“ಸುಮ್ಮನೇ ಬಿಟ್ಟರೆ ಮುಂದೆ ಯಾರಾದರೂ ರಾಷ್ಟ್ರಗೀತೆಗೂ ಅವಮಾನ ಮಾಡಬಹುದು” ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಸ್ವಾಮೀಜಿ ಆತಂಕ ವ್ಯಕ್ತಪಡಿಸಿರುವುದಾಗಿ ವರದಿಯಾಗಿದೆ.
ರಾಷ್ಟ್ರಕವಿ ಕುವೆಂಪು ಅವರು ಬರೆದ ನಾಡಗೀತೆಯನ್ನು ಗೇಲಿ ಮಾಡಿ, ವಿಕೃತಗೊಳಿಸಿ, ಅವಮಾನ ಮಾಡಿರುವ ರೋಹಿತ್ ಚಕ್ರತೀರ್ಥ ಅವರ ಹಳೆಯ ಪೋಸ್ಟ್ ವೈರಲ್ ಆಗಿದೆ. ಲಕ್ಷ್ಮಣ ಆಕಾಶೆ ಕಾರ್ಕಳ ಎಂಬಾತ ಕುವೆಂಪು ಅವರ ಬಗ್ಗೆ ಬರೆದಿರುವ ಬರಹ ಅವಹೇಳನಕಾರಿಯಾಗಿದೆ ಎಂದು ಕನ್ನಡಿಗರು ಸಿಟ್ಟಿಗೆದ್ದಿದ್ದು, ಈ ಹಿನ್ನೆಲೆಯಲ್ಲಿ ಸ್ವಾಮೀಜಿ ಪ್ರತಿಕ್ರಿಯೆ ನೀಡಿದ ಬಳಿಕ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಸ್ವಾಮೀಜಿಯವರನ್ನು ಭೇಟಿಯಾಗಿದ್ದಾರೆ. ತಮ್ಮ ಪಟ್ಟು ಬದಲಿಸದ ಶ್ರೀಗಳು ಕ್ರಮಕ್ಕೆ ಒತ್ತಾಯಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
“ಸಾಮಾಜಿಕ ಜಾಲತಾಣದ ಮೂಲಕ ಕುವೆಂಪು ಮತ್ತು ನಾಡಗೀತೆಯನ್ನು ಅವಮಾನಿಸಿರುವ ಎಲ್ಲರ ವಿರುದ್ಧವೂ ಸೈಬರ್ ಅಪರಾಧ ಕಾನೂನಿನ ಅಡಿ ಕ್ರಮ ತೆಗೆದುಕೊಳ್ಳಬೇಕು” ಎಂದು ತಮ್ಮ ನಿಲುವನ್ನು ಪುನರುಚ್ಚರಿಸಿದ್ದಾರೆ.
ಸ್ವಾಮೀಜಿಯವರು ಸರ್ಕಾರಕ್ಕೆ ಪತ್ರ ಬರೆದ ಹಿನ್ನೆಲೆಯಲ್ಲಿ ಸೋಮವಾರ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಸ್ವಾಮೀಜಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
‘ನಾಡಗೀತೆಯನ್ನು ಅವಹೇಳನ ಮಾಡಿದ ವಿಷಯವನ್ನು ಸರ್ಕಾರ ಹಿಂದೆಯೇ ಗಂಭೀರವಾಗಿ ಪರಿಗಣಿಸಿ ಕಾನೂನು ಕ್ರಮ ಕೈಗೊಂಡಿದ್ದರೆ, ಈಗ ಈ ಸ್ಥಿತಿ ಬರುತ್ತಿರಲಿಲ್ಲ. ಈಗಲೂ ಸುಮ್ಮನೆ ಬಿಟ್ಟರೆ ಮುಂದೆ ಬೇರೆ ಯಾರಾದರೂ ರಾಷ್ಟ್ರಗೀತೆಯನ್ನು ಅವಮಾನಿಸಲೂಬಹುದು. ಸಾಮಾಜಿಕ ಜಾಲತಾಣದ ಮೂಲಕ ಅವಮಾನಿಸಿದವರು, ಅದನ್ನು ಹಂಚಿಕೊಂಡವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು’ ಎಂದು ಸ್ವಾಮೀಜಿ ತಿಳಿಸಿದರೆಂದು ಮೂಲಗಳು ಹೇಳಿರುವುದಾಗಿ ‘ಪ್ರಜಾವಾಣಿ’ ವರದಿ ಮಾಡಿದೆ.
ಬೇಸರ ವ್ಯಕ್ತಪಡಿಸಿದ್ದ ಶ್ರೀಗಳು
ಕುವೆಂಪು ಅವರು ತಮ್ಮ ಯೌವನದ ಕಾಲದಲ್ಲಿ ಬರೆದ ‘ಜೈ ಭಾರತ ಜನನಿಯ ತನುಜಾತೆ’ ಕವಿತೆಯು ಕಳೆದ ತೊಂಬತ್ತು ವರ್ಷಗಳಿಂದ ಕನ್ನಡಿಗರ ಹೃದಯದಲ್ಲಿ ನೆಲೆನಿಂತು, ದೇಶಭಕ್ತಿ ಮತ್ತು ನಾಡಪ್ರೇಮವನ್ನು ಉದ್ದೀಪಿಸಿದೆ. ಇದನ್ನು ಮನಗಂಡು ಕರ್ನಾಟಕ ಸರ್ಕಾರವು ‘ಜೈ ಭಾರತ ಜನನಿಯ ತನುಜಾತೆ’ ಗೀತೆಯನ್ನು ನಾಡಗೀತೆಯಾಗಿ ಘೋಷಿಸಿತು. ಅದನ್ನು ನಾಡಗೀತೆಯಾಗಿ ಘೋಷಣೆ ಮಾಡಬೇಕು ಎಂದು ಯಾರೂ ಕೇಳಿರಲಿಲ್ಲ. ಅದು ಸರ್ಕಾರವೇ ತೆಗೆದುಕೊಂಡ ತೀರ್ಮಾನವಾಗಿತ್ತು. ಕನ್ನಡ ಮತ್ತು ಕನ್ನಡಿಗರ ಅಸ್ಮಿತೆಯಾಗಿರುವ ಅಧಿಕೃತ ನಾಡಗೀತೆಯನ್ನು ಹಾಡಿ ಕೋಟಿ ಕೋಟಿ ಕನ್ನಡಿಗರು ಸಂಭ್ರಮಿಸಿದ್ದಾರೆ, ಸಂಭ್ರಮಿಸುತ್ತಿದ್ದಾರೆ. ಆದರೆ ಈಚೆಗೆ ಕೆಲವರು ನಾಡಗೀತೆಯನ್ನು ತಿರುಚಿ ಬರೆದು, ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವುದು ಸರ್ಕಾರದ ತೀರ್ಮಾನವನ್ನು ಗೇಲಿ ಮಾಡುತ್ತಿರುವಂತಿದೆ ಎಂದು ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದ್ದರು.
ಇದನ್ನೂ ಓದಿರಿ: ನಾಡಗೀತೆ, ರಾಷ್ಟ್ರಕವಿಗೆ ಅವಮಾನ: ಕ್ರಮಕ್ಕೆ ಕಸಾಪ ಅಧ್ಯಕ್ಷ ಮಹೇಶ ಜೋಶಿ ಆಗ್ರಹ
ನಾಡಗೀತೆಯನ್ನು ತಿರುಚಿರುವುದಷ್ಟೇ ಅಲ್ಲ, ಮಹಾಕವಿಗಳೂ ರಾಷ್ಟ್ರಕವಿಗಳೂ ಆಗಿರುವ ಕುವೆಂಪು ಅವರ ಬಗ್ಗೆ ಅತ್ಯಂತ ಕೀಳುಭಾಷೆಯಲ್ಲಿ ಅವಹೇಳನಕಾರಿ ಲೇಖನಗಳನ್ನು ಬರೆದಿದ್ದಾರೆ. ನಾಡಗೀತೆಯನ್ನು ಅವಮಾನಿಸುವುದೆಂದರೆ ರಾಷ್ಟ್ರಗೀತೆಯನ್ನು ಅವಮಾನಿಸಿದಂತೆ; ಹಾಗೂ ನೆಲದ ಕಾನೂನಿನ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದರು.
ಪ್ರಯುಕ್ತ, ರಾಷ್ಟ್ರಕವಿ ಕುವೆಂಪು ಅವರನ್ನು ಅಸಂಸದೀಯ ಭಾಷೆಯಲ್ಲಿ ನಿಂದಿಸಿ ಲೇಖನ ಬರೆದಿರುವ ಮತ್ತು ನಾಡಗೀತೆಯನ್ನು ತಿರುಚಿ ಬರೆದಿರುವವರ ವಿರುದ್ಧ ಸೈಬರ್ ಕ್ರೈಮ್ ಅಡಿಯಲ್ಲಿ ಕಾನೂನು ಪ್ರಕಾರ ಸರ್ಕಾರವು ಕ್ರಮ ಜರುಗಿಸುತ್ತದೆಂದು ಭಾವಿಸುತ್ತೇವೆ. ಹಾಗೂ ಈ ಮೂಲಕ ಸರ್ಕಾರವು ಕಾನೂನು ಮತ್ತು ವ್ಯಕ್ತಿ ಸ್ವಾತಂತ್ರ್ಯದ ಮೇಲೆ ದಾಳಿ ಮಾಡುವವರನ್ನು ಕ್ಷಮಿಸುವುದಿಲ್ಲ ಎಂಬ ಸಂದೇಶ ರವಾನಿಸುತ್ತದೆ ಎಂಬುದು ನಮ್ಮ ಅಭಿಲಾಷೆಯಾಗಿದೆ ಎಂದಿದ್ದರು.
ಸ್ವಾಮೀಜಿಯವರ ಹೇಳಿಕೆ ಹೊರಬಿದ್ದ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪ್ರತಿಕ್ರಿಯೆ ನೀಡಿ, “ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು. ಶಿಕ್ಷಣ ಸಚಿವರು ಸ್ವಾಮೀಜಿಯವರನ್ನು ಭೇಟಿಯಾಗಲಿದ್ದಾರೆ” ಎಂದು ತಿಳಿಸಿದ್ದರು.
ಕೆಟ್ಟ ಮೇಲೆ ಬುದ್ದಿ ಬಂದಾಗಾಯ್ತು
Wish and hope we will all be equally outraged on all polarization and anti national issues irrespective which party or who the culprit is ? Yes in this case it is anti national ( in my book)to belittle Kannada Culture and Language