಎಸ್‌ಗೆ 100 ವರ್ಷ; ಮುದ್ರಣ ಮಾಧ್ಯಮ ಜಾಹೀರಾತಿಗೆ 76.13 ಲಕ್ಷ ರೂ. ಖರ್ಚು ಮಾಡಿದ ಕೇಂದ್ರ ಸರ್ಕಾರ

ಅಧಿಕೃತವಾಗಿ ನೊಂದಣಿಯಾಗದ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ದ 100ನೇ ವರ್ಷಾಚರಣೆಯ ಜಾಹೀರಾತುಗಳಿಗಾಗಿ ಕೇಂದ್ರ ಸಂಸ್ಕೃತಿ ಸಚಿವಾಲಯವು 76.13 ಲಕ್ಷ ರೂ.ಗಳನ್ನು ಖರ್ಚು ಮಾಡಿದೆ ಎಂದು ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಿಂದ ತಿಳಿದುಬಂದಿದೆ. ಹಿಂದೂ...

ಡಿಲಿಮಿಟೇಶನ್‌ಗೆ ಲಿಂಕ್ ಮಾಡದೆ ‘ಮಹಿಳಾ ಮೀಸಲಾತಿ’ ಜಾರಿ ಮಾಡಿ: ಗೌರವ್ ಗೊಗೊಯ್

"ಮಹಿಳಾ ಮೀಸಲಾತಿಯನ್ನು ಪ್ರಸ್ತುತ ಲೋಕಸಭೆಯ 543 ಸದಸ್ಯರ ಬಲದ ಮೇಲೆ ಜಾರಿಗೆ ತರಬೇಕು, ಅದನ್ನು ಡಿಲಿಮಿಟೇಷನ್ (ಕ್ಷೇತ್ರ ಪುನರ್‌ ವಿಂಗಡಣೆ) ಸೀಮಿತಗೊಳಿಸಬಾರದು" ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಹೇಳಿದರು. "ಸರ್ಕಾರವು ಮಸೂದೆಗಳನ್ನು...

ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ : ಲೋಕಸಭೆಯಲ್ಲಿ ಮೂರು ಪ್ರಮುಖ ಮಸೂದೆಗಳ ಮಂಡನೆ

ಮಹಿಳಾ ಮೀಸಲಾತಿ ಕಾಯ್ದೆಗೆ ತಿದ್ದುಪಡಿ ತರಲು ಮತ್ತು ಕ್ಷೇತ್ರ ಮರುವಿಂಗಡಣಾ ಆಯೋಗವನ್ನು ಸ್ಥಾಪಿಸಲು ಕೇಂದ್ರ ಸಚಿವರಾದ ಅರ್ಜುನ್ ರಾಮ್ ಮೇಘವಾಲ್ ಮತ್ತು ಅಮಿತ್ ಶಾ ಅವರು ಗುರುವಾರ (ಏ.16) ಲೋಕಸಭೆಯಲ್ಲಿ ಮೂರು ವಿಧೇಯಕಗಳನ್ನು...

ಮತಾಂತರ ವಿರೋಧಿ ಕಾನೂನನ್ನು ಪೊಲೀಸರು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ: ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದಲ್ಲಿ 2021 ರ ಕಾನೂನುಬಾಹಿರ ಧರ್ಮ ಮತಾಂತರ ನಿಷೇಧ ಕಾಯ್ದೆಯಡಿಯಲ್ಲಿ ದಾಖಲಾಗಿರುವ ಹಲವಾರು "ಸುಳ್ಳು, ನಕಲಿ ಮತ್ತು ಕ್ಷುಲ್ಲಕ ಎಫ್‌ಐಆರ್"ಗಳನ್ನು ಅಲಹಾಬಾದ್ ಹೈಕೋರ್ಟ್ ಗುರುತಿಸಿದೆ. "ಪೊಲೀಸರು ಮತ್ತು ದೂರುದಾರರು ಕಾನೂನನ್ನು ದುರುಪಯೋಗಪಡಿಸಿಕೊಳ್ಳುವ...

ಸಂಸತ್ತಿನ 3 ದಿನಗಳ ವಿಶೇಷ ಅಧಿವೇಶನ: ಕ್ಷೇತ್ರ ಮರುವಿಂಗಡಣೆ, ಮಹಿಳಾ ಮೀಸಲಾತಿ ಕುರಿತ ಮಸೂದೆಗಳ ಮಂಡನೆ ಸಾಧ್ಯತೆ

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನ ಗುರುವಾರದಿಂದ (ಏ.16) ಪ್ರಾರಂಭಗೊಂಡಿದೆ. ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ ಸೇರಿದಂತೆ ಪ್ರಮುಖ ಮೂರು ಮಸೂದೆಗಳು ಮಂಡನೆಯಾಗುವ ಸಾಧ್ಯತೆ ಇದೆ. ಲೋಕಸಭೆಯ ಒಟ್ಟು ಸ್ಥಾನಗಳ ಸಂಖ್ಯೆಯನ್ನು ಪ್ರಸ್ತುತ...