Homeಕರ್ನಾಟಕಯಲಹಂಕ ಮೇಲ್ಸೇತುವೆಗೆ ಸಾವರ್ಕರ್‌ ಹೆಸರು: ಕನ್ನಡಿಗರನ್ನು ಬಂಧಿಸಿ ನಾಮಕರಣಕ್ಕೆ ಮುಂದಾದ ಸರ್ಕಾರ

ಯಲಹಂಕ ಮೇಲ್ಸೇತುವೆಗೆ ಸಾವರ್ಕರ್‌ ಹೆಸರು: ಕನ್ನಡಿಗರನ್ನು ಬಂಧಿಸಿ ನಾಮಕರಣಕ್ಕೆ ಮುಂದಾದ ಸರ್ಕಾರ

ಕರ್ನಾಟಕ ರಣಧೀರ ಪಡೆಯ ರಾಜ್ಯಾಧ್ಯಕ್ಷ ಬಿ ಹರೀಶ್‌ ಕುಮಾರ್‌ ಮತ್ತು ಬೆಂಗಳೂರು JDS ಯೂತ್‌ ವಿಂಗ್‌ ಅಧ್ಯಕ್ಷ ಪ್ರವೀಣ್ ಕುಮಾರ್‌ರನ್ನು ಸರ್ಕಾರ ಮುನ್ನೆಚ್ಚರಿಕೆಯ ಕ್ರಮವಾಗಿ ಬಂಧಿಸಿದೆ.

- Advertisement -
- Advertisement -

ವಿವಾದಿತ ವ್ಯಕ್ತಿ ವಿ.ಡಿ.ಸಾವರ್ಕರ್ ಹೆಸರನ್ನು ಯಲಹಂಕ ಮೇಲ್ಸೇತುವೆಗೆ ನಾಮಕರಣ ಮಾಡುವ ಕಾರ್ಯಕ್ರಮವನ್ನು ಇಂದು ಮಧ್ಯಾಹ್ನ 12:30 ಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಉಧ್ಘಾಟನೆ ಮಾಡಲಿದ್ದಾರೆ. ಅದರೆ ಮೇತ್ಸೇತುವೆಗೆ ಸಾವರ್ಕರ್‌ ಹೆಸರಿಡುವುದನ್ನು ವಿರೋಧಿಸಿದ ಹಲವು ಕನ್ನಡಿಗರನ್ನು ಬಂಧಿಸಿ ಕಾರ್ಯಕ್ರಮ ನಡೆಸುತ್ತಿರುವುದಕ್ಕೆ ವ್ಯಾಪಕ ವಿರೋಧ ಕೇಳಿಬಂದಿದೆ.

ಮೇ ತಿಂಗಳಲ್ಲೇ ಸೇತುವೆಗೆ ವಿವಾದಿತ ವ್ಯಕ್ತಿ ಸಾವರ್ಕರ್ ಹೆಸರನ್ನು ಇಡುವುದಾಗಿ ರಾಜ್ಯ ಸರ್ಕಾರ ಹೇಳಿತ್ತಾದರೂ, ಅದಕ್ಕೆ ಕರ್ನಾಟಕದ ಪ್ರಜ್ಞಾವಂತರು, ಕನ್ನಡಪರ ಹೋರಾಟಗಾರರು, ವಿರೋಧ ಪಕ್ಷಗಳು ಸೇರಿದಂತೆ ಹಲವಾರು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ವಿರೋಧಕ್ಕೆ ಮಣಿದ ಸರ್ಕಾರ ಸಾವರ್ಕರ್ ಹೆಸರು ತೆಗೆದು ಆಮಂತ್ರಣ ಪತ್ರಿಕೆಯಲ್ಲಿ ಕೇವಲ “ಮೇಲ್ಸುತುವೆ ಉದ್ಘಾಟನೆ” ಎಂದು ಮುದ್ರಣ ಮಾಡಿತ್ತು.

ಇದನ್ನೂ ಓದಿ: ಸಾವರ್ಕರ್‌ರನ್ನು ’ಮಾಜಿ ವೀರ ಸಾವರ್ಕರ್’ ಎಂದು ಕರೆಯಬಹುದು ಅಷ್ಟೇ

ಪ್ರಸ್ತುತ ಮೇಲ್ಸೇತುವೆಯನ್ನು ಇಂದು ಉದ್ಘಾಟಿಸುವುದಾಗಿ ರಾಜ್ಯ ಸರ್ಕಾರ ಪತ್ರಿಕೆಗಳಲ್ಲಿ ಜಾಹಿರಾತನ್ನು ನೀಡಿದ್ದು, ಮೇಲ್ಸೇತುವೆಯನ್ನು ’ವೀರ ಸಾವರ್ಕರ್‌ ಮೇಲ್ಸೇತುವೆ’ ಎಂದು ಕರೆದಿದೆ. ಈ ನಡುವೆ ಸಾವರ್ಕರ್‌ ಹೆಸರನ್ನು ನಾಮಕರಣ ಮಾಡುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ಕನ್ನಡ ಪರ ಹೋರಾಟಗಾರರನ್ನು ಬಂಧಿಸಿದೆ.

ಈ ಬಗ್ಗೆ ಜಾತ್ಯಾತೀತ ಜನತಾದಳ ಟ್ವಿಟ್ಟರ್‌ನಲ್ಲಿ ಮಾಹಿತಿ ನೀಡಿದ್ದು, “ಬೆಂಗಳೂರು JDS ಯೂತ್‌ ವಿಂಗ್‌
ಅಧ್ಯಕ್ಷ ಪ್ರವೀಣ್ ಕುಮಾರ್ ಅವರನ್ನು ಪ್ರತಿಭಟನೆಯ ಭಯದಿಂದ ಸರ್ಕಾರ ಬಂಧಿಸಿದ್ದು, ಯಲಹಂಕ ಮೇಲ್ಸೇತುವೆಗೆ ಮಹಾರಾಷ್ಟ್ರದ ಸಾವರ್ಕರ್ ಹೆಸರಿಡುವುದನ್ನು ವಿರೋಧಿಸಿ ಶಾಂತಿಯುತ ಪ್ರತಿಭಟನೆ ನಡೆಸಲು ಅವಕಾಶ ನೀಡದ ಸರ್ವಾಧಿಕಾರಿ ಧೋರಣೆಯಿಂದ ರಾಜ್ಯ ಸರ್ಕಾರ ನಡೆದುಕೊಳ್ಳುತ್ತಿದೆ. ಇದು ಜನವಿರೋಧಿ ಸರ್ಕಾರದ ಭಂಡ ನಡೆ” ಎಂದು ಹೇಳಿದೆ.

ಇದನ್ನೂ ಓದಿ: ಮೇಲ್ಸೇತುವೆಗೆ ಸಾವರ್ಕರ್‌ ಹೆಸರು : ಈ ಮಣ್ಣಿನ ಸ್ವಾತಂತ್ರ್ಯ ಹೋರಾಟಗಾರರಿಗೆ‌ ಮಾಡುವ ಅವಮಾನ.

ಇದನ್ನೂ ಓದಿ: ‘ಅತ್ಯುನ್ನತ ಭಾರತ ರತ್ನವನ್ನು ಸಾವರ್ಕರ್‌ಗೆ ಅಷ್ಟೇ ಯಾಕೆ, ಗೋಡ್ಸೆಗೂ ಕೊಟ್ಟಬಿಡಿ’..!

ಮೇಲ್ಸೇತುವೆಗೆ ವಿವಾದಿತ ವ್ಯಕ್ತಿ ಸಾವರ್ಕರ್‌ ಹೆಸರು ಇಡುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ ಹೋರಾಟ ನಡೆಸಿದ್ದ ಕರ್ನಾಟಕ ರಣಧೀರ ಪಡೆಯ ರಾಜ್ಯಾಧ್ಯಕ್ಷ ಬಿ ಹರೀಶ್‌ ಕುಮಾರ್‌ ಅವರನ್ನು ಬಂಧಿಸಿದ್ದಾರೆ ಎಂದು ಅವರು ತನ್ನ ಫೇಸ್‌ಬುಕ್‌ ನಲ್ಲಿ ಬರೆದುಕೊಂಡಿದ್ದಾರೆ.

ಯಲಹಂಕ ಮೇಲ್ಸೇತುವೆಗೆ ವಿಚಾರದಲ್ಲಿಬೆಳಗ್ಗೆ ನನ್ನ ಮನೆಯಲ್ಲಿಪೋಲೀಸರು ನನ್ನನ್ನು ಬಂಧಿಸಿದ್ದಾರೆ …

Posted by ಭೈರಪ್ಪ ಹರೀಶ್ ಕುಮಾರ್ on Monday, September 7, 2020

ಈ ನಡುವೆ ಸೇತುವೆಗೆ ಸಾವರ್ಕರ್ ಹೆಸರಿಡುವುದನ್ನು ಹಲವಾರು ಜನರು ವಿರೋಧಿಸಿದ್ದಾರೆ. ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯಾಧ್ಯಕ್ಷರಾದ ರವಿಕೃಷ್ಣಾ ರೆಡ್ಡಿಯವರು ಟ್ವೀಟ್ ಮಾಡಿದ್ದು, “ಯಲಹಂಕದ ಮೇಲ್ಸೇತುವೆಗೆ ಹೆಸರಿಡುವ ವಿಚಾರದಲ್ಲಿ ಕರ್ನಾಟಕದ ಜನತೆಯಿಂದ ಗಂಭೀರವಾದ, ಸಕಾರಣವಾದ ವಿರೋಧ ಇದ್ದರೂ  ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಸರ್ಕಾರ ಆ ಜನಾಭಿಪ್ರಾಯವನ್ನು ಕಡೆಗಣಿಸಿ ಮುಂದುವರೆಯುತ್ತಿರುವುದು ಅಕ್ಷಮ್ಯ. ಕನ್ನಡಿಗರ ಭಾವನೆಗಳಿಗೆ ಬೆಲೆ ನೀಡದ ಸರ್ಕಾರದ ನಡೆಯನ್ನು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಖಂಡಿಸುತ್ತದೆ. ಹೇರಿಕೆ ಸಲ್ಲದು. ಒಪ್ಪಿತ ಹೆಸರು ಇಡಿ” ಎಂದು ಆಗ್ರಹಿಸಿದ್ದಾರೆ.

ಜನಾಂದೋಲನ ಆಗುವವರೆಗೆ ಸಂಗೊಳ್ಳಿ ರಾಯಣ್ಣನವರ ಪ್ರತಿಮೆಯ ವಿಷಯದಲ್ಲಿ ಆಸಕ್ತಿ ತೋರದ ರಾಜ್ಯ ಬಿಜೆಪಿ ಸರ್ಕಾರ ಸರ್ಕಾರ, ಗಾಂಧಿ ಹತ್ಯಾ ಆರೋಪಿಯಾದ ಸಾವರ್ಕರ್ ಹೆಸರನ್ನು ಯಲಹಂಕ ಮೇಲು ಸೇತುವೆಗೆ ನಾಮಕರಣ ಮಾಡಲು ಹೊರಟಿರುವುದು ನಿಜಕ್ಕೂ ನಾಚಿಕೆಗೇಡಿನ ತನದ ಮತ್ತು ದೇಶದ್ರೋಹಿ ಕೆಲಸ ಎಂದು ಪ್ರತಿಪಕ್ಷ ಕಾಂಗ್ರೆಸ್ ಆರೋಪಿಸಿದೆ.


ಇದನ್ನೂ ಓದಿ: ಯಲಹಂಕ ಮೇಲ್ಸೇತುವೆಗೆ ಸಾವರ್ಕರ್ ಹೆಸರು ನಾಡಿಗೆ ಮಾಡಿದ ಅಪಮಾನ: ಎಚ್‌ಡಿಕೆ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತೀಯರ ಅಡುಗೆ ಮನೆ ತಲುಪಿದ ಯುದ್ಧದ ಪರಿಣಾಮ : ದೇಶದಾದ್ಯಂತ ಎಲ್‌ಪಿಜಿ ಕೊರತೆ ಉಲ್ಬಣ

ಅಮೆರಿಕ, ಇಸ್ರೇಲ್, ಇರಾನ್ ಮತ್ತು ಗಲ್ಫ್ ರಾಷ್ಟ್ರಗಳ ಸಂಘರ್ಷದಿಂದ ಭಾರತದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ದೇಶ ಪ್ರಧಾನಿ ಮೋದಿಯವರ ಕೈಯಲ್ಲಿ ಭದ್ರವಾಗಿದೆ ಎಂದು ಒಂದಷ್ಟು ಜನರು ಸಾಮಾಜಿಕ ಜಾಲತಾಣಗಳಲ್ಲಿ ಕಾಮೆಂಟ್ ಮಾಡುತ್ತಿರುವಾಗಲೇ,...

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...