Homeಕರ್ನಾಟಕ‘ಪಂಪ ಮಹಾಕವಿ ರಸ್ತೆ’ ಹೆಸರು ಬದಲಿಸಲ್ಲ: ಜನಾಕ್ರೋಶದ ಬಳಿಕ ಹಿಂದೆ ಸರಿದ ಕಸಾಪ

‘ಪಂಪ ಮಹಾಕವಿ ರಸ್ತೆ’ ಹೆಸರು ಬದಲಿಸಲ್ಲ: ಜನಾಕ್ರೋಶದ ಬಳಿಕ ಹಿಂದೆ ಸರಿದ ಕಸಾಪ

- Advertisement -
- Advertisement -

ಬೆಂಗಳೂರಿನ ಚಾಮರಾಜಪೇಟೆಯ ಪಂಪ ಮಹಾಕವಿ ರಸ್ತೆಯ ಹೆಸರನ್ನು ಬದಲಿಸಬೇಕೆಂಬ ಪ್ರಸ್ತಾಪವನ್ನು ಕನ್ನಡ ಸಾಹಿತ್ಯ ಪರಿಷತ್ ಬಿಬಿಎಂಪಿಗೆ ಬರೆದಿಲ್ಲ ಎಂದು ಕಸಾಪ ಅಧ್ಯಕ್ಷ ಮಹೇಶ್ ಜೋಶಿ ಸ್ಪಷ್ಟಪಡಿಸಿದ್ದಾರೆ.

“ಬದಲಾವಣೆ ಮಾಡಿ ಎನ್ನುವುದಾಗಲೀ, ಮತ್ತೆ ಯಾವುದೇ ಪ್ರಸ್ತಾವನೆಯನ್ನಾಗಲೀ ಮಹಾನಗರ ಪಾಲಿಕೆಗೆ ನಾವು ಕಳುಹಿಸುವುದಿಲ್ಲ” ಎಂದು ಅವರು ಮಾತನಾಡಿದ್ದಾರೆ.

ಕಸಾಪಕ್ಕೆ ಭೇಟಿ ನೀಡಿರುವ ಮುಖಂಡರ ಜೊತೆ ಮಾತನಾಡಿರುವ ಅವರು, “ಮಾಧ್ಯಮದ ಮೂಲಕ ಬಂದ ಅಭಿಪ್ರಾಯಗಳನ್ನು ನೋಡಿ ಬಂದಿದ್ದೀರಿ. ಆ ಅಭಿಪ್ರಾಯಗಳು ತಪ್ಪು ಭಾವನೆಗಳನ್ನು ಕಲ್ಪಿಸಿದೆ. ವಾಸ್ತವಿಕ ವಿಚಾರಗಳನ್ನು ನಿಮ್ಮ ಮುಂದೆ ಹೇಳಿದ್ದೇನೆ” ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಜೈನ ಸಾಹಿತಿಗಳು ಹಾಗೂ ಸಮುದಾಯದ ಬಗ್ಗೆ ಅಪಾರವಾದ ಗೌರವವಿದೆ. ಜೈನ ಸಮುದಾಯ ಶಾಂತಿ, ತಾಳ್ಮೆಗೆ ಹೆಸರಾಗಿದೆ” ಎಂದು ಅವರು ತಿಳಿಸಿದ್ದಾರೆ.

ಜೈನ ಸಮುದಾಯದ ಮುಖಂಡರಾದ ನಿರಂಜನ್‌ ಜೈನ್ ಕನ್ಯಾಡಿಯವರು ವಿಡಿಯೊವನ್ನು ಹಂಚಿಕೊಂಡಿದ್ದು, “ಕೊನೆಗೂ ಕಸಾಪ ಅಧ್ಯಕ್ಷರು‌ ಎಚ್ಚೆತ್ತುಕೊಂಡಿದ್ದಾರೆ. ಕನ್ನಡ ಪ್ರೇಮಿಗಳ ಪ್ರತಿಭಟನೆಗೆ ಉತ್ತರಿಸಿದ್ದಾರೆ. ಯಾವುದೇ ಕಾರಣಕ್ಕೂ ಪಂಪ ಮಹಾಕವಿ ರಸ್ತೆಯ ಹೆಸರು ಬದಲಾವಣೆ ಇಲ್ಲ ಎಂದಿದ್ದಾರೆ. ಪಂಪನ ಬಗ್ಗೆ ಅಪಾರ ಗೌರವವಿರುವುದಾಗಿ ಹೇಳಿಕೊಂಡಿದ್ದಾರೆ” ಎಂದು ಪೋಸ್ಟ್ ಮಾಡಿದ್ದಾರೆ.

“ನನ್ನ ಸಹಿತ ಅನೇಕರು ಸಾಮಾಜಿಕ ಜಾಲತಾಣಗಳ ಮಾಧ್ಯಮದ ಮೂಲಕ ಲೇಖನ ಬರಹಗಳ ಮೂಲಕ ಪ್ರತಿರೋಧವನ್ನು ವ್ಯಕ್ತಪಡಿಸಿದ್ದೆವು. ನಿನ್ನೆ ಮತ್ತು ಇವತ್ತು ನಾನು ಕಸಾಪ ಅಧ್ಯಕ್ಷರಿಗೆ ದೂರವಾಣಿ ಮೂಲಕ ಮಾತನಾಡಿದ್ದೆ. ಆಗಲೂ ಸಮಾಧಾನದಿಂದ ಉತ್ತರಿಸಿದ್ದರು. ಸ್ಪಷ್ಟೀಕರಣ ಕೊಡುವುದಾಗಿ ಹೇಳಿದ್ದರು. ಇವತ್ತು ಕರ್ನಾಟಕ ಜೈನ್ ಅಸೋಸಿಯೇಷನ್ ಪದಾಧಿಕಾರಿಗಳು ಪ್ರತಿಭಟನಾ ಪತ್ರವನ್ನು ಒಪ್ಪಿಸಿದಾಗ ಸಮಚಿತ್ತದಿಂದ ವ್ಯವಹರಿಸಿ ಸಮಾಧಾನದ ಮೂಲಕ ವ್ಯವಹರಿಸಿದ್ದಾರೆ” ಎಂದು ಮಾಹಿತಿ ನೀಡಿದ್ದಾರೆ.

“ಯಾವುದೇ ಕಾರಣಕ್ಕೂ ರಾಜಕೀಯದ ಒತ್ತಡಕ್ಕೆ ಮತ್ತು ಜಾತಿ ರಾಜಕಾರಣಕ್ಕೆ ಬಲಿಯಾಗದೇ ಕನ್ನಡದ ಆದಿ ಕವಿ ಪಂಪನ ಬಗ್ಗೆ ಒಲುಮೆಯಿರಲಿ, ಅಭಿಮಾನವಿರಲಿ” ಎಂದು ಅವರು ಕಸಾಪ ಅಧ್ಯಕ್ಷರಿಗೆ ಕಿವಿಮಾತು ಹೇಳಿದ್ದಾರೆ.

 

ಚಾಮರಾಜಪೇಟೆಯ ಮಿಂಟೋ ಆಸ್ಪತ್ರೆ ಮತ್ತು ಮಕ್ಕಳ ಕೂಟ ಪಾರ್ಕ್ ನಡುವಿನ ರಸ್ತೆಯನ್ನು ಕನ್ನಡ ಸಾಹಿತ್ಯ ಪರಿಷತ್ ರಸ್ತೆ ಎಂದು ಮರುನಾಮಕರಣ ಮಾಡಲು ಕಸಾಪ ಮುಂದಾಗಿತ್ತು.

ಈ ರಸ್ತೆಗೆ ಪ್ರಸ್ತುತ ಪಂಪ ಮಹಾಕವಿ ಎಂದು ಹೆಸರಿಡಲಾಗಿದೆ. ಇಲ್ಲಿನ ಅರ್ಧ ಕಿ.ಮೀ.ಯಷ್ಟು ರಸ್ತೆಯನ್ನು ಕನ್ನಡ ಪರಿಮಳದಿಂದ, ಕನ್ನಡಮಯದಿಂದ ತುಂಬಬೇಕು ಎಂದು ಕಸಾಪ ಅಧ್ಯಕ್ಷರು ಹೇಳಿದ್ದರು.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ್ದ ಮಹೇಶ್ ಜೋಶಿಯವರು, “ನ್ಯಾಷನಲ್‌ ಕಾಲೇಜಿನಿಂದ ಆರಂಭವಾಗಿ ಮಿಂಟೋ ಆಸ್ಪತ್ರೆಯವರೆಗೆ ಪಂಪ ಮಹಾಕವಿ ರಸ್ತೆ ಇದೆ. ನ್ಯಾಷನಲ್ ಕಾಲೇಜಿನಿಂದ ಮಕ್ಕಳ ಕೂಟದವರೆಗೆ ಪಂಪ ಮಹಾಕವಿ ರಸ್ತೆ ಎಂದೇ ಇರುತ್ತದೆ. ಅದರ ಮುಂದಿನ ರಸ್ತೆಯನ್ನು ಕನ್ನಡ ಸಾಹಿತ್ಯ ಪರಿಷತ್‌ ರಸ್ತೆ ಎಂದು ಇಡಬೇಕೆಂದು ಯೋಚಿಸಿದ್ದೇವೆ” ಎಂದಿದ್ದರು.

ಪಂಪನ ಹೆಸರಲ್ಲಿರುವ ರಸ್ತೆಯಿಂದ ಕಸಾಪಕ್ಕೆ ಆಗುವ ನಷ್ಟವೇನು ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದ ಅವರು, “ಕನ್ನಡ ಸಾಹಿತ್ಯ ಪರಿಷತ್‌ ಕೂಡ ಕನ್ನಡಕ್ಕಾಗಿಯೇ ದುಡಿದಿದೆ. ಮೈಸೂರು ಒಡೆಯರಿಂದ ಸ್ಥಾಪನೆಯಾಗಿರುವ ಸಂಸ್ಥೆ ಕಸಾಪ. ನಮ್ಮ ಎದುರಿನ ರಸ್ತೆಗೆ ನಮ್ಮತನ ಬೇಕಾಲ್ಲವೇ? ಕಸಾಪ ಎಂಬ ನಮ್ಮತನ ಬೇಡವೆ? ಪಂಪ ಎಂಬ ಹೆಸರನ್ನು ನಾವು ಬದಲಿಸುತ್ತಿಲ್ಲ. ಪಂಪ ರಸ್ತೆಯೂ ಇರುತ್ತದೆ. ಕನ್ನಡ ಸಾಹಿತ್ಯ ಪರಿಷತ್ ರಸ್ತೆಯೂ ಇರುತ್ತದೆ. ಹೀಗಾಗಿ ಈ ರಸ್ತೆಗೆ ಮತ್ತಷ್ಟು ಮೆರಗು ಬರುತ್ತದೆ” ಎಂದು ಅಭಿಪ್ರಾಯಪಟ್ಟಿದ್ದರು.

ರಸ್ತೆಯ ಹೆಸರು ಬದಲಿಸುವ ಪ್ರಸ್ತಾವನೆಗೆ ಅನೇಕ ಸಂಘಸಂಸ್ಥೆಗಳು, ಸಾಹಿತಿಗಳು ಹಾಗೂ ಕನ್ನಡ ನಾಡಿನ ಜನತೆ ವಿರೋಧ ವ್ಯಕ್ತಪಡಿಸಿದ್ದರು.

ಕರವೇ ಅಧ್ಯಕ್ಷರಾದ ಟಿ.ಎ.ನಾರಾಯಣಗೌಡ ಅವರು ಪತ್ರ ಬರೆದು, “ಕನ್ನಡದ ಆದಿಕವಿ ಪಂಪನ ರಸ್ತೆಯ ಹೆಸರನ್ನು ಕನ್ನಡಿಗರ ಪ್ರಾತಿನಿಧಿಕ ಸಂಘಟನೆ ಎಂದು ಹೇಳಿಕೊಳ್ಳುವ ಕನ್ನಡ ಸಾಹಿತ್ಯ ಪರಿಷತ್ತೇ ಬದಲಿಸಲು ಹೊರಟಿರುವುದು ವಿಲಕ್ಷಣವಾದ ಘಟನೆಯಾಗಿದ್ದು, ಪರಿಷತ್ತು ತನ್ನ ಮಾನವನ್ನು ತಾನೇ ಹರಾಜು ಹಾಕಿಕೊಂಡಂತಾಗಿದೆ” ಎಂದಿದ್ದರು.

ಇದನ್ನೂ ಓದಿರಿ: ಕಸಾಪ ಸದಸ್ಯತ್ವ ಮತ್ತು ಅನಕ್ಷರಸ್ಥತೆ; ಅಕ್ಷರಜ್ಞಾನ, ಸಾಹಿತ್ಯ, ಕಲೆ – ಒಂದು ವಿವೇಚನೆ

“ಹತ್ತನೇ ಶತಮಾನದಲ್ಲಿ ಬದುಕಿದ ಪಂಪ ಮಹಾಕವಿ ಇಡೀ ಕನ್ನಡ ಸಾಹಿತ್ಯ ಚರಿತ್ರೆಗೆ ಮುನ್ನುಡಿಯನ್ನು ಬರೆದವರು. ಭೂಮಿ, ಸೂರ್ಯ, ಚಂದ್ರರು ಇರುವವರೆಗೆ ಅವರ ಹೆಸರು ಅಮರವಾಗಿರುತ್ತದೆ. ಸಾಹಿತ್ಯ ಪರಿಷತ್ತು ಇಂಥ‌ ದುಸ್ಸಾಹಸಕ್ಕೆ ಇಳಿದಿದ್ದು ಯಾಕೆ ಎಂಬುದೇ ಅರ್ಥವಾಗುತ್ತಿಲ್ಲ” ಎಂದು ತಿಳಿಸಿದ್ದರು.

“ಪಂಪ ಮಹಾಕವಿ ರಸ್ತೆಯ ಒಂದು ಭಾಗಕ್ಕೆ ಮಾತ್ರ ಕನ್ನಡ ಸಾಹಿತ್ಯ ಪರಿಷತ್ ರಸ್ತೆ ಎಂದು ಹೆಸರಿಡುವ ಪ್ರಸ್ತಾವನೆ ಸಲ್ಲಿಸಿರುವುದಾಗಿ ಅಧ್ಯಕ್ಷರಾದ ಮಹೇಶ್ ಜೋಷಿ ಹೇಳಿರುವುದನ್ನು ಗಮನಿಸಿದೆ. ಪಂಪನ ಹೆಸರಿನ ರಸ್ತೆಯ ಒಂದು ಮೀಟರ್ ರಸ್ತೆಯ ಹೆಸರನ್ನೂ ಬದಲಿಸುವ ಅವಶ್ಯಕತೆ ಇಲ್ಲ ಎಂಬುದು ಕರವೇ ನಿಲುವಾಗಿರುತ್ತದೆ. ಒಂದು ವೇಳೆ ಪರಿಷತ್ತು ರಸ್ತೆಯ ಹೆಸರನ್ನು ಬದಲಿಸಲು ಹಟ ಹಿಡಿದಲ್ಲಿ, ಕರ್ನಾಟಕ ರಕ್ಷಣಾ ವೇದಿಕೆ ತೀವ್ರವಾಗಿ ಪ್ರತಿಭಟಿಸಬೇಕಾಗುತ್ತದೆ. ಕಸಾಪ ವಿರುದ್ಧವೇ ಹೋರಾಟ ನಡೆಸಲು ನಾವು ಹಿಂಜರಿಯುವುದಿಲ್ಲ” ಎಂದು ಎಚ್ಚರಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಜರಾತಿ ಆಧಾರದ ಮೇಲೆ ಪರೀಕ್ಷಾ ನಿಷೇಧ ವಿರೋಧಿಸಿ ಎಎಂಯು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಪ್ರತಿಭಟನೆ; ಬಂಧನ, ಹಲ್ಲೆ ಆರೋಪ 

ಕಡಿಮೆ ಹಾಜರಾತಿ ಕಾರಣ ಸೆಮಿಸ್ಟರ್ ಪರೀಕ್ಷೆಗಳಿಂದ ನಿಷೇಧಿಸಲ್ಪಟ್ಟಿದ್ದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ನಂತರ, ವಿಶ್ವವಿದ್ಯಾಲಯದ ಪ್ರೊಕ್ಟೋರಿಯಲ್ ತಂಡವು ಹಲವಾರು ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದೆ ಎಂದು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ (AMU)...

ವಿಧಾನಸಭಾ ಚುನಾವಣೆಗೂ ಮುನ್ನ ಎಐಎಡಿಎಂಕೆಯಿಂದ ಉಚ್ಚಾಟನೆಗೊಂಡ ಮಾಜಿ ಸಿಎಂ ಪನ್ನೀರ್‌ಸೆಲ್ವಂ, ಪ್ರತಿಸ್ಪರ್ಧಿ ಡಿಎಂಕೆ ಪಕ್ಷಕ್ಕೆ ಸೇರ್ಪಡೆ

ಮೂರು ಬಾರಿ ತಮಿಳುನಾಡು ಮುಖ್ಯಮಂತ್ರಿ ಮತ್ತು ಜೆ ಜಯಲಲಿತಾ ಅವರ ದೀರ್ಘಕಾಲದ ಸಹಾಯಕರಾಗಿದ್ದ ಪನ್ನೀರ್‌ಸೆಲ್ವಂ ಅವರನ್ನು ಎಡಪ್ಪಾಡಿ ಕೆ ಪಳನಿಸ್ವಾಮಿ (ಇಪಿಎಸ್) ಅವರೊಂದಿಗಿನ ತೀವ್ರ ಅಧಿಕಾರ ಹೋರಾಟದ ನಂತರ 2022 ರಲ್ಲಿ ಎಐಎಡಿಎಂಕೆಯಿಂದ...

‘ನಾನು ಭ್ರಷ್ಟನಲ್ಲ’: ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯದಿಂದ ಕ್ಲೀನ್ ಚಿಟ್; ಮಾಧ್ಯಮಗಳೆದುರು ಭಾವುಕರಾದ ಕೇಜ್ರಿವಾಲ್

ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದ ಕೆಲವೇ ಕ್ಷಣಗಳಲ್ಲಿ, ಫೆಬ್ರವರಿ 27, ಶುಕ್ರವಾರದಂದು ಮಾಧ್ಯಮಗಳ...

‘ಮುಸ್ಲಿಮರ ವಿರುದ್ಧ ದ್ವೇಷ ಭಾಷಣ’: ಅಸ್ಸಾಂ ಸಿಎಂ ಹಿಮಂತ ಶರ್ಮಾಗೆ ನೋಟಿಸ್ ಜಾರಿ ಮಾಡಿದ ಗುವಾಹಟಿ ಹೈಕೋರ್ಟ್

ಗುವಾಹಟಿ: ಮುಸ್ಲಿಮರನ್ನು ಗುರಿಯಾಗಿಸಿಕೊಂಡು "ದ್ವೇಷ ಭಾಷಣ" ಮಾಡಿದ್ದಾರೆ ಎಂಬ ಆರೋಪದ ಮೇಲೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಗುವಾಹಟಿ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ ಮಾಡಿದೆ. ಬಂಗಾಳಿ ಮೂಲದ ಮುಸ್ಲಿಮರನ್ನು ಗುರಿಯಾಗಿಸಿಕೊಂಡು...

ಅಫ್ಘಾನಿಸ್ತಾನದೊಂದಿಗೆ ‘ಮುಕ್ತ ಯುದ್ಧ’ ಘೋಷಿಸಿದ ಪಾಕಿಸ್ತಾನ; ತಾಲಿಬಾನ್‌ ವಿರುದ್ಧ ಆಪರೇಷನ್‌ ಗಜಬ್-ಲಿಲ್‌-ಹಕ್‌ ಆರಂಭಿಸಿದ ಪಾಕ್‌ ಸೇನೆ!

ಅಫ್ಘಾನಿಸ್ತಾನದೊಂದಿಗಿನ ಉದ್ವಿಗ್ನತೆಯನ್ನು ಇಸ್ಲಾಮಾಬಾದ್ ಔಪಚಾರಿಕವಾಗಿ ಹೆಚ್ಚಿಸಿದೆ, ಹಂಚಿಕೆಯ ಗಡಿಯಲ್ಲಿ ಹೊಸ ಮತ್ತು ಮಾರಕ ಘರ್ಷಣೆಗಳ ನಂತರ ತಾಲಿಬಾನ್ ನೇತೃತ್ವದ ಸರ್ಕಾರದ ವಿರುದ್ಧ ಮುಕ್ತ ಯುದ್ಧ ಎಂದು ಘೋಷಿಸಿದೆ.  ಶುಕ್ರವಾರ ಮುಂಜಾನೆ ಕಾಬೂಲ್ ಮತ್ತು ಕಂದಹಾರ್‌ನಲ್ಲಿ...

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...