Homeಕರೋನಾ ತಲ್ಲಣಕೇಂದ್ರ ರಾಜ್ಯ ಸರ್ಕಾರಗಳ ನಿರ್ಲಕ್ಷ್ಯ, ಬೇಜವಾಬ್ದಾರಿತನೇ ಆಕ್ಸಿಜನ್ ಬಿಕ್ಕಟ್ಟಿಗೆ ಕಾರಣ: ರಾಜೇಂದ್ರ ಪ್ರಸಾದ್

ಕೇಂದ್ರ ರಾಜ್ಯ ಸರ್ಕಾರಗಳ ನಿರ್ಲಕ್ಷ್ಯ, ಬೇಜವಾಬ್ದಾರಿತನೇ ಆಕ್ಸಿಜನ್ ಬಿಕ್ಕಟ್ಟಿಗೆ ಕಾರಣ: ರಾಜೇಂದ್ರ ಪ್ರಸಾದ್

- Advertisement -
- Advertisement -

ಕಳೆದ ವರ್ಷ ಕೋವಿಡ್‌ನಿಂದ ಬೇರೆ ಬೇರೆ ದೇಶಗಳು ಆಕ್ಸಿಜನ್‌ ಕೊರತೆ ಸಮಸ್ಯೆಯನ್ನು ಎದುರಿಸಿದ್ದವು. ಇದನ್ನರಿತ್ತಿದ್ದ ಭಾರತವು ಕೂಡ ಕೋವಿಡ್‌ ಎರಡನೇ ಅಲೆಯನ್ನು ಎದುರಿಸಲು ಸಮರ್ಪಕ ತಯಾರಿ ಮಾಡಿಕೊಳ್ಳದೇ ಇರುವುದು ಸರ್ಕಾರದ ಬೇಜವಾಬ್ದಾರಿತನವನ್ನು ತೋರಿಸುತ್ತದೆ ಎಂದು ಪ್ರಸಾದ್‌ ಗ್ಯಾಸ್‌ ಸಪ್ಲೈಯರ್ಸ್‌ ಮಾಲೀಕರು ಮತ್ತು ಸಂಕಥನದ ಸಂಪಾದಕರಾಗಿರುವ ರಾಜೇಂದ್ರ ಪ್ರಸಾದ್‌ ಅವರು ಅಭಿಪ್ರಾಯಪಟ್ಟರು.

ಕರ್ನಾಟಕ ಜನಾರೋಗ್ಯ ಚಳವಳಿ ಸಂಘಟನೆಯು ಕರ್ನಾಟಕ ಕೋವಿಡ್‌ ವಾಲೆಂಟಿಯರ್ಸ್‌ ಟೀಮ್‌ ಮತ್ತು ಜನಸಹಾಯ ಸಹಭಾಗಿತ್ವದಲ್ಲಿ ಆಯೋಜಿಸಿದ್ದ `ಆಕ್ಸಿಜನ್‌ ಸಮಸ್ಯೆಯ ಮೂಲ ಎಲ್ಲಿದೆ?’ ವೆಬಿನಾರ್ ಮತ್ತು ಸಮಾಲೋಚನ ಸಭೆಯಲ್ಲಿ ಅವರು ಮಾತನಾಡಿದರು.

ಕೇಂದ್ರ ಸರ್ಕಾರ ಮೊದಲಿನಿಂದಲೂ ಆಕ್ಸಿಜನ್ ವಿಷಯದಲ್ಲಿ ನಿರ್ಲಕ್ಷ್ಯ ಧೋರಣೆಯನ್ನು ತೋರಿಸುತ್ತಲೇ ಬಂದಿದೆ. ದೇಶದ ಬೇರೆ ಬೇರೆ ರಾಜ್ಯಗಳು ಕೋವಿಡ್‌ ಎರಡನೇ ಅಲೆ ಎದುರಿಸಲು ಪೂರ್ವ ಸಿದ್ಧತೆ ನಡೆಸಿದ್ದವು. ಆದರೆ ನಮ್ಮ ರಾಜ್ಯ ಸರ್ಕಾರವು ಈ ಕುರಿತು ಯಾವುದೇ ಪೂರ್ವ ಸಿದ್ಧತೆ ನಡೆಸಿಲ್ಲದೇ ಇರುವುದು ಕೋವಿಡ್‌ ಪಿಡುಗು ಹೆಚ್ಚಾಗಲು ಕಾರಣವಾಯಿತು ಎಂದರು.

ಕೋವಿಡ್‌ ಎರಡನೇ ಅಲೆ ಉಲ್ಬಣಗೊಂಡ ಸಮಯದಲ್ಲಾದರೂ ಬೇರೆ ಬೇರೆ ದೇಶಗಳಿಂದ ಆಕ್ಸಿಜನ್‌ ಕಾನ್ಸಟ್ರೇಟರ್‌, ಸಿಲೆಂಡರ್‌ಗಳನ್ನು ಆಮದು ಮಾಡಿಕೊಳ್ಳಬೇಕಿತ್ತು. ಆದರೆ ಸರ್ಕಾರವು ತಾನೂ ಮಾಡಲಿಲ್ಲ, ಬದಲಿಗೆ ಸಾರ್ವಜನಿಕರು ಸೇವೆ ಮಾಡುತ್ತಿರುವಾಗ ಅವರಿಗೆ ಜಿಎಸ್‌ಟಿಯನ್ನು ವಿಧಿಸುತ್ತಾ ಸಮಸ್ಯೆ ಮಾಡುತ್ತಿದೆ ಎಂದರು.

ಕೋವಿಡ್‌ ಪೂರ್ವಸಿದ್ಧತೆಯಾಗಿ ಬೇರೆ ಬೇರೆ ಜಿಲ್ಲೆಗಳಲ್ಲಿರುವ ಆಕ್ಸಿಜನ್‌ ಘಟಕಗಳನ್ನು ಸೋಂಕಿತರಿಗೆ ಅನುಗುಣವಾಗಿ ವಿವಿಧ ಜಿಲ್ಲೆಗಳಿಗೆ ವಿತರಣೆ ಮಾಡಬಹುದಿತ್ತು. ಆದರೆ ರಾಜ್ಯ ಸರ್ಕಾರಕ್ಕೆ ಯಾವುದೇ ಮುನ್ನೋಟ ಇರದೇ ಇದ್ದ ಕಾರಣ ಚಾಮರಾಜನಗರದಂತಹ ದುರ್ಘಟನೆ ನಡೆಯಲು ಕಾರಣವಾಗಿದೆ. ಕರ್ನಾಟಕದ ದಕ್ಷಿಣ ಭಾಗದಲ್ಲಿ ಹಲವು ಸೌಲಭ್ಯಗಳು ಇರುವಾಗಲೂ ತೀರಾ ಸಮಸ್ಯೆ ಉಂಟಾಗಿರುವಾಗ ಸಾರಿಗೆ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಕರ್ಯಗಳೇ ಇಲ್ಲದೇ ಇರುವ ಉತ್ತರ ಕರ್ನಾಟಕದಲ್ಲಿ ಕೋವಿಡ್‌ ಸಾಂಕ್ರಾಮಿಕವನ್ನು ಹೇಗೆ ಎದುರಿಸುತ್ತಾರೆ ಎಂದು ಅವರು ಪ್ರಶ್ನಿಸಿದರು.

ಆಮ್ಲಜನಕದ ನ್ಯಾಯಯುತ ವಿತರಣೆ ಕೇಂದ್ರ ಸರ್ಕಾರದಿಂದ ಸಾಧ್ಯವಿಲ್ಲವೆಂದು ಅರಿತ ಸುಪ್ರೀಂ ಕೋರ್ಟ್ ತಾನು ಆ ಹೊಣೆಯನ್ನು ಟಾಸ್ಕ್ ಫೋರ್ಸ್ ಸಮಿತಿಗೆ ನೀಡಿದೆ. ಆದರೆ ಅಲ್ಲಿಯೂ ಆಮ್ಲಜನಕ ಉತ್ಪಾದನೆ, ವಿತರಣೆ ಕುರಿತು ತಜ್ಞರು ಇಲ್ಲ. ನಮ್ಮ ರಾಜ್ಯ ಸರ್ಕಾರ ಕೂಡ ಈ ವಿಚಾರದಲ್ಲಿ ತಜ್ಞರನ್ನು ಪರಿಗಣಿಸುತ್ತಿಲ್ಲ. ಈಗಲಾದರೂ ಸರ್ಕಾರ ಎಚ್ಚೆತ್ತುಕೊಂಡು ಕಾರ್ಯೋನ್ಮುಖವಾಗಬೇಕು. ಕೋವಿಡ್‌ ಎರಡನೇ ಅಲೆ ಶಿಖರ ಮುಟ್ಟಿರುವ ಇಂದಿನ ದಿನಗಳಲ್ಲಿ ಮುಂಬರುವ ಕೋವಿಡ್‌ ಮೂರನೇ ಅಲೆಯನ್ನು ಸಮರ್ಥವಾಗಿ ಎದುರಿಸಲು ಸಜ್ಜಾಗಲೇಬೇಕು. ಈಗಲಾದರೂ ಜಿಲ್ಲೆ, ತಾಲ್ಲೂಕು ಹೋಬಳಿ ಮಟ್ಟದಲ್ಲಿ ಪರಿಣಿತರ ಸಮಿತಿ ರಚಿಸಿ ಎಲ್ಲರಿಗೂ ಎಲ್ಲಾ ಜಿಲ್ಲೆಗಳಿಗೂ ಲಿಕ್ವಿಡ್‌ ರೂಪದ ಆಕ್ಸಿಜನ್‌ ಬಳಕೆಗೆ ಸಿಗುವಂತೆ ಮಾಡಬೇಕು. ಸಾಧ್ಯವಾದಲ್ಲಿ ವಿದೇಶಗಳಿಂದ ಆಕ್ಸಿಜನ್‌ ಕಾನ್ಸಂಟ್ರೇಟರ್‌, ಸಿಲೆಂಡರ್‌ಗಳನ್ನು ಆಮದು ಮಾಡಿಕೊಳ್ಳಬೇಕು. ಖಾಸಗಿ ಸಹಭಾಗಿತ್ವದಲ್ಲಿ ಈಗಲಾದರೂ ಆಕ್ಸಿಜನ್‌ ಕಾನ್ಸಟ್ರೇಟರ್‌ಗಳನ್ನು ಸ್ಥಾಪಿಸಲು ಮುಂದಾಗಬೇಕು ಎಂದು ಅವರು ಒತ್ತಾಯಿಸಿದರು.

ಸರ್ಕಾರದ ಪ್ರಯತ್ನ ಮಾತ್ರವಲ್ಲದೇ ಸಾಮುದಾಯಿಕ ಪ್ರಯತ್ನಗಳು ಕೂಡ ಆಗಬೇಕಿದ್ದು, ಗ್ರಾಮೀಣ ಭಾಗದಲ್ಲಿರುವ ಸಮುದಾಯ ಭವನ, ಕಲ್ಯಾಣ ಮಂಟಪಗಳನ್ನು ಕೋವಿಡ್‌ ಸೆಂಟರ್‌ಗಳಾಗಿ ಪುನರ್‌ಸ್ಥಾಪಿಸಬೇಕು. ಇಬ್ಬರು ಸೋಂಕಿತರಿಗೆ ಒಂದು ಸಿಲೆಂಡರ್‌ನಂತೆ ಆಕ್ಸಿಜನ್‌ ಪೂರೈಸಿದಲ್ಲಿ ಸೋಂಕಿತರ ಆರೋಗ್ಯ ಸುಧಾರಿಸುವಂತೆ ನೋಡಿಕೊಳ್ಳಬಹುದು. ಸಿಖ್‌ ಸಮುದಾಯವು ಗುರುದ್ವಾರಗಳಲ್ಲಿ ಆಕ್ಸಿಜನ್‌ ಬೆಡ್‌ಗಳನ್ನು ಸ್ಥಾಪಿಸಿರುವುದು ಸಾಮುದಾಯಿಕ ಪ್ರಯತ್ನಕ್ಕೆ ಉದಾಹರಣೆಯಾಗಿದೆ ಎಂದರು.

ಸರ್ಕಾರ ಕೋವಿಡ್ ಎರಡನೇ ಅಲೆಯನ್ನು ಸಮರ್ಥವಾಗಿ ಎದುರಿಸಬೇಕಿತ್ತು. ಆಕ್ಸಿಜನ್‌ ಕಾನ್ಸಟ್ರೇಟರ್‌, ಆಕ್ಸಿಜನ್‌ ಸಿಲೆಂಡರ್‌ ತರಿಬೇಕಾದದ್ದು, ಸರ್ಕಾರದ ಜವಾಬ್ದಾರಿಯಾಗಿತ್ತು. ಆದರೆ ಸರ್ಕಾರದ ನಿರ್ಲಕ್ಷ್ಯದಿಂದಾಗಿ ಜನರು ಸಾಯುತ್ತಿರುವುದನ್ನು ನಾವು ನೋಡಿದ್ದೇವೆ. ನಾಗರೀಕರಾಗಿ ಈ ಹೊಣೆಯನ್ನು ನಾವು ನಮ್ಮ ಮೇಲೆ ಹಾಕಿಕೊಂಡು ಕೆಲಸ ಮಾಡುತ್ತಿದ್ದೇವೆ. ಎರಡು ಮತ್ತು ಮೂರನೇ ಅಲೆ ನಡುವೆ ಹೆಚ್ಚು ಸಮಯವಿಲ್ಲದೇ ಇರುವುದರಿಂದ ಸರ್ಕಾರವು ಹೆಚ್ಚು ಮುತುವರ್ಜಿಯಿಂದ ಕೆಲಸ ಮಾಡುವಂತೆ ನಾಗರೀಕರಾಗಿ ನಾವು ಒತ್ತಾಯಿಸಬೇಕು ಎಂದು ಕರ್ನಾಟಕ ಜನಾರೋಗ್ಯ ಚಳವಳಿಯ ಡಾ. ಅಖಿಲಾ ವಾಸನ್‌ ಅಭಿಪ್ರಾಯಪಟ್ಟರು.

ಪ್ರಸ್ತುತ ಬೆಂಗಳೂರಿನಲ್ಲಿ ಉಂಟಾಗಿರುವ ಆರೋಗ್ಯ ಬಿಕ್ಕಟ್ಟು ಜಿಲ್ಲಾ ಮಟ್ಟದಲ್ಲಿಯೂ ಆರಂಭವಾಗಿವೆ. ನಾವು ಬೆಂಗಳೂರು ಮಾತ್ರವಲ್ಲದೇ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿರುವ ಆರೋಗ್ಯ ಅವ್ಯವಸ್ಥೆಯನ್ನು ಬಯಲಿಗೆಳೆದು, ಅದನ್ನು ಕೂಡಲೇ ಸರಿಪಡಿಸುವಂತೆ ಒತ್ತಾಯಿಸಬೇಕು ಎಂದು ಅವರು ತಿಳಿಸಿದರು.

ಡಾ. ವಾಸು ಎಚ್.ವಿ ಅವರು ಮಾತನಾಡಿ “ಕಳೆದ ವರ್ಷವೇ ತಜ್ಞರು ಎರಡನೇ ಅಲೆ ಬಗ್ಗೆ ಎಚ್ಚರಿಸಿದ್ದರು. ಆದರೆ ಮಾರ್ಚ್ ತಿಂಗಳಿನಲ್ಲಿ ಈ ದೇಶದ ಆರೋಗ್ಯ ಸಚಿವರು ನಾವು ಕೋವಿಡ್‌ ಅಂತ್ಯದಲ್ಲಿದ್ದೇವೆ ಎಂದು ಹೇಳಿಕೆ ನೀಡಿ ಅದನ್ನು ಕಡೆಗಣಿಸಿದರು. ಅದೇ ರೀತಿಯಲ್ಲಿ ಕರ್ನಾಟಕ ಸರ್ಕಾರವು ಸಹ ಏಪ್ರಿಲ್ ಮೂರರಂದು ಒಕ್ಕೂಟ ಸರ್ಕಾರಕ್ಕೆ ಪತ್ರ ಬರೆದು ಮೇ 5ರಂದು ರಾಜ್ಯದಲ್ಲಿ ಹತ್ತಿರತ್ತಿರ ನಾಲ್ಕು ಲಕ್ಷ ಸಕ್ರಿಯ ಪ್ರಕರಣಗಳು ಇರುವ ಸಾಧ್ಯತೆಯಿದೆ ಎಂದು ಹೇಳಿತ್ತು. ಅದೇ ರೀತಿಯಲ್ಲಿ ಮೇ 5ರಂದು ನಮ್ಮ ರಾಜ್ಯದಲ್ಲಿ 4,60,000 ಪ್ರಕರಣಗಳಿದ್ದವು. ಅಂದರೆ ಸರ್ಕಾರಕ್ಕೆ ಗೊತ್ತಿದ್ದರೂ ಇಂತಹ ಸಂದರ್ಭದಲ್ಲಿ ಯಾವ ರೀತಿಯಲ್ಲಿ ಸಮರೋಪಾದಿಯಲ್ಲಿ ಕಾರ್ಯಚರಣೆ ನಡೆಯಬೇಕೊ ಹಾಗೆ ಅದು ಮಾಡಲಿಲ್ಲ. ಆಕ್ಸಿಜನ್ ಬಿಕ್ಕಟ್ಟು ಪರಿಹರಿಸಲು ಇತರೆಡೆಗಳಿಂದ ನೆರವು ಪಡೆದುಕೊಳ್ಳಲು ಇವತ್ತಿನವರೆಗೂ ಸಹ ಸರ್ಕಾರ ಯತ್ನಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬಿಎಂಸಿ-92 ಬ್ಯಾಚ್‌ನ ವೈದ್ಯರೆಲ್ಲರೂ ಸೇರಿ ಕೋವಿಡ್‌ ಸೋಂಕಿತರಿಗೆ ಉಚಿತವಾಗಿ ನೆರವು ನೀಡಲು ಮುಂದಾಗಿದ್ದೇವೆ. ಬೇರೆ ಬೇರೆ ದೇಶಗಳಲ್ಲಿರುವ ವೈದ್ಯರು ಸೇರಿ ಬೆಂಗಳೂರಿಗೆ 350 ಆಕ್ಸಿಜೆನ್‌ ಕಾನ್ಸಂಟ್ರೇಟರ್‌ಗಳನ್ನು ಕಳುಹಿಸುತ್ತಿದ್ದಾರೆ ಎಂದು ಅವರು ತಿಳಿಸಿದರು.


ಇದನ್ನೂ ಓದಿ: ಬೆಡ್, ಆಕ್ಸಿಜನ್, ವ್ಯಾಕ್ಸಿನ್, ಸಮಗ್ರ ಪಡಿತರ & ಆರ್ಥಿಕ ನೆರವು ನೀಡಿ: 400 ಸಾಮಾಜಿಕ ಕಾರ್ಯಕರ್ತರ ಜನಾಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....