Homeಕರ್ನಾಟಕಮುಂದಿನ ಮುಖ್ಯಮಂತ್ರಿ ಎಂಬ ಅಪಾಯಕಾರಿ ಚರ್ಚೆ: ಡಾ.ಹೆಚ್.ಸಿ ಮಹದೇವಪ್ಪ

ಮುಂದಿನ ಮುಖ್ಯಮಂತ್ರಿ ಎಂಬ ಅಪಾಯಕಾರಿ ಚರ್ಚೆ: ಡಾ.ಹೆಚ್.ಸಿ ಮಹದೇವಪ್ಪ

ಮೊದಲು ಜನಪರವಾಗಿ ಹೋರಾಡೋಣ, ಅಧಿಕಾರ ಕೊಡುವುದು ಬಿಡುವುದನ್ನು ಜನರ ಆಯ್ಕೆ ಮತ್ತು ವಿವೇಚನೆಗೇ ಬಿಡೋಣ!

- Advertisement -
- Advertisement -

ಪ್ರಸ್ತುತ ನಮ್ಮ ರಾಜ್ಯ ಮತ್ತು ದೇಶವು ಕೆಲವು ಗಂಭೀರ ಸಮಸ್ಯೆಗಳನ್ನು ಎದುರಿಸುತ್ತಿದೆ.  ಮೊದಲನೆಯದಾಗಿ ತೈಲ ಬೆಲೆ ಏರಿಕೆ ಮತ್ತು ಅದರಿಂದ ಜನ ಸಾಮಾನ್ಯರ ಅಗತ್ಯ ವಸ್ತುಗಳ ಮೇಲೆ ಉಂಟಾದ ಬೆಲೆ ಏರಿಕೆ..

ಎರಡನೆಯದಾಗಿ ಭೂ ಸುಧಾರಣಾ ತಿದ್ದುಪಡಿ ಕಾಯ್ದೆಯಿಂದ ಮುಂದೆ ಭಾರತದ ಕೃಷಿ ಮತ್ತು ರೈತರ ಮೇಲೆ ಉಂಟಾಗುವ ದುಷ್ಪರಿಣಾಮಗಳು..

ಮೂರನೆಯದಾಗಿ ಕರೋನಾ ಸಂದರ್ಭದ ವೈಫಲ್ಯ ಹಾಗೂ ಜನ ಸಾಮಾನ್ಯರಿಗೆ ಆಗುತ್ತಿರುವ ತೊಂದರೆ, ನಾಲ್ಕನೆಯದಾಗಿ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಡಿ ಮನುವಾದ ಮತ್ತು ಕೇಸರೀಕರಣವನ್ನು ಶಿಕ್ಷಣ ವ್ಯವಸ್ಥೆಯಲ್ಲಿ ಅಳವಡಿಸಲು ಹೊರಟಿರುವ ಕೋಮುವಾದಿಗಳ ಹುನ್ನಾರ..

ಕೊನೆಯದಾಗಿ ಶ್ರೇಷ್ಠತೆಯ ಪ್ರಜ್ಞೆಯಿಂದ ಕೆಳ ವರ್ಗಗಳ ಮೇಲೆ ಏನನ್ನಾದರೂ ಮಾಡಬಹುದೆಂಬ ಸರ್ವಾಧಿಕಾರದ ವಿರುದ್ಧ ಹೋರಾಟ ನಡೆಸುವ ಮೂಲಕ ಈ ದೇಶಕ್ಕೆ ಬಾಬಾ ಸಾಹೇಬರು ನೀಡಿದ ಸಂವಿಧಾನ ಮತ್ತು ಸಂವಿಧಾನದ ಆಶಯಗಳನ್ನು ಕಾಪಾಡುವುದು ಈ ಹೊತ್ತಿನ ನಮ್ಮ ಹೋರಾಟದ ವಿಷಯವಾಗಿದೆ.

ಆದರೆ ಪಕ್ಷಾತೀತವಾಗಿ ಎಲ್ಲೆಡೆಯೂ ಸಹ ಜನ ಸಾಮಾನ್ಯರಿಗೆ ಮಗ್ಗುಲ ಮುಳ್ಳಾಗಿ ಕಾಡುತ್ತಿರುವ ಫ್ಯೂಡಲ್‌ಗಳು ಮತ್ತು ಅಕ್ಷರಶಃ ಜನಪರ ಆಡಳಿತದ ಸಂವೇದನೆಯನ್ನು ಕಳೆದುಕೊಂಡಿರುವ ಜಾತಿ ಶ್ರೇಷ್ಠತಾವ್ಯಾಧಿಗಳು ಈ ದಿನ ಜನಪರ ಆಡಳಿತಕ್ಕೆ ಇರಬೇಕಾದ ದೂರದೃಷ್ಟಿಯನ್ನು ಪಕ್ಕಕ್ಕೆ ಇಟ್ಟು “ಕಾಂಗ್ರೆಸ್ ನಲ್ಲಿ ಮುಂದಿನ ಮುಖ್ಯಮಂತ್ರಿ ಯಾರು?” ಎಂಬ ಅಸಂಬದ್ಧವಾದ ಚರ್ಚೆಯನ್ನು ಹುಟ್ಟು ಹಾಕಲು ತಮ್ಮ ನಾಯಕತ್ವವನ್ನು ಬಳಸಿಕೊಳ್ಳುತ್ತಾರೆ ಎಂದರೆ ಇವರಿಗೆ ಸಮಾಜಪರವಾದಂತಹ ಯಾವುದೇ ಕಾಳಜಿಯಾಗಲೀ ಜವಾಬ್ದಾರಿಯಾಗಲೀ ಇಲ್ಲವೆಂಬುದನ್ನು ನಾವು ಸುಲಭವಾಗಿ ಅರ್ಥಮಾಡಿಕೊಳ್ಳಬಹುದು.

ಬಿಜೆಪಿಗರ ಕಳಪೆ ಆಡಳಿತದಿಂದ ಬೇಸತ್ತು ಕಣ್ಣೀರು ಹಾಕುತ್ತಿರುವ ಜನ ಸಾಮಾನ್ಯರ ಬದುಕಿಗೆ ವಿಶ್ವಾಸದ ಶಕ್ತಿಯಾಗಿ, ಉತ್ತಮ ಭವಿಷ್ಯದ ನಂಬಿಕೆಯಾಗಿ ಮೂಡಿ ಬರಬೇಕಿರುವ ನಮ್ಮ ಕಾಂಗ್ರೆಸ್ ಪಕ್ಷದ ಕೆಲ ನಾಯಕರು, ತಮಗೆ ತಾವೇ ಕಚ್ಚಾಡಿಕೊಳ್ಳುವ ಮೂಲಕ ಕೋಮುವಾದಿಗಳ ಎದುರು ದುರ್ಬಲರಾಗಿಯೂ ಜನ ಸಾಮಾನ್ಯರ ಎದುರು ಮತ್ತಷ್ಟು ದುರ್ಬಲರಾಗಿಯೂ ಗೋಚರಿಸುವಂತಹ ಅಪಾಯವನ್ನು ಮೈಮೇಲೆ ಎಳೆದುಕೊಳ್ಳುತ್ತಿದ್ದಾರೆ.

ಜನಪರ ನಾಯಕತ್ವ ಎಂದರೆ ಜನರು ತೊಂದರೆ ಅನುಭವಿಸುವಾಗ ಅವರ ಪರವಾಗಿ ದೃಢವಾಗಿ ನಿಲ್ಲುವುದೇ ಹೊರತು, ದುರ್ಬಲರ ಆಡಳಿತದಲ್ಲಿ, ನಾಯಕತ್ವಕ್ಕಾಗಿ ಕಿತ್ತಾಡುವುದಲ್ಲ.

ಕೊನೆಯದಾಗಿ ಕಲಹಗಳ ಮೂಲಕ ಇಂತಹ ತಪ್ಪು ಸಂದೇಶವನ್ನು ರವಾನಿಸುವುದು ಜನಪರ ಆಡಳಿತವನ್ನು ನೀಡಲು ಎಲ್ಲ ರೀತಿಯಿಂದಲೂ ಶಕ್ತವಾಗಿರುವ ಮತ್ತು ಈಗಾಗಲೇ ಅದನ್ನು ಸಾಧಿಸಿ ತೋರಿಸಿರುವ ಕಾಂಗ್ರೆಸ್ ಪಕ್ಷಕ್ಕೆ ನಿಜಕ್ಕೂ ಒಳ್ಳೆಯದಲ್ಲ!

ಮೊದಲು ಜನಪರವಾಗಿ ಹೋರಾಡೋಣ, ಅಧಿಕಾರ ಕೊಡುವುದು ಬಿಡುವುದನ್ನು ಜನರ ಆಯ್ಕೆ ಮತ್ತು ವಿವೇಚನೆಗೇ ಬಿಡೋಣ!

ಇನ್ನು who is who, what is what ಎಂಬ ಸಂಗತಿಯು ಹೈಕಮಾಂಡ್ ನವರಿಗೇ ಚೆನ್ನಾಗಿ ಗೊತ್ತಿರುವುದರಿಂದ ಸರ್ಕಾರದ ನಾಯಕತ್ವದ ಬಗ್ಗೆ ಅವರೇ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ

ಅಲ್ಲಿಯವರೆಗೂ ಮುಖ್ಯಮಂತ್ರಿ ಯಾರಾಗಬೇಕೆಂಬ ಚರ್ಚೆಯು ಎಷ್ಟು ಅಪ್ರಸ್ತುತವೋ ಅಷ್ಟೇ ಅಪಾಯಕಾರಿ ಕೂಡಾ!

  • ಡಾ.ಹೆಚ್.ಸಿ ಮಹದೇವಪ್ಪ

(ಡಾ.ಹೆಚ್.ಸಿ ಮಹದೇವಪ್ಪನವರು ಮಾಜಿ ಸಚಿವರು. ಕಾಂಗ್ರೆಸ್ ಮುಖಂಡರು. ಲೇಖನದಲ್ಲಿನ ಅಭಿಪ್ರಾಯಗಳು ವಯಕ್ತಿಕವಾದವು)


ಇದನ್ನೂ ಓದಿ: ಮೊದಲು ಚುನಾವಣೆ ಗೆಲ್ಲುವ ಕಡೆ ಗಮನ ಕೊಡಿ, ಮುಖ್ಯಮಂತ್ರಿ ಅಭ್ಯರ್ಥಿ ವಿಚಾರ ನಂತರದ್ದು: ರಣದೀಪ್ ಸಿಂಗ್ ಸುರ್ಜೆವಾಲಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...