Homeಕರೋನಾ ತಲ್ಲಣಕೇಂದ್ರ ರಾಜ್ಯ ಸರ್ಕಾರಗಳ ನಿರ್ಲಕ್ಷ್ಯ, ಬೇಜವಾಬ್ದಾರಿತನೇ ಆಕ್ಸಿಜನ್ ಬಿಕ್ಕಟ್ಟಿಗೆ ಕಾರಣ: ರಾಜೇಂದ್ರ ಪ್ರಸಾದ್

ಕೇಂದ್ರ ರಾಜ್ಯ ಸರ್ಕಾರಗಳ ನಿರ್ಲಕ್ಷ್ಯ, ಬೇಜವಾಬ್ದಾರಿತನೇ ಆಕ್ಸಿಜನ್ ಬಿಕ್ಕಟ್ಟಿಗೆ ಕಾರಣ: ರಾಜೇಂದ್ರ ಪ್ರಸಾದ್

- Advertisement -
- Advertisement -

ಕಳೆದ ವರ್ಷ ಕೋವಿಡ್‌ನಿಂದ ಬೇರೆ ಬೇರೆ ದೇಶಗಳು ಆಕ್ಸಿಜನ್‌ ಕೊರತೆ ಸಮಸ್ಯೆಯನ್ನು ಎದುರಿಸಿದ್ದವು. ಇದನ್ನರಿತ್ತಿದ್ದ ಭಾರತವು ಕೂಡ ಕೋವಿಡ್‌ ಎರಡನೇ ಅಲೆಯನ್ನು ಎದುರಿಸಲು ಸಮರ್ಪಕ ತಯಾರಿ ಮಾಡಿಕೊಳ್ಳದೇ ಇರುವುದು ಸರ್ಕಾರದ ಬೇಜವಾಬ್ದಾರಿತನವನ್ನು ತೋರಿಸುತ್ತದೆ ಎಂದು ಪ್ರಸಾದ್‌ ಗ್ಯಾಸ್‌ ಸಪ್ಲೈಯರ್ಸ್‌ ಮಾಲೀಕರು ಮತ್ತು ಸಂಕಥನದ ಸಂಪಾದಕರಾಗಿರುವ ರಾಜೇಂದ್ರ ಪ್ರಸಾದ್‌ ಅವರು ಅಭಿಪ್ರಾಯಪಟ್ಟರು.

ಕರ್ನಾಟಕ ಜನಾರೋಗ್ಯ ಚಳವಳಿ ಸಂಘಟನೆಯು ಕರ್ನಾಟಕ ಕೋವಿಡ್‌ ವಾಲೆಂಟಿಯರ್ಸ್‌ ಟೀಮ್‌ ಮತ್ತು ಜನಸಹಾಯ ಸಹಭಾಗಿತ್ವದಲ್ಲಿ ಆಯೋಜಿಸಿದ್ದ `ಆಕ್ಸಿಜನ್‌ ಸಮಸ್ಯೆಯ ಮೂಲ ಎಲ್ಲಿದೆ?’ ವೆಬಿನಾರ್ ಮತ್ತು ಸಮಾಲೋಚನ ಸಭೆಯಲ್ಲಿ ಅವರು ಮಾತನಾಡಿದರು.

ಕೇಂದ್ರ ಸರ್ಕಾರ ಮೊದಲಿನಿಂದಲೂ ಆಕ್ಸಿಜನ್ ವಿಷಯದಲ್ಲಿ ನಿರ್ಲಕ್ಷ್ಯ ಧೋರಣೆಯನ್ನು ತೋರಿಸುತ್ತಲೇ ಬಂದಿದೆ. ದೇಶದ ಬೇರೆ ಬೇರೆ ರಾಜ್ಯಗಳು ಕೋವಿಡ್‌ ಎರಡನೇ ಅಲೆ ಎದುರಿಸಲು ಪೂರ್ವ ಸಿದ್ಧತೆ ನಡೆಸಿದ್ದವು. ಆದರೆ ನಮ್ಮ ರಾಜ್ಯ ಸರ್ಕಾರವು ಈ ಕುರಿತು ಯಾವುದೇ ಪೂರ್ವ ಸಿದ್ಧತೆ ನಡೆಸಿಲ್ಲದೇ ಇರುವುದು ಕೋವಿಡ್‌ ಪಿಡುಗು ಹೆಚ್ಚಾಗಲು ಕಾರಣವಾಯಿತು ಎಂದರು.

ಕೋವಿಡ್‌ ಎರಡನೇ ಅಲೆ ಉಲ್ಬಣಗೊಂಡ ಸಮಯದಲ್ಲಾದರೂ ಬೇರೆ ಬೇರೆ ದೇಶಗಳಿಂದ ಆಕ್ಸಿಜನ್‌ ಕಾನ್ಸಟ್ರೇಟರ್‌, ಸಿಲೆಂಡರ್‌ಗಳನ್ನು ಆಮದು ಮಾಡಿಕೊಳ್ಳಬೇಕಿತ್ತು. ಆದರೆ ಸರ್ಕಾರವು ತಾನೂ ಮಾಡಲಿಲ್ಲ, ಬದಲಿಗೆ ಸಾರ್ವಜನಿಕರು ಸೇವೆ ಮಾಡುತ್ತಿರುವಾಗ ಅವರಿಗೆ ಜಿಎಸ್‌ಟಿಯನ್ನು ವಿಧಿಸುತ್ತಾ ಸಮಸ್ಯೆ ಮಾಡುತ್ತಿದೆ ಎಂದರು.

ಕೋವಿಡ್‌ ಪೂರ್ವಸಿದ್ಧತೆಯಾಗಿ ಬೇರೆ ಬೇರೆ ಜಿಲ್ಲೆಗಳಲ್ಲಿರುವ ಆಕ್ಸಿಜನ್‌ ಘಟಕಗಳನ್ನು ಸೋಂಕಿತರಿಗೆ ಅನುಗುಣವಾಗಿ ವಿವಿಧ ಜಿಲ್ಲೆಗಳಿಗೆ ವಿತರಣೆ ಮಾಡಬಹುದಿತ್ತು. ಆದರೆ ರಾಜ್ಯ ಸರ್ಕಾರಕ್ಕೆ ಯಾವುದೇ ಮುನ್ನೋಟ ಇರದೇ ಇದ್ದ ಕಾರಣ ಚಾಮರಾಜನಗರದಂತಹ ದುರ್ಘಟನೆ ನಡೆಯಲು ಕಾರಣವಾಗಿದೆ. ಕರ್ನಾಟಕದ ದಕ್ಷಿಣ ಭಾಗದಲ್ಲಿ ಹಲವು ಸೌಲಭ್ಯಗಳು ಇರುವಾಗಲೂ ತೀರಾ ಸಮಸ್ಯೆ ಉಂಟಾಗಿರುವಾಗ ಸಾರಿಗೆ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಕರ್ಯಗಳೇ ಇಲ್ಲದೇ ಇರುವ ಉತ್ತರ ಕರ್ನಾಟಕದಲ್ಲಿ ಕೋವಿಡ್‌ ಸಾಂಕ್ರಾಮಿಕವನ್ನು ಹೇಗೆ ಎದುರಿಸುತ್ತಾರೆ ಎಂದು ಅವರು ಪ್ರಶ್ನಿಸಿದರು.

ಆಮ್ಲಜನಕದ ನ್ಯಾಯಯುತ ವಿತರಣೆ ಕೇಂದ್ರ ಸರ್ಕಾರದಿಂದ ಸಾಧ್ಯವಿಲ್ಲವೆಂದು ಅರಿತ ಸುಪ್ರೀಂ ಕೋರ್ಟ್ ತಾನು ಆ ಹೊಣೆಯನ್ನು ಟಾಸ್ಕ್ ಫೋರ್ಸ್ ಸಮಿತಿಗೆ ನೀಡಿದೆ. ಆದರೆ ಅಲ್ಲಿಯೂ ಆಮ್ಲಜನಕ ಉತ್ಪಾದನೆ, ವಿತರಣೆ ಕುರಿತು ತಜ್ಞರು ಇಲ್ಲ. ನಮ್ಮ ರಾಜ್ಯ ಸರ್ಕಾರ ಕೂಡ ಈ ವಿಚಾರದಲ್ಲಿ ತಜ್ಞರನ್ನು ಪರಿಗಣಿಸುತ್ತಿಲ್ಲ. ಈಗಲಾದರೂ ಸರ್ಕಾರ ಎಚ್ಚೆತ್ತುಕೊಂಡು ಕಾರ್ಯೋನ್ಮುಖವಾಗಬೇಕು. ಕೋವಿಡ್‌ ಎರಡನೇ ಅಲೆ ಶಿಖರ ಮುಟ್ಟಿರುವ ಇಂದಿನ ದಿನಗಳಲ್ಲಿ ಮುಂಬರುವ ಕೋವಿಡ್‌ ಮೂರನೇ ಅಲೆಯನ್ನು ಸಮರ್ಥವಾಗಿ ಎದುರಿಸಲು ಸಜ್ಜಾಗಲೇಬೇಕು. ಈಗಲಾದರೂ ಜಿಲ್ಲೆ, ತಾಲ್ಲೂಕು ಹೋಬಳಿ ಮಟ್ಟದಲ್ಲಿ ಪರಿಣಿತರ ಸಮಿತಿ ರಚಿಸಿ ಎಲ್ಲರಿಗೂ ಎಲ್ಲಾ ಜಿಲ್ಲೆಗಳಿಗೂ ಲಿಕ್ವಿಡ್‌ ರೂಪದ ಆಕ್ಸಿಜನ್‌ ಬಳಕೆಗೆ ಸಿಗುವಂತೆ ಮಾಡಬೇಕು. ಸಾಧ್ಯವಾದಲ್ಲಿ ವಿದೇಶಗಳಿಂದ ಆಕ್ಸಿಜನ್‌ ಕಾನ್ಸಂಟ್ರೇಟರ್‌, ಸಿಲೆಂಡರ್‌ಗಳನ್ನು ಆಮದು ಮಾಡಿಕೊಳ್ಳಬೇಕು. ಖಾಸಗಿ ಸಹಭಾಗಿತ್ವದಲ್ಲಿ ಈಗಲಾದರೂ ಆಕ್ಸಿಜನ್‌ ಕಾನ್ಸಟ್ರೇಟರ್‌ಗಳನ್ನು ಸ್ಥಾಪಿಸಲು ಮುಂದಾಗಬೇಕು ಎಂದು ಅವರು ಒತ್ತಾಯಿಸಿದರು.

ಸರ್ಕಾರದ ಪ್ರಯತ್ನ ಮಾತ್ರವಲ್ಲದೇ ಸಾಮುದಾಯಿಕ ಪ್ರಯತ್ನಗಳು ಕೂಡ ಆಗಬೇಕಿದ್ದು, ಗ್ರಾಮೀಣ ಭಾಗದಲ್ಲಿರುವ ಸಮುದಾಯ ಭವನ, ಕಲ್ಯಾಣ ಮಂಟಪಗಳನ್ನು ಕೋವಿಡ್‌ ಸೆಂಟರ್‌ಗಳಾಗಿ ಪುನರ್‌ಸ್ಥಾಪಿಸಬೇಕು. ಇಬ್ಬರು ಸೋಂಕಿತರಿಗೆ ಒಂದು ಸಿಲೆಂಡರ್‌ನಂತೆ ಆಕ್ಸಿಜನ್‌ ಪೂರೈಸಿದಲ್ಲಿ ಸೋಂಕಿತರ ಆರೋಗ್ಯ ಸುಧಾರಿಸುವಂತೆ ನೋಡಿಕೊಳ್ಳಬಹುದು. ಸಿಖ್‌ ಸಮುದಾಯವು ಗುರುದ್ವಾರಗಳಲ್ಲಿ ಆಕ್ಸಿಜನ್‌ ಬೆಡ್‌ಗಳನ್ನು ಸ್ಥಾಪಿಸಿರುವುದು ಸಾಮುದಾಯಿಕ ಪ್ರಯತ್ನಕ್ಕೆ ಉದಾಹರಣೆಯಾಗಿದೆ ಎಂದರು.

ಸರ್ಕಾರ ಕೋವಿಡ್ ಎರಡನೇ ಅಲೆಯನ್ನು ಸಮರ್ಥವಾಗಿ ಎದುರಿಸಬೇಕಿತ್ತು. ಆಕ್ಸಿಜನ್‌ ಕಾನ್ಸಟ್ರೇಟರ್‌, ಆಕ್ಸಿಜನ್‌ ಸಿಲೆಂಡರ್‌ ತರಿಬೇಕಾದದ್ದು, ಸರ್ಕಾರದ ಜವಾಬ್ದಾರಿಯಾಗಿತ್ತು. ಆದರೆ ಸರ್ಕಾರದ ನಿರ್ಲಕ್ಷ್ಯದಿಂದಾಗಿ ಜನರು ಸಾಯುತ್ತಿರುವುದನ್ನು ನಾವು ನೋಡಿದ್ದೇವೆ. ನಾಗರೀಕರಾಗಿ ಈ ಹೊಣೆಯನ್ನು ನಾವು ನಮ್ಮ ಮೇಲೆ ಹಾಕಿಕೊಂಡು ಕೆಲಸ ಮಾಡುತ್ತಿದ್ದೇವೆ. ಎರಡು ಮತ್ತು ಮೂರನೇ ಅಲೆ ನಡುವೆ ಹೆಚ್ಚು ಸಮಯವಿಲ್ಲದೇ ಇರುವುದರಿಂದ ಸರ್ಕಾರವು ಹೆಚ್ಚು ಮುತುವರ್ಜಿಯಿಂದ ಕೆಲಸ ಮಾಡುವಂತೆ ನಾಗರೀಕರಾಗಿ ನಾವು ಒತ್ತಾಯಿಸಬೇಕು ಎಂದು ಕರ್ನಾಟಕ ಜನಾರೋಗ್ಯ ಚಳವಳಿಯ ಡಾ. ಅಖಿಲಾ ವಾಸನ್‌ ಅಭಿಪ್ರಾಯಪಟ್ಟರು.

ಪ್ರಸ್ತುತ ಬೆಂಗಳೂರಿನಲ್ಲಿ ಉಂಟಾಗಿರುವ ಆರೋಗ್ಯ ಬಿಕ್ಕಟ್ಟು ಜಿಲ್ಲಾ ಮಟ್ಟದಲ್ಲಿಯೂ ಆರಂಭವಾಗಿವೆ. ನಾವು ಬೆಂಗಳೂರು ಮಾತ್ರವಲ್ಲದೇ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿರುವ ಆರೋಗ್ಯ ಅವ್ಯವಸ್ಥೆಯನ್ನು ಬಯಲಿಗೆಳೆದು, ಅದನ್ನು ಕೂಡಲೇ ಸರಿಪಡಿಸುವಂತೆ ಒತ್ತಾಯಿಸಬೇಕು ಎಂದು ಅವರು ತಿಳಿಸಿದರು.

ಡಾ. ವಾಸು ಎಚ್.ವಿ ಅವರು ಮಾತನಾಡಿ “ಕಳೆದ ವರ್ಷವೇ ತಜ್ಞರು ಎರಡನೇ ಅಲೆ ಬಗ್ಗೆ ಎಚ್ಚರಿಸಿದ್ದರು. ಆದರೆ ಮಾರ್ಚ್ ತಿಂಗಳಿನಲ್ಲಿ ಈ ದೇಶದ ಆರೋಗ್ಯ ಸಚಿವರು ನಾವು ಕೋವಿಡ್‌ ಅಂತ್ಯದಲ್ಲಿದ್ದೇವೆ ಎಂದು ಹೇಳಿಕೆ ನೀಡಿ ಅದನ್ನು ಕಡೆಗಣಿಸಿದರು. ಅದೇ ರೀತಿಯಲ್ಲಿ ಕರ್ನಾಟಕ ಸರ್ಕಾರವು ಸಹ ಏಪ್ರಿಲ್ ಮೂರರಂದು ಒಕ್ಕೂಟ ಸರ್ಕಾರಕ್ಕೆ ಪತ್ರ ಬರೆದು ಮೇ 5ರಂದು ರಾಜ್ಯದಲ್ಲಿ ಹತ್ತಿರತ್ತಿರ ನಾಲ್ಕು ಲಕ್ಷ ಸಕ್ರಿಯ ಪ್ರಕರಣಗಳು ಇರುವ ಸಾಧ್ಯತೆಯಿದೆ ಎಂದು ಹೇಳಿತ್ತು. ಅದೇ ರೀತಿಯಲ್ಲಿ ಮೇ 5ರಂದು ನಮ್ಮ ರಾಜ್ಯದಲ್ಲಿ 4,60,000 ಪ್ರಕರಣಗಳಿದ್ದವು. ಅಂದರೆ ಸರ್ಕಾರಕ್ಕೆ ಗೊತ್ತಿದ್ದರೂ ಇಂತಹ ಸಂದರ್ಭದಲ್ಲಿ ಯಾವ ರೀತಿಯಲ್ಲಿ ಸಮರೋಪಾದಿಯಲ್ಲಿ ಕಾರ್ಯಚರಣೆ ನಡೆಯಬೇಕೊ ಹಾಗೆ ಅದು ಮಾಡಲಿಲ್ಲ. ಆಕ್ಸಿಜನ್ ಬಿಕ್ಕಟ್ಟು ಪರಿಹರಿಸಲು ಇತರೆಡೆಗಳಿಂದ ನೆರವು ಪಡೆದುಕೊಳ್ಳಲು ಇವತ್ತಿನವರೆಗೂ ಸಹ ಸರ್ಕಾರ ಯತ್ನಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬಿಎಂಸಿ-92 ಬ್ಯಾಚ್‌ನ ವೈದ್ಯರೆಲ್ಲರೂ ಸೇರಿ ಕೋವಿಡ್‌ ಸೋಂಕಿತರಿಗೆ ಉಚಿತವಾಗಿ ನೆರವು ನೀಡಲು ಮುಂದಾಗಿದ್ದೇವೆ. ಬೇರೆ ಬೇರೆ ದೇಶಗಳಲ್ಲಿರುವ ವೈದ್ಯರು ಸೇರಿ ಬೆಂಗಳೂರಿಗೆ 350 ಆಕ್ಸಿಜೆನ್‌ ಕಾನ್ಸಂಟ್ರೇಟರ್‌ಗಳನ್ನು ಕಳುಹಿಸುತ್ತಿದ್ದಾರೆ ಎಂದು ಅವರು ತಿಳಿಸಿದರು.


ಇದನ್ನೂ ಓದಿ: ಬೆಡ್, ಆಕ್ಸಿಜನ್, ವ್ಯಾಕ್ಸಿನ್, ಸಮಗ್ರ ಪಡಿತರ & ಆರ್ಥಿಕ ನೆರವು ನೀಡಿ: 400 ಸಾಮಾಜಿಕ ಕಾರ್ಯಕರ್ತರ ಜನಾಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...