Homeಕರ್ನಾಟಕ‘ಪಂಪ ಮಹಾಕವಿ ರಸ್ತೆ’ ಹೆಸರು ಬದಲಿಸಲ್ಲ: ಜನಾಕ್ರೋಶದ ಬಳಿಕ ಹಿಂದೆ ಸರಿದ ಕಸಾಪ

‘ಪಂಪ ಮಹಾಕವಿ ರಸ್ತೆ’ ಹೆಸರು ಬದಲಿಸಲ್ಲ: ಜನಾಕ್ರೋಶದ ಬಳಿಕ ಹಿಂದೆ ಸರಿದ ಕಸಾಪ

- Advertisement -
- Advertisement -

ಬೆಂಗಳೂರಿನ ಚಾಮರಾಜಪೇಟೆಯ ಪಂಪ ಮಹಾಕವಿ ರಸ್ತೆಯ ಹೆಸರನ್ನು ಬದಲಿಸಬೇಕೆಂಬ ಪ್ರಸ್ತಾಪವನ್ನು ಕನ್ನಡ ಸಾಹಿತ್ಯ ಪರಿಷತ್ ಬಿಬಿಎಂಪಿಗೆ ಬರೆದಿಲ್ಲ ಎಂದು ಕಸಾಪ ಅಧ್ಯಕ್ಷ ಮಹೇಶ್ ಜೋಶಿ ಸ್ಪಷ್ಟಪಡಿಸಿದ್ದಾರೆ.

“ಬದಲಾವಣೆ ಮಾಡಿ ಎನ್ನುವುದಾಗಲೀ, ಮತ್ತೆ ಯಾವುದೇ ಪ್ರಸ್ತಾವನೆಯನ್ನಾಗಲೀ ಮಹಾನಗರ ಪಾಲಿಕೆಗೆ ನಾವು ಕಳುಹಿಸುವುದಿಲ್ಲ” ಎಂದು ಅವರು ಮಾತನಾಡಿದ್ದಾರೆ.

ಕಸಾಪಕ್ಕೆ ಭೇಟಿ ನೀಡಿರುವ ಮುಖಂಡರ ಜೊತೆ ಮಾತನಾಡಿರುವ ಅವರು, “ಮಾಧ್ಯಮದ ಮೂಲಕ ಬಂದ ಅಭಿಪ್ರಾಯಗಳನ್ನು ನೋಡಿ ಬಂದಿದ್ದೀರಿ. ಆ ಅಭಿಪ್ರಾಯಗಳು ತಪ್ಪು ಭಾವನೆಗಳನ್ನು ಕಲ್ಪಿಸಿದೆ. ವಾಸ್ತವಿಕ ವಿಚಾರಗಳನ್ನು ನಿಮ್ಮ ಮುಂದೆ ಹೇಳಿದ್ದೇನೆ” ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಜೈನ ಸಾಹಿತಿಗಳು ಹಾಗೂ ಸಮುದಾಯದ ಬಗ್ಗೆ ಅಪಾರವಾದ ಗೌರವವಿದೆ. ಜೈನ ಸಮುದಾಯ ಶಾಂತಿ, ತಾಳ್ಮೆಗೆ ಹೆಸರಾಗಿದೆ” ಎಂದು ಅವರು ತಿಳಿಸಿದ್ದಾರೆ.

ಜೈನ ಸಮುದಾಯದ ಮುಖಂಡರಾದ ನಿರಂಜನ್‌ ಜೈನ್ ಕನ್ಯಾಡಿಯವರು ವಿಡಿಯೊವನ್ನು ಹಂಚಿಕೊಂಡಿದ್ದು, “ಕೊನೆಗೂ ಕಸಾಪ ಅಧ್ಯಕ್ಷರು‌ ಎಚ್ಚೆತ್ತುಕೊಂಡಿದ್ದಾರೆ. ಕನ್ನಡ ಪ್ರೇಮಿಗಳ ಪ್ರತಿಭಟನೆಗೆ ಉತ್ತರಿಸಿದ್ದಾರೆ. ಯಾವುದೇ ಕಾರಣಕ್ಕೂ ಪಂಪ ಮಹಾಕವಿ ರಸ್ತೆಯ ಹೆಸರು ಬದಲಾವಣೆ ಇಲ್ಲ ಎಂದಿದ್ದಾರೆ. ಪಂಪನ ಬಗ್ಗೆ ಅಪಾರ ಗೌರವವಿರುವುದಾಗಿ ಹೇಳಿಕೊಂಡಿದ್ದಾರೆ” ಎಂದು ಪೋಸ್ಟ್ ಮಾಡಿದ್ದಾರೆ.

“ನನ್ನ ಸಹಿತ ಅನೇಕರು ಸಾಮಾಜಿಕ ಜಾಲತಾಣಗಳ ಮಾಧ್ಯಮದ ಮೂಲಕ ಲೇಖನ ಬರಹಗಳ ಮೂಲಕ ಪ್ರತಿರೋಧವನ್ನು ವ್ಯಕ್ತಪಡಿಸಿದ್ದೆವು. ನಿನ್ನೆ ಮತ್ತು ಇವತ್ತು ನಾನು ಕಸಾಪ ಅಧ್ಯಕ್ಷರಿಗೆ ದೂರವಾಣಿ ಮೂಲಕ ಮಾತನಾಡಿದ್ದೆ. ಆಗಲೂ ಸಮಾಧಾನದಿಂದ ಉತ್ತರಿಸಿದ್ದರು. ಸ್ಪಷ್ಟೀಕರಣ ಕೊಡುವುದಾಗಿ ಹೇಳಿದ್ದರು. ಇವತ್ತು ಕರ್ನಾಟಕ ಜೈನ್ ಅಸೋಸಿಯೇಷನ್ ಪದಾಧಿಕಾರಿಗಳು ಪ್ರತಿಭಟನಾ ಪತ್ರವನ್ನು ಒಪ್ಪಿಸಿದಾಗ ಸಮಚಿತ್ತದಿಂದ ವ್ಯವಹರಿಸಿ ಸಮಾಧಾನದ ಮೂಲಕ ವ್ಯವಹರಿಸಿದ್ದಾರೆ” ಎಂದು ಮಾಹಿತಿ ನೀಡಿದ್ದಾರೆ.

“ಯಾವುದೇ ಕಾರಣಕ್ಕೂ ರಾಜಕೀಯದ ಒತ್ತಡಕ್ಕೆ ಮತ್ತು ಜಾತಿ ರಾಜಕಾರಣಕ್ಕೆ ಬಲಿಯಾಗದೇ ಕನ್ನಡದ ಆದಿ ಕವಿ ಪಂಪನ ಬಗ್ಗೆ ಒಲುಮೆಯಿರಲಿ, ಅಭಿಮಾನವಿರಲಿ” ಎಂದು ಅವರು ಕಸಾಪ ಅಧ್ಯಕ್ಷರಿಗೆ ಕಿವಿಮಾತು ಹೇಳಿದ್ದಾರೆ.

 

ಚಾಮರಾಜಪೇಟೆಯ ಮಿಂಟೋ ಆಸ್ಪತ್ರೆ ಮತ್ತು ಮಕ್ಕಳ ಕೂಟ ಪಾರ್ಕ್ ನಡುವಿನ ರಸ್ತೆಯನ್ನು ಕನ್ನಡ ಸಾಹಿತ್ಯ ಪರಿಷತ್ ರಸ್ತೆ ಎಂದು ಮರುನಾಮಕರಣ ಮಾಡಲು ಕಸಾಪ ಮುಂದಾಗಿತ್ತು.

ಈ ರಸ್ತೆಗೆ ಪ್ರಸ್ತುತ ಪಂಪ ಮಹಾಕವಿ ಎಂದು ಹೆಸರಿಡಲಾಗಿದೆ. ಇಲ್ಲಿನ ಅರ್ಧ ಕಿ.ಮೀ.ಯಷ್ಟು ರಸ್ತೆಯನ್ನು ಕನ್ನಡ ಪರಿಮಳದಿಂದ, ಕನ್ನಡಮಯದಿಂದ ತುಂಬಬೇಕು ಎಂದು ಕಸಾಪ ಅಧ್ಯಕ್ಷರು ಹೇಳಿದ್ದರು.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ್ದ ಮಹೇಶ್ ಜೋಶಿಯವರು, “ನ್ಯಾಷನಲ್‌ ಕಾಲೇಜಿನಿಂದ ಆರಂಭವಾಗಿ ಮಿಂಟೋ ಆಸ್ಪತ್ರೆಯವರೆಗೆ ಪಂಪ ಮಹಾಕವಿ ರಸ್ತೆ ಇದೆ. ನ್ಯಾಷನಲ್ ಕಾಲೇಜಿನಿಂದ ಮಕ್ಕಳ ಕೂಟದವರೆಗೆ ಪಂಪ ಮಹಾಕವಿ ರಸ್ತೆ ಎಂದೇ ಇರುತ್ತದೆ. ಅದರ ಮುಂದಿನ ರಸ್ತೆಯನ್ನು ಕನ್ನಡ ಸಾಹಿತ್ಯ ಪರಿಷತ್‌ ರಸ್ತೆ ಎಂದು ಇಡಬೇಕೆಂದು ಯೋಚಿಸಿದ್ದೇವೆ” ಎಂದಿದ್ದರು.

ಪಂಪನ ಹೆಸರಲ್ಲಿರುವ ರಸ್ತೆಯಿಂದ ಕಸಾಪಕ್ಕೆ ಆಗುವ ನಷ್ಟವೇನು ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದ ಅವರು, “ಕನ್ನಡ ಸಾಹಿತ್ಯ ಪರಿಷತ್‌ ಕೂಡ ಕನ್ನಡಕ್ಕಾಗಿಯೇ ದುಡಿದಿದೆ. ಮೈಸೂರು ಒಡೆಯರಿಂದ ಸ್ಥಾಪನೆಯಾಗಿರುವ ಸಂಸ್ಥೆ ಕಸಾಪ. ನಮ್ಮ ಎದುರಿನ ರಸ್ತೆಗೆ ನಮ್ಮತನ ಬೇಕಾಲ್ಲವೇ? ಕಸಾಪ ಎಂಬ ನಮ್ಮತನ ಬೇಡವೆ? ಪಂಪ ಎಂಬ ಹೆಸರನ್ನು ನಾವು ಬದಲಿಸುತ್ತಿಲ್ಲ. ಪಂಪ ರಸ್ತೆಯೂ ಇರುತ್ತದೆ. ಕನ್ನಡ ಸಾಹಿತ್ಯ ಪರಿಷತ್ ರಸ್ತೆಯೂ ಇರುತ್ತದೆ. ಹೀಗಾಗಿ ಈ ರಸ್ತೆಗೆ ಮತ್ತಷ್ಟು ಮೆರಗು ಬರುತ್ತದೆ” ಎಂದು ಅಭಿಪ್ರಾಯಪಟ್ಟಿದ್ದರು.

ರಸ್ತೆಯ ಹೆಸರು ಬದಲಿಸುವ ಪ್ರಸ್ತಾವನೆಗೆ ಅನೇಕ ಸಂಘಸಂಸ್ಥೆಗಳು, ಸಾಹಿತಿಗಳು ಹಾಗೂ ಕನ್ನಡ ನಾಡಿನ ಜನತೆ ವಿರೋಧ ವ್ಯಕ್ತಪಡಿಸಿದ್ದರು.

ಕರವೇ ಅಧ್ಯಕ್ಷರಾದ ಟಿ.ಎ.ನಾರಾಯಣಗೌಡ ಅವರು ಪತ್ರ ಬರೆದು, “ಕನ್ನಡದ ಆದಿಕವಿ ಪಂಪನ ರಸ್ತೆಯ ಹೆಸರನ್ನು ಕನ್ನಡಿಗರ ಪ್ರಾತಿನಿಧಿಕ ಸಂಘಟನೆ ಎಂದು ಹೇಳಿಕೊಳ್ಳುವ ಕನ್ನಡ ಸಾಹಿತ್ಯ ಪರಿಷತ್ತೇ ಬದಲಿಸಲು ಹೊರಟಿರುವುದು ವಿಲಕ್ಷಣವಾದ ಘಟನೆಯಾಗಿದ್ದು, ಪರಿಷತ್ತು ತನ್ನ ಮಾನವನ್ನು ತಾನೇ ಹರಾಜು ಹಾಕಿಕೊಂಡಂತಾಗಿದೆ” ಎಂದಿದ್ದರು.

ಇದನ್ನೂ ಓದಿರಿ: ಕಸಾಪ ಸದಸ್ಯತ್ವ ಮತ್ತು ಅನಕ್ಷರಸ್ಥತೆ; ಅಕ್ಷರಜ್ಞಾನ, ಸಾಹಿತ್ಯ, ಕಲೆ – ಒಂದು ವಿವೇಚನೆ

“ಹತ್ತನೇ ಶತಮಾನದಲ್ಲಿ ಬದುಕಿದ ಪಂಪ ಮಹಾಕವಿ ಇಡೀ ಕನ್ನಡ ಸಾಹಿತ್ಯ ಚರಿತ್ರೆಗೆ ಮುನ್ನುಡಿಯನ್ನು ಬರೆದವರು. ಭೂಮಿ, ಸೂರ್ಯ, ಚಂದ್ರರು ಇರುವವರೆಗೆ ಅವರ ಹೆಸರು ಅಮರವಾಗಿರುತ್ತದೆ. ಸಾಹಿತ್ಯ ಪರಿಷತ್ತು ಇಂಥ‌ ದುಸ್ಸಾಹಸಕ್ಕೆ ಇಳಿದಿದ್ದು ಯಾಕೆ ಎಂಬುದೇ ಅರ್ಥವಾಗುತ್ತಿಲ್ಲ” ಎಂದು ತಿಳಿಸಿದ್ದರು.

“ಪಂಪ ಮಹಾಕವಿ ರಸ್ತೆಯ ಒಂದು ಭಾಗಕ್ಕೆ ಮಾತ್ರ ಕನ್ನಡ ಸಾಹಿತ್ಯ ಪರಿಷತ್ ರಸ್ತೆ ಎಂದು ಹೆಸರಿಡುವ ಪ್ರಸ್ತಾವನೆ ಸಲ್ಲಿಸಿರುವುದಾಗಿ ಅಧ್ಯಕ್ಷರಾದ ಮಹೇಶ್ ಜೋಷಿ ಹೇಳಿರುವುದನ್ನು ಗಮನಿಸಿದೆ. ಪಂಪನ ಹೆಸರಿನ ರಸ್ತೆಯ ಒಂದು ಮೀಟರ್ ರಸ್ತೆಯ ಹೆಸರನ್ನೂ ಬದಲಿಸುವ ಅವಶ್ಯಕತೆ ಇಲ್ಲ ಎಂಬುದು ಕರವೇ ನಿಲುವಾಗಿರುತ್ತದೆ. ಒಂದು ವೇಳೆ ಪರಿಷತ್ತು ರಸ್ತೆಯ ಹೆಸರನ್ನು ಬದಲಿಸಲು ಹಟ ಹಿಡಿದಲ್ಲಿ, ಕರ್ನಾಟಕ ರಕ್ಷಣಾ ವೇದಿಕೆ ತೀವ್ರವಾಗಿ ಪ್ರತಿಭಟಿಸಬೇಕಾಗುತ್ತದೆ. ಕಸಾಪ ವಿರುದ್ಧವೇ ಹೋರಾಟ ನಡೆಸಲು ನಾವು ಹಿಂಜರಿಯುವುದಿಲ್ಲ” ಎಂದು ಎಚ್ಚರಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...