Homeಕರ್ನಾಟಕಸುಮ್ಮನೆ ಬಿಟ್ಟರೆ ರಾಷ್ಟ್ರಗೀತೆಗೂ ಅವಮಾನ ಮಾಡಬಹುದು: ಪಟ್ಟು ಬದಲಿಸದ ಚುಂಚನಗಿರಿ ಶ್ರೀಗಳು

ಸುಮ್ಮನೆ ಬಿಟ್ಟರೆ ರಾಷ್ಟ್ರಗೀತೆಗೂ ಅವಮಾನ ಮಾಡಬಹುದು: ಪಟ್ಟು ಬದಲಿಸದ ಚುಂಚನಗಿರಿ ಶ್ರೀಗಳು

- Advertisement -
- Advertisement -

“ಸುಮ್ಮನೇ ಬಿಟ್ಟರೆ ಮುಂದೆ ಯಾರಾದರೂ ರಾಷ್ಟ್ರಗೀತೆಗೂ ಅವಮಾನ ಮಾಡಬಹುದು” ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಸ್ವಾಮೀಜಿ ಆತಂಕ ವ್ಯಕ್ತಪಡಿಸಿರುವುದಾಗಿ ವರದಿಯಾಗಿದೆ.

ರಾಷ್ಟ್ರಕವಿ ಕುವೆಂಪು ಅವರು ಬರೆದ ನಾಡಗೀತೆಯನ್ನು ಗೇಲಿ ಮಾಡಿ, ವಿಕೃತಗೊಳಿಸಿ, ಅವಮಾನ ಮಾಡಿರುವ ರೋಹಿತ್ ಚಕ್ರತೀರ್ಥ ಅವರ ಹಳೆಯ ಪೋಸ್ಟ್‌ ವೈರಲ್ ಆಗಿದೆ. ಲಕ್ಷ್ಮಣ ಆಕಾಶೆ ಕಾರ್ಕಳ ಎಂಬಾತ ಕುವೆಂಪು ಅವರ ಬಗ್ಗೆ ಬರೆದಿರುವ ಬರಹ ಅವಹೇಳನಕಾರಿಯಾಗಿದೆ ಎಂದು ಕನ್ನಡಿಗರು ಸಿಟ್ಟಿಗೆದ್ದಿದ್ದು, ಈ ಹಿನ್ನೆಲೆಯಲ್ಲಿ ಸ್ವಾಮೀಜಿ ಪ್ರತಿಕ್ರಿಯೆ ನೀಡಿದ ಬಳಿಕ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಅವರು ಸ್ವಾಮೀಜಿಯವರನ್ನು ಭೇಟಿಯಾಗಿದ್ದಾರೆ. ತಮ್ಮ ಪಟ್ಟು ಬದಲಿಸದ ಶ್ರೀಗಳು ಕ್ರಮಕ್ಕೆ ಒತ್ತಾಯಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಸಾಮಾಜಿಕ ಜಾಲತಾಣದ ಮೂಲಕ ಕುವೆಂಪು ಮತ್ತು ನಾಡಗೀತೆಯನ್ನು ಅವಮಾನಿಸಿರುವ ಎಲ್ಲರ ವಿರುದ್ಧವೂ ಸೈಬರ್‌ ಅಪರಾಧ ಕಾನೂನಿನ ಅಡಿ ಕ್ರಮ ತೆಗೆದುಕೊಳ್ಳಬೇಕು” ಎಂದು ತಮ್ಮ ನಿಲುವನ್ನು ಪುನರುಚ್ಚರಿಸಿದ್ದಾರೆ.

ಸ್ವಾಮೀಜಿಯವರು ಸರ್ಕಾರಕ್ಕೆ ಪತ್ರ ಬರೆದ ಹಿನ್ನೆಲೆಯಲ್ಲಿ ಸೋಮವಾರ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಅವರು ಸ್ವಾಮೀಜಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

‘ನಾಡಗೀತೆಯನ್ನು ಅವಹೇಳನ ಮಾಡಿದ ವಿಷಯವನ್ನು ಸರ್ಕಾರ ಹಿಂದೆಯೇ ಗಂಭೀರವಾಗಿ ಪರಿಗಣಿಸಿ ಕಾನೂನು ಕ್ರಮ ಕೈಗೊಂಡಿದ್ದರೆ, ಈಗ ಈ ಸ್ಥಿತಿ ಬರುತ್ತಿರಲಿಲ್ಲ. ಈಗಲೂ ಸುಮ್ಮನೆ ಬಿಟ್ಟರೆ ಮುಂದೆ ಬೇರೆ ಯಾರಾದರೂ ರಾಷ್ಟ್ರಗೀತೆಯನ್ನು ಅವಮಾನಿಸಲೂಬಹುದು. ಸಾಮಾಜಿಕ ಜಾಲತಾಣದ ಮೂಲಕ ಅವಮಾನಿಸಿದವರು, ಅದನ್ನು ಹಂಚಿಕೊಂಡವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು’ ಎಂದು ಸ್ವಾಮೀಜಿ ತಿಳಿಸಿದರೆಂದು ಮೂಲಗಳು ಹೇಳಿರುವುದಾಗಿ ‘ಪ್ರಜಾವಾಣಿ’ ವರದಿ ಮಾಡಿದೆ.

ಬೇಸರ ವ್ಯಕ್ತಪಡಿಸಿದ್ದ ಶ್ರೀಗಳು

ಕುವೆಂಪು ಅವರು ತಮ್ಮ ಯೌವನದ ಕಾಲದಲ್ಲಿ ಬರೆದ ‘ಜೈ ಭಾರತ ಜನನಿಯ ತನುಜಾತೆ’ ಕವಿತೆಯು ಕಳೆದ ತೊಂಬತ್ತು ವರ್ಷಗಳಿಂದ ಕನ್ನಡಿಗರ ಹೃದಯದಲ್ಲಿ ನೆಲೆನಿಂತು, ದೇಶಭಕ್ತಿ ಮತ್ತು ನಾಡಪ್ರೇಮವನ್ನು ಉದ್ದೀಪಿಸಿದೆ. ಇದನ್ನು ಮನಗಂಡು ಕರ್ನಾಟಕ ಸರ್ಕಾರವು ‘ಜೈ ಭಾರತ ಜನನಿಯ ತನುಜಾತೆ’ ಗೀತೆಯನ್ನು ನಾಡಗೀತೆಯಾಗಿ ಘೋಷಿಸಿತು. ಅದನ್ನು ನಾಡಗೀತೆಯಾಗಿ ಘೋಷಣೆ ಮಾಡಬೇಕು ಎಂದು ಯಾರೂ ಕೇಳಿರಲಿಲ್ಲ. ಅದು ಸರ್ಕಾರವೇ ತೆಗೆದುಕೊಂಡ ತೀರ್ಮಾನವಾಗಿತ್ತು. ಕನ್ನಡ ಮತ್ತು ಕನ್ನಡಿಗರ ಅಸ್ಮಿತೆಯಾಗಿರುವ ಅಧಿಕೃತ ನಾಡಗೀತೆಯನ್ನು ಹಾಡಿ ಕೋಟಿ ಕೋಟಿ ಕನ್ನಡಿಗರು ಸಂಭ್ರಮಿಸಿದ್ದಾರೆ, ಸಂಭ್ರಮಿಸುತ್ತಿದ್ದಾರೆ. ಆದರೆ ಈಚೆಗೆ ಕೆಲವರು ನಾಡಗೀತೆಯನ್ನು ತಿರುಚಿ ಬರೆದು, ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವುದು ಸರ್ಕಾರದ ತೀರ್ಮಾನವನ್ನು ಗೇಲಿ ಮಾಡುತ್ತಿರುವಂತಿದೆ ಎಂದು ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದ್ದರು.

ಇದನ್ನೂ ಓದಿರಿ: ನಾಡಗೀತೆ, ರಾಷ್ಟ್ರಕವಿಗೆ ಅವಮಾನ: ಕ್ರಮಕ್ಕೆ ಕಸಾಪ ಅಧ್ಯಕ್ಷ ಮಹೇಶ ಜೋಶಿ ಆಗ್ರಹ

ನಾಡಗೀತೆಯನ್ನು ತಿರುಚಿರುವುದಷ್ಟೇ ಅಲ್ಲ, ಮಹಾಕವಿಗಳೂ ರಾಷ್ಟ್ರಕವಿಗಳೂ ಆಗಿರುವ ಕುವೆಂಪು ಅವರ ಬಗ್ಗೆ ಅತ್ಯಂತ ಕೀಳುಭಾಷೆಯಲ್ಲಿ ಅವಹೇಳನಕಾರಿ ಲೇಖನಗಳನ್ನು ಬರೆದಿದ್ದಾರೆ. ನಾಡಗೀತೆಯನ್ನು ಅವಮಾನಿಸುವುದೆಂದರೆ ರಾಷ್ಟ್ರಗೀತೆಯನ್ನು ಅವಮಾನಿಸಿದಂತೆ; ಹಾಗೂ ನೆಲದ ಕಾನೂನಿನ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದರು.

ಪ್ರಯುಕ್ತ, ರಾಷ್ಟ್ರಕವಿ ಕುವೆಂಪು ಅವರನ್ನು ಅಸಂಸದೀಯ ಭಾಷೆಯಲ್ಲಿ ನಿಂದಿಸಿ ಲೇಖನ ಬರೆದಿರುವ ಮತ್ತು ನಾಡಗೀತೆಯನ್ನು ತಿರುಚಿ ಬರೆದಿರುವವರ ವಿರುದ್ಧ ಸೈಬರ್ ಕ್ರೈಮ್ ಅಡಿಯಲ್ಲಿ ಕಾನೂನು ಪ್ರಕಾರ ಸರ್ಕಾರವು ಕ್ರಮ ಜರುಗಿಸುತ್ತದೆಂದು ಭಾವಿಸುತ್ತೇವೆ. ಹಾಗೂ ಈ ಮೂಲಕ ಸರ್ಕಾರವು ಕಾನೂನು ಮತ್ತು ವ್ಯಕ್ತಿ ಸ್ವಾತಂತ್ರ್ಯದ ಮೇಲೆ ದಾಳಿ ಮಾಡುವವರನ್ನು ಕ್ಷಮಿಸುವುದಿಲ್ಲ ಎಂಬ ಸಂದೇಶ ರವಾನಿಸುತ್ತದೆ ಎಂಬುದು ನಮ್ಮ ಅಭಿಲಾಷೆಯಾಗಿದೆ ಎಂದಿದ್ದರು.

ಸ್ವಾಮೀಜಿಯವರ ಹೇಳಿಕೆ ಹೊರಬಿದ್ದ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪ್ರತಿಕ್ರಿಯೆ ನೀಡಿ, “ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು. ಶಿಕ್ಷಣ ಸಚಿವರು ಸ್ವಾಮೀಜಿಯವರನ್ನು ಭೇಟಿಯಾಗಲಿದ್ದಾರೆ” ಎಂದು ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Wish and hope we will all be equally outraged on all polarization and anti national issues irrespective which party or who the culprit is ? Yes in this case it is anti national ( in my book)to belittle Kannada Culture and Language

LEAVE A REPLY

Please enter your comment!
Please enter your name here

- Advertisment -

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....