Homeಕರೋನಾ ತಲ್ಲಣಕೇಂದ್ರ ರಾಜ್ಯ ಸರ್ಕಾರಗಳ ನಿರ್ಲಕ್ಷ್ಯ, ಬೇಜವಾಬ್ದಾರಿತನೇ ಆಕ್ಸಿಜನ್ ಬಿಕ್ಕಟ್ಟಿಗೆ ಕಾರಣ: ರಾಜೇಂದ್ರ ಪ್ರಸಾದ್

ಕೇಂದ್ರ ರಾಜ್ಯ ಸರ್ಕಾರಗಳ ನಿರ್ಲಕ್ಷ್ಯ, ಬೇಜವಾಬ್ದಾರಿತನೇ ಆಕ್ಸಿಜನ್ ಬಿಕ್ಕಟ್ಟಿಗೆ ಕಾರಣ: ರಾಜೇಂದ್ರ ಪ್ರಸಾದ್

- Advertisement -
- Advertisement -

ಕಳೆದ ವರ್ಷ ಕೋವಿಡ್‌ನಿಂದ ಬೇರೆ ಬೇರೆ ದೇಶಗಳು ಆಕ್ಸಿಜನ್‌ ಕೊರತೆ ಸಮಸ್ಯೆಯನ್ನು ಎದುರಿಸಿದ್ದವು. ಇದನ್ನರಿತ್ತಿದ್ದ ಭಾರತವು ಕೂಡ ಕೋವಿಡ್‌ ಎರಡನೇ ಅಲೆಯನ್ನು ಎದುರಿಸಲು ಸಮರ್ಪಕ ತಯಾರಿ ಮಾಡಿಕೊಳ್ಳದೇ ಇರುವುದು ಸರ್ಕಾರದ ಬೇಜವಾಬ್ದಾರಿತನವನ್ನು ತೋರಿಸುತ್ತದೆ ಎಂದು ಪ್ರಸಾದ್‌ ಗ್ಯಾಸ್‌ ಸಪ್ಲೈಯರ್ಸ್‌ ಮಾಲೀಕರು ಮತ್ತು ಸಂಕಥನದ ಸಂಪಾದಕರಾಗಿರುವ ರಾಜೇಂದ್ರ ಪ್ರಸಾದ್‌ ಅವರು ಅಭಿಪ್ರಾಯಪಟ್ಟರು.

ಕರ್ನಾಟಕ ಜನಾರೋಗ್ಯ ಚಳವಳಿ ಸಂಘಟನೆಯು ಕರ್ನಾಟಕ ಕೋವಿಡ್‌ ವಾಲೆಂಟಿಯರ್ಸ್‌ ಟೀಮ್‌ ಮತ್ತು ಜನಸಹಾಯ ಸಹಭಾಗಿತ್ವದಲ್ಲಿ ಆಯೋಜಿಸಿದ್ದ `ಆಕ್ಸಿಜನ್‌ ಸಮಸ್ಯೆಯ ಮೂಲ ಎಲ್ಲಿದೆ?’ ವೆಬಿನಾರ್ ಮತ್ತು ಸಮಾಲೋಚನ ಸಭೆಯಲ್ಲಿ ಅವರು ಮಾತನಾಡಿದರು.

ಕೇಂದ್ರ ಸರ್ಕಾರ ಮೊದಲಿನಿಂದಲೂ ಆಕ್ಸಿಜನ್ ವಿಷಯದಲ್ಲಿ ನಿರ್ಲಕ್ಷ್ಯ ಧೋರಣೆಯನ್ನು ತೋರಿಸುತ್ತಲೇ ಬಂದಿದೆ. ದೇಶದ ಬೇರೆ ಬೇರೆ ರಾಜ್ಯಗಳು ಕೋವಿಡ್‌ ಎರಡನೇ ಅಲೆ ಎದುರಿಸಲು ಪೂರ್ವ ಸಿದ್ಧತೆ ನಡೆಸಿದ್ದವು. ಆದರೆ ನಮ್ಮ ರಾಜ್ಯ ಸರ್ಕಾರವು ಈ ಕುರಿತು ಯಾವುದೇ ಪೂರ್ವ ಸಿದ್ಧತೆ ನಡೆಸಿಲ್ಲದೇ ಇರುವುದು ಕೋವಿಡ್‌ ಪಿಡುಗು ಹೆಚ್ಚಾಗಲು ಕಾರಣವಾಯಿತು ಎಂದರು.

ಕೋವಿಡ್‌ ಎರಡನೇ ಅಲೆ ಉಲ್ಬಣಗೊಂಡ ಸಮಯದಲ್ಲಾದರೂ ಬೇರೆ ಬೇರೆ ದೇಶಗಳಿಂದ ಆಕ್ಸಿಜನ್‌ ಕಾನ್ಸಟ್ರೇಟರ್‌, ಸಿಲೆಂಡರ್‌ಗಳನ್ನು ಆಮದು ಮಾಡಿಕೊಳ್ಳಬೇಕಿತ್ತು. ಆದರೆ ಸರ್ಕಾರವು ತಾನೂ ಮಾಡಲಿಲ್ಲ, ಬದಲಿಗೆ ಸಾರ್ವಜನಿಕರು ಸೇವೆ ಮಾಡುತ್ತಿರುವಾಗ ಅವರಿಗೆ ಜಿಎಸ್‌ಟಿಯನ್ನು ವಿಧಿಸುತ್ತಾ ಸಮಸ್ಯೆ ಮಾಡುತ್ತಿದೆ ಎಂದರು.

ಕೋವಿಡ್‌ ಪೂರ್ವಸಿದ್ಧತೆಯಾಗಿ ಬೇರೆ ಬೇರೆ ಜಿಲ್ಲೆಗಳಲ್ಲಿರುವ ಆಕ್ಸಿಜನ್‌ ಘಟಕಗಳನ್ನು ಸೋಂಕಿತರಿಗೆ ಅನುಗುಣವಾಗಿ ವಿವಿಧ ಜಿಲ್ಲೆಗಳಿಗೆ ವಿತರಣೆ ಮಾಡಬಹುದಿತ್ತು. ಆದರೆ ರಾಜ್ಯ ಸರ್ಕಾರಕ್ಕೆ ಯಾವುದೇ ಮುನ್ನೋಟ ಇರದೇ ಇದ್ದ ಕಾರಣ ಚಾಮರಾಜನಗರದಂತಹ ದುರ್ಘಟನೆ ನಡೆಯಲು ಕಾರಣವಾಗಿದೆ. ಕರ್ನಾಟಕದ ದಕ್ಷಿಣ ಭಾಗದಲ್ಲಿ ಹಲವು ಸೌಲಭ್ಯಗಳು ಇರುವಾಗಲೂ ತೀರಾ ಸಮಸ್ಯೆ ಉಂಟಾಗಿರುವಾಗ ಸಾರಿಗೆ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಕರ್ಯಗಳೇ ಇಲ್ಲದೇ ಇರುವ ಉತ್ತರ ಕರ್ನಾಟಕದಲ್ಲಿ ಕೋವಿಡ್‌ ಸಾಂಕ್ರಾಮಿಕವನ್ನು ಹೇಗೆ ಎದುರಿಸುತ್ತಾರೆ ಎಂದು ಅವರು ಪ್ರಶ್ನಿಸಿದರು.

ಆಮ್ಲಜನಕದ ನ್ಯಾಯಯುತ ವಿತರಣೆ ಕೇಂದ್ರ ಸರ್ಕಾರದಿಂದ ಸಾಧ್ಯವಿಲ್ಲವೆಂದು ಅರಿತ ಸುಪ್ರೀಂ ಕೋರ್ಟ್ ತಾನು ಆ ಹೊಣೆಯನ್ನು ಟಾಸ್ಕ್ ಫೋರ್ಸ್ ಸಮಿತಿಗೆ ನೀಡಿದೆ. ಆದರೆ ಅಲ್ಲಿಯೂ ಆಮ್ಲಜನಕ ಉತ್ಪಾದನೆ, ವಿತರಣೆ ಕುರಿತು ತಜ್ಞರು ಇಲ್ಲ. ನಮ್ಮ ರಾಜ್ಯ ಸರ್ಕಾರ ಕೂಡ ಈ ವಿಚಾರದಲ್ಲಿ ತಜ್ಞರನ್ನು ಪರಿಗಣಿಸುತ್ತಿಲ್ಲ. ಈಗಲಾದರೂ ಸರ್ಕಾರ ಎಚ್ಚೆತ್ತುಕೊಂಡು ಕಾರ್ಯೋನ್ಮುಖವಾಗಬೇಕು. ಕೋವಿಡ್‌ ಎರಡನೇ ಅಲೆ ಶಿಖರ ಮುಟ್ಟಿರುವ ಇಂದಿನ ದಿನಗಳಲ್ಲಿ ಮುಂಬರುವ ಕೋವಿಡ್‌ ಮೂರನೇ ಅಲೆಯನ್ನು ಸಮರ್ಥವಾಗಿ ಎದುರಿಸಲು ಸಜ್ಜಾಗಲೇಬೇಕು. ಈಗಲಾದರೂ ಜಿಲ್ಲೆ, ತಾಲ್ಲೂಕು ಹೋಬಳಿ ಮಟ್ಟದಲ್ಲಿ ಪರಿಣಿತರ ಸಮಿತಿ ರಚಿಸಿ ಎಲ್ಲರಿಗೂ ಎಲ್ಲಾ ಜಿಲ್ಲೆಗಳಿಗೂ ಲಿಕ್ವಿಡ್‌ ರೂಪದ ಆಕ್ಸಿಜನ್‌ ಬಳಕೆಗೆ ಸಿಗುವಂತೆ ಮಾಡಬೇಕು. ಸಾಧ್ಯವಾದಲ್ಲಿ ವಿದೇಶಗಳಿಂದ ಆಕ್ಸಿಜನ್‌ ಕಾನ್ಸಂಟ್ರೇಟರ್‌, ಸಿಲೆಂಡರ್‌ಗಳನ್ನು ಆಮದು ಮಾಡಿಕೊಳ್ಳಬೇಕು. ಖಾಸಗಿ ಸಹಭಾಗಿತ್ವದಲ್ಲಿ ಈಗಲಾದರೂ ಆಕ್ಸಿಜನ್‌ ಕಾನ್ಸಟ್ರೇಟರ್‌ಗಳನ್ನು ಸ್ಥಾಪಿಸಲು ಮುಂದಾಗಬೇಕು ಎಂದು ಅವರು ಒತ್ತಾಯಿಸಿದರು.

ಸರ್ಕಾರದ ಪ್ರಯತ್ನ ಮಾತ್ರವಲ್ಲದೇ ಸಾಮುದಾಯಿಕ ಪ್ರಯತ್ನಗಳು ಕೂಡ ಆಗಬೇಕಿದ್ದು, ಗ್ರಾಮೀಣ ಭಾಗದಲ್ಲಿರುವ ಸಮುದಾಯ ಭವನ, ಕಲ್ಯಾಣ ಮಂಟಪಗಳನ್ನು ಕೋವಿಡ್‌ ಸೆಂಟರ್‌ಗಳಾಗಿ ಪುನರ್‌ಸ್ಥಾಪಿಸಬೇಕು. ಇಬ್ಬರು ಸೋಂಕಿತರಿಗೆ ಒಂದು ಸಿಲೆಂಡರ್‌ನಂತೆ ಆಕ್ಸಿಜನ್‌ ಪೂರೈಸಿದಲ್ಲಿ ಸೋಂಕಿತರ ಆರೋಗ್ಯ ಸುಧಾರಿಸುವಂತೆ ನೋಡಿಕೊಳ್ಳಬಹುದು. ಸಿಖ್‌ ಸಮುದಾಯವು ಗುರುದ್ವಾರಗಳಲ್ಲಿ ಆಕ್ಸಿಜನ್‌ ಬೆಡ್‌ಗಳನ್ನು ಸ್ಥಾಪಿಸಿರುವುದು ಸಾಮುದಾಯಿಕ ಪ್ರಯತ್ನಕ್ಕೆ ಉದಾಹರಣೆಯಾಗಿದೆ ಎಂದರು.

ಸರ್ಕಾರ ಕೋವಿಡ್ ಎರಡನೇ ಅಲೆಯನ್ನು ಸಮರ್ಥವಾಗಿ ಎದುರಿಸಬೇಕಿತ್ತು. ಆಕ್ಸಿಜನ್‌ ಕಾನ್ಸಟ್ರೇಟರ್‌, ಆಕ್ಸಿಜನ್‌ ಸಿಲೆಂಡರ್‌ ತರಿಬೇಕಾದದ್ದು, ಸರ್ಕಾರದ ಜವಾಬ್ದಾರಿಯಾಗಿತ್ತು. ಆದರೆ ಸರ್ಕಾರದ ನಿರ್ಲಕ್ಷ್ಯದಿಂದಾಗಿ ಜನರು ಸಾಯುತ್ತಿರುವುದನ್ನು ನಾವು ನೋಡಿದ್ದೇವೆ. ನಾಗರೀಕರಾಗಿ ಈ ಹೊಣೆಯನ್ನು ನಾವು ನಮ್ಮ ಮೇಲೆ ಹಾಕಿಕೊಂಡು ಕೆಲಸ ಮಾಡುತ್ತಿದ್ದೇವೆ. ಎರಡು ಮತ್ತು ಮೂರನೇ ಅಲೆ ನಡುವೆ ಹೆಚ್ಚು ಸಮಯವಿಲ್ಲದೇ ಇರುವುದರಿಂದ ಸರ್ಕಾರವು ಹೆಚ್ಚು ಮುತುವರ್ಜಿಯಿಂದ ಕೆಲಸ ಮಾಡುವಂತೆ ನಾಗರೀಕರಾಗಿ ನಾವು ಒತ್ತಾಯಿಸಬೇಕು ಎಂದು ಕರ್ನಾಟಕ ಜನಾರೋಗ್ಯ ಚಳವಳಿಯ ಡಾ. ಅಖಿಲಾ ವಾಸನ್‌ ಅಭಿಪ್ರಾಯಪಟ್ಟರು.

ಪ್ರಸ್ತುತ ಬೆಂಗಳೂರಿನಲ್ಲಿ ಉಂಟಾಗಿರುವ ಆರೋಗ್ಯ ಬಿಕ್ಕಟ್ಟು ಜಿಲ್ಲಾ ಮಟ್ಟದಲ್ಲಿಯೂ ಆರಂಭವಾಗಿವೆ. ನಾವು ಬೆಂಗಳೂರು ಮಾತ್ರವಲ್ಲದೇ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿರುವ ಆರೋಗ್ಯ ಅವ್ಯವಸ್ಥೆಯನ್ನು ಬಯಲಿಗೆಳೆದು, ಅದನ್ನು ಕೂಡಲೇ ಸರಿಪಡಿಸುವಂತೆ ಒತ್ತಾಯಿಸಬೇಕು ಎಂದು ಅವರು ತಿಳಿಸಿದರು.

ಡಾ. ವಾಸು ಎಚ್.ವಿ ಅವರು ಮಾತನಾಡಿ “ಕಳೆದ ವರ್ಷವೇ ತಜ್ಞರು ಎರಡನೇ ಅಲೆ ಬಗ್ಗೆ ಎಚ್ಚರಿಸಿದ್ದರು. ಆದರೆ ಮಾರ್ಚ್ ತಿಂಗಳಿನಲ್ಲಿ ಈ ದೇಶದ ಆರೋಗ್ಯ ಸಚಿವರು ನಾವು ಕೋವಿಡ್‌ ಅಂತ್ಯದಲ್ಲಿದ್ದೇವೆ ಎಂದು ಹೇಳಿಕೆ ನೀಡಿ ಅದನ್ನು ಕಡೆಗಣಿಸಿದರು. ಅದೇ ರೀತಿಯಲ್ಲಿ ಕರ್ನಾಟಕ ಸರ್ಕಾರವು ಸಹ ಏಪ್ರಿಲ್ ಮೂರರಂದು ಒಕ್ಕೂಟ ಸರ್ಕಾರಕ್ಕೆ ಪತ್ರ ಬರೆದು ಮೇ 5ರಂದು ರಾಜ್ಯದಲ್ಲಿ ಹತ್ತಿರತ್ತಿರ ನಾಲ್ಕು ಲಕ್ಷ ಸಕ್ರಿಯ ಪ್ರಕರಣಗಳು ಇರುವ ಸಾಧ್ಯತೆಯಿದೆ ಎಂದು ಹೇಳಿತ್ತು. ಅದೇ ರೀತಿಯಲ್ಲಿ ಮೇ 5ರಂದು ನಮ್ಮ ರಾಜ್ಯದಲ್ಲಿ 4,60,000 ಪ್ರಕರಣಗಳಿದ್ದವು. ಅಂದರೆ ಸರ್ಕಾರಕ್ಕೆ ಗೊತ್ತಿದ್ದರೂ ಇಂತಹ ಸಂದರ್ಭದಲ್ಲಿ ಯಾವ ರೀತಿಯಲ್ಲಿ ಸಮರೋಪಾದಿಯಲ್ಲಿ ಕಾರ್ಯಚರಣೆ ನಡೆಯಬೇಕೊ ಹಾಗೆ ಅದು ಮಾಡಲಿಲ್ಲ. ಆಕ್ಸಿಜನ್ ಬಿಕ್ಕಟ್ಟು ಪರಿಹರಿಸಲು ಇತರೆಡೆಗಳಿಂದ ನೆರವು ಪಡೆದುಕೊಳ್ಳಲು ಇವತ್ತಿನವರೆಗೂ ಸಹ ಸರ್ಕಾರ ಯತ್ನಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬಿಎಂಸಿ-92 ಬ್ಯಾಚ್‌ನ ವೈದ್ಯರೆಲ್ಲರೂ ಸೇರಿ ಕೋವಿಡ್‌ ಸೋಂಕಿತರಿಗೆ ಉಚಿತವಾಗಿ ನೆರವು ನೀಡಲು ಮುಂದಾಗಿದ್ದೇವೆ. ಬೇರೆ ಬೇರೆ ದೇಶಗಳಲ್ಲಿರುವ ವೈದ್ಯರು ಸೇರಿ ಬೆಂಗಳೂರಿಗೆ 350 ಆಕ್ಸಿಜೆನ್‌ ಕಾನ್ಸಂಟ್ರೇಟರ್‌ಗಳನ್ನು ಕಳುಹಿಸುತ್ತಿದ್ದಾರೆ ಎಂದು ಅವರು ತಿಳಿಸಿದರು.


ಇದನ್ನೂ ಓದಿ: ಬೆಡ್, ಆಕ್ಸಿಜನ್, ವ್ಯಾಕ್ಸಿನ್, ಸಮಗ್ರ ಪಡಿತರ & ಆರ್ಥಿಕ ನೆರವು ನೀಡಿ: 400 ಸಾಮಾಜಿಕ ಕಾರ್ಯಕರ್ತರ ಜನಾಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...