Homeಕರ್ನಾಟಕಸುಮ್ಮನೆ ಬಿಟ್ಟರೆ ರಾಷ್ಟ್ರಗೀತೆಗೂ ಅವಮಾನ ಮಾಡಬಹುದು: ಪಟ್ಟು ಬದಲಿಸದ ಚುಂಚನಗಿರಿ ಶ್ರೀಗಳು

ಸುಮ್ಮನೆ ಬಿಟ್ಟರೆ ರಾಷ್ಟ್ರಗೀತೆಗೂ ಅವಮಾನ ಮಾಡಬಹುದು: ಪಟ್ಟು ಬದಲಿಸದ ಚುಂಚನಗಿರಿ ಶ್ರೀಗಳು

- Advertisement -
- Advertisement -

“ಸುಮ್ಮನೇ ಬಿಟ್ಟರೆ ಮುಂದೆ ಯಾರಾದರೂ ರಾಷ್ಟ್ರಗೀತೆಗೂ ಅವಮಾನ ಮಾಡಬಹುದು” ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಸ್ವಾಮೀಜಿ ಆತಂಕ ವ್ಯಕ್ತಪಡಿಸಿರುವುದಾಗಿ ವರದಿಯಾಗಿದೆ.

ರಾಷ್ಟ್ರಕವಿ ಕುವೆಂಪು ಅವರು ಬರೆದ ನಾಡಗೀತೆಯನ್ನು ಗೇಲಿ ಮಾಡಿ, ವಿಕೃತಗೊಳಿಸಿ, ಅವಮಾನ ಮಾಡಿರುವ ರೋಹಿತ್ ಚಕ್ರತೀರ್ಥ ಅವರ ಹಳೆಯ ಪೋಸ್ಟ್‌ ವೈರಲ್ ಆಗಿದೆ. ಲಕ್ಷ್ಮಣ ಆಕಾಶೆ ಕಾರ್ಕಳ ಎಂಬಾತ ಕುವೆಂಪು ಅವರ ಬಗ್ಗೆ ಬರೆದಿರುವ ಬರಹ ಅವಹೇಳನಕಾರಿಯಾಗಿದೆ ಎಂದು ಕನ್ನಡಿಗರು ಸಿಟ್ಟಿಗೆದ್ದಿದ್ದು, ಈ ಹಿನ್ನೆಲೆಯಲ್ಲಿ ಸ್ವಾಮೀಜಿ ಪ್ರತಿಕ್ರಿಯೆ ನೀಡಿದ ಬಳಿಕ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಅವರು ಸ್ವಾಮೀಜಿಯವರನ್ನು ಭೇಟಿಯಾಗಿದ್ದಾರೆ. ತಮ್ಮ ಪಟ್ಟು ಬದಲಿಸದ ಶ್ರೀಗಳು ಕ್ರಮಕ್ಕೆ ಒತ್ತಾಯಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಸಾಮಾಜಿಕ ಜಾಲತಾಣದ ಮೂಲಕ ಕುವೆಂಪು ಮತ್ತು ನಾಡಗೀತೆಯನ್ನು ಅವಮಾನಿಸಿರುವ ಎಲ್ಲರ ವಿರುದ್ಧವೂ ಸೈಬರ್‌ ಅಪರಾಧ ಕಾನೂನಿನ ಅಡಿ ಕ್ರಮ ತೆಗೆದುಕೊಳ್ಳಬೇಕು” ಎಂದು ತಮ್ಮ ನಿಲುವನ್ನು ಪುನರುಚ್ಚರಿಸಿದ್ದಾರೆ.

ಸ್ವಾಮೀಜಿಯವರು ಸರ್ಕಾರಕ್ಕೆ ಪತ್ರ ಬರೆದ ಹಿನ್ನೆಲೆಯಲ್ಲಿ ಸೋಮವಾರ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಅವರು ಸ್ವಾಮೀಜಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

‘ನಾಡಗೀತೆಯನ್ನು ಅವಹೇಳನ ಮಾಡಿದ ವಿಷಯವನ್ನು ಸರ್ಕಾರ ಹಿಂದೆಯೇ ಗಂಭೀರವಾಗಿ ಪರಿಗಣಿಸಿ ಕಾನೂನು ಕ್ರಮ ಕೈಗೊಂಡಿದ್ದರೆ, ಈಗ ಈ ಸ್ಥಿತಿ ಬರುತ್ತಿರಲಿಲ್ಲ. ಈಗಲೂ ಸುಮ್ಮನೆ ಬಿಟ್ಟರೆ ಮುಂದೆ ಬೇರೆ ಯಾರಾದರೂ ರಾಷ್ಟ್ರಗೀತೆಯನ್ನು ಅವಮಾನಿಸಲೂಬಹುದು. ಸಾಮಾಜಿಕ ಜಾಲತಾಣದ ಮೂಲಕ ಅವಮಾನಿಸಿದವರು, ಅದನ್ನು ಹಂಚಿಕೊಂಡವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು’ ಎಂದು ಸ್ವಾಮೀಜಿ ತಿಳಿಸಿದರೆಂದು ಮೂಲಗಳು ಹೇಳಿರುವುದಾಗಿ ‘ಪ್ರಜಾವಾಣಿ’ ವರದಿ ಮಾಡಿದೆ.

ಬೇಸರ ವ್ಯಕ್ತಪಡಿಸಿದ್ದ ಶ್ರೀಗಳು

ಕುವೆಂಪು ಅವರು ತಮ್ಮ ಯೌವನದ ಕಾಲದಲ್ಲಿ ಬರೆದ ‘ಜೈ ಭಾರತ ಜನನಿಯ ತನುಜಾತೆ’ ಕವಿತೆಯು ಕಳೆದ ತೊಂಬತ್ತು ವರ್ಷಗಳಿಂದ ಕನ್ನಡಿಗರ ಹೃದಯದಲ್ಲಿ ನೆಲೆನಿಂತು, ದೇಶಭಕ್ತಿ ಮತ್ತು ನಾಡಪ್ರೇಮವನ್ನು ಉದ್ದೀಪಿಸಿದೆ. ಇದನ್ನು ಮನಗಂಡು ಕರ್ನಾಟಕ ಸರ್ಕಾರವು ‘ಜೈ ಭಾರತ ಜನನಿಯ ತನುಜಾತೆ’ ಗೀತೆಯನ್ನು ನಾಡಗೀತೆಯಾಗಿ ಘೋಷಿಸಿತು. ಅದನ್ನು ನಾಡಗೀತೆಯಾಗಿ ಘೋಷಣೆ ಮಾಡಬೇಕು ಎಂದು ಯಾರೂ ಕೇಳಿರಲಿಲ್ಲ. ಅದು ಸರ್ಕಾರವೇ ತೆಗೆದುಕೊಂಡ ತೀರ್ಮಾನವಾಗಿತ್ತು. ಕನ್ನಡ ಮತ್ತು ಕನ್ನಡಿಗರ ಅಸ್ಮಿತೆಯಾಗಿರುವ ಅಧಿಕೃತ ನಾಡಗೀತೆಯನ್ನು ಹಾಡಿ ಕೋಟಿ ಕೋಟಿ ಕನ್ನಡಿಗರು ಸಂಭ್ರಮಿಸಿದ್ದಾರೆ, ಸಂಭ್ರಮಿಸುತ್ತಿದ್ದಾರೆ. ಆದರೆ ಈಚೆಗೆ ಕೆಲವರು ನಾಡಗೀತೆಯನ್ನು ತಿರುಚಿ ಬರೆದು, ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವುದು ಸರ್ಕಾರದ ತೀರ್ಮಾನವನ್ನು ಗೇಲಿ ಮಾಡುತ್ತಿರುವಂತಿದೆ ಎಂದು ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದ್ದರು.

ಇದನ್ನೂ ಓದಿರಿ: ನಾಡಗೀತೆ, ರಾಷ್ಟ್ರಕವಿಗೆ ಅವಮಾನ: ಕ್ರಮಕ್ಕೆ ಕಸಾಪ ಅಧ್ಯಕ್ಷ ಮಹೇಶ ಜೋಶಿ ಆಗ್ರಹ

ನಾಡಗೀತೆಯನ್ನು ತಿರುಚಿರುವುದಷ್ಟೇ ಅಲ್ಲ, ಮಹಾಕವಿಗಳೂ ರಾಷ್ಟ್ರಕವಿಗಳೂ ಆಗಿರುವ ಕುವೆಂಪು ಅವರ ಬಗ್ಗೆ ಅತ್ಯಂತ ಕೀಳುಭಾಷೆಯಲ್ಲಿ ಅವಹೇಳನಕಾರಿ ಲೇಖನಗಳನ್ನು ಬರೆದಿದ್ದಾರೆ. ನಾಡಗೀತೆಯನ್ನು ಅವಮಾನಿಸುವುದೆಂದರೆ ರಾಷ್ಟ್ರಗೀತೆಯನ್ನು ಅವಮಾನಿಸಿದಂತೆ; ಹಾಗೂ ನೆಲದ ಕಾನೂನಿನ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದರು.

ಪ್ರಯುಕ್ತ, ರಾಷ್ಟ್ರಕವಿ ಕುವೆಂಪು ಅವರನ್ನು ಅಸಂಸದೀಯ ಭಾಷೆಯಲ್ಲಿ ನಿಂದಿಸಿ ಲೇಖನ ಬರೆದಿರುವ ಮತ್ತು ನಾಡಗೀತೆಯನ್ನು ತಿರುಚಿ ಬರೆದಿರುವವರ ವಿರುದ್ಧ ಸೈಬರ್ ಕ್ರೈಮ್ ಅಡಿಯಲ್ಲಿ ಕಾನೂನು ಪ್ರಕಾರ ಸರ್ಕಾರವು ಕ್ರಮ ಜರುಗಿಸುತ್ತದೆಂದು ಭಾವಿಸುತ್ತೇವೆ. ಹಾಗೂ ಈ ಮೂಲಕ ಸರ್ಕಾರವು ಕಾನೂನು ಮತ್ತು ವ್ಯಕ್ತಿ ಸ್ವಾತಂತ್ರ್ಯದ ಮೇಲೆ ದಾಳಿ ಮಾಡುವವರನ್ನು ಕ್ಷಮಿಸುವುದಿಲ್ಲ ಎಂಬ ಸಂದೇಶ ರವಾನಿಸುತ್ತದೆ ಎಂಬುದು ನಮ್ಮ ಅಭಿಲಾಷೆಯಾಗಿದೆ ಎಂದಿದ್ದರು.

ಸ್ವಾಮೀಜಿಯವರ ಹೇಳಿಕೆ ಹೊರಬಿದ್ದ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪ್ರತಿಕ್ರಿಯೆ ನೀಡಿ, “ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು. ಶಿಕ್ಷಣ ಸಚಿವರು ಸ್ವಾಮೀಜಿಯವರನ್ನು ಭೇಟಿಯಾಗಲಿದ್ದಾರೆ” ಎಂದು ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Wish and hope we will all be equally outraged on all polarization and anti national issues irrespective which party or who the culprit is ? Yes in this case it is anti national ( in my book)to belittle Kannada Culture and Language

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...