Homeಕರ್ನಾಟಕಯಲಹಂಕ ಮೇಲ್ಸೇತುವೆಗೆ ಸಾವರ್ಕರ್‌ ಹೆಸರು: ಕನ್ನಡಿಗರನ್ನು ಬಂಧಿಸಿ ನಾಮಕರಣಕ್ಕೆ ಮುಂದಾದ ಸರ್ಕಾರ

ಯಲಹಂಕ ಮೇಲ್ಸೇತುವೆಗೆ ಸಾವರ್ಕರ್‌ ಹೆಸರು: ಕನ್ನಡಿಗರನ್ನು ಬಂಧಿಸಿ ನಾಮಕರಣಕ್ಕೆ ಮುಂದಾದ ಸರ್ಕಾರ

ಕರ್ನಾಟಕ ರಣಧೀರ ಪಡೆಯ ರಾಜ್ಯಾಧ್ಯಕ್ಷ ಬಿ ಹರೀಶ್‌ ಕುಮಾರ್‌ ಮತ್ತು ಬೆಂಗಳೂರು JDS ಯೂತ್‌ ವಿಂಗ್‌ ಅಧ್ಯಕ್ಷ ಪ್ರವೀಣ್ ಕುಮಾರ್‌ರನ್ನು ಸರ್ಕಾರ ಮುನ್ನೆಚ್ಚರಿಕೆಯ ಕ್ರಮವಾಗಿ ಬಂಧಿಸಿದೆ.

- Advertisement -
- Advertisement -

ವಿವಾದಿತ ವ್ಯಕ್ತಿ ವಿ.ಡಿ.ಸಾವರ್ಕರ್ ಹೆಸರನ್ನು ಯಲಹಂಕ ಮೇಲ್ಸೇತುವೆಗೆ ನಾಮಕರಣ ಮಾಡುವ ಕಾರ್ಯಕ್ರಮವನ್ನು ಇಂದು ಮಧ್ಯಾಹ್ನ 12:30 ಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಉಧ್ಘಾಟನೆ ಮಾಡಲಿದ್ದಾರೆ. ಅದರೆ ಮೇತ್ಸೇತುವೆಗೆ ಸಾವರ್ಕರ್‌ ಹೆಸರಿಡುವುದನ್ನು ವಿರೋಧಿಸಿದ ಹಲವು ಕನ್ನಡಿಗರನ್ನು ಬಂಧಿಸಿ ಕಾರ್ಯಕ್ರಮ ನಡೆಸುತ್ತಿರುವುದಕ್ಕೆ ವ್ಯಾಪಕ ವಿರೋಧ ಕೇಳಿಬಂದಿದೆ.

ಮೇ ತಿಂಗಳಲ್ಲೇ ಸೇತುವೆಗೆ ವಿವಾದಿತ ವ್ಯಕ್ತಿ ಸಾವರ್ಕರ್ ಹೆಸರನ್ನು ಇಡುವುದಾಗಿ ರಾಜ್ಯ ಸರ್ಕಾರ ಹೇಳಿತ್ತಾದರೂ, ಅದಕ್ಕೆ ಕರ್ನಾಟಕದ ಪ್ರಜ್ಞಾವಂತರು, ಕನ್ನಡಪರ ಹೋರಾಟಗಾರರು, ವಿರೋಧ ಪಕ್ಷಗಳು ಸೇರಿದಂತೆ ಹಲವಾರು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ವಿರೋಧಕ್ಕೆ ಮಣಿದ ಸರ್ಕಾರ ಸಾವರ್ಕರ್ ಹೆಸರು ತೆಗೆದು ಆಮಂತ್ರಣ ಪತ್ರಿಕೆಯಲ್ಲಿ ಕೇವಲ “ಮೇಲ್ಸುತುವೆ ಉದ್ಘಾಟನೆ” ಎಂದು ಮುದ್ರಣ ಮಾಡಿತ್ತು.

ಇದನ್ನೂ ಓದಿ: ಸಾವರ್ಕರ್‌ರನ್ನು ’ಮಾಜಿ ವೀರ ಸಾವರ್ಕರ್’ ಎಂದು ಕರೆಯಬಹುದು ಅಷ್ಟೇ

ಪ್ರಸ್ತುತ ಮೇಲ್ಸೇತುವೆಯನ್ನು ಇಂದು ಉದ್ಘಾಟಿಸುವುದಾಗಿ ರಾಜ್ಯ ಸರ್ಕಾರ ಪತ್ರಿಕೆಗಳಲ್ಲಿ ಜಾಹಿರಾತನ್ನು ನೀಡಿದ್ದು, ಮೇಲ್ಸೇತುವೆಯನ್ನು ’ವೀರ ಸಾವರ್ಕರ್‌ ಮೇಲ್ಸೇತುವೆ’ ಎಂದು ಕರೆದಿದೆ. ಈ ನಡುವೆ ಸಾವರ್ಕರ್‌ ಹೆಸರನ್ನು ನಾಮಕರಣ ಮಾಡುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ಕನ್ನಡ ಪರ ಹೋರಾಟಗಾರರನ್ನು ಬಂಧಿಸಿದೆ.

ಈ ಬಗ್ಗೆ ಜಾತ್ಯಾತೀತ ಜನತಾದಳ ಟ್ವಿಟ್ಟರ್‌ನಲ್ಲಿ ಮಾಹಿತಿ ನೀಡಿದ್ದು, “ಬೆಂಗಳೂರು JDS ಯೂತ್‌ ವಿಂಗ್‌
ಅಧ್ಯಕ್ಷ ಪ್ರವೀಣ್ ಕುಮಾರ್ ಅವರನ್ನು ಪ್ರತಿಭಟನೆಯ ಭಯದಿಂದ ಸರ್ಕಾರ ಬಂಧಿಸಿದ್ದು, ಯಲಹಂಕ ಮೇಲ್ಸೇತುವೆಗೆ ಮಹಾರಾಷ್ಟ್ರದ ಸಾವರ್ಕರ್ ಹೆಸರಿಡುವುದನ್ನು ವಿರೋಧಿಸಿ ಶಾಂತಿಯುತ ಪ್ರತಿಭಟನೆ ನಡೆಸಲು ಅವಕಾಶ ನೀಡದ ಸರ್ವಾಧಿಕಾರಿ ಧೋರಣೆಯಿಂದ ರಾಜ್ಯ ಸರ್ಕಾರ ನಡೆದುಕೊಳ್ಳುತ್ತಿದೆ. ಇದು ಜನವಿರೋಧಿ ಸರ್ಕಾರದ ಭಂಡ ನಡೆ” ಎಂದು ಹೇಳಿದೆ.

ಇದನ್ನೂ ಓದಿ: ಮೇಲ್ಸೇತುವೆಗೆ ಸಾವರ್ಕರ್‌ ಹೆಸರು : ಈ ಮಣ್ಣಿನ ಸ್ವಾತಂತ್ರ್ಯ ಹೋರಾಟಗಾರರಿಗೆ‌ ಮಾಡುವ ಅವಮಾನ.

ಇದನ್ನೂ ಓದಿ: ‘ಅತ್ಯುನ್ನತ ಭಾರತ ರತ್ನವನ್ನು ಸಾವರ್ಕರ್‌ಗೆ ಅಷ್ಟೇ ಯಾಕೆ, ಗೋಡ್ಸೆಗೂ ಕೊಟ್ಟಬಿಡಿ’..!

ಮೇಲ್ಸೇತುವೆಗೆ ವಿವಾದಿತ ವ್ಯಕ್ತಿ ಸಾವರ್ಕರ್‌ ಹೆಸರು ಇಡುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ ಹೋರಾಟ ನಡೆಸಿದ್ದ ಕರ್ನಾಟಕ ರಣಧೀರ ಪಡೆಯ ರಾಜ್ಯಾಧ್ಯಕ್ಷ ಬಿ ಹರೀಶ್‌ ಕುಮಾರ್‌ ಅವರನ್ನು ಬಂಧಿಸಿದ್ದಾರೆ ಎಂದು ಅವರು ತನ್ನ ಫೇಸ್‌ಬುಕ್‌ ನಲ್ಲಿ ಬರೆದುಕೊಂಡಿದ್ದಾರೆ.

ಯಲಹಂಕ ಮೇಲ್ಸೇತುವೆಗೆ ವಿಚಾರದಲ್ಲಿಬೆಳಗ್ಗೆ ನನ್ನ ಮನೆಯಲ್ಲಿಪೋಲೀಸರು ನನ್ನನ್ನು ಬಂಧಿಸಿದ್ದಾರೆ …

Posted by ಭೈರಪ್ಪ ಹರೀಶ್ ಕುಮಾರ್ on Monday, September 7, 2020

ಈ ನಡುವೆ ಸೇತುವೆಗೆ ಸಾವರ್ಕರ್ ಹೆಸರಿಡುವುದನ್ನು ಹಲವಾರು ಜನರು ವಿರೋಧಿಸಿದ್ದಾರೆ. ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯಾಧ್ಯಕ್ಷರಾದ ರವಿಕೃಷ್ಣಾ ರೆಡ್ಡಿಯವರು ಟ್ವೀಟ್ ಮಾಡಿದ್ದು, “ಯಲಹಂಕದ ಮೇಲ್ಸೇತುವೆಗೆ ಹೆಸರಿಡುವ ವಿಚಾರದಲ್ಲಿ ಕರ್ನಾಟಕದ ಜನತೆಯಿಂದ ಗಂಭೀರವಾದ, ಸಕಾರಣವಾದ ವಿರೋಧ ಇದ್ದರೂ  ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಸರ್ಕಾರ ಆ ಜನಾಭಿಪ್ರಾಯವನ್ನು ಕಡೆಗಣಿಸಿ ಮುಂದುವರೆಯುತ್ತಿರುವುದು ಅಕ್ಷಮ್ಯ. ಕನ್ನಡಿಗರ ಭಾವನೆಗಳಿಗೆ ಬೆಲೆ ನೀಡದ ಸರ್ಕಾರದ ನಡೆಯನ್ನು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಖಂಡಿಸುತ್ತದೆ. ಹೇರಿಕೆ ಸಲ್ಲದು. ಒಪ್ಪಿತ ಹೆಸರು ಇಡಿ” ಎಂದು ಆಗ್ರಹಿಸಿದ್ದಾರೆ.

ಜನಾಂದೋಲನ ಆಗುವವರೆಗೆ ಸಂಗೊಳ್ಳಿ ರಾಯಣ್ಣನವರ ಪ್ರತಿಮೆಯ ವಿಷಯದಲ್ಲಿ ಆಸಕ್ತಿ ತೋರದ ರಾಜ್ಯ ಬಿಜೆಪಿ ಸರ್ಕಾರ ಸರ್ಕಾರ, ಗಾಂಧಿ ಹತ್ಯಾ ಆರೋಪಿಯಾದ ಸಾವರ್ಕರ್ ಹೆಸರನ್ನು ಯಲಹಂಕ ಮೇಲು ಸೇತುವೆಗೆ ನಾಮಕರಣ ಮಾಡಲು ಹೊರಟಿರುವುದು ನಿಜಕ್ಕೂ ನಾಚಿಕೆಗೇಡಿನ ತನದ ಮತ್ತು ದೇಶದ್ರೋಹಿ ಕೆಲಸ ಎಂದು ಪ್ರತಿಪಕ್ಷ ಕಾಂಗ್ರೆಸ್ ಆರೋಪಿಸಿದೆ.


ಇದನ್ನೂ ಓದಿ: ಯಲಹಂಕ ಮೇಲ್ಸೇತುವೆಗೆ ಸಾವರ್ಕರ್ ಹೆಸರು ನಾಡಿಗೆ ಮಾಡಿದ ಅಪಮಾನ: ಎಚ್‌ಡಿಕೆ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...