Homeಕರ್ನಾಟಕಯಲಹಂಕ ಮೇಲ್ಸೇತುವೆಗೆ ಸಾವರ್ಕರ್‌ ಹೆಸರು: ಕನ್ನಡಿಗರನ್ನು ಬಂಧಿಸಿ ನಾಮಕರಣಕ್ಕೆ ಮುಂದಾದ ಸರ್ಕಾರ

ಯಲಹಂಕ ಮೇಲ್ಸೇತುವೆಗೆ ಸಾವರ್ಕರ್‌ ಹೆಸರು: ಕನ್ನಡಿಗರನ್ನು ಬಂಧಿಸಿ ನಾಮಕರಣಕ್ಕೆ ಮುಂದಾದ ಸರ್ಕಾರ

ಕರ್ನಾಟಕ ರಣಧೀರ ಪಡೆಯ ರಾಜ್ಯಾಧ್ಯಕ್ಷ ಬಿ ಹರೀಶ್‌ ಕುಮಾರ್‌ ಮತ್ತು ಬೆಂಗಳೂರು JDS ಯೂತ್‌ ವಿಂಗ್‌ ಅಧ್ಯಕ್ಷ ಪ್ರವೀಣ್ ಕುಮಾರ್‌ರನ್ನು ಸರ್ಕಾರ ಮುನ್ನೆಚ್ಚರಿಕೆಯ ಕ್ರಮವಾಗಿ ಬಂಧಿಸಿದೆ.

- Advertisement -
- Advertisement -

ವಿವಾದಿತ ವ್ಯಕ್ತಿ ವಿ.ಡಿ.ಸಾವರ್ಕರ್ ಹೆಸರನ್ನು ಯಲಹಂಕ ಮೇಲ್ಸೇತುವೆಗೆ ನಾಮಕರಣ ಮಾಡುವ ಕಾರ್ಯಕ್ರಮವನ್ನು ಇಂದು ಮಧ್ಯಾಹ್ನ 12:30 ಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಉಧ್ಘಾಟನೆ ಮಾಡಲಿದ್ದಾರೆ. ಅದರೆ ಮೇತ್ಸೇತುವೆಗೆ ಸಾವರ್ಕರ್‌ ಹೆಸರಿಡುವುದನ್ನು ವಿರೋಧಿಸಿದ ಹಲವು ಕನ್ನಡಿಗರನ್ನು ಬಂಧಿಸಿ ಕಾರ್ಯಕ್ರಮ ನಡೆಸುತ್ತಿರುವುದಕ್ಕೆ ವ್ಯಾಪಕ ವಿರೋಧ ಕೇಳಿಬಂದಿದೆ.

ಮೇ ತಿಂಗಳಲ್ಲೇ ಸೇತುವೆಗೆ ವಿವಾದಿತ ವ್ಯಕ್ತಿ ಸಾವರ್ಕರ್ ಹೆಸರನ್ನು ಇಡುವುದಾಗಿ ರಾಜ್ಯ ಸರ್ಕಾರ ಹೇಳಿತ್ತಾದರೂ, ಅದಕ್ಕೆ ಕರ್ನಾಟಕದ ಪ್ರಜ್ಞಾವಂತರು, ಕನ್ನಡಪರ ಹೋರಾಟಗಾರರು, ವಿರೋಧ ಪಕ್ಷಗಳು ಸೇರಿದಂತೆ ಹಲವಾರು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ವಿರೋಧಕ್ಕೆ ಮಣಿದ ಸರ್ಕಾರ ಸಾವರ್ಕರ್ ಹೆಸರು ತೆಗೆದು ಆಮಂತ್ರಣ ಪತ್ರಿಕೆಯಲ್ಲಿ ಕೇವಲ “ಮೇಲ್ಸುತುವೆ ಉದ್ಘಾಟನೆ” ಎಂದು ಮುದ್ರಣ ಮಾಡಿತ್ತು.

ಇದನ್ನೂ ಓದಿ: ಸಾವರ್ಕರ್‌ರನ್ನು ’ಮಾಜಿ ವೀರ ಸಾವರ್ಕರ್’ ಎಂದು ಕರೆಯಬಹುದು ಅಷ್ಟೇ

ಪ್ರಸ್ತುತ ಮೇಲ್ಸೇತುವೆಯನ್ನು ಇಂದು ಉದ್ಘಾಟಿಸುವುದಾಗಿ ರಾಜ್ಯ ಸರ್ಕಾರ ಪತ್ರಿಕೆಗಳಲ್ಲಿ ಜಾಹಿರಾತನ್ನು ನೀಡಿದ್ದು, ಮೇಲ್ಸೇತುವೆಯನ್ನು ’ವೀರ ಸಾವರ್ಕರ್‌ ಮೇಲ್ಸೇತುವೆ’ ಎಂದು ಕರೆದಿದೆ. ಈ ನಡುವೆ ಸಾವರ್ಕರ್‌ ಹೆಸರನ್ನು ನಾಮಕರಣ ಮಾಡುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ಕನ್ನಡ ಪರ ಹೋರಾಟಗಾರರನ್ನು ಬಂಧಿಸಿದೆ.

ಈ ಬಗ್ಗೆ ಜಾತ್ಯಾತೀತ ಜನತಾದಳ ಟ್ವಿಟ್ಟರ್‌ನಲ್ಲಿ ಮಾಹಿತಿ ನೀಡಿದ್ದು, “ಬೆಂಗಳೂರು JDS ಯೂತ್‌ ವಿಂಗ್‌
ಅಧ್ಯಕ್ಷ ಪ್ರವೀಣ್ ಕುಮಾರ್ ಅವರನ್ನು ಪ್ರತಿಭಟನೆಯ ಭಯದಿಂದ ಸರ್ಕಾರ ಬಂಧಿಸಿದ್ದು, ಯಲಹಂಕ ಮೇಲ್ಸೇತುವೆಗೆ ಮಹಾರಾಷ್ಟ್ರದ ಸಾವರ್ಕರ್ ಹೆಸರಿಡುವುದನ್ನು ವಿರೋಧಿಸಿ ಶಾಂತಿಯುತ ಪ್ರತಿಭಟನೆ ನಡೆಸಲು ಅವಕಾಶ ನೀಡದ ಸರ್ವಾಧಿಕಾರಿ ಧೋರಣೆಯಿಂದ ರಾಜ್ಯ ಸರ್ಕಾರ ನಡೆದುಕೊಳ್ಳುತ್ತಿದೆ. ಇದು ಜನವಿರೋಧಿ ಸರ್ಕಾರದ ಭಂಡ ನಡೆ” ಎಂದು ಹೇಳಿದೆ.

ಇದನ್ನೂ ಓದಿ: ಮೇಲ್ಸೇತುವೆಗೆ ಸಾವರ್ಕರ್‌ ಹೆಸರು : ಈ ಮಣ್ಣಿನ ಸ್ವಾತಂತ್ರ್ಯ ಹೋರಾಟಗಾರರಿಗೆ‌ ಮಾಡುವ ಅವಮಾನ.

ಇದನ್ನೂ ಓದಿ: ‘ಅತ್ಯುನ್ನತ ಭಾರತ ರತ್ನವನ್ನು ಸಾವರ್ಕರ್‌ಗೆ ಅಷ್ಟೇ ಯಾಕೆ, ಗೋಡ್ಸೆಗೂ ಕೊಟ್ಟಬಿಡಿ’..!

ಮೇಲ್ಸೇತುವೆಗೆ ವಿವಾದಿತ ವ್ಯಕ್ತಿ ಸಾವರ್ಕರ್‌ ಹೆಸರು ಇಡುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ ಹೋರಾಟ ನಡೆಸಿದ್ದ ಕರ್ನಾಟಕ ರಣಧೀರ ಪಡೆಯ ರಾಜ್ಯಾಧ್ಯಕ್ಷ ಬಿ ಹರೀಶ್‌ ಕುಮಾರ್‌ ಅವರನ್ನು ಬಂಧಿಸಿದ್ದಾರೆ ಎಂದು ಅವರು ತನ್ನ ಫೇಸ್‌ಬುಕ್‌ ನಲ್ಲಿ ಬರೆದುಕೊಂಡಿದ್ದಾರೆ.

ಯಲಹಂಕ ಮೇಲ್ಸೇತುವೆಗೆ ವಿಚಾರದಲ್ಲಿಬೆಳಗ್ಗೆ ನನ್ನ ಮನೆಯಲ್ಲಿಪೋಲೀಸರು ನನ್ನನ್ನು ಬಂಧಿಸಿದ್ದಾರೆ …

Posted by ಭೈರಪ್ಪ ಹರೀಶ್ ಕುಮಾರ್ on Monday, September 7, 2020

ಈ ನಡುವೆ ಸೇತುವೆಗೆ ಸಾವರ್ಕರ್ ಹೆಸರಿಡುವುದನ್ನು ಹಲವಾರು ಜನರು ವಿರೋಧಿಸಿದ್ದಾರೆ. ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯಾಧ್ಯಕ್ಷರಾದ ರವಿಕೃಷ್ಣಾ ರೆಡ್ಡಿಯವರು ಟ್ವೀಟ್ ಮಾಡಿದ್ದು, “ಯಲಹಂಕದ ಮೇಲ್ಸೇತುವೆಗೆ ಹೆಸರಿಡುವ ವಿಚಾರದಲ್ಲಿ ಕರ್ನಾಟಕದ ಜನತೆಯಿಂದ ಗಂಭೀರವಾದ, ಸಕಾರಣವಾದ ವಿರೋಧ ಇದ್ದರೂ  ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಸರ್ಕಾರ ಆ ಜನಾಭಿಪ್ರಾಯವನ್ನು ಕಡೆಗಣಿಸಿ ಮುಂದುವರೆಯುತ್ತಿರುವುದು ಅಕ್ಷಮ್ಯ. ಕನ್ನಡಿಗರ ಭಾವನೆಗಳಿಗೆ ಬೆಲೆ ನೀಡದ ಸರ್ಕಾರದ ನಡೆಯನ್ನು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಖಂಡಿಸುತ್ತದೆ. ಹೇರಿಕೆ ಸಲ್ಲದು. ಒಪ್ಪಿತ ಹೆಸರು ಇಡಿ” ಎಂದು ಆಗ್ರಹಿಸಿದ್ದಾರೆ.

ಜನಾಂದೋಲನ ಆಗುವವರೆಗೆ ಸಂಗೊಳ್ಳಿ ರಾಯಣ್ಣನವರ ಪ್ರತಿಮೆಯ ವಿಷಯದಲ್ಲಿ ಆಸಕ್ತಿ ತೋರದ ರಾಜ್ಯ ಬಿಜೆಪಿ ಸರ್ಕಾರ ಸರ್ಕಾರ, ಗಾಂಧಿ ಹತ್ಯಾ ಆರೋಪಿಯಾದ ಸಾವರ್ಕರ್ ಹೆಸರನ್ನು ಯಲಹಂಕ ಮೇಲು ಸೇತುವೆಗೆ ನಾಮಕರಣ ಮಾಡಲು ಹೊರಟಿರುವುದು ನಿಜಕ್ಕೂ ನಾಚಿಕೆಗೇಡಿನ ತನದ ಮತ್ತು ದೇಶದ್ರೋಹಿ ಕೆಲಸ ಎಂದು ಪ್ರತಿಪಕ್ಷ ಕಾಂಗ್ರೆಸ್ ಆರೋಪಿಸಿದೆ.


ಇದನ್ನೂ ಓದಿ: ಯಲಹಂಕ ಮೇಲ್ಸೇತುವೆಗೆ ಸಾವರ್ಕರ್ ಹೆಸರು ನಾಡಿಗೆ ಮಾಡಿದ ಅಪಮಾನ: ಎಚ್‌ಡಿಕೆ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...