Homeಕರ್ನಾಟಕಯಲಹಂಕ ಮೇಲ್ಸೇತುವೆಗೆ ಸಾವರ್ಕರ್‌ ಹೆಸರು: ಕನ್ನಡಿಗರನ್ನು ಬಂಧಿಸಿ ನಾಮಕರಣಕ್ಕೆ ಮುಂದಾದ ಸರ್ಕಾರ

ಯಲಹಂಕ ಮೇಲ್ಸೇತುವೆಗೆ ಸಾವರ್ಕರ್‌ ಹೆಸರು: ಕನ್ನಡಿಗರನ್ನು ಬಂಧಿಸಿ ನಾಮಕರಣಕ್ಕೆ ಮುಂದಾದ ಸರ್ಕಾರ

ಕರ್ನಾಟಕ ರಣಧೀರ ಪಡೆಯ ರಾಜ್ಯಾಧ್ಯಕ್ಷ ಬಿ ಹರೀಶ್‌ ಕುಮಾರ್‌ ಮತ್ತು ಬೆಂಗಳೂರು JDS ಯೂತ್‌ ವಿಂಗ್‌ ಅಧ್ಯಕ್ಷ ಪ್ರವೀಣ್ ಕುಮಾರ್‌ರನ್ನು ಸರ್ಕಾರ ಮುನ್ನೆಚ್ಚರಿಕೆಯ ಕ್ರಮವಾಗಿ ಬಂಧಿಸಿದೆ.

- Advertisement -
- Advertisement -

ವಿವಾದಿತ ವ್ಯಕ್ತಿ ವಿ.ಡಿ.ಸಾವರ್ಕರ್ ಹೆಸರನ್ನು ಯಲಹಂಕ ಮೇಲ್ಸೇತುವೆಗೆ ನಾಮಕರಣ ಮಾಡುವ ಕಾರ್ಯಕ್ರಮವನ್ನು ಇಂದು ಮಧ್ಯಾಹ್ನ 12:30 ಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಉಧ್ಘಾಟನೆ ಮಾಡಲಿದ್ದಾರೆ. ಅದರೆ ಮೇತ್ಸೇತುವೆಗೆ ಸಾವರ್ಕರ್‌ ಹೆಸರಿಡುವುದನ್ನು ವಿರೋಧಿಸಿದ ಹಲವು ಕನ್ನಡಿಗರನ್ನು ಬಂಧಿಸಿ ಕಾರ್ಯಕ್ರಮ ನಡೆಸುತ್ತಿರುವುದಕ್ಕೆ ವ್ಯಾಪಕ ವಿರೋಧ ಕೇಳಿಬಂದಿದೆ.

ಮೇ ತಿಂಗಳಲ್ಲೇ ಸೇತುವೆಗೆ ವಿವಾದಿತ ವ್ಯಕ್ತಿ ಸಾವರ್ಕರ್ ಹೆಸರನ್ನು ಇಡುವುದಾಗಿ ರಾಜ್ಯ ಸರ್ಕಾರ ಹೇಳಿತ್ತಾದರೂ, ಅದಕ್ಕೆ ಕರ್ನಾಟಕದ ಪ್ರಜ್ಞಾವಂತರು, ಕನ್ನಡಪರ ಹೋರಾಟಗಾರರು, ವಿರೋಧ ಪಕ್ಷಗಳು ಸೇರಿದಂತೆ ಹಲವಾರು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ವಿರೋಧಕ್ಕೆ ಮಣಿದ ಸರ್ಕಾರ ಸಾವರ್ಕರ್ ಹೆಸರು ತೆಗೆದು ಆಮಂತ್ರಣ ಪತ್ರಿಕೆಯಲ್ಲಿ ಕೇವಲ “ಮೇಲ್ಸುತುವೆ ಉದ್ಘಾಟನೆ” ಎಂದು ಮುದ್ರಣ ಮಾಡಿತ್ತು.

ಇದನ್ನೂ ಓದಿ: ಸಾವರ್ಕರ್‌ರನ್ನು ’ಮಾಜಿ ವೀರ ಸಾವರ್ಕರ್’ ಎಂದು ಕರೆಯಬಹುದು ಅಷ್ಟೇ

ಪ್ರಸ್ತುತ ಮೇಲ್ಸೇತುವೆಯನ್ನು ಇಂದು ಉದ್ಘಾಟಿಸುವುದಾಗಿ ರಾಜ್ಯ ಸರ್ಕಾರ ಪತ್ರಿಕೆಗಳಲ್ಲಿ ಜಾಹಿರಾತನ್ನು ನೀಡಿದ್ದು, ಮೇಲ್ಸೇತುವೆಯನ್ನು ’ವೀರ ಸಾವರ್ಕರ್‌ ಮೇಲ್ಸೇತುವೆ’ ಎಂದು ಕರೆದಿದೆ. ಈ ನಡುವೆ ಸಾವರ್ಕರ್‌ ಹೆಸರನ್ನು ನಾಮಕರಣ ಮಾಡುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ಕನ್ನಡ ಪರ ಹೋರಾಟಗಾರರನ್ನು ಬಂಧಿಸಿದೆ.

ಈ ಬಗ್ಗೆ ಜಾತ್ಯಾತೀತ ಜನತಾದಳ ಟ್ವಿಟ್ಟರ್‌ನಲ್ಲಿ ಮಾಹಿತಿ ನೀಡಿದ್ದು, “ಬೆಂಗಳೂರು JDS ಯೂತ್‌ ವಿಂಗ್‌
ಅಧ್ಯಕ್ಷ ಪ್ರವೀಣ್ ಕುಮಾರ್ ಅವರನ್ನು ಪ್ರತಿಭಟನೆಯ ಭಯದಿಂದ ಸರ್ಕಾರ ಬಂಧಿಸಿದ್ದು, ಯಲಹಂಕ ಮೇಲ್ಸೇತುವೆಗೆ ಮಹಾರಾಷ್ಟ್ರದ ಸಾವರ್ಕರ್ ಹೆಸರಿಡುವುದನ್ನು ವಿರೋಧಿಸಿ ಶಾಂತಿಯುತ ಪ್ರತಿಭಟನೆ ನಡೆಸಲು ಅವಕಾಶ ನೀಡದ ಸರ್ವಾಧಿಕಾರಿ ಧೋರಣೆಯಿಂದ ರಾಜ್ಯ ಸರ್ಕಾರ ನಡೆದುಕೊಳ್ಳುತ್ತಿದೆ. ಇದು ಜನವಿರೋಧಿ ಸರ್ಕಾರದ ಭಂಡ ನಡೆ” ಎಂದು ಹೇಳಿದೆ.

ಇದನ್ನೂ ಓದಿ: ಮೇಲ್ಸೇತುವೆಗೆ ಸಾವರ್ಕರ್‌ ಹೆಸರು : ಈ ಮಣ್ಣಿನ ಸ್ವಾತಂತ್ರ್ಯ ಹೋರಾಟಗಾರರಿಗೆ‌ ಮಾಡುವ ಅವಮಾನ.

ಇದನ್ನೂ ಓದಿ: ‘ಅತ್ಯುನ್ನತ ಭಾರತ ರತ್ನವನ್ನು ಸಾವರ್ಕರ್‌ಗೆ ಅಷ್ಟೇ ಯಾಕೆ, ಗೋಡ್ಸೆಗೂ ಕೊಟ್ಟಬಿಡಿ’..!

ಮೇಲ್ಸೇತುವೆಗೆ ವಿವಾದಿತ ವ್ಯಕ್ತಿ ಸಾವರ್ಕರ್‌ ಹೆಸರು ಇಡುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ ಹೋರಾಟ ನಡೆಸಿದ್ದ ಕರ್ನಾಟಕ ರಣಧೀರ ಪಡೆಯ ರಾಜ್ಯಾಧ್ಯಕ್ಷ ಬಿ ಹರೀಶ್‌ ಕುಮಾರ್‌ ಅವರನ್ನು ಬಂಧಿಸಿದ್ದಾರೆ ಎಂದು ಅವರು ತನ್ನ ಫೇಸ್‌ಬುಕ್‌ ನಲ್ಲಿ ಬರೆದುಕೊಂಡಿದ್ದಾರೆ.

ಯಲಹಂಕ ಮೇಲ್ಸೇತುವೆಗೆ ವಿಚಾರದಲ್ಲಿಬೆಳಗ್ಗೆ ನನ್ನ ಮನೆಯಲ್ಲಿಪೋಲೀಸರು ನನ್ನನ್ನು ಬಂಧಿಸಿದ್ದಾರೆ …

Posted by ಭೈರಪ್ಪ ಹರೀಶ್ ಕುಮಾರ್ on Monday, September 7, 2020

ಈ ನಡುವೆ ಸೇತುವೆಗೆ ಸಾವರ್ಕರ್ ಹೆಸರಿಡುವುದನ್ನು ಹಲವಾರು ಜನರು ವಿರೋಧಿಸಿದ್ದಾರೆ. ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯಾಧ್ಯಕ್ಷರಾದ ರವಿಕೃಷ್ಣಾ ರೆಡ್ಡಿಯವರು ಟ್ವೀಟ್ ಮಾಡಿದ್ದು, “ಯಲಹಂಕದ ಮೇಲ್ಸೇತುವೆಗೆ ಹೆಸರಿಡುವ ವಿಚಾರದಲ್ಲಿ ಕರ್ನಾಟಕದ ಜನತೆಯಿಂದ ಗಂಭೀರವಾದ, ಸಕಾರಣವಾದ ವಿರೋಧ ಇದ್ದರೂ  ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಸರ್ಕಾರ ಆ ಜನಾಭಿಪ್ರಾಯವನ್ನು ಕಡೆಗಣಿಸಿ ಮುಂದುವರೆಯುತ್ತಿರುವುದು ಅಕ್ಷಮ್ಯ. ಕನ್ನಡಿಗರ ಭಾವನೆಗಳಿಗೆ ಬೆಲೆ ನೀಡದ ಸರ್ಕಾರದ ನಡೆಯನ್ನು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಖಂಡಿಸುತ್ತದೆ. ಹೇರಿಕೆ ಸಲ್ಲದು. ಒಪ್ಪಿತ ಹೆಸರು ಇಡಿ” ಎಂದು ಆಗ್ರಹಿಸಿದ್ದಾರೆ.

ಜನಾಂದೋಲನ ಆಗುವವರೆಗೆ ಸಂಗೊಳ್ಳಿ ರಾಯಣ್ಣನವರ ಪ್ರತಿಮೆಯ ವಿಷಯದಲ್ಲಿ ಆಸಕ್ತಿ ತೋರದ ರಾಜ್ಯ ಬಿಜೆಪಿ ಸರ್ಕಾರ ಸರ್ಕಾರ, ಗಾಂಧಿ ಹತ್ಯಾ ಆರೋಪಿಯಾದ ಸಾವರ್ಕರ್ ಹೆಸರನ್ನು ಯಲಹಂಕ ಮೇಲು ಸೇತುವೆಗೆ ನಾಮಕರಣ ಮಾಡಲು ಹೊರಟಿರುವುದು ನಿಜಕ್ಕೂ ನಾಚಿಕೆಗೇಡಿನ ತನದ ಮತ್ತು ದೇಶದ್ರೋಹಿ ಕೆಲಸ ಎಂದು ಪ್ರತಿಪಕ್ಷ ಕಾಂಗ್ರೆಸ್ ಆರೋಪಿಸಿದೆ.


ಇದನ್ನೂ ಓದಿ: ಯಲಹಂಕ ಮೇಲ್ಸೇತುವೆಗೆ ಸಾವರ್ಕರ್ ಹೆಸರು ನಾಡಿಗೆ ಮಾಡಿದ ಅಪಮಾನ: ಎಚ್‌ಡಿಕೆ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...