Homeಕರ್ನಾಟಕ‘ಪಂಪ ಮಹಾಕವಿ ರಸ್ತೆ’ ಹೆಸರು ಬದಲಿಸಲ್ಲ: ಜನಾಕ್ರೋಶದ ಬಳಿಕ ಹಿಂದೆ ಸರಿದ ಕಸಾಪ

‘ಪಂಪ ಮಹಾಕವಿ ರಸ್ತೆ’ ಹೆಸರು ಬದಲಿಸಲ್ಲ: ಜನಾಕ್ರೋಶದ ಬಳಿಕ ಹಿಂದೆ ಸರಿದ ಕಸಾಪ

- Advertisement -
- Advertisement -

ಬೆಂಗಳೂರಿನ ಚಾಮರಾಜಪೇಟೆಯ ಪಂಪ ಮಹಾಕವಿ ರಸ್ತೆಯ ಹೆಸರನ್ನು ಬದಲಿಸಬೇಕೆಂಬ ಪ್ರಸ್ತಾಪವನ್ನು ಕನ್ನಡ ಸಾಹಿತ್ಯ ಪರಿಷತ್ ಬಿಬಿಎಂಪಿಗೆ ಬರೆದಿಲ್ಲ ಎಂದು ಕಸಾಪ ಅಧ್ಯಕ್ಷ ಮಹೇಶ್ ಜೋಶಿ ಸ್ಪಷ್ಟಪಡಿಸಿದ್ದಾರೆ.

“ಬದಲಾವಣೆ ಮಾಡಿ ಎನ್ನುವುದಾಗಲೀ, ಮತ್ತೆ ಯಾವುದೇ ಪ್ರಸ್ತಾವನೆಯನ್ನಾಗಲೀ ಮಹಾನಗರ ಪಾಲಿಕೆಗೆ ನಾವು ಕಳುಹಿಸುವುದಿಲ್ಲ” ಎಂದು ಅವರು ಮಾತನಾಡಿದ್ದಾರೆ.

ಕಸಾಪಕ್ಕೆ ಭೇಟಿ ನೀಡಿರುವ ಮುಖಂಡರ ಜೊತೆ ಮಾತನಾಡಿರುವ ಅವರು, “ಮಾಧ್ಯಮದ ಮೂಲಕ ಬಂದ ಅಭಿಪ್ರಾಯಗಳನ್ನು ನೋಡಿ ಬಂದಿದ್ದೀರಿ. ಆ ಅಭಿಪ್ರಾಯಗಳು ತಪ್ಪು ಭಾವನೆಗಳನ್ನು ಕಲ್ಪಿಸಿದೆ. ವಾಸ್ತವಿಕ ವಿಚಾರಗಳನ್ನು ನಿಮ್ಮ ಮುಂದೆ ಹೇಳಿದ್ದೇನೆ” ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಜೈನ ಸಾಹಿತಿಗಳು ಹಾಗೂ ಸಮುದಾಯದ ಬಗ್ಗೆ ಅಪಾರವಾದ ಗೌರವವಿದೆ. ಜೈನ ಸಮುದಾಯ ಶಾಂತಿ, ತಾಳ್ಮೆಗೆ ಹೆಸರಾಗಿದೆ” ಎಂದು ಅವರು ತಿಳಿಸಿದ್ದಾರೆ.

ಜೈನ ಸಮುದಾಯದ ಮುಖಂಡರಾದ ನಿರಂಜನ್‌ ಜೈನ್ ಕನ್ಯಾಡಿಯವರು ವಿಡಿಯೊವನ್ನು ಹಂಚಿಕೊಂಡಿದ್ದು, “ಕೊನೆಗೂ ಕಸಾಪ ಅಧ್ಯಕ್ಷರು‌ ಎಚ್ಚೆತ್ತುಕೊಂಡಿದ್ದಾರೆ. ಕನ್ನಡ ಪ್ರೇಮಿಗಳ ಪ್ರತಿಭಟನೆಗೆ ಉತ್ತರಿಸಿದ್ದಾರೆ. ಯಾವುದೇ ಕಾರಣಕ್ಕೂ ಪಂಪ ಮಹಾಕವಿ ರಸ್ತೆಯ ಹೆಸರು ಬದಲಾವಣೆ ಇಲ್ಲ ಎಂದಿದ್ದಾರೆ. ಪಂಪನ ಬಗ್ಗೆ ಅಪಾರ ಗೌರವವಿರುವುದಾಗಿ ಹೇಳಿಕೊಂಡಿದ್ದಾರೆ” ಎಂದು ಪೋಸ್ಟ್ ಮಾಡಿದ್ದಾರೆ.

“ನನ್ನ ಸಹಿತ ಅನೇಕರು ಸಾಮಾಜಿಕ ಜಾಲತಾಣಗಳ ಮಾಧ್ಯಮದ ಮೂಲಕ ಲೇಖನ ಬರಹಗಳ ಮೂಲಕ ಪ್ರತಿರೋಧವನ್ನು ವ್ಯಕ್ತಪಡಿಸಿದ್ದೆವು. ನಿನ್ನೆ ಮತ್ತು ಇವತ್ತು ನಾನು ಕಸಾಪ ಅಧ್ಯಕ್ಷರಿಗೆ ದೂರವಾಣಿ ಮೂಲಕ ಮಾತನಾಡಿದ್ದೆ. ಆಗಲೂ ಸಮಾಧಾನದಿಂದ ಉತ್ತರಿಸಿದ್ದರು. ಸ್ಪಷ್ಟೀಕರಣ ಕೊಡುವುದಾಗಿ ಹೇಳಿದ್ದರು. ಇವತ್ತು ಕರ್ನಾಟಕ ಜೈನ್ ಅಸೋಸಿಯೇಷನ್ ಪದಾಧಿಕಾರಿಗಳು ಪ್ರತಿಭಟನಾ ಪತ್ರವನ್ನು ಒಪ್ಪಿಸಿದಾಗ ಸಮಚಿತ್ತದಿಂದ ವ್ಯವಹರಿಸಿ ಸಮಾಧಾನದ ಮೂಲಕ ವ್ಯವಹರಿಸಿದ್ದಾರೆ” ಎಂದು ಮಾಹಿತಿ ನೀಡಿದ್ದಾರೆ.

“ಯಾವುದೇ ಕಾರಣಕ್ಕೂ ರಾಜಕೀಯದ ಒತ್ತಡಕ್ಕೆ ಮತ್ತು ಜಾತಿ ರಾಜಕಾರಣಕ್ಕೆ ಬಲಿಯಾಗದೇ ಕನ್ನಡದ ಆದಿ ಕವಿ ಪಂಪನ ಬಗ್ಗೆ ಒಲುಮೆಯಿರಲಿ, ಅಭಿಮಾನವಿರಲಿ” ಎಂದು ಅವರು ಕಸಾಪ ಅಧ್ಯಕ್ಷರಿಗೆ ಕಿವಿಮಾತು ಹೇಳಿದ್ದಾರೆ.

 

ಚಾಮರಾಜಪೇಟೆಯ ಮಿಂಟೋ ಆಸ್ಪತ್ರೆ ಮತ್ತು ಮಕ್ಕಳ ಕೂಟ ಪಾರ್ಕ್ ನಡುವಿನ ರಸ್ತೆಯನ್ನು ಕನ್ನಡ ಸಾಹಿತ್ಯ ಪರಿಷತ್ ರಸ್ತೆ ಎಂದು ಮರುನಾಮಕರಣ ಮಾಡಲು ಕಸಾಪ ಮುಂದಾಗಿತ್ತು.

ಈ ರಸ್ತೆಗೆ ಪ್ರಸ್ತುತ ಪಂಪ ಮಹಾಕವಿ ಎಂದು ಹೆಸರಿಡಲಾಗಿದೆ. ಇಲ್ಲಿನ ಅರ್ಧ ಕಿ.ಮೀ.ಯಷ್ಟು ರಸ್ತೆಯನ್ನು ಕನ್ನಡ ಪರಿಮಳದಿಂದ, ಕನ್ನಡಮಯದಿಂದ ತುಂಬಬೇಕು ಎಂದು ಕಸಾಪ ಅಧ್ಯಕ್ಷರು ಹೇಳಿದ್ದರು.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ್ದ ಮಹೇಶ್ ಜೋಶಿಯವರು, “ನ್ಯಾಷನಲ್‌ ಕಾಲೇಜಿನಿಂದ ಆರಂಭವಾಗಿ ಮಿಂಟೋ ಆಸ್ಪತ್ರೆಯವರೆಗೆ ಪಂಪ ಮಹಾಕವಿ ರಸ್ತೆ ಇದೆ. ನ್ಯಾಷನಲ್ ಕಾಲೇಜಿನಿಂದ ಮಕ್ಕಳ ಕೂಟದವರೆಗೆ ಪಂಪ ಮಹಾಕವಿ ರಸ್ತೆ ಎಂದೇ ಇರುತ್ತದೆ. ಅದರ ಮುಂದಿನ ರಸ್ತೆಯನ್ನು ಕನ್ನಡ ಸಾಹಿತ್ಯ ಪರಿಷತ್‌ ರಸ್ತೆ ಎಂದು ಇಡಬೇಕೆಂದು ಯೋಚಿಸಿದ್ದೇವೆ” ಎಂದಿದ್ದರು.

ಪಂಪನ ಹೆಸರಲ್ಲಿರುವ ರಸ್ತೆಯಿಂದ ಕಸಾಪಕ್ಕೆ ಆಗುವ ನಷ್ಟವೇನು ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದ ಅವರು, “ಕನ್ನಡ ಸಾಹಿತ್ಯ ಪರಿಷತ್‌ ಕೂಡ ಕನ್ನಡಕ್ಕಾಗಿಯೇ ದುಡಿದಿದೆ. ಮೈಸೂರು ಒಡೆಯರಿಂದ ಸ್ಥಾಪನೆಯಾಗಿರುವ ಸಂಸ್ಥೆ ಕಸಾಪ. ನಮ್ಮ ಎದುರಿನ ರಸ್ತೆಗೆ ನಮ್ಮತನ ಬೇಕಾಲ್ಲವೇ? ಕಸಾಪ ಎಂಬ ನಮ್ಮತನ ಬೇಡವೆ? ಪಂಪ ಎಂಬ ಹೆಸರನ್ನು ನಾವು ಬದಲಿಸುತ್ತಿಲ್ಲ. ಪಂಪ ರಸ್ತೆಯೂ ಇರುತ್ತದೆ. ಕನ್ನಡ ಸಾಹಿತ್ಯ ಪರಿಷತ್ ರಸ್ತೆಯೂ ಇರುತ್ತದೆ. ಹೀಗಾಗಿ ಈ ರಸ್ತೆಗೆ ಮತ್ತಷ್ಟು ಮೆರಗು ಬರುತ್ತದೆ” ಎಂದು ಅಭಿಪ್ರಾಯಪಟ್ಟಿದ್ದರು.

ರಸ್ತೆಯ ಹೆಸರು ಬದಲಿಸುವ ಪ್ರಸ್ತಾವನೆಗೆ ಅನೇಕ ಸಂಘಸಂಸ್ಥೆಗಳು, ಸಾಹಿತಿಗಳು ಹಾಗೂ ಕನ್ನಡ ನಾಡಿನ ಜನತೆ ವಿರೋಧ ವ್ಯಕ್ತಪಡಿಸಿದ್ದರು.

ಕರವೇ ಅಧ್ಯಕ್ಷರಾದ ಟಿ.ಎ.ನಾರಾಯಣಗೌಡ ಅವರು ಪತ್ರ ಬರೆದು, “ಕನ್ನಡದ ಆದಿಕವಿ ಪಂಪನ ರಸ್ತೆಯ ಹೆಸರನ್ನು ಕನ್ನಡಿಗರ ಪ್ರಾತಿನಿಧಿಕ ಸಂಘಟನೆ ಎಂದು ಹೇಳಿಕೊಳ್ಳುವ ಕನ್ನಡ ಸಾಹಿತ್ಯ ಪರಿಷತ್ತೇ ಬದಲಿಸಲು ಹೊರಟಿರುವುದು ವಿಲಕ್ಷಣವಾದ ಘಟನೆಯಾಗಿದ್ದು, ಪರಿಷತ್ತು ತನ್ನ ಮಾನವನ್ನು ತಾನೇ ಹರಾಜು ಹಾಕಿಕೊಂಡಂತಾಗಿದೆ” ಎಂದಿದ್ದರು.

ಇದನ್ನೂ ಓದಿರಿ: ಕಸಾಪ ಸದಸ್ಯತ್ವ ಮತ್ತು ಅನಕ್ಷರಸ್ಥತೆ; ಅಕ್ಷರಜ್ಞಾನ, ಸಾಹಿತ್ಯ, ಕಲೆ – ಒಂದು ವಿವೇಚನೆ

“ಹತ್ತನೇ ಶತಮಾನದಲ್ಲಿ ಬದುಕಿದ ಪಂಪ ಮಹಾಕವಿ ಇಡೀ ಕನ್ನಡ ಸಾಹಿತ್ಯ ಚರಿತ್ರೆಗೆ ಮುನ್ನುಡಿಯನ್ನು ಬರೆದವರು. ಭೂಮಿ, ಸೂರ್ಯ, ಚಂದ್ರರು ಇರುವವರೆಗೆ ಅವರ ಹೆಸರು ಅಮರವಾಗಿರುತ್ತದೆ. ಸಾಹಿತ್ಯ ಪರಿಷತ್ತು ಇಂಥ‌ ದುಸ್ಸಾಹಸಕ್ಕೆ ಇಳಿದಿದ್ದು ಯಾಕೆ ಎಂಬುದೇ ಅರ್ಥವಾಗುತ್ತಿಲ್ಲ” ಎಂದು ತಿಳಿಸಿದ್ದರು.

“ಪಂಪ ಮಹಾಕವಿ ರಸ್ತೆಯ ಒಂದು ಭಾಗಕ್ಕೆ ಮಾತ್ರ ಕನ್ನಡ ಸಾಹಿತ್ಯ ಪರಿಷತ್ ರಸ್ತೆ ಎಂದು ಹೆಸರಿಡುವ ಪ್ರಸ್ತಾವನೆ ಸಲ್ಲಿಸಿರುವುದಾಗಿ ಅಧ್ಯಕ್ಷರಾದ ಮಹೇಶ್ ಜೋಷಿ ಹೇಳಿರುವುದನ್ನು ಗಮನಿಸಿದೆ. ಪಂಪನ ಹೆಸರಿನ ರಸ್ತೆಯ ಒಂದು ಮೀಟರ್ ರಸ್ತೆಯ ಹೆಸರನ್ನೂ ಬದಲಿಸುವ ಅವಶ್ಯಕತೆ ಇಲ್ಲ ಎಂಬುದು ಕರವೇ ನಿಲುವಾಗಿರುತ್ತದೆ. ಒಂದು ವೇಳೆ ಪರಿಷತ್ತು ರಸ್ತೆಯ ಹೆಸರನ್ನು ಬದಲಿಸಲು ಹಟ ಹಿಡಿದಲ್ಲಿ, ಕರ್ನಾಟಕ ರಕ್ಷಣಾ ವೇದಿಕೆ ತೀವ್ರವಾಗಿ ಪ್ರತಿಭಟಿಸಬೇಕಾಗುತ್ತದೆ. ಕಸಾಪ ವಿರುದ್ಧವೇ ಹೋರಾಟ ನಡೆಸಲು ನಾವು ಹಿಂಜರಿಯುವುದಿಲ್ಲ” ಎಂದು ಎಚ್ಚರಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯನ್ನು ಗರ್ಭಧಾರಣೆ ಪೂರ್ಣಗೊಳಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ’: ಅಪ್ರಾಪ್ತೆಗೆ 30 ವಾರಗಳ ಗರ್ಭಧಾರಣೆ ಅಂತ್ಯಗೊಳಿಸಲು ಸುಪ್ರೀಂ ಅನುಮತಿ

ನವದೆಹಲಿ: 17 ವರ್ಷದ ಬಾಲಕಿಯ 30 ವಾರಗಳ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್, ನ್ಯಾಯಾಲಯಗಳು ಮಹಿಳೆಯನ್ನು, ಅಪ್ರಾಪ್ತ ವಯಸ್ಕಳನ್ನು ಹೊರತುಪಡಿಸಿ, ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದೆ. ನ್ಯಾಯಮೂರ್ತಿಗಳಾದ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಕನಿಷ್ಠ 30 ಸಾವು, 160 ಕ್ಕೂ ಹೆಚ್ಚು ಜನರಿಗೆ ಗಾಯ

ಇಸ್ಲಾಮಾಬಾದ್: ಶುಕ್ರವಾರ ಇಸ್ಲಾಮಾಬಾದ್‌ನ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಪ್ರಾರ್ಥನೆ ವೇಳೆ ನಡೆದ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿ, 160 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.  ಪಾಕಿಸ್ತಾನ ರಾಜಧಾನಿಯ ಶೆಹಜಾದ್ ಟೌನ್ ಪ್ರದೇಶದ...

ನಾಳೆ ದೊರೈರಾಜ್‌ ಅವರ ‘ನಮ್ಮ ಹಟ್ಟಿ’ ಆತ್ಮಕಥೆ ಬಿಡುಗಡೆ

ದಲಿತ ಚಳವಳಿಯ ಹಿರಿಯ ಮುಖಂಡರಾದ ತುಮಕೂರಿನ ಕೆ.ದೊರೈರಾಜ್‌ ಅವರ 'ನಮ್ಮಹಟ್ಟಿ' ಆತ್ಮಕಥೆ ಶನಿವಾರ ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ಬಿಡುಗಡೆಯಾಗಲಿದೆ. ಸರ್ಕಾರಿ ಅಧಿಕಾರಿಯಾಗಿದ್ದ ದೊರೈರಾಜ್‌ ಅವರು, ತಮ್ಮ ವಿದ್ಯಾರ್ಥಿ ಜೀವನದಿಂದಲೇ ದಲಿತ ಚಳವಳಿಯಲ್ಲಿ ಗುರುತಿಸಿಕೊಂಡವರು....

‘ತಿರುಪತಿ ಲಡ್ಡುಗಳಲ್ಲಿ ರಾಸಾಯನಿಕಗಳಿಂದ ಮಾಡಿದ ತುಪ್ಪ ಬಳಸಲಾಗುತ್ತಿತ್ತು’: ವೈಎಸ್ಆರ್ಸಿಪಿ ಸರ್ಕಾರದ ವಿರುದ್ಧ ಆಂಧ್ರ ಸಿಎಂ ಆರೋಪ

ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ತಿರುಪತಿ ಲಡ್ಡುಗಳನ್ನು ತುಪ್ಪ ಬಳಸಿ ತಯಾರಿಸಲಾಗುತ್ತಿತ್ತು, ಅದರಲ್ಲಿ ಬಾತ್ ರೂಂ(ಸ್ನಾನಗೃಹಗಳನ್ನು) ಸ್ವಚ್ಛಗೊಳಿಸಲು ಬಳಸುವ ರಾಸಾಯನಿಕಗಳನ್ನು ಬೆರೆಸಲಾಗುತ್ತಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಶುಕ್ರವಾರ ಆರೋಪಿಸಿದ್ದಾರೆ. ಕರ್ನೂಲು...

ಜಲಂಧರ್‌ನ ಗುರುದ್ವಾರದ ಹೊರಗೆ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು

ಪಂಜಾಬ್‌ನ ಜಲಂಧರ್‌ನಲ್ಲಿ ಶುಕ್ರವಾರ ಹಾಡಹಗಲೇ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಮಾಡೆಲ್ ಟೌನ್ ಪ್ರದೇಶದ ಗುರುದ್ವಾರದ ಬಳಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಮಾಡಿದ್ದಾರೆ.  ಈ ಘಟನೆ ಬೆಳಿಗ್ಗೆ ನಡೆದಿದ್ದು, ಗುಂಡೇಟಿನಿಂದ ಗಾಯಗೊಂಡಿದ್ದ ಅವರನ್ನು...

ದೆಹಲಿ: ಜಲ ಮಂಡಳಿ ತೋಡಿದ ಗುಂಡಿಗೆ ಬಿದ್ದು ಬೈಕ್ ಸವಾರ ಸಾವು; ತನಿಖೆಗೆ ಆದೇಶಿಸಿದ ಸರ್ಕಾರ 

ಪಶ್ಚಿಮ ದೆಹಲಿಯ ಜನಕಪುರಿ ಪ್ರದೇಶದಲ್ಲಿ ದೆಹಲಿ ಜಲ ಮಂಡಳಿ (ಡಿಜೆಬಿ) ನಿರ್ಮಾಣ ಕಾರ್ಯಕ್ಕಾಗಿ ಅಗೆದ ಹೊಂಡಕ್ಕೆ ಬೈಕ್ ಬಿದ್ದು ಸವಾರನೊಬ್ಬ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ತನಿಖೆಗೆ ದೆಹಲಿ...

2025ರ ಬಿಹಾರ ವಿಧಾನಸಭಾ ಚುನಾವಣೆ ಪ್ರಶ್ನಿಸಿ ಜನ ಸುರಾಜ್ ಪಕ್ಷದಿಂದ ಅರ್ಜಿ: ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್ 

2025 ರ ಬಿಹಾರ ವಿಧಾನಸಭಾ ಚುನಾವಣೆಯ ನಡವಳಿಕೆ ಮತ್ತು ಫಲಿತಾಂಶವನ್ನು ಪ್ರಶ್ನಿಸಿ ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ರಾಜಕೀಯ...

ಗುಜರಾತ್‌| ನರ್ಸಿಂಗ್ ಓದುತ್ತಿದ್ದ ದಲಿತ ವಿದ್ಯಾರ್ಥಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ; ಪ್ರಿನ್ಸಿಪಲ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು

ಗುಜರಾತ್‌ನ ಖೇಡಾ ಜಿಲ್ಲೆಯ ನರ್ಸಿಂಗ್ ಕಾಲೇಜಿನ 19 ವರ್ಷದ ದಲಿತ ವಿದ್ಯಾರ್ಥಿಯೊಬ್ಬ, "ಪುರಾವೆಗಳಿಲ್ಲದೆ ಮೇಡಂ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ" ಎಂದು ಚಿತ್ರಹಿಂಸೆ ಉಲ್ಲೇಖಿಸುವ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾದ...

1.50 ಕೋಟಿ ರೂ. ಐಟಿ ದಂಡ ಪ್ರಶ್ನಿಸಿ ಟಿವಿಕೆ ಮುಖ್ಯಸ್ಥ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್ 

ಚೆನ್ನೈ: 2015–16ರ ಮೌಲ್ಯಮಾಪನ ವರ್ಷದಲ್ಲಿ ಆದಾಯ ಬಹಿರಂಗಪಡಿಸದಿದ್ದಕ್ಕಾಗಿ 1.50 ಕೋಟಿ ರೂ. ದಂಡ ವಿಧಿಸಿದ ಆದಾಯ ತೆರಿಗೆ ಇಲಾಖೆಯ ಆದೇಶವನ್ನು ಪ್ರಶ್ನಿಸಿ ನಟ-ರಾಜಕಾರಣಿ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಆದಾಯ...

ಮೇಘಾಲಯ ಗಣಿ ಸ್ಫೋಟ: ಸಾವನ್ನಪ್ಪಿದ ಮೂವರು ಅಸ್ಸಾಂ ಮೂಲದ ಕಾರ್ಮಿಕರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

ಗುವಾಹಟಿ: ಮೇಘಾಲಯದ ಪಕ್ಕದ ಕಲ್ಲಿದ್ದಲು ಗಣಿ ಸ್ಫೋಟದಲ್ಲಿ ಸಾವನ್ನಪ್ಪಿದ ಅಸ್ಸಾಂ ರಾಜ್ಯದ ಮೂವರು ಕಾರ್ಮಿಕರ ಕುಟುಂಬಗಳಿಗೆ  ಸರ್ಕಾರ ತಲಾ 5 ಲಕ್ಷ ರೂ.ಗಳ ಪರಿಹಾರ ಘೋಷಿಸಿದೆ.  ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ, ಸಂತ್ರಸ್ತರು...