Homeಕರ್ನಾಟಕಸುಮ್ಮನೆ ಬಿಟ್ಟರೆ ರಾಷ್ಟ್ರಗೀತೆಗೂ ಅವಮಾನ ಮಾಡಬಹುದು: ಪಟ್ಟು ಬದಲಿಸದ ಚುಂಚನಗಿರಿ ಶ್ರೀಗಳು

ಸುಮ್ಮನೆ ಬಿಟ್ಟರೆ ರಾಷ್ಟ್ರಗೀತೆಗೂ ಅವಮಾನ ಮಾಡಬಹುದು: ಪಟ್ಟು ಬದಲಿಸದ ಚುಂಚನಗಿರಿ ಶ್ರೀಗಳು

- Advertisement -
- Advertisement -

“ಸುಮ್ಮನೇ ಬಿಟ್ಟರೆ ಮುಂದೆ ಯಾರಾದರೂ ರಾಷ್ಟ್ರಗೀತೆಗೂ ಅವಮಾನ ಮಾಡಬಹುದು” ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಸ್ವಾಮೀಜಿ ಆತಂಕ ವ್ಯಕ್ತಪಡಿಸಿರುವುದಾಗಿ ವರದಿಯಾಗಿದೆ.

ರಾಷ್ಟ್ರಕವಿ ಕುವೆಂಪು ಅವರು ಬರೆದ ನಾಡಗೀತೆಯನ್ನು ಗೇಲಿ ಮಾಡಿ, ವಿಕೃತಗೊಳಿಸಿ, ಅವಮಾನ ಮಾಡಿರುವ ರೋಹಿತ್ ಚಕ್ರತೀರ್ಥ ಅವರ ಹಳೆಯ ಪೋಸ್ಟ್‌ ವೈರಲ್ ಆಗಿದೆ. ಲಕ್ಷ್ಮಣ ಆಕಾಶೆ ಕಾರ್ಕಳ ಎಂಬಾತ ಕುವೆಂಪು ಅವರ ಬಗ್ಗೆ ಬರೆದಿರುವ ಬರಹ ಅವಹೇಳನಕಾರಿಯಾಗಿದೆ ಎಂದು ಕನ್ನಡಿಗರು ಸಿಟ್ಟಿಗೆದ್ದಿದ್ದು, ಈ ಹಿನ್ನೆಲೆಯಲ್ಲಿ ಸ್ವಾಮೀಜಿ ಪ್ರತಿಕ್ರಿಯೆ ನೀಡಿದ ಬಳಿಕ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಅವರು ಸ್ವಾಮೀಜಿಯವರನ್ನು ಭೇಟಿಯಾಗಿದ್ದಾರೆ. ತಮ್ಮ ಪಟ್ಟು ಬದಲಿಸದ ಶ್ರೀಗಳು ಕ್ರಮಕ್ಕೆ ಒತ್ತಾಯಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಸಾಮಾಜಿಕ ಜಾಲತಾಣದ ಮೂಲಕ ಕುವೆಂಪು ಮತ್ತು ನಾಡಗೀತೆಯನ್ನು ಅವಮಾನಿಸಿರುವ ಎಲ್ಲರ ವಿರುದ್ಧವೂ ಸೈಬರ್‌ ಅಪರಾಧ ಕಾನೂನಿನ ಅಡಿ ಕ್ರಮ ತೆಗೆದುಕೊಳ್ಳಬೇಕು” ಎಂದು ತಮ್ಮ ನಿಲುವನ್ನು ಪುನರುಚ್ಚರಿಸಿದ್ದಾರೆ.

ಸ್ವಾಮೀಜಿಯವರು ಸರ್ಕಾರಕ್ಕೆ ಪತ್ರ ಬರೆದ ಹಿನ್ನೆಲೆಯಲ್ಲಿ ಸೋಮವಾರ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಅವರು ಸ್ವಾಮೀಜಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

‘ನಾಡಗೀತೆಯನ್ನು ಅವಹೇಳನ ಮಾಡಿದ ವಿಷಯವನ್ನು ಸರ್ಕಾರ ಹಿಂದೆಯೇ ಗಂಭೀರವಾಗಿ ಪರಿಗಣಿಸಿ ಕಾನೂನು ಕ್ರಮ ಕೈಗೊಂಡಿದ್ದರೆ, ಈಗ ಈ ಸ್ಥಿತಿ ಬರುತ್ತಿರಲಿಲ್ಲ. ಈಗಲೂ ಸುಮ್ಮನೆ ಬಿಟ್ಟರೆ ಮುಂದೆ ಬೇರೆ ಯಾರಾದರೂ ರಾಷ್ಟ್ರಗೀತೆಯನ್ನು ಅವಮಾನಿಸಲೂಬಹುದು. ಸಾಮಾಜಿಕ ಜಾಲತಾಣದ ಮೂಲಕ ಅವಮಾನಿಸಿದವರು, ಅದನ್ನು ಹಂಚಿಕೊಂಡವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು’ ಎಂದು ಸ್ವಾಮೀಜಿ ತಿಳಿಸಿದರೆಂದು ಮೂಲಗಳು ಹೇಳಿರುವುದಾಗಿ ‘ಪ್ರಜಾವಾಣಿ’ ವರದಿ ಮಾಡಿದೆ.

ಬೇಸರ ವ್ಯಕ್ತಪಡಿಸಿದ್ದ ಶ್ರೀಗಳು

ಕುವೆಂಪು ಅವರು ತಮ್ಮ ಯೌವನದ ಕಾಲದಲ್ಲಿ ಬರೆದ ‘ಜೈ ಭಾರತ ಜನನಿಯ ತನುಜಾತೆ’ ಕವಿತೆಯು ಕಳೆದ ತೊಂಬತ್ತು ವರ್ಷಗಳಿಂದ ಕನ್ನಡಿಗರ ಹೃದಯದಲ್ಲಿ ನೆಲೆನಿಂತು, ದೇಶಭಕ್ತಿ ಮತ್ತು ನಾಡಪ್ರೇಮವನ್ನು ಉದ್ದೀಪಿಸಿದೆ. ಇದನ್ನು ಮನಗಂಡು ಕರ್ನಾಟಕ ಸರ್ಕಾರವು ‘ಜೈ ಭಾರತ ಜನನಿಯ ತನುಜಾತೆ’ ಗೀತೆಯನ್ನು ನಾಡಗೀತೆಯಾಗಿ ಘೋಷಿಸಿತು. ಅದನ್ನು ನಾಡಗೀತೆಯಾಗಿ ಘೋಷಣೆ ಮಾಡಬೇಕು ಎಂದು ಯಾರೂ ಕೇಳಿರಲಿಲ್ಲ. ಅದು ಸರ್ಕಾರವೇ ತೆಗೆದುಕೊಂಡ ತೀರ್ಮಾನವಾಗಿತ್ತು. ಕನ್ನಡ ಮತ್ತು ಕನ್ನಡಿಗರ ಅಸ್ಮಿತೆಯಾಗಿರುವ ಅಧಿಕೃತ ನಾಡಗೀತೆಯನ್ನು ಹಾಡಿ ಕೋಟಿ ಕೋಟಿ ಕನ್ನಡಿಗರು ಸಂಭ್ರಮಿಸಿದ್ದಾರೆ, ಸಂಭ್ರಮಿಸುತ್ತಿದ್ದಾರೆ. ಆದರೆ ಈಚೆಗೆ ಕೆಲವರು ನಾಡಗೀತೆಯನ್ನು ತಿರುಚಿ ಬರೆದು, ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವುದು ಸರ್ಕಾರದ ತೀರ್ಮಾನವನ್ನು ಗೇಲಿ ಮಾಡುತ್ತಿರುವಂತಿದೆ ಎಂದು ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದ್ದರು.

ಇದನ್ನೂ ಓದಿರಿ: ನಾಡಗೀತೆ, ರಾಷ್ಟ್ರಕವಿಗೆ ಅವಮಾನ: ಕ್ರಮಕ್ಕೆ ಕಸಾಪ ಅಧ್ಯಕ್ಷ ಮಹೇಶ ಜೋಶಿ ಆಗ್ರಹ

ನಾಡಗೀತೆಯನ್ನು ತಿರುಚಿರುವುದಷ್ಟೇ ಅಲ್ಲ, ಮಹಾಕವಿಗಳೂ ರಾಷ್ಟ್ರಕವಿಗಳೂ ಆಗಿರುವ ಕುವೆಂಪು ಅವರ ಬಗ್ಗೆ ಅತ್ಯಂತ ಕೀಳುಭಾಷೆಯಲ್ಲಿ ಅವಹೇಳನಕಾರಿ ಲೇಖನಗಳನ್ನು ಬರೆದಿದ್ದಾರೆ. ನಾಡಗೀತೆಯನ್ನು ಅವಮಾನಿಸುವುದೆಂದರೆ ರಾಷ್ಟ್ರಗೀತೆಯನ್ನು ಅವಮಾನಿಸಿದಂತೆ; ಹಾಗೂ ನೆಲದ ಕಾನೂನಿನ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದರು.

ಪ್ರಯುಕ್ತ, ರಾಷ್ಟ್ರಕವಿ ಕುವೆಂಪು ಅವರನ್ನು ಅಸಂಸದೀಯ ಭಾಷೆಯಲ್ಲಿ ನಿಂದಿಸಿ ಲೇಖನ ಬರೆದಿರುವ ಮತ್ತು ನಾಡಗೀತೆಯನ್ನು ತಿರುಚಿ ಬರೆದಿರುವವರ ವಿರುದ್ಧ ಸೈಬರ್ ಕ್ರೈಮ್ ಅಡಿಯಲ್ಲಿ ಕಾನೂನು ಪ್ರಕಾರ ಸರ್ಕಾರವು ಕ್ರಮ ಜರುಗಿಸುತ್ತದೆಂದು ಭಾವಿಸುತ್ತೇವೆ. ಹಾಗೂ ಈ ಮೂಲಕ ಸರ್ಕಾರವು ಕಾನೂನು ಮತ್ತು ವ್ಯಕ್ತಿ ಸ್ವಾತಂತ್ರ್ಯದ ಮೇಲೆ ದಾಳಿ ಮಾಡುವವರನ್ನು ಕ್ಷಮಿಸುವುದಿಲ್ಲ ಎಂಬ ಸಂದೇಶ ರವಾನಿಸುತ್ತದೆ ಎಂಬುದು ನಮ್ಮ ಅಭಿಲಾಷೆಯಾಗಿದೆ ಎಂದಿದ್ದರು.

ಸ್ವಾಮೀಜಿಯವರ ಹೇಳಿಕೆ ಹೊರಬಿದ್ದ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪ್ರತಿಕ್ರಿಯೆ ನೀಡಿ, “ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು. ಶಿಕ್ಷಣ ಸಚಿವರು ಸ್ವಾಮೀಜಿಯವರನ್ನು ಭೇಟಿಯಾಗಲಿದ್ದಾರೆ” ಎಂದು ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Wish and hope we will all be equally outraged on all polarization and anti national issues irrespective which party or who the culprit is ? Yes in this case it is anti national ( in my book)to belittle Kannada Culture and Language

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...