Homeಕರ್ನಾಟಕನಾಗಮೋಹನ್ ದಾಸ್ ಆಯೋಗವು ಸಮೀಕ್ಷೆ ಅವಧಿ ವಿಸ್ತರಿಸದೆ ವರದಿ ನೀಡಿ, ಒಳಮೀಸಲಾತಿ ಅನುಷ್ಠಾನಗೊಳಿಸಲಿ: ಬಸವರಾಜ್ ಕೌತಾಳ್

ನಾಗಮೋಹನ್ ದಾಸ್ ಆಯೋಗವು ಸಮೀಕ್ಷೆ ಅವಧಿ ವಿಸ್ತರಿಸದೆ ವರದಿ ನೀಡಿ, ಒಳಮೀಸಲಾತಿ ಅನುಷ್ಠಾನಗೊಳಿಸಲಿ: ಬಸವರಾಜ್ ಕೌತಾಳ್

- Advertisement -
- Advertisement -

ಬೆಂಗಳೂರು: ನಾಗಮೋಹನ್ ದಾಸ್ ಆಯೋಗವು ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಅನುಷ್ಠಾನಕ್ಕಾಗಿ ನಡೆಸುತ್ತಿರುವ ಸಮೀಕ್ಷೆ ಅವಧಿಯನ್ನು ವಿಸ್ತರಿಸದೆ ಅದಷ್ಟು ಬೇಗ ವರದಿ ನೀಡಿ, ಒಳಮೀಸಲಾತಿ ಅನುಷ್ಠಾನಗೊಳಿಸಬೇಕೆಂದು ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟದ ಬಸವರಾಜ್‌ ಕೌತಾಳ್‌ ಒತ್ತಾಯಿಸಿದ್ದಾರೆ.

ಇಂದು (ಜೂ.20) ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, 2025ರ ಮೇ 5ರಂದು ಹೊಸ ತಂತ್ರಜ್ಞಾನ ಸಹಾಯದಿಂದ ಜಿಪಿಎಸ್‌ ಬಳಸಿ ವೈಜ್ಞಾನಿಕವಾಗಿ ಸಮೀಕ್ಷೆ ಕೆಲಸ ಆರಂಭಿಸಿದ ಆಯೋಗವು ಎರಡು ಬಾರಿ ಅವದಿಯನ್ನು ವಿಸ್ತರಣೆ ಮಾಡಿದೆ. 2011ರ ಜನಗಣತಿಯ ಆಧಾರದಲ್ಲಿ ಆಯಾ ಜಿಲ್ಲೆಗಳ ಪರಿಶಿಷ್ಟರ ಜನಗಣತಿಯನ್ನು ನಡೆಸಿದೆ. ಸಮೀಕ್ಷೆಯಲ್ಲಿ ಕೆಲವು ಜಿಲ್ಲೆಗಳಲ್ಲಿ 100ರಷ್ಟು ಸಮೀಕ್ಷೆಯಲ್ಲಿ ಪಾಲ್ಗೊಂಡು ಮಾಹಿತಿಯನ್ನು ಒದಗಿಸಿದ್ದಾರೆ. ಕೆಲವು ಜಿಲ್ಲೆಗಳಲ್ಲಿ 100ರಷ್ಟು ಸಮೀಕ್ಷೆ ನಡೆಸಲು ಸಾಧ್ಯವಾಗಲಿಲ್ಲ. ಒಟ್ಟಾರೆಯಾಗಿ ಶೇ.91-92ರಷ್ಟು ಸಮೀಕ್ಷೆ ಮುಗಿದಿದೆ ಎಂದು ಆಯೋಗವು ಹೇಳುತ್ತಿದೆ. ಇದರ ಕುರಿತೂ ಆಯೋಗವು ಸಮುದಾಯಗಳ ಮುಖಂಡರನ್ನು ಸಮೀಕ್ಷೆಯಲ್ಲಿ ಸಹಕರಿಸುವಂತೆ ಕೋರಿತ್ತು. ಈಗ ಸಮೀಕ್ಷೆಯ ಕಾಲಾವಧಿಯು ಮುಗಿಯುತ್ತಿದ್ದು, ಅವಧಿಯನ್ನು ವಿಸ್ತರಿಸಬೇಕೆಂಬ ಕೂಗು ಕೇಳಿಬರುತ್ತಿದೆ. ಈ ಅವಧಿಯನ್ನು ವಿಸ್ತರಿಸಬಾರದು ಎಂದು ಕೌತಾಳ್ ಆಗ್ರಹಿಸಿದರು.

ಒಳಮೀಸಲಾತಿ ಅನುಷ್ಠಾನ ಸಂಬಂಧ 2024ರ ನವೆಂಬರ್‌ 13ರಂದು ಸರ್ಕಾರದ ಸಚಿವ ಸಂಪುಟ ಸಭೆಯು ಜಸ್ಟೀಸ್‌ ನಾಗಮೋಹನ್‌ ದಾಸ್‌ರವರ ಏಕಸದಸ್ಯ ಆಯೋಗವನ್ನು ನೇಮಿಸಿ 2 ತಿಂಗಳ ಕಾಲಾವಕಾಶ ನೀಡಿತ್ತು. ಅಲ್ಲದೇ ವರದಿ ಬರುವವರೆಗೂ, ಒಳಮೀಸಲಾತಿ ಜಾರಿಯಾಗುವವರೆಗೂ ಯಾವುದೇ ಹೊಸ ನೇಮಕಾತಿಯನ್ನು ನಡೆಸದಂತೆ ತೀರ್ಮಾನಿಸಿತ್ತು. 3 ತಿಂಗಳ ಕಾಲಾವಧಿಯ ನಂತರದಲ್ಲಿ ಪರಿಶಿಷ್ಟ ಜಾತಿಗಳ ಒತ್ತಡ ಹೆಚ್ಚಾದ ಕಾರಣ ಜಸ್ಟೀಸ್‌ ನಾಗಮೋಹನ್‌ ದಾಸ್‌ ಏಕಸದಸ್ಯ ಆಯೋಗವು ಮಧ್ಯಂತರ ವರದಿಯನ್ನು 2025ರ ಮಾ.27ರಂದು ಸರ್ಕಾರಕ್ಕೆ ಸಲ್ಲಿಸಿತ್ತು ಎಂದು ಹೇಳಿದರು.

ಈ ಮಧ್ಯಂತರ ವರದಿಯ ಶಿಫಾರಸ್ಸುಗಳಲ್ಲಿ ಮುಖ್ಯವಾಗಿ ಈಗ ಲಭ್ಯವಿರುವ ಯಾವುದೇ ವರದಿ, ದತ್ತಾಂಶಗಳಲ್ಲಿ ವೈಜ್ಞಾನಿಕ ಜನಸಂಖ್ಯೆಯ ಮಾಹಿತಿ ಇಲ್ಲದ ಕಾರಣ ಪರಿಶಿಷ್ಟ ಜಾತಿಗಳ ಸಮೀಕ್ಷೆ ನಡೆಸಬೇಕೆಂದು ತಿಳಿಸಿತ್ತು. ಇದಕ್ಕೆ ಶಾಶ್ವತ ಪರಿಹಾರವೆಂದೇ ಅರಿತಿದ್ದ ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟವು ನಿರಂತರವಾಗಿ ವೈಜ್ಞಾನಿಕ ಸಮೀಕ್ಷೆ ನಡೆಸಿ 101 ಜಾತಿಗಳಿಗೂ ಜನಸಂಖ್ಯೆಯ ಆಧಾರದಲ್ಲಿ ಒಳಮೀಸಲಾತಿಯನ್ನು ಜಾರಿ ಮಾಡುವಂತೆ ಒತ್ತಾಯಿಸಿತ್ತು. ಸರ್ಕಾರವು ಜಸ್ಟೀಸ್‌ ನಾಗಮೋಹನ್‌ ದಾಸ್‌ ನೇತೃತ್ವದಲ್ಲಿ 60 ದಿನಗಳ ಕಾಲಾವಕಾಶ ನೀಡಿ ಸಮೀಕ್ಷೆ ನಡೆಸಲು ಆದೇಶ ನೀಡಿತ್ತು ಎಂದು ಮಾಹಿತಿ ನೀಡಿದರು.

ಈಗಾಗಲೇ ಸರ್ವೋಚ್ಚ ನ್ಯಾಯಾಲಯವು ಆದೇಶ ನೀಡಿ ಒಂದು ವರ್ಷವಾಗುತ್ತಿರುವ ಹಿನ್ನೆಲೆಯಲ್ಲಿ ಇನ್ನಷ್ಟು ವಿಳಂಬವನ್ನು ಮಾಡದೆ, ಒಳಮೀಸಲಾತಿ ಜಾರಿ ಮಾಡಲು ಸರ್ಕಾರ ಮುಂದಾಗಬೇಕಿದೆ. ಯಾವ ಕಾರಣಕ್ಕೂ ಸಮೀಕ್ಷೆಯ ಅವಧಿಯನ್ನು ವಿಸ್ತರಣೆ ಮಾಡಬಾರದೆಂದು ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟವು ಸರ್ಕಾರವನ್ನೂ ಹಾಗೂ ಜಸ್ಟೀಸ್‌ ನಾಗಮೋಹನ್‌ದಾಸ್‌ ಆಯೋಗವನ್ನು ಒತ್ತಾಯಿಸುತ್ತದೆ ಎಂದು ಅವರು ಹೇಳಿದರು.

30 ವರ್ಷಗಳ ಒಳಮೀಸಲಾತಿಗಾಗಿ ನಡೆದ ಹೋರಾಟವನ್ನು ಪರಿಗಣಿಸಿ  ಸರ್ವೋಚ್ಚ ನ್ಯಾಯಾಲಯವು 2024ರ ಆಗಸ್ಟ್ 1ರಂದು ಒಳಮೀಸಲಾತಿ ಜಾರಿ ಮಾಡುವ ಅಧಿಕಾರವನ್ನು ರಾಜ್ಯ ಸರ್ಕಾರಗಳಿಗೆ ನೀಡಿ ತೀರ್ಪು ನೀಡಿದೆ. ಅಲ್ಲದೇ ಸೂಕ್ತ ದತ್ತಾಂಶಗಳ ಸಹಾಯದಿಂದ ಒಳಮೀಸಲಾತಿಯನ್ನು ಜಾರಿ ಮಾಡುವಂತೆಯೂ ತನ್ನ ತೀರ್ಪಿನಲ್ಲಿ ಉಲ್ಲೇಖಿಸಿದೆ. ಕರ್ನಾಟಕದಲ್ಲಿ ಈಗಾಗಲೇ ಪರಿಶಿಷ್ಟ ಜಾತಿಗಳ ಜನಸಂಖ್ಯೆಯನ್ನು ಅಧ್ಯಯನ ಮಾಡಲು ನೇಮಿಸಿದ್ದ ನ್ಯಾ. ಎ.ಜೆ ಸದಾಶಿವ ಆಯೋಗದ ವರದಿಯನ್ನು ಸರಿಯಾದ ವೈಜ್ಞಾನಿಕ ದತ್ತಾಂಶಗಳು ಇಲ್ಲದ ಕಾರಣ ಹಲವು ಪರಿಶಿಷ್ಟ ಜಾತಿಗಳು ವಿರೋಧಿಸಿದ್ದವು. ಒತ್ತಡಕ್ಕೆ ಮಣಿದ ಸರ್ಕಾರ ನಿವೃತ್ತ ನ್ಯಾಯಾಧೀಶರಾದ ನಾಗಮೋಹನ್‌ ದಾಸ್‌ ರವರ ಅಧ್ಯಕ್ಷತೆಯಲ್ಲಿ ಏಕಸದಸ್ಯ ಆಯೋಗವನ್ನು ರಚಿಸಿ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ಆದೇಶಿಸಿತ್ತು. ಆಯೋಗಕ್ಕೆ ಸೂಕ್ತ ಕಾರ್ಯಸೂಚಿ ನೀಡಲು, ಕಛೇರಿಯನ್ನು ಒದಗಿಸಲೂ ಹೋರಾಟ ನಡೆಸಬೇಕಾಗಿಯಿತು ಎಂದು ಮಾಹಿತಿ ಕೌತಳ್ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಶಿವಣ್ಣ ಕನಕಪುರ, ಚಂದ್ರು ತರಹುಣಿಸೆ, ವೇಣುಗೋಪಾಲ್‌ ಮೌರ್ಯ ಉಪಸ್ಥಿತರಿದ್ದರು.

ಗಾಜಾ ನರಮೇಧ: ಹೈದರಾಬಾದ್‌ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಎದುರು ಪ್ರತಿಭಟನೆ; ವಿದ್ಯಾರ್ಥಿಗಳ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...