Homeಕರ್ನಾಟಕನಾಗಮೋಹನ್ ದಾಸ್ ಆಯೋಗವು ಸಮೀಕ್ಷೆ ಅವಧಿ ವಿಸ್ತರಿಸದೆ ವರದಿ ನೀಡಿ, ಒಳಮೀಸಲಾತಿ ಅನುಷ್ಠಾನಗೊಳಿಸಲಿ: ಬಸವರಾಜ್ ಕೌತಾಳ್

ನಾಗಮೋಹನ್ ದಾಸ್ ಆಯೋಗವು ಸಮೀಕ್ಷೆ ಅವಧಿ ವಿಸ್ತರಿಸದೆ ವರದಿ ನೀಡಿ, ಒಳಮೀಸಲಾತಿ ಅನುಷ್ಠಾನಗೊಳಿಸಲಿ: ಬಸವರಾಜ್ ಕೌತಾಳ್

- Advertisement -
- Advertisement -

ಬೆಂಗಳೂರು: ನಾಗಮೋಹನ್ ದಾಸ್ ಆಯೋಗವು ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಅನುಷ್ಠಾನಕ್ಕಾಗಿ ನಡೆಸುತ್ತಿರುವ ಸಮೀಕ್ಷೆ ಅವಧಿಯನ್ನು ವಿಸ್ತರಿಸದೆ ಅದಷ್ಟು ಬೇಗ ವರದಿ ನೀಡಿ, ಒಳಮೀಸಲಾತಿ ಅನುಷ್ಠಾನಗೊಳಿಸಬೇಕೆಂದು ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟದ ಬಸವರಾಜ್‌ ಕೌತಾಳ್‌ ಒತ್ತಾಯಿಸಿದ್ದಾರೆ.

ಇಂದು (ಜೂ.20) ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, 2025ರ ಮೇ 5ರಂದು ಹೊಸ ತಂತ್ರಜ್ಞಾನ ಸಹಾಯದಿಂದ ಜಿಪಿಎಸ್‌ ಬಳಸಿ ವೈಜ್ಞಾನಿಕವಾಗಿ ಸಮೀಕ್ಷೆ ಕೆಲಸ ಆರಂಭಿಸಿದ ಆಯೋಗವು ಎರಡು ಬಾರಿ ಅವದಿಯನ್ನು ವಿಸ್ತರಣೆ ಮಾಡಿದೆ. 2011ರ ಜನಗಣತಿಯ ಆಧಾರದಲ್ಲಿ ಆಯಾ ಜಿಲ್ಲೆಗಳ ಪರಿಶಿಷ್ಟರ ಜನಗಣತಿಯನ್ನು ನಡೆಸಿದೆ. ಸಮೀಕ್ಷೆಯಲ್ಲಿ ಕೆಲವು ಜಿಲ್ಲೆಗಳಲ್ಲಿ 100ರಷ್ಟು ಸಮೀಕ್ಷೆಯಲ್ಲಿ ಪಾಲ್ಗೊಂಡು ಮಾಹಿತಿಯನ್ನು ಒದಗಿಸಿದ್ದಾರೆ. ಕೆಲವು ಜಿಲ್ಲೆಗಳಲ್ಲಿ 100ರಷ್ಟು ಸಮೀಕ್ಷೆ ನಡೆಸಲು ಸಾಧ್ಯವಾಗಲಿಲ್ಲ. ಒಟ್ಟಾರೆಯಾಗಿ ಶೇ.91-92ರಷ್ಟು ಸಮೀಕ್ಷೆ ಮುಗಿದಿದೆ ಎಂದು ಆಯೋಗವು ಹೇಳುತ್ತಿದೆ. ಇದರ ಕುರಿತೂ ಆಯೋಗವು ಸಮುದಾಯಗಳ ಮುಖಂಡರನ್ನು ಸಮೀಕ್ಷೆಯಲ್ಲಿ ಸಹಕರಿಸುವಂತೆ ಕೋರಿತ್ತು. ಈಗ ಸಮೀಕ್ಷೆಯ ಕಾಲಾವಧಿಯು ಮುಗಿಯುತ್ತಿದ್ದು, ಅವಧಿಯನ್ನು ವಿಸ್ತರಿಸಬೇಕೆಂಬ ಕೂಗು ಕೇಳಿಬರುತ್ತಿದೆ. ಈ ಅವಧಿಯನ್ನು ವಿಸ್ತರಿಸಬಾರದು ಎಂದು ಕೌತಾಳ್ ಆಗ್ರಹಿಸಿದರು.

ಒಳಮೀಸಲಾತಿ ಅನುಷ್ಠಾನ ಸಂಬಂಧ 2024ರ ನವೆಂಬರ್‌ 13ರಂದು ಸರ್ಕಾರದ ಸಚಿವ ಸಂಪುಟ ಸಭೆಯು ಜಸ್ಟೀಸ್‌ ನಾಗಮೋಹನ್‌ ದಾಸ್‌ರವರ ಏಕಸದಸ್ಯ ಆಯೋಗವನ್ನು ನೇಮಿಸಿ 2 ತಿಂಗಳ ಕಾಲಾವಕಾಶ ನೀಡಿತ್ತು. ಅಲ್ಲದೇ ವರದಿ ಬರುವವರೆಗೂ, ಒಳಮೀಸಲಾತಿ ಜಾರಿಯಾಗುವವರೆಗೂ ಯಾವುದೇ ಹೊಸ ನೇಮಕಾತಿಯನ್ನು ನಡೆಸದಂತೆ ತೀರ್ಮಾನಿಸಿತ್ತು. 3 ತಿಂಗಳ ಕಾಲಾವಧಿಯ ನಂತರದಲ್ಲಿ ಪರಿಶಿಷ್ಟ ಜಾತಿಗಳ ಒತ್ತಡ ಹೆಚ್ಚಾದ ಕಾರಣ ಜಸ್ಟೀಸ್‌ ನಾಗಮೋಹನ್‌ ದಾಸ್‌ ಏಕಸದಸ್ಯ ಆಯೋಗವು ಮಧ್ಯಂತರ ವರದಿಯನ್ನು 2025ರ ಮಾ.27ರಂದು ಸರ್ಕಾರಕ್ಕೆ ಸಲ್ಲಿಸಿತ್ತು ಎಂದು ಹೇಳಿದರು.

ಈ ಮಧ್ಯಂತರ ವರದಿಯ ಶಿಫಾರಸ್ಸುಗಳಲ್ಲಿ ಮುಖ್ಯವಾಗಿ ಈಗ ಲಭ್ಯವಿರುವ ಯಾವುದೇ ವರದಿ, ದತ್ತಾಂಶಗಳಲ್ಲಿ ವೈಜ್ಞಾನಿಕ ಜನಸಂಖ್ಯೆಯ ಮಾಹಿತಿ ಇಲ್ಲದ ಕಾರಣ ಪರಿಶಿಷ್ಟ ಜಾತಿಗಳ ಸಮೀಕ್ಷೆ ನಡೆಸಬೇಕೆಂದು ತಿಳಿಸಿತ್ತು. ಇದಕ್ಕೆ ಶಾಶ್ವತ ಪರಿಹಾರವೆಂದೇ ಅರಿತಿದ್ದ ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟವು ನಿರಂತರವಾಗಿ ವೈಜ್ಞಾನಿಕ ಸಮೀಕ್ಷೆ ನಡೆಸಿ 101 ಜಾತಿಗಳಿಗೂ ಜನಸಂಖ್ಯೆಯ ಆಧಾರದಲ್ಲಿ ಒಳಮೀಸಲಾತಿಯನ್ನು ಜಾರಿ ಮಾಡುವಂತೆ ಒತ್ತಾಯಿಸಿತ್ತು. ಸರ್ಕಾರವು ಜಸ್ಟೀಸ್‌ ನಾಗಮೋಹನ್‌ ದಾಸ್‌ ನೇತೃತ್ವದಲ್ಲಿ 60 ದಿನಗಳ ಕಾಲಾವಕಾಶ ನೀಡಿ ಸಮೀಕ್ಷೆ ನಡೆಸಲು ಆದೇಶ ನೀಡಿತ್ತು ಎಂದು ಮಾಹಿತಿ ನೀಡಿದರು.

ಈಗಾಗಲೇ ಸರ್ವೋಚ್ಚ ನ್ಯಾಯಾಲಯವು ಆದೇಶ ನೀಡಿ ಒಂದು ವರ್ಷವಾಗುತ್ತಿರುವ ಹಿನ್ನೆಲೆಯಲ್ಲಿ ಇನ್ನಷ್ಟು ವಿಳಂಬವನ್ನು ಮಾಡದೆ, ಒಳಮೀಸಲಾತಿ ಜಾರಿ ಮಾಡಲು ಸರ್ಕಾರ ಮುಂದಾಗಬೇಕಿದೆ. ಯಾವ ಕಾರಣಕ್ಕೂ ಸಮೀಕ್ಷೆಯ ಅವಧಿಯನ್ನು ವಿಸ್ತರಣೆ ಮಾಡಬಾರದೆಂದು ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟವು ಸರ್ಕಾರವನ್ನೂ ಹಾಗೂ ಜಸ್ಟೀಸ್‌ ನಾಗಮೋಹನ್‌ದಾಸ್‌ ಆಯೋಗವನ್ನು ಒತ್ತಾಯಿಸುತ್ತದೆ ಎಂದು ಅವರು ಹೇಳಿದರು.

30 ವರ್ಷಗಳ ಒಳಮೀಸಲಾತಿಗಾಗಿ ನಡೆದ ಹೋರಾಟವನ್ನು ಪರಿಗಣಿಸಿ  ಸರ್ವೋಚ್ಚ ನ್ಯಾಯಾಲಯವು 2024ರ ಆಗಸ್ಟ್ 1ರಂದು ಒಳಮೀಸಲಾತಿ ಜಾರಿ ಮಾಡುವ ಅಧಿಕಾರವನ್ನು ರಾಜ್ಯ ಸರ್ಕಾರಗಳಿಗೆ ನೀಡಿ ತೀರ್ಪು ನೀಡಿದೆ. ಅಲ್ಲದೇ ಸೂಕ್ತ ದತ್ತಾಂಶಗಳ ಸಹಾಯದಿಂದ ಒಳಮೀಸಲಾತಿಯನ್ನು ಜಾರಿ ಮಾಡುವಂತೆಯೂ ತನ್ನ ತೀರ್ಪಿನಲ್ಲಿ ಉಲ್ಲೇಖಿಸಿದೆ. ಕರ್ನಾಟಕದಲ್ಲಿ ಈಗಾಗಲೇ ಪರಿಶಿಷ್ಟ ಜಾತಿಗಳ ಜನಸಂಖ್ಯೆಯನ್ನು ಅಧ್ಯಯನ ಮಾಡಲು ನೇಮಿಸಿದ್ದ ನ್ಯಾ. ಎ.ಜೆ ಸದಾಶಿವ ಆಯೋಗದ ವರದಿಯನ್ನು ಸರಿಯಾದ ವೈಜ್ಞಾನಿಕ ದತ್ತಾಂಶಗಳು ಇಲ್ಲದ ಕಾರಣ ಹಲವು ಪರಿಶಿಷ್ಟ ಜಾತಿಗಳು ವಿರೋಧಿಸಿದ್ದವು. ಒತ್ತಡಕ್ಕೆ ಮಣಿದ ಸರ್ಕಾರ ನಿವೃತ್ತ ನ್ಯಾಯಾಧೀಶರಾದ ನಾಗಮೋಹನ್‌ ದಾಸ್‌ ರವರ ಅಧ್ಯಕ್ಷತೆಯಲ್ಲಿ ಏಕಸದಸ್ಯ ಆಯೋಗವನ್ನು ರಚಿಸಿ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ಆದೇಶಿಸಿತ್ತು. ಆಯೋಗಕ್ಕೆ ಸೂಕ್ತ ಕಾರ್ಯಸೂಚಿ ನೀಡಲು, ಕಛೇರಿಯನ್ನು ಒದಗಿಸಲೂ ಹೋರಾಟ ನಡೆಸಬೇಕಾಗಿಯಿತು ಎಂದು ಮಾಹಿತಿ ಕೌತಳ್ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಶಿವಣ್ಣ ಕನಕಪುರ, ಚಂದ್ರು ತರಹುಣಿಸೆ, ವೇಣುಗೋಪಾಲ್‌ ಮೌರ್ಯ ಉಪಸ್ಥಿತರಿದ್ದರು.

ಗಾಜಾ ನರಮೇಧ: ಹೈದರಾಬಾದ್‌ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಎದುರು ಪ್ರತಿಭಟನೆ; ವಿದ್ಯಾರ್ಥಿಗಳ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...