Homeಕರ್ನಾಟಕ‘ಪಂಪ ಮಹಾಕವಿ ರಸ್ತೆ’ ಹೆಸರು ಬದಲಿಸಲ್ಲ: ಜನಾಕ್ರೋಶದ ಬಳಿಕ ಹಿಂದೆ ಸರಿದ ಕಸಾಪ

‘ಪಂಪ ಮಹಾಕವಿ ರಸ್ತೆ’ ಹೆಸರು ಬದಲಿಸಲ್ಲ: ಜನಾಕ್ರೋಶದ ಬಳಿಕ ಹಿಂದೆ ಸರಿದ ಕಸಾಪ

- Advertisement -
- Advertisement -

ಬೆಂಗಳೂರಿನ ಚಾಮರಾಜಪೇಟೆಯ ಪಂಪ ಮಹಾಕವಿ ರಸ್ತೆಯ ಹೆಸರನ್ನು ಬದಲಿಸಬೇಕೆಂಬ ಪ್ರಸ್ತಾಪವನ್ನು ಕನ್ನಡ ಸಾಹಿತ್ಯ ಪರಿಷತ್ ಬಿಬಿಎಂಪಿಗೆ ಬರೆದಿಲ್ಲ ಎಂದು ಕಸಾಪ ಅಧ್ಯಕ್ಷ ಮಹೇಶ್ ಜೋಶಿ ಸ್ಪಷ್ಟಪಡಿಸಿದ್ದಾರೆ.

“ಬದಲಾವಣೆ ಮಾಡಿ ಎನ್ನುವುದಾಗಲೀ, ಮತ್ತೆ ಯಾವುದೇ ಪ್ರಸ್ತಾವನೆಯನ್ನಾಗಲೀ ಮಹಾನಗರ ಪಾಲಿಕೆಗೆ ನಾವು ಕಳುಹಿಸುವುದಿಲ್ಲ” ಎಂದು ಅವರು ಮಾತನಾಡಿದ್ದಾರೆ.

ಕಸಾಪಕ್ಕೆ ಭೇಟಿ ನೀಡಿರುವ ಮುಖಂಡರ ಜೊತೆ ಮಾತನಾಡಿರುವ ಅವರು, “ಮಾಧ್ಯಮದ ಮೂಲಕ ಬಂದ ಅಭಿಪ್ರಾಯಗಳನ್ನು ನೋಡಿ ಬಂದಿದ್ದೀರಿ. ಆ ಅಭಿಪ್ರಾಯಗಳು ತಪ್ಪು ಭಾವನೆಗಳನ್ನು ಕಲ್ಪಿಸಿದೆ. ವಾಸ್ತವಿಕ ವಿಚಾರಗಳನ್ನು ನಿಮ್ಮ ಮುಂದೆ ಹೇಳಿದ್ದೇನೆ” ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಜೈನ ಸಾಹಿತಿಗಳು ಹಾಗೂ ಸಮುದಾಯದ ಬಗ್ಗೆ ಅಪಾರವಾದ ಗೌರವವಿದೆ. ಜೈನ ಸಮುದಾಯ ಶಾಂತಿ, ತಾಳ್ಮೆಗೆ ಹೆಸರಾಗಿದೆ” ಎಂದು ಅವರು ತಿಳಿಸಿದ್ದಾರೆ.

ಜೈನ ಸಮುದಾಯದ ಮುಖಂಡರಾದ ನಿರಂಜನ್‌ ಜೈನ್ ಕನ್ಯಾಡಿಯವರು ವಿಡಿಯೊವನ್ನು ಹಂಚಿಕೊಂಡಿದ್ದು, “ಕೊನೆಗೂ ಕಸಾಪ ಅಧ್ಯಕ್ಷರು‌ ಎಚ್ಚೆತ್ತುಕೊಂಡಿದ್ದಾರೆ. ಕನ್ನಡ ಪ್ರೇಮಿಗಳ ಪ್ರತಿಭಟನೆಗೆ ಉತ್ತರಿಸಿದ್ದಾರೆ. ಯಾವುದೇ ಕಾರಣಕ್ಕೂ ಪಂಪ ಮಹಾಕವಿ ರಸ್ತೆಯ ಹೆಸರು ಬದಲಾವಣೆ ಇಲ್ಲ ಎಂದಿದ್ದಾರೆ. ಪಂಪನ ಬಗ್ಗೆ ಅಪಾರ ಗೌರವವಿರುವುದಾಗಿ ಹೇಳಿಕೊಂಡಿದ್ದಾರೆ” ಎಂದು ಪೋಸ್ಟ್ ಮಾಡಿದ್ದಾರೆ.

“ನನ್ನ ಸಹಿತ ಅನೇಕರು ಸಾಮಾಜಿಕ ಜಾಲತಾಣಗಳ ಮಾಧ್ಯಮದ ಮೂಲಕ ಲೇಖನ ಬರಹಗಳ ಮೂಲಕ ಪ್ರತಿರೋಧವನ್ನು ವ್ಯಕ್ತಪಡಿಸಿದ್ದೆವು. ನಿನ್ನೆ ಮತ್ತು ಇವತ್ತು ನಾನು ಕಸಾಪ ಅಧ್ಯಕ್ಷರಿಗೆ ದೂರವಾಣಿ ಮೂಲಕ ಮಾತನಾಡಿದ್ದೆ. ಆಗಲೂ ಸಮಾಧಾನದಿಂದ ಉತ್ತರಿಸಿದ್ದರು. ಸ್ಪಷ್ಟೀಕರಣ ಕೊಡುವುದಾಗಿ ಹೇಳಿದ್ದರು. ಇವತ್ತು ಕರ್ನಾಟಕ ಜೈನ್ ಅಸೋಸಿಯೇಷನ್ ಪದಾಧಿಕಾರಿಗಳು ಪ್ರತಿಭಟನಾ ಪತ್ರವನ್ನು ಒಪ್ಪಿಸಿದಾಗ ಸಮಚಿತ್ತದಿಂದ ವ್ಯವಹರಿಸಿ ಸಮಾಧಾನದ ಮೂಲಕ ವ್ಯವಹರಿಸಿದ್ದಾರೆ” ಎಂದು ಮಾಹಿತಿ ನೀಡಿದ್ದಾರೆ.

“ಯಾವುದೇ ಕಾರಣಕ್ಕೂ ರಾಜಕೀಯದ ಒತ್ತಡಕ್ಕೆ ಮತ್ತು ಜಾತಿ ರಾಜಕಾರಣಕ್ಕೆ ಬಲಿಯಾಗದೇ ಕನ್ನಡದ ಆದಿ ಕವಿ ಪಂಪನ ಬಗ್ಗೆ ಒಲುಮೆಯಿರಲಿ, ಅಭಿಮಾನವಿರಲಿ” ಎಂದು ಅವರು ಕಸಾಪ ಅಧ್ಯಕ್ಷರಿಗೆ ಕಿವಿಮಾತು ಹೇಳಿದ್ದಾರೆ.

 

ಚಾಮರಾಜಪೇಟೆಯ ಮಿಂಟೋ ಆಸ್ಪತ್ರೆ ಮತ್ತು ಮಕ್ಕಳ ಕೂಟ ಪಾರ್ಕ್ ನಡುವಿನ ರಸ್ತೆಯನ್ನು ಕನ್ನಡ ಸಾಹಿತ್ಯ ಪರಿಷತ್ ರಸ್ತೆ ಎಂದು ಮರುನಾಮಕರಣ ಮಾಡಲು ಕಸಾಪ ಮುಂದಾಗಿತ್ತು.

ಈ ರಸ್ತೆಗೆ ಪ್ರಸ್ತುತ ಪಂಪ ಮಹಾಕವಿ ಎಂದು ಹೆಸರಿಡಲಾಗಿದೆ. ಇಲ್ಲಿನ ಅರ್ಧ ಕಿ.ಮೀ.ಯಷ್ಟು ರಸ್ತೆಯನ್ನು ಕನ್ನಡ ಪರಿಮಳದಿಂದ, ಕನ್ನಡಮಯದಿಂದ ತುಂಬಬೇಕು ಎಂದು ಕಸಾಪ ಅಧ್ಯಕ್ಷರು ಹೇಳಿದ್ದರು.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ್ದ ಮಹೇಶ್ ಜೋಶಿಯವರು, “ನ್ಯಾಷನಲ್‌ ಕಾಲೇಜಿನಿಂದ ಆರಂಭವಾಗಿ ಮಿಂಟೋ ಆಸ್ಪತ್ರೆಯವರೆಗೆ ಪಂಪ ಮಹಾಕವಿ ರಸ್ತೆ ಇದೆ. ನ್ಯಾಷನಲ್ ಕಾಲೇಜಿನಿಂದ ಮಕ್ಕಳ ಕೂಟದವರೆಗೆ ಪಂಪ ಮಹಾಕವಿ ರಸ್ತೆ ಎಂದೇ ಇರುತ್ತದೆ. ಅದರ ಮುಂದಿನ ರಸ್ತೆಯನ್ನು ಕನ್ನಡ ಸಾಹಿತ್ಯ ಪರಿಷತ್‌ ರಸ್ತೆ ಎಂದು ಇಡಬೇಕೆಂದು ಯೋಚಿಸಿದ್ದೇವೆ” ಎಂದಿದ್ದರು.

ಪಂಪನ ಹೆಸರಲ್ಲಿರುವ ರಸ್ತೆಯಿಂದ ಕಸಾಪಕ್ಕೆ ಆಗುವ ನಷ್ಟವೇನು ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದ ಅವರು, “ಕನ್ನಡ ಸಾಹಿತ್ಯ ಪರಿಷತ್‌ ಕೂಡ ಕನ್ನಡಕ್ಕಾಗಿಯೇ ದುಡಿದಿದೆ. ಮೈಸೂರು ಒಡೆಯರಿಂದ ಸ್ಥಾಪನೆಯಾಗಿರುವ ಸಂಸ್ಥೆ ಕಸಾಪ. ನಮ್ಮ ಎದುರಿನ ರಸ್ತೆಗೆ ನಮ್ಮತನ ಬೇಕಾಲ್ಲವೇ? ಕಸಾಪ ಎಂಬ ನಮ್ಮತನ ಬೇಡವೆ? ಪಂಪ ಎಂಬ ಹೆಸರನ್ನು ನಾವು ಬದಲಿಸುತ್ತಿಲ್ಲ. ಪಂಪ ರಸ್ತೆಯೂ ಇರುತ್ತದೆ. ಕನ್ನಡ ಸಾಹಿತ್ಯ ಪರಿಷತ್ ರಸ್ತೆಯೂ ಇರುತ್ತದೆ. ಹೀಗಾಗಿ ಈ ರಸ್ತೆಗೆ ಮತ್ತಷ್ಟು ಮೆರಗು ಬರುತ್ತದೆ” ಎಂದು ಅಭಿಪ್ರಾಯಪಟ್ಟಿದ್ದರು.

ರಸ್ತೆಯ ಹೆಸರು ಬದಲಿಸುವ ಪ್ರಸ್ತಾವನೆಗೆ ಅನೇಕ ಸಂಘಸಂಸ್ಥೆಗಳು, ಸಾಹಿತಿಗಳು ಹಾಗೂ ಕನ್ನಡ ನಾಡಿನ ಜನತೆ ವಿರೋಧ ವ್ಯಕ್ತಪಡಿಸಿದ್ದರು.

ಕರವೇ ಅಧ್ಯಕ್ಷರಾದ ಟಿ.ಎ.ನಾರಾಯಣಗೌಡ ಅವರು ಪತ್ರ ಬರೆದು, “ಕನ್ನಡದ ಆದಿಕವಿ ಪಂಪನ ರಸ್ತೆಯ ಹೆಸರನ್ನು ಕನ್ನಡಿಗರ ಪ್ರಾತಿನಿಧಿಕ ಸಂಘಟನೆ ಎಂದು ಹೇಳಿಕೊಳ್ಳುವ ಕನ್ನಡ ಸಾಹಿತ್ಯ ಪರಿಷತ್ತೇ ಬದಲಿಸಲು ಹೊರಟಿರುವುದು ವಿಲಕ್ಷಣವಾದ ಘಟನೆಯಾಗಿದ್ದು, ಪರಿಷತ್ತು ತನ್ನ ಮಾನವನ್ನು ತಾನೇ ಹರಾಜು ಹಾಕಿಕೊಂಡಂತಾಗಿದೆ” ಎಂದಿದ್ದರು.

ಇದನ್ನೂ ಓದಿರಿ: ಕಸಾಪ ಸದಸ್ಯತ್ವ ಮತ್ತು ಅನಕ್ಷರಸ್ಥತೆ; ಅಕ್ಷರಜ್ಞಾನ, ಸಾಹಿತ್ಯ, ಕಲೆ – ಒಂದು ವಿವೇಚನೆ

“ಹತ್ತನೇ ಶತಮಾನದಲ್ಲಿ ಬದುಕಿದ ಪಂಪ ಮಹಾಕವಿ ಇಡೀ ಕನ್ನಡ ಸಾಹಿತ್ಯ ಚರಿತ್ರೆಗೆ ಮುನ್ನುಡಿಯನ್ನು ಬರೆದವರು. ಭೂಮಿ, ಸೂರ್ಯ, ಚಂದ್ರರು ಇರುವವರೆಗೆ ಅವರ ಹೆಸರು ಅಮರವಾಗಿರುತ್ತದೆ. ಸಾಹಿತ್ಯ ಪರಿಷತ್ತು ಇಂಥ‌ ದುಸ್ಸಾಹಸಕ್ಕೆ ಇಳಿದಿದ್ದು ಯಾಕೆ ಎಂಬುದೇ ಅರ್ಥವಾಗುತ್ತಿಲ್ಲ” ಎಂದು ತಿಳಿಸಿದ್ದರು.

“ಪಂಪ ಮಹಾಕವಿ ರಸ್ತೆಯ ಒಂದು ಭಾಗಕ್ಕೆ ಮಾತ್ರ ಕನ್ನಡ ಸಾಹಿತ್ಯ ಪರಿಷತ್ ರಸ್ತೆ ಎಂದು ಹೆಸರಿಡುವ ಪ್ರಸ್ತಾವನೆ ಸಲ್ಲಿಸಿರುವುದಾಗಿ ಅಧ್ಯಕ್ಷರಾದ ಮಹೇಶ್ ಜೋಷಿ ಹೇಳಿರುವುದನ್ನು ಗಮನಿಸಿದೆ. ಪಂಪನ ಹೆಸರಿನ ರಸ್ತೆಯ ಒಂದು ಮೀಟರ್ ರಸ್ತೆಯ ಹೆಸರನ್ನೂ ಬದಲಿಸುವ ಅವಶ್ಯಕತೆ ಇಲ್ಲ ಎಂಬುದು ಕರವೇ ನಿಲುವಾಗಿರುತ್ತದೆ. ಒಂದು ವೇಳೆ ಪರಿಷತ್ತು ರಸ್ತೆಯ ಹೆಸರನ್ನು ಬದಲಿಸಲು ಹಟ ಹಿಡಿದಲ್ಲಿ, ಕರ್ನಾಟಕ ರಕ್ಷಣಾ ವೇದಿಕೆ ತೀವ್ರವಾಗಿ ಪ್ರತಿಭಟಿಸಬೇಕಾಗುತ್ತದೆ. ಕಸಾಪ ವಿರುದ್ಧವೇ ಹೋರಾಟ ನಡೆಸಲು ನಾವು ಹಿಂಜರಿಯುವುದಿಲ್ಲ” ಎಂದು ಎಚ್ಚರಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...