Homeಕರ್ನಾಟಕಯಲಹಂಕ ಮೇಲ್ಸೇತುವೆಗೆ ಸಾವರ್ಕರ್‌ ಹೆಸರು: ಕನ್ನಡಿಗರನ್ನು ಬಂಧಿಸಿ ನಾಮಕರಣಕ್ಕೆ ಮುಂದಾದ ಸರ್ಕಾರ

ಯಲಹಂಕ ಮೇಲ್ಸೇತುವೆಗೆ ಸಾವರ್ಕರ್‌ ಹೆಸರು: ಕನ್ನಡಿಗರನ್ನು ಬಂಧಿಸಿ ನಾಮಕರಣಕ್ಕೆ ಮುಂದಾದ ಸರ್ಕಾರ

ಕರ್ನಾಟಕ ರಣಧೀರ ಪಡೆಯ ರಾಜ್ಯಾಧ್ಯಕ್ಷ ಬಿ ಹರೀಶ್‌ ಕುಮಾರ್‌ ಮತ್ತು ಬೆಂಗಳೂರು JDS ಯೂತ್‌ ವಿಂಗ್‌ ಅಧ್ಯಕ್ಷ ಪ್ರವೀಣ್ ಕುಮಾರ್‌ರನ್ನು ಸರ್ಕಾರ ಮುನ್ನೆಚ್ಚರಿಕೆಯ ಕ್ರಮವಾಗಿ ಬಂಧಿಸಿದೆ.

- Advertisement -
- Advertisement -

ವಿವಾದಿತ ವ್ಯಕ್ತಿ ವಿ.ಡಿ.ಸಾವರ್ಕರ್ ಹೆಸರನ್ನು ಯಲಹಂಕ ಮೇಲ್ಸೇತುವೆಗೆ ನಾಮಕರಣ ಮಾಡುವ ಕಾರ್ಯಕ್ರಮವನ್ನು ಇಂದು ಮಧ್ಯಾಹ್ನ 12:30 ಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಉಧ್ಘಾಟನೆ ಮಾಡಲಿದ್ದಾರೆ. ಅದರೆ ಮೇತ್ಸೇತುವೆಗೆ ಸಾವರ್ಕರ್‌ ಹೆಸರಿಡುವುದನ್ನು ವಿರೋಧಿಸಿದ ಹಲವು ಕನ್ನಡಿಗರನ್ನು ಬಂಧಿಸಿ ಕಾರ್ಯಕ್ರಮ ನಡೆಸುತ್ತಿರುವುದಕ್ಕೆ ವ್ಯಾಪಕ ವಿರೋಧ ಕೇಳಿಬಂದಿದೆ.

ಮೇ ತಿಂಗಳಲ್ಲೇ ಸೇತುವೆಗೆ ವಿವಾದಿತ ವ್ಯಕ್ತಿ ಸಾವರ್ಕರ್ ಹೆಸರನ್ನು ಇಡುವುದಾಗಿ ರಾಜ್ಯ ಸರ್ಕಾರ ಹೇಳಿತ್ತಾದರೂ, ಅದಕ್ಕೆ ಕರ್ನಾಟಕದ ಪ್ರಜ್ಞಾವಂತರು, ಕನ್ನಡಪರ ಹೋರಾಟಗಾರರು, ವಿರೋಧ ಪಕ್ಷಗಳು ಸೇರಿದಂತೆ ಹಲವಾರು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ವಿರೋಧಕ್ಕೆ ಮಣಿದ ಸರ್ಕಾರ ಸಾವರ್ಕರ್ ಹೆಸರು ತೆಗೆದು ಆಮಂತ್ರಣ ಪತ್ರಿಕೆಯಲ್ಲಿ ಕೇವಲ “ಮೇಲ್ಸುತುವೆ ಉದ್ಘಾಟನೆ” ಎಂದು ಮುದ್ರಣ ಮಾಡಿತ್ತು.

ಇದನ್ನೂ ಓದಿ: ಸಾವರ್ಕರ್‌ರನ್ನು ’ಮಾಜಿ ವೀರ ಸಾವರ್ಕರ್’ ಎಂದು ಕರೆಯಬಹುದು ಅಷ್ಟೇ

ಪ್ರಸ್ತುತ ಮೇಲ್ಸೇತುವೆಯನ್ನು ಇಂದು ಉದ್ಘಾಟಿಸುವುದಾಗಿ ರಾಜ್ಯ ಸರ್ಕಾರ ಪತ್ರಿಕೆಗಳಲ್ಲಿ ಜಾಹಿರಾತನ್ನು ನೀಡಿದ್ದು, ಮೇಲ್ಸೇತುವೆಯನ್ನು ’ವೀರ ಸಾವರ್ಕರ್‌ ಮೇಲ್ಸೇತುವೆ’ ಎಂದು ಕರೆದಿದೆ. ಈ ನಡುವೆ ಸಾವರ್ಕರ್‌ ಹೆಸರನ್ನು ನಾಮಕರಣ ಮಾಡುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ಕನ್ನಡ ಪರ ಹೋರಾಟಗಾರರನ್ನು ಬಂಧಿಸಿದೆ.

ಈ ಬಗ್ಗೆ ಜಾತ್ಯಾತೀತ ಜನತಾದಳ ಟ್ವಿಟ್ಟರ್‌ನಲ್ಲಿ ಮಾಹಿತಿ ನೀಡಿದ್ದು, “ಬೆಂಗಳೂರು JDS ಯೂತ್‌ ವಿಂಗ್‌
ಅಧ್ಯಕ್ಷ ಪ್ರವೀಣ್ ಕುಮಾರ್ ಅವರನ್ನು ಪ್ರತಿಭಟನೆಯ ಭಯದಿಂದ ಸರ್ಕಾರ ಬಂಧಿಸಿದ್ದು, ಯಲಹಂಕ ಮೇಲ್ಸೇತುವೆಗೆ ಮಹಾರಾಷ್ಟ್ರದ ಸಾವರ್ಕರ್ ಹೆಸರಿಡುವುದನ್ನು ವಿರೋಧಿಸಿ ಶಾಂತಿಯುತ ಪ್ರತಿಭಟನೆ ನಡೆಸಲು ಅವಕಾಶ ನೀಡದ ಸರ್ವಾಧಿಕಾರಿ ಧೋರಣೆಯಿಂದ ರಾಜ್ಯ ಸರ್ಕಾರ ನಡೆದುಕೊಳ್ಳುತ್ತಿದೆ. ಇದು ಜನವಿರೋಧಿ ಸರ್ಕಾರದ ಭಂಡ ನಡೆ” ಎಂದು ಹೇಳಿದೆ.

ಇದನ್ನೂ ಓದಿ: ಮೇಲ್ಸೇತುವೆಗೆ ಸಾವರ್ಕರ್‌ ಹೆಸರು : ಈ ಮಣ್ಣಿನ ಸ್ವಾತಂತ್ರ್ಯ ಹೋರಾಟಗಾರರಿಗೆ‌ ಮಾಡುವ ಅವಮಾನ.

ಇದನ್ನೂ ಓದಿ: ‘ಅತ್ಯುನ್ನತ ಭಾರತ ರತ್ನವನ್ನು ಸಾವರ್ಕರ್‌ಗೆ ಅಷ್ಟೇ ಯಾಕೆ, ಗೋಡ್ಸೆಗೂ ಕೊಟ್ಟಬಿಡಿ’..!

ಮೇಲ್ಸೇತುವೆಗೆ ವಿವಾದಿತ ವ್ಯಕ್ತಿ ಸಾವರ್ಕರ್‌ ಹೆಸರು ಇಡುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ ಹೋರಾಟ ನಡೆಸಿದ್ದ ಕರ್ನಾಟಕ ರಣಧೀರ ಪಡೆಯ ರಾಜ್ಯಾಧ್ಯಕ್ಷ ಬಿ ಹರೀಶ್‌ ಕುಮಾರ್‌ ಅವರನ್ನು ಬಂಧಿಸಿದ್ದಾರೆ ಎಂದು ಅವರು ತನ್ನ ಫೇಸ್‌ಬುಕ್‌ ನಲ್ಲಿ ಬರೆದುಕೊಂಡಿದ್ದಾರೆ.

ಯಲಹಂಕ ಮೇಲ್ಸೇತುವೆಗೆ ವಿಚಾರದಲ್ಲಿಬೆಳಗ್ಗೆ ನನ್ನ ಮನೆಯಲ್ಲಿಪೋಲೀಸರು ನನ್ನನ್ನು ಬಂಧಿಸಿದ್ದಾರೆ …

Posted by ಭೈರಪ್ಪ ಹರೀಶ್ ಕುಮಾರ್ on Monday, September 7, 2020

ಈ ನಡುವೆ ಸೇತುವೆಗೆ ಸಾವರ್ಕರ್ ಹೆಸರಿಡುವುದನ್ನು ಹಲವಾರು ಜನರು ವಿರೋಧಿಸಿದ್ದಾರೆ. ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯಾಧ್ಯಕ್ಷರಾದ ರವಿಕೃಷ್ಣಾ ರೆಡ್ಡಿಯವರು ಟ್ವೀಟ್ ಮಾಡಿದ್ದು, “ಯಲಹಂಕದ ಮೇಲ್ಸೇತುವೆಗೆ ಹೆಸರಿಡುವ ವಿಚಾರದಲ್ಲಿ ಕರ್ನಾಟಕದ ಜನತೆಯಿಂದ ಗಂಭೀರವಾದ, ಸಕಾರಣವಾದ ವಿರೋಧ ಇದ್ದರೂ  ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಸರ್ಕಾರ ಆ ಜನಾಭಿಪ್ರಾಯವನ್ನು ಕಡೆಗಣಿಸಿ ಮುಂದುವರೆಯುತ್ತಿರುವುದು ಅಕ್ಷಮ್ಯ. ಕನ್ನಡಿಗರ ಭಾವನೆಗಳಿಗೆ ಬೆಲೆ ನೀಡದ ಸರ್ಕಾರದ ನಡೆಯನ್ನು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಖಂಡಿಸುತ್ತದೆ. ಹೇರಿಕೆ ಸಲ್ಲದು. ಒಪ್ಪಿತ ಹೆಸರು ಇಡಿ” ಎಂದು ಆಗ್ರಹಿಸಿದ್ದಾರೆ.

ಜನಾಂದೋಲನ ಆಗುವವರೆಗೆ ಸಂಗೊಳ್ಳಿ ರಾಯಣ್ಣನವರ ಪ್ರತಿಮೆಯ ವಿಷಯದಲ್ಲಿ ಆಸಕ್ತಿ ತೋರದ ರಾಜ್ಯ ಬಿಜೆಪಿ ಸರ್ಕಾರ ಸರ್ಕಾರ, ಗಾಂಧಿ ಹತ್ಯಾ ಆರೋಪಿಯಾದ ಸಾವರ್ಕರ್ ಹೆಸರನ್ನು ಯಲಹಂಕ ಮೇಲು ಸೇತುವೆಗೆ ನಾಮಕರಣ ಮಾಡಲು ಹೊರಟಿರುವುದು ನಿಜಕ್ಕೂ ನಾಚಿಕೆಗೇಡಿನ ತನದ ಮತ್ತು ದೇಶದ್ರೋಹಿ ಕೆಲಸ ಎಂದು ಪ್ರತಿಪಕ್ಷ ಕಾಂಗ್ರೆಸ್ ಆರೋಪಿಸಿದೆ.


ಇದನ್ನೂ ಓದಿ: ಯಲಹಂಕ ಮೇಲ್ಸೇತುವೆಗೆ ಸಾವರ್ಕರ್ ಹೆಸರು ನಾಡಿಗೆ ಮಾಡಿದ ಅಪಮಾನ: ಎಚ್‌ಡಿಕೆ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ (82 ವರ್ಷ) ಅವರು ಬುಧವಾರ (ಜನವರಿ 7, 2026) ತಡರಾತ್ರಿ ಪುಣೆಯಲ್ಲಿರುವ ತಮ್ಮ ಮನೆಯಲ್ಲಿ ಅಲ್ಪಕಾಲದ ಅನಾರೋಗ್ಯದ ನಂತರ ನಿಧನರಾದರು. ಈ ಕುರಿತು ಗಾಡ್ಗೀಳ್ ಅವರ...

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...

ಬಾಂಗ್ಲಾದೇಶ: ಗುಂಪು ದಾಳಿಯಿಂದ ತಪ್ಪಿಸಿಕೊಳ್ಳಲು ಕಾಲುವೆಗೆ ಹಾರಿದ ಹಿಂದೂ ವ್ಯಕ್ತಿ ಸಾವು

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ಸುದ್ದಿಗಳು ನಿರಂತರವಾಗಿ ವರದಿಯಾಗುತ್ತಿರುವ ನಡುವೆಯೇ, ನೌಗಾಂವ್ ಜಿಲ್ಲೆಯ ಮೊಹದೇವ್‌ಪುರ ಉಪಜಿಲ್ಲಾದಲ್ಲಿ ದರೋಡೆ ಆರೋಪ ಹೊರಿಸಿದ ಗುಂಪಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ 25 ವರ್ಷದ ಹಿಂದೂ ವ್ಯಕ್ತಿ ಕಾಲುವೆಗೆ ಹಾರಿ...

ಹೋರಾಟಗಾರ್ತಿ ಕಾಮ್ರೇಡ್ ಪದ್ಮಕ್ಕ ಶ್ರದ್ಧಾಂಜಲಿ ಸಭೆ

ಬೆಂಗಳೂರಿನ ಆಶೀರ್ವಾದ್ ಸೆಂಟರ್ ನಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಪದ್ಮಾರವರ ಕುಟುಂಬ, ಸಹ ಹೋರಾಟಗಾರು, ಚಿಂತಕರು, ಸಾಹಿತಿಗಳು ಪಾಲ್ಗೊಂಡಿದ್ದರು. ಸಭೆಯಲ್ಲಿ ಪದ್ಮಾರವರ ಜೊತೆಗಿನ ಒಡನಾಟವನ್ನು ನೆನೆಯಲಾಯಿತು. ಡಿಸೆಂಬರ್ 25 ರಂದು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ...

‘ನಾಯಿಗಳ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲ’: ರಸ್ತೆಗಳು, ನಾಯಿಗಳಿಂದ ಮುಕ್ತವಾಗಿರಬೇಕು: ಸುಪ್ರೀಂ ಕೋರ್ಟ್

ನವದೆಹಲಿ: ನಾಯಿ ಕಚ್ಚುವ ಮನಸ್ಥಿತಿಯಲ್ಲಿರುವಾಗ ಅದರ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲವಾದ್ದರಿಂದ, ರಸ್ತೆಗಳು ಅಥವಾ ಬೀದಿಗಳು ನಾಯಿಗಳಿಂದ ಮುಕ್ತವಾಗುವಂತೆ ನೋಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.  ಬೀದಿ ನಾಯಿಗಳಿಗೆ ಸಂಬಂಧಿಸಿದ ಸ್ವಯಂಪ್ರೇರಿತ ಪ್ರಕರಣವನ್ನು...

‘ಮಜಾ ನಾ ಕರಾಯಾ ತೋ..ಪೈಸೆ ವಾಪಸ್’: ಭಾರತಕ್ಕೆ ನೇರ ಬೆದರಿಕೆ ಹಾಕಿದ ಪಾಕಿಸ್ತಾನ ಸೇನಾಧಿಕಾರಿ ಅಹ್ಮದ್ ಷರೀಫ್ ಚೌಧರಿ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR) ನ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ, ಕಾಬೂಲ್ ಜೊತೆಗಿನ ಇಸ್ಲಾಮಾಬಾದ್‌ನ ನಡೆಯುತ್ತಿರುವ ಸಂಘರ್ಷದೊಂದಿಗೆ ಭಾರತವನ್ನು ಜೋಡಿಸುವ ಮೂಲಕ ಮತ್ತೊಮ್ಮೆ ವಿವಾದವನ್ನು ಹುಟ್ಟುಹಾಕಿದ್ದಾರೆ.  ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ...

‘ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದ ನೆಹರು, ಮೊಘಲ್ ಆಕ್ರಮಣಕಾರರನ್ನು ವೈಭವೀಕರಿಸುತ್ತಿದ್ದರು’: ಬಿಜೆಪಿ ಆರೋಪ

ನವದೆಹಲಿ: ಸೋಮನಾಥ ದೇವಾಲಯವನ್ನು ಹಿಂದೆ ಘಜ್ನಿ ಮಹಮ್ಮದ್ ಮತ್ತು ಅಲಾವುದ್ದೀನ್ ಖಿಲ್ಜಿ ಲೂಟಿ ಮಾಡಿದ್ದರು ಆದರೆ ಸ್ವತಂತ್ರ ಭಾರತದಲ್ಲಿ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಭಗವಾನ್ ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದರು ಎಂದು...

ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿರುವುದಾಗಿ ಆರೋಪ: ಆಕೆ ತನ್ನನ್ನು ತಾನು ವಿವಸ್ತ್ರಗೊಳಿಸಿಕೊಂಡಿದ್ದಾಳೆ ಎಂದ ಪೊಲೀಸ್ ಕಮಿಷನರ್

ಹುಬ್ಬಳ್ಳಿ: ಪೊಲೀಸ್ ವ್ಯಾನ್ ಒಳಗೆ ಪೂರ್ಣ ಬಟ್ಟೆಯಿಲ್ಲದೆ ಮಹಿಳೆಯೊಬ್ಬರ ವಿಡಿಯೋ ವೈರಲ್ ಆದ ನಂತರ, ಬಿಜೆಪಿ ನಾಯಕರು ಪೊಲೀಸರು ಅವಳನ್ನು ಬಂಧಿಸುವಾಗ ಆಕೆಯ ಬಟ್ಟೆಗಳನ್ನು ಬಿಚ್ಚಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಜನವರಿ 5...