Homeಕರೋನಾ ತಲ್ಲಣಕೇಂದ್ರ ರಾಜ್ಯ ಸರ್ಕಾರಗಳ ನಿರ್ಲಕ್ಷ್ಯ, ಬೇಜವಾಬ್ದಾರಿತನೇ ಆಕ್ಸಿಜನ್ ಬಿಕ್ಕಟ್ಟಿಗೆ ಕಾರಣ: ರಾಜೇಂದ್ರ ಪ್ರಸಾದ್

ಕೇಂದ್ರ ರಾಜ್ಯ ಸರ್ಕಾರಗಳ ನಿರ್ಲಕ್ಷ್ಯ, ಬೇಜವಾಬ್ದಾರಿತನೇ ಆಕ್ಸಿಜನ್ ಬಿಕ್ಕಟ್ಟಿಗೆ ಕಾರಣ: ರಾಜೇಂದ್ರ ಪ್ರಸಾದ್

- Advertisement -
- Advertisement -

ಕಳೆದ ವರ್ಷ ಕೋವಿಡ್‌ನಿಂದ ಬೇರೆ ಬೇರೆ ದೇಶಗಳು ಆಕ್ಸಿಜನ್‌ ಕೊರತೆ ಸಮಸ್ಯೆಯನ್ನು ಎದುರಿಸಿದ್ದವು. ಇದನ್ನರಿತ್ತಿದ್ದ ಭಾರತವು ಕೂಡ ಕೋವಿಡ್‌ ಎರಡನೇ ಅಲೆಯನ್ನು ಎದುರಿಸಲು ಸಮರ್ಪಕ ತಯಾರಿ ಮಾಡಿಕೊಳ್ಳದೇ ಇರುವುದು ಸರ್ಕಾರದ ಬೇಜವಾಬ್ದಾರಿತನವನ್ನು ತೋರಿಸುತ್ತದೆ ಎಂದು ಪ್ರಸಾದ್‌ ಗ್ಯಾಸ್‌ ಸಪ್ಲೈಯರ್ಸ್‌ ಮಾಲೀಕರು ಮತ್ತು ಸಂಕಥನದ ಸಂಪಾದಕರಾಗಿರುವ ರಾಜೇಂದ್ರ ಪ್ರಸಾದ್‌ ಅವರು ಅಭಿಪ್ರಾಯಪಟ್ಟರು.

ಕರ್ನಾಟಕ ಜನಾರೋಗ್ಯ ಚಳವಳಿ ಸಂಘಟನೆಯು ಕರ್ನಾಟಕ ಕೋವಿಡ್‌ ವಾಲೆಂಟಿಯರ್ಸ್‌ ಟೀಮ್‌ ಮತ್ತು ಜನಸಹಾಯ ಸಹಭಾಗಿತ್ವದಲ್ಲಿ ಆಯೋಜಿಸಿದ್ದ `ಆಕ್ಸಿಜನ್‌ ಸಮಸ್ಯೆಯ ಮೂಲ ಎಲ್ಲಿದೆ?’ ವೆಬಿನಾರ್ ಮತ್ತು ಸಮಾಲೋಚನ ಸಭೆಯಲ್ಲಿ ಅವರು ಮಾತನಾಡಿದರು.

ಕೇಂದ್ರ ಸರ್ಕಾರ ಮೊದಲಿನಿಂದಲೂ ಆಕ್ಸಿಜನ್ ವಿಷಯದಲ್ಲಿ ನಿರ್ಲಕ್ಷ್ಯ ಧೋರಣೆಯನ್ನು ತೋರಿಸುತ್ತಲೇ ಬಂದಿದೆ. ದೇಶದ ಬೇರೆ ಬೇರೆ ರಾಜ್ಯಗಳು ಕೋವಿಡ್‌ ಎರಡನೇ ಅಲೆ ಎದುರಿಸಲು ಪೂರ್ವ ಸಿದ್ಧತೆ ನಡೆಸಿದ್ದವು. ಆದರೆ ನಮ್ಮ ರಾಜ್ಯ ಸರ್ಕಾರವು ಈ ಕುರಿತು ಯಾವುದೇ ಪೂರ್ವ ಸಿದ್ಧತೆ ನಡೆಸಿಲ್ಲದೇ ಇರುವುದು ಕೋವಿಡ್‌ ಪಿಡುಗು ಹೆಚ್ಚಾಗಲು ಕಾರಣವಾಯಿತು ಎಂದರು.

ಕೋವಿಡ್‌ ಎರಡನೇ ಅಲೆ ಉಲ್ಬಣಗೊಂಡ ಸಮಯದಲ್ಲಾದರೂ ಬೇರೆ ಬೇರೆ ದೇಶಗಳಿಂದ ಆಕ್ಸಿಜನ್‌ ಕಾನ್ಸಟ್ರೇಟರ್‌, ಸಿಲೆಂಡರ್‌ಗಳನ್ನು ಆಮದು ಮಾಡಿಕೊಳ್ಳಬೇಕಿತ್ತು. ಆದರೆ ಸರ್ಕಾರವು ತಾನೂ ಮಾಡಲಿಲ್ಲ, ಬದಲಿಗೆ ಸಾರ್ವಜನಿಕರು ಸೇವೆ ಮಾಡುತ್ತಿರುವಾಗ ಅವರಿಗೆ ಜಿಎಸ್‌ಟಿಯನ್ನು ವಿಧಿಸುತ್ತಾ ಸಮಸ್ಯೆ ಮಾಡುತ್ತಿದೆ ಎಂದರು.

ಕೋವಿಡ್‌ ಪೂರ್ವಸಿದ್ಧತೆಯಾಗಿ ಬೇರೆ ಬೇರೆ ಜಿಲ್ಲೆಗಳಲ್ಲಿರುವ ಆಕ್ಸಿಜನ್‌ ಘಟಕಗಳನ್ನು ಸೋಂಕಿತರಿಗೆ ಅನುಗುಣವಾಗಿ ವಿವಿಧ ಜಿಲ್ಲೆಗಳಿಗೆ ವಿತರಣೆ ಮಾಡಬಹುದಿತ್ತು. ಆದರೆ ರಾಜ್ಯ ಸರ್ಕಾರಕ್ಕೆ ಯಾವುದೇ ಮುನ್ನೋಟ ಇರದೇ ಇದ್ದ ಕಾರಣ ಚಾಮರಾಜನಗರದಂತಹ ದುರ್ಘಟನೆ ನಡೆಯಲು ಕಾರಣವಾಗಿದೆ. ಕರ್ನಾಟಕದ ದಕ್ಷಿಣ ಭಾಗದಲ್ಲಿ ಹಲವು ಸೌಲಭ್ಯಗಳು ಇರುವಾಗಲೂ ತೀರಾ ಸಮಸ್ಯೆ ಉಂಟಾಗಿರುವಾಗ ಸಾರಿಗೆ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಕರ್ಯಗಳೇ ಇಲ್ಲದೇ ಇರುವ ಉತ್ತರ ಕರ್ನಾಟಕದಲ್ಲಿ ಕೋವಿಡ್‌ ಸಾಂಕ್ರಾಮಿಕವನ್ನು ಹೇಗೆ ಎದುರಿಸುತ್ತಾರೆ ಎಂದು ಅವರು ಪ್ರಶ್ನಿಸಿದರು.

ಆಮ್ಲಜನಕದ ನ್ಯಾಯಯುತ ವಿತರಣೆ ಕೇಂದ್ರ ಸರ್ಕಾರದಿಂದ ಸಾಧ್ಯವಿಲ್ಲವೆಂದು ಅರಿತ ಸುಪ್ರೀಂ ಕೋರ್ಟ್ ತಾನು ಆ ಹೊಣೆಯನ್ನು ಟಾಸ್ಕ್ ಫೋರ್ಸ್ ಸಮಿತಿಗೆ ನೀಡಿದೆ. ಆದರೆ ಅಲ್ಲಿಯೂ ಆಮ್ಲಜನಕ ಉತ್ಪಾದನೆ, ವಿತರಣೆ ಕುರಿತು ತಜ್ಞರು ಇಲ್ಲ. ನಮ್ಮ ರಾಜ್ಯ ಸರ್ಕಾರ ಕೂಡ ಈ ವಿಚಾರದಲ್ಲಿ ತಜ್ಞರನ್ನು ಪರಿಗಣಿಸುತ್ತಿಲ್ಲ. ಈಗಲಾದರೂ ಸರ್ಕಾರ ಎಚ್ಚೆತ್ತುಕೊಂಡು ಕಾರ್ಯೋನ್ಮುಖವಾಗಬೇಕು. ಕೋವಿಡ್‌ ಎರಡನೇ ಅಲೆ ಶಿಖರ ಮುಟ್ಟಿರುವ ಇಂದಿನ ದಿನಗಳಲ್ಲಿ ಮುಂಬರುವ ಕೋವಿಡ್‌ ಮೂರನೇ ಅಲೆಯನ್ನು ಸಮರ್ಥವಾಗಿ ಎದುರಿಸಲು ಸಜ್ಜಾಗಲೇಬೇಕು. ಈಗಲಾದರೂ ಜಿಲ್ಲೆ, ತಾಲ್ಲೂಕು ಹೋಬಳಿ ಮಟ್ಟದಲ್ಲಿ ಪರಿಣಿತರ ಸಮಿತಿ ರಚಿಸಿ ಎಲ್ಲರಿಗೂ ಎಲ್ಲಾ ಜಿಲ್ಲೆಗಳಿಗೂ ಲಿಕ್ವಿಡ್‌ ರೂಪದ ಆಕ್ಸಿಜನ್‌ ಬಳಕೆಗೆ ಸಿಗುವಂತೆ ಮಾಡಬೇಕು. ಸಾಧ್ಯವಾದಲ್ಲಿ ವಿದೇಶಗಳಿಂದ ಆಕ್ಸಿಜನ್‌ ಕಾನ್ಸಂಟ್ರೇಟರ್‌, ಸಿಲೆಂಡರ್‌ಗಳನ್ನು ಆಮದು ಮಾಡಿಕೊಳ್ಳಬೇಕು. ಖಾಸಗಿ ಸಹಭಾಗಿತ್ವದಲ್ಲಿ ಈಗಲಾದರೂ ಆಕ್ಸಿಜನ್‌ ಕಾನ್ಸಟ್ರೇಟರ್‌ಗಳನ್ನು ಸ್ಥಾಪಿಸಲು ಮುಂದಾಗಬೇಕು ಎಂದು ಅವರು ಒತ್ತಾಯಿಸಿದರು.

ಸರ್ಕಾರದ ಪ್ರಯತ್ನ ಮಾತ್ರವಲ್ಲದೇ ಸಾಮುದಾಯಿಕ ಪ್ರಯತ್ನಗಳು ಕೂಡ ಆಗಬೇಕಿದ್ದು, ಗ್ರಾಮೀಣ ಭಾಗದಲ್ಲಿರುವ ಸಮುದಾಯ ಭವನ, ಕಲ್ಯಾಣ ಮಂಟಪಗಳನ್ನು ಕೋವಿಡ್‌ ಸೆಂಟರ್‌ಗಳಾಗಿ ಪುನರ್‌ಸ್ಥಾಪಿಸಬೇಕು. ಇಬ್ಬರು ಸೋಂಕಿತರಿಗೆ ಒಂದು ಸಿಲೆಂಡರ್‌ನಂತೆ ಆಕ್ಸಿಜನ್‌ ಪೂರೈಸಿದಲ್ಲಿ ಸೋಂಕಿತರ ಆರೋಗ್ಯ ಸುಧಾರಿಸುವಂತೆ ನೋಡಿಕೊಳ್ಳಬಹುದು. ಸಿಖ್‌ ಸಮುದಾಯವು ಗುರುದ್ವಾರಗಳಲ್ಲಿ ಆಕ್ಸಿಜನ್‌ ಬೆಡ್‌ಗಳನ್ನು ಸ್ಥಾಪಿಸಿರುವುದು ಸಾಮುದಾಯಿಕ ಪ್ರಯತ್ನಕ್ಕೆ ಉದಾಹರಣೆಯಾಗಿದೆ ಎಂದರು.

ಸರ್ಕಾರ ಕೋವಿಡ್ ಎರಡನೇ ಅಲೆಯನ್ನು ಸಮರ್ಥವಾಗಿ ಎದುರಿಸಬೇಕಿತ್ತು. ಆಕ್ಸಿಜನ್‌ ಕಾನ್ಸಟ್ರೇಟರ್‌, ಆಕ್ಸಿಜನ್‌ ಸಿಲೆಂಡರ್‌ ತರಿಬೇಕಾದದ್ದು, ಸರ್ಕಾರದ ಜವಾಬ್ದಾರಿಯಾಗಿತ್ತು. ಆದರೆ ಸರ್ಕಾರದ ನಿರ್ಲಕ್ಷ್ಯದಿಂದಾಗಿ ಜನರು ಸಾಯುತ್ತಿರುವುದನ್ನು ನಾವು ನೋಡಿದ್ದೇವೆ. ನಾಗರೀಕರಾಗಿ ಈ ಹೊಣೆಯನ್ನು ನಾವು ನಮ್ಮ ಮೇಲೆ ಹಾಕಿಕೊಂಡು ಕೆಲಸ ಮಾಡುತ್ತಿದ್ದೇವೆ. ಎರಡು ಮತ್ತು ಮೂರನೇ ಅಲೆ ನಡುವೆ ಹೆಚ್ಚು ಸಮಯವಿಲ್ಲದೇ ಇರುವುದರಿಂದ ಸರ್ಕಾರವು ಹೆಚ್ಚು ಮುತುವರ್ಜಿಯಿಂದ ಕೆಲಸ ಮಾಡುವಂತೆ ನಾಗರೀಕರಾಗಿ ನಾವು ಒತ್ತಾಯಿಸಬೇಕು ಎಂದು ಕರ್ನಾಟಕ ಜನಾರೋಗ್ಯ ಚಳವಳಿಯ ಡಾ. ಅಖಿಲಾ ವಾಸನ್‌ ಅಭಿಪ್ರಾಯಪಟ್ಟರು.

ಪ್ರಸ್ತುತ ಬೆಂಗಳೂರಿನಲ್ಲಿ ಉಂಟಾಗಿರುವ ಆರೋಗ್ಯ ಬಿಕ್ಕಟ್ಟು ಜಿಲ್ಲಾ ಮಟ್ಟದಲ್ಲಿಯೂ ಆರಂಭವಾಗಿವೆ. ನಾವು ಬೆಂಗಳೂರು ಮಾತ್ರವಲ್ಲದೇ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿರುವ ಆರೋಗ್ಯ ಅವ್ಯವಸ್ಥೆಯನ್ನು ಬಯಲಿಗೆಳೆದು, ಅದನ್ನು ಕೂಡಲೇ ಸರಿಪಡಿಸುವಂತೆ ಒತ್ತಾಯಿಸಬೇಕು ಎಂದು ಅವರು ತಿಳಿಸಿದರು.

ಡಾ. ವಾಸು ಎಚ್.ವಿ ಅವರು ಮಾತನಾಡಿ “ಕಳೆದ ವರ್ಷವೇ ತಜ್ಞರು ಎರಡನೇ ಅಲೆ ಬಗ್ಗೆ ಎಚ್ಚರಿಸಿದ್ದರು. ಆದರೆ ಮಾರ್ಚ್ ತಿಂಗಳಿನಲ್ಲಿ ಈ ದೇಶದ ಆರೋಗ್ಯ ಸಚಿವರು ನಾವು ಕೋವಿಡ್‌ ಅಂತ್ಯದಲ್ಲಿದ್ದೇವೆ ಎಂದು ಹೇಳಿಕೆ ನೀಡಿ ಅದನ್ನು ಕಡೆಗಣಿಸಿದರು. ಅದೇ ರೀತಿಯಲ್ಲಿ ಕರ್ನಾಟಕ ಸರ್ಕಾರವು ಸಹ ಏಪ್ರಿಲ್ ಮೂರರಂದು ಒಕ್ಕೂಟ ಸರ್ಕಾರಕ್ಕೆ ಪತ್ರ ಬರೆದು ಮೇ 5ರಂದು ರಾಜ್ಯದಲ್ಲಿ ಹತ್ತಿರತ್ತಿರ ನಾಲ್ಕು ಲಕ್ಷ ಸಕ್ರಿಯ ಪ್ರಕರಣಗಳು ಇರುವ ಸಾಧ್ಯತೆಯಿದೆ ಎಂದು ಹೇಳಿತ್ತು. ಅದೇ ರೀತಿಯಲ್ಲಿ ಮೇ 5ರಂದು ನಮ್ಮ ರಾಜ್ಯದಲ್ಲಿ 4,60,000 ಪ್ರಕರಣಗಳಿದ್ದವು. ಅಂದರೆ ಸರ್ಕಾರಕ್ಕೆ ಗೊತ್ತಿದ್ದರೂ ಇಂತಹ ಸಂದರ್ಭದಲ್ಲಿ ಯಾವ ರೀತಿಯಲ್ಲಿ ಸಮರೋಪಾದಿಯಲ್ಲಿ ಕಾರ್ಯಚರಣೆ ನಡೆಯಬೇಕೊ ಹಾಗೆ ಅದು ಮಾಡಲಿಲ್ಲ. ಆಕ್ಸಿಜನ್ ಬಿಕ್ಕಟ್ಟು ಪರಿಹರಿಸಲು ಇತರೆಡೆಗಳಿಂದ ನೆರವು ಪಡೆದುಕೊಳ್ಳಲು ಇವತ್ತಿನವರೆಗೂ ಸಹ ಸರ್ಕಾರ ಯತ್ನಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬಿಎಂಸಿ-92 ಬ್ಯಾಚ್‌ನ ವೈದ್ಯರೆಲ್ಲರೂ ಸೇರಿ ಕೋವಿಡ್‌ ಸೋಂಕಿತರಿಗೆ ಉಚಿತವಾಗಿ ನೆರವು ನೀಡಲು ಮುಂದಾಗಿದ್ದೇವೆ. ಬೇರೆ ಬೇರೆ ದೇಶಗಳಲ್ಲಿರುವ ವೈದ್ಯರು ಸೇರಿ ಬೆಂಗಳೂರಿಗೆ 350 ಆಕ್ಸಿಜೆನ್‌ ಕಾನ್ಸಂಟ್ರೇಟರ್‌ಗಳನ್ನು ಕಳುಹಿಸುತ್ತಿದ್ದಾರೆ ಎಂದು ಅವರು ತಿಳಿಸಿದರು.


ಇದನ್ನೂ ಓದಿ: ಬೆಡ್, ಆಕ್ಸಿಜನ್, ವ್ಯಾಕ್ಸಿನ್, ಸಮಗ್ರ ಪಡಿತರ & ಆರ್ಥಿಕ ನೆರವು ನೀಡಿ: 400 ಸಾಮಾಜಿಕ ಕಾರ್ಯಕರ್ತರ ಜನಾಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...