Homeಕರ್ನಾಟಕ‘ಪಂಪ ಮಹಾಕವಿ ರಸ್ತೆ’ ಹೆಸರು ಬದಲಿಸಲ್ಲ: ಜನಾಕ್ರೋಶದ ಬಳಿಕ ಹಿಂದೆ ಸರಿದ ಕಸಾಪ

‘ಪಂಪ ಮಹಾಕವಿ ರಸ್ತೆ’ ಹೆಸರು ಬದಲಿಸಲ್ಲ: ಜನಾಕ್ರೋಶದ ಬಳಿಕ ಹಿಂದೆ ಸರಿದ ಕಸಾಪ

- Advertisement -
- Advertisement -

ಬೆಂಗಳೂರಿನ ಚಾಮರಾಜಪೇಟೆಯ ಪಂಪ ಮಹಾಕವಿ ರಸ್ತೆಯ ಹೆಸರನ್ನು ಬದಲಿಸಬೇಕೆಂಬ ಪ್ರಸ್ತಾಪವನ್ನು ಕನ್ನಡ ಸಾಹಿತ್ಯ ಪರಿಷತ್ ಬಿಬಿಎಂಪಿಗೆ ಬರೆದಿಲ್ಲ ಎಂದು ಕಸಾಪ ಅಧ್ಯಕ್ಷ ಮಹೇಶ್ ಜೋಶಿ ಸ್ಪಷ್ಟಪಡಿಸಿದ್ದಾರೆ.

“ಬದಲಾವಣೆ ಮಾಡಿ ಎನ್ನುವುದಾಗಲೀ, ಮತ್ತೆ ಯಾವುದೇ ಪ್ರಸ್ತಾವನೆಯನ್ನಾಗಲೀ ಮಹಾನಗರ ಪಾಲಿಕೆಗೆ ನಾವು ಕಳುಹಿಸುವುದಿಲ್ಲ” ಎಂದು ಅವರು ಮಾತನಾಡಿದ್ದಾರೆ.

ಕಸಾಪಕ್ಕೆ ಭೇಟಿ ನೀಡಿರುವ ಮುಖಂಡರ ಜೊತೆ ಮಾತನಾಡಿರುವ ಅವರು, “ಮಾಧ್ಯಮದ ಮೂಲಕ ಬಂದ ಅಭಿಪ್ರಾಯಗಳನ್ನು ನೋಡಿ ಬಂದಿದ್ದೀರಿ. ಆ ಅಭಿಪ್ರಾಯಗಳು ತಪ್ಪು ಭಾವನೆಗಳನ್ನು ಕಲ್ಪಿಸಿದೆ. ವಾಸ್ತವಿಕ ವಿಚಾರಗಳನ್ನು ನಿಮ್ಮ ಮುಂದೆ ಹೇಳಿದ್ದೇನೆ” ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಜೈನ ಸಾಹಿತಿಗಳು ಹಾಗೂ ಸಮುದಾಯದ ಬಗ್ಗೆ ಅಪಾರವಾದ ಗೌರವವಿದೆ. ಜೈನ ಸಮುದಾಯ ಶಾಂತಿ, ತಾಳ್ಮೆಗೆ ಹೆಸರಾಗಿದೆ” ಎಂದು ಅವರು ತಿಳಿಸಿದ್ದಾರೆ.

ಜೈನ ಸಮುದಾಯದ ಮುಖಂಡರಾದ ನಿರಂಜನ್‌ ಜೈನ್ ಕನ್ಯಾಡಿಯವರು ವಿಡಿಯೊವನ್ನು ಹಂಚಿಕೊಂಡಿದ್ದು, “ಕೊನೆಗೂ ಕಸಾಪ ಅಧ್ಯಕ್ಷರು‌ ಎಚ್ಚೆತ್ತುಕೊಂಡಿದ್ದಾರೆ. ಕನ್ನಡ ಪ್ರೇಮಿಗಳ ಪ್ರತಿಭಟನೆಗೆ ಉತ್ತರಿಸಿದ್ದಾರೆ. ಯಾವುದೇ ಕಾರಣಕ್ಕೂ ಪಂಪ ಮಹಾಕವಿ ರಸ್ತೆಯ ಹೆಸರು ಬದಲಾವಣೆ ಇಲ್ಲ ಎಂದಿದ್ದಾರೆ. ಪಂಪನ ಬಗ್ಗೆ ಅಪಾರ ಗೌರವವಿರುವುದಾಗಿ ಹೇಳಿಕೊಂಡಿದ್ದಾರೆ” ಎಂದು ಪೋಸ್ಟ್ ಮಾಡಿದ್ದಾರೆ.

“ನನ್ನ ಸಹಿತ ಅನೇಕರು ಸಾಮಾಜಿಕ ಜಾಲತಾಣಗಳ ಮಾಧ್ಯಮದ ಮೂಲಕ ಲೇಖನ ಬರಹಗಳ ಮೂಲಕ ಪ್ರತಿರೋಧವನ್ನು ವ್ಯಕ್ತಪಡಿಸಿದ್ದೆವು. ನಿನ್ನೆ ಮತ್ತು ಇವತ್ತು ನಾನು ಕಸಾಪ ಅಧ್ಯಕ್ಷರಿಗೆ ದೂರವಾಣಿ ಮೂಲಕ ಮಾತನಾಡಿದ್ದೆ. ಆಗಲೂ ಸಮಾಧಾನದಿಂದ ಉತ್ತರಿಸಿದ್ದರು. ಸ್ಪಷ್ಟೀಕರಣ ಕೊಡುವುದಾಗಿ ಹೇಳಿದ್ದರು. ಇವತ್ತು ಕರ್ನಾಟಕ ಜೈನ್ ಅಸೋಸಿಯೇಷನ್ ಪದಾಧಿಕಾರಿಗಳು ಪ್ರತಿಭಟನಾ ಪತ್ರವನ್ನು ಒಪ್ಪಿಸಿದಾಗ ಸಮಚಿತ್ತದಿಂದ ವ್ಯವಹರಿಸಿ ಸಮಾಧಾನದ ಮೂಲಕ ವ್ಯವಹರಿಸಿದ್ದಾರೆ” ಎಂದು ಮಾಹಿತಿ ನೀಡಿದ್ದಾರೆ.

“ಯಾವುದೇ ಕಾರಣಕ್ಕೂ ರಾಜಕೀಯದ ಒತ್ತಡಕ್ಕೆ ಮತ್ತು ಜಾತಿ ರಾಜಕಾರಣಕ್ಕೆ ಬಲಿಯಾಗದೇ ಕನ್ನಡದ ಆದಿ ಕವಿ ಪಂಪನ ಬಗ್ಗೆ ಒಲುಮೆಯಿರಲಿ, ಅಭಿಮಾನವಿರಲಿ” ಎಂದು ಅವರು ಕಸಾಪ ಅಧ್ಯಕ್ಷರಿಗೆ ಕಿವಿಮಾತು ಹೇಳಿದ್ದಾರೆ.

 

ಚಾಮರಾಜಪೇಟೆಯ ಮಿಂಟೋ ಆಸ್ಪತ್ರೆ ಮತ್ತು ಮಕ್ಕಳ ಕೂಟ ಪಾರ್ಕ್ ನಡುವಿನ ರಸ್ತೆಯನ್ನು ಕನ್ನಡ ಸಾಹಿತ್ಯ ಪರಿಷತ್ ರಸ್ತೆ ಎಂದು ಮರುನಾಮಕರಣ ಮಾಡಲು ಕಸಾಪ ಮುಂದಾಗಿತ್ತು.

ಈ ರಸ್ತೆಗೆ ಪ್ರಸ್ತುತ ಪಂಪ ಮಹಾಕವಿ ಎಂದು ಹೆಸರಿಡಲಾಗಿದೆ. ಇಲ್ಲಿನ ಅರ್ಧ ಕಿ.ಮೀ.ಯಷ್ಟು ರಸ್ತೆಯನ್ನು ಕನ್ನಡ ಪರಿಮಳದಿಂದ, ಕನ್ನಡಮಯದಿಂದ ತುಂಬಬೇಕು ಎಂದು ಕಸಾಪ ಅಧ್ಯಕ್ಷರು ಹೇಳಿದ್ದರು.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ್ದ ಮಹೇಶ್ ಜೋಶಿಯವರು, “ನ್ಯಾಷನಲ್‌ ಕಾಲೇಜಿನಿಂದ ಆರಂಭವಾಗಿ ಮಿಂಟೋ ಆಸ್ಪತ್ರೆಯವರೆಗೆ ಪಂಪ ಮಹಾಕವಿ ರಸ್ತೆ ಇದೆ. ನ್ಯಾಷನಲ್ ಕಾಲೇಜಿನಿಂದ ಮಕ್ಕಳ ಕೂಟದವರೆಗೆ ಪಂಪ ಮಹಾಕವಿ ರಸ್ತೆ ಎಂದೇ ಇರುತ್ತದೆ. ಅದರ ಮುಂದಿನ ರಸ್ತೆಯನ್ನು ಕನ್ನಡ ಸಾಹಿತ್ಯ ಪರಿಷತ್‌ ರಸ್ತೆ ಎಂದು ಇಡಬೇಕೆಂದು ಯೋಚಿಸಿದ್ದೇವೆ” ಎಂದಿದ್ದರು.

ಪಂಪನ ಹೆಸರಲ್ಲಿರುವ ರಸ್ತೆಯಿಂದ ಕಸಾಪಕ್ಕೆ ಆಗುವ ನಷ್ಟವೇನು ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದ ಅವರು, “ಕನ್ನಡ ಸಾಹಿತ್ಯ ಪರಿಷತ್‌ ಕೂಡ ಕನ್ನಡಕ್ಕಾಗಿಯೇ ದುಡಿದಿದೆ. ಮೈಸೂರು ಒಡೆಯರಿಂದ ಸ್ಥಾಪನೆಯಾಗಿರುವ ಸಂಸ್ಥೆ ಕಸಾಪ. ನಮ್ಮ ಎದುರಿನ ರಸ್ತೆಗೆ ನಮ್ಮತನ ಬೇಕಾಲ್ಲವೇ? ಕಸಾಪ ಎಂಬ ನಮ್ಮತನ ಬೇಡವೆ? ಪಂಪ ಎಂಬ ಹೆಸರನ್ನು ನಾವು ಬದಲಿಸುತ್ತಿಲ್ಲ. ಪಂಪ ರಸ್ತೆಯೂ ಇರುತ್ತದೆ. ಕನ್ನಡ ಸಾಹಿತ್ಯ ಪರಿಷತ್ ರಸ್ತೆಯೂ ಇರುತ್ತದೆ. ಹೀಗಾಗಿ ಈ ರಸ್ತೆಗೆ ಮತ್ತಷ್ಟು ಮೆರಗು ಬರುತ್ತದೆ” ಎಂದು ಅಭಿಪ್ರಾಯಪಟ್ಟಿದ್ದರು.

ರಸ್ತೆಯ ಹೆಸರು ಬದಲಿಸುವ ಪ್ರಸ್ತಾವನೆಗೆ ಅನೇಕ ಸಂಘಸಂಸ್ಥೆಗಳು, ಸಾಹಿತಿಗಳು ಹಾಗೂ ಕನ್ನಡ ನಾಡಿನ ಜನತೆ ವಿರೋಧ ವ್ಯಕ್ತಪಡಿಸಿದ್ದರು.

ಕರವೇ ಅಧ್ಯಕ್ಷರಾದ ಟಿ.ಎ.ನಾರಾಯಣಗೌಡ ಅವರು ಪತ್ರ ಬರೆದು, “ಕನ್ನಡದ ಆದಿಕವಿ ಪಂಪನ ರಸ್ತೆಯ ಹೆಸರನ್ನು ಕನ್ನಡಿಗರ ಪ್ರಾತಿನಿಧಿಕ ಸಂಘಟನೆ ಎಂದು ಹೇಳಿಕೊಳ್ಳುವ ಕನ್ನಡ ಸಾಹಿತ್ಯ ಪರಿಷತ್ತೇ ಬದಲಿಸಲು ಹೊರಟಿರುವುದು ವಿಲಕ್ಷಣವಾದ ಘಟನೆಯಾಗಿದ್ದು, ಪರಿಷತ್ತು ತನ್ನ ಮಾನವನ್ನು ತಾನೇ ಹರಾಜು ಹಾಕಿಕೊಂಡಂತಾಗಿದೆ” ಎಂದಿದ್ದರು.

ಇದನ್ನೂ ಓದಿರಿ: ಕಸಾಪ ಸದಸ್ಯತ್ವ ಮತ್ತು ಅನಕ್ಷರಸ್ಥತೆ; ಅಕ್ಷರಜ್ಞಾನ, ಸಾಹಿತ್ಯ, ಕಲೆ – ಒಂದು ವಿವೇಚನೆ

“ಹತ್ತನೇ ಶತಮಾನದಲ್ಲಿ ಬದುಕಿದ ಪಂಪ ಮಹಾಕವಿ ಇಡೀ ಕನ್ನಡ ಸಾಹಿತ್ಯ ಚರಿತ್ರೆಗೆ ಮುನ್ನುಡಿಯನ್ನು ಬರೆದವರು. ಭೂಮಿ, ಸೂರ್ಯ, ಚಂದ್ರರು ಇರುವವರೆಗೆ ಅವರ ಹೆಸರು ಅಮರವಾಗಿರುತ್ತದೆ. ಸಾಹಿತ್ಯ ಪರಿಷತ್ತು ಇಂಥ‌ ದುಸ್ಸಾಹಸಕ್ಕೆ ಇಳಿದಿದ್ದು ಯಾಕೆ ಎಂಬುದೇ ಅರ್ಥವಾಗುತ್ತಿಲ್ಲ” ಎಂದು ತಿಳಿಸಿದ್ದರು.

“ಪಂಪ ಮಹಾಕವಿ ರಸ್ತೆಯ ಒಂದು ಭಾಗಕ್ಕೆ ಮಾತ್ರ ಕನ್ನಡ ಸಾಹಿತ್ಯ ಪರಿಷತ್ ರಸ್ತೆ ಎಂದು ಹೆಸರಿಡುವ ಪ್ರಸ್ತಾವನೆ ಸಲ್ಲಿಸಿರುವುದಾಗಿ ಅಧ್ಯಕ್ಷರಾದ ಮಹೇಶ್ ಜೋಷಿ ಹೇಳಿರುವುದನ್ನು ಗಮನಿಸಿದೆ. ಪಂಪನ ಹೆಸರಿನ ರಸ್ತೆಯ ಒಂದು ಮೀಟರ್ ರಸ್ತೆಯ ಹೆಸರನ್ನೂ ಬದಲಿಸುವ ಅವಶ್ಯಕತೆ ಇಲ್ಲ ಎಂಬುದು ಕರವೇ ನಿಲುವಾಗಿರುತ್ತದೆ. ಒಂದು ವೇಳೆ ಪರಿಷತ್ತು ರಸ್ತೆಯ ಹೆಸರನ್ನು ಬದಲಿಸಲು ಹಟ ಹಿಡಿದಲ್ಲಿ, ಕರ್ನಾಟಕ ರಕ್ಷಣಾ ವೇದಿಕೆ ತೀವ್ರವಾಗಿ ಪ್ರತಿಭಟಿಸಬೇಕಾಗುತ್ತದೆ. ಕಸಾಪ ವಿರುದ್ಧವೇ ಹೋರಾಟ ನಡೆಸಲು ನಾವು ಹಿಂಜರಿಯುವುದಿಲ್ಲ” ಎಂದು ಎಚ್ಚರಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...