Homeಕರ್ನಾಟಕಮುಂದಿನ ಮುಖ್ಯಮಂತ್ರಿ ಎಂಬ ಅಪಾಯಕಾರಿ ಚರ್ಚೆ: ಡಾ.ಹೆಚ್.ಸಿ ಮಹದೇವಪ್ಪ

ಮುಂದಿನ ಮುಖ್ಯಮಂತ್ರಿ ಎಂಬ ಅಪಾಯಕಾರಿ ಚರ್ಚೆ: ಡಾ.ಹೆಚ್.ಸಿ ಮಹದೇವಪ್ಪ

ಮೊದಲು ಜನಪರವಾಗಿ ಹೋರಾಡೋಣ, ಅಧಿಕಾರ ಕೊಡುವುದು ಬಿಡುವುದನ್ನು ಜನರ ಆಯ್ಕೆ ಮತ್ತು ವಿವೇಚನೆಗೇ ಬಿಡೋಣ!

- Advertisement -
- Advertisement -

ಪ್ರಸ್ತುತ ನಮ್ಮ ರಾಜ್ಯ ಮತ್ತು ದೇಶವು ಕೆಲವು ಗಂಭೀರ ಸಮಸ್ಯೆಗಳನ್ನು ಎದುರಿಸುತ್ತಿದೆ.  ಮೊದಲನೆಯದಾಗಿ ತೈಲ ಬೆಲೆ ಏರಿಕೆ ಮತ್ತು ಅದರಿಂದ ಜನ ಸಾಮಾನ್ಯರ ಅಗತ್ಯ ವಸ್ತುಗಳ ಮೇಲೆ ಉಂಟಾದ ಬೆಲೆ ಏರಿಕೆ..

ಎರಡನೆಯದಾಗಿ ಭೂ ಸುಧಾರಣಾ ತಿದ್ದುಪಡಿ ಕಾಯ್ದೆಯಿಂದ ಮುಂದೆ ಭಾರತದ ಕೃಷಿ ಮತ್ತು ರೈತರ ಮೇಲೆ ಉಂಟಾಗುವ ದುಷ್ಪರಿಣಾಮಗಳು..

ಮೂರನೆಯದಾಗಿ ಕರೋನಾ ಸಂದರ್ಭದ ವೈಫಲ್ಯ ಹಾಗೂ ಜನ ಸಾಮಾನ್ಯರಿಗೆ ಆಗುತ್ತಿರುವ ತೊಂದರೆ, ನಾಲ್ಕನೆಯದಾಗಿ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಡಿ ಮನುವಾದ ಮತ್ತು ಕೇಸರೀಕರಣವನ್ನು ಶಿಕ್ಷಣ ವ್ಯವಸ್ಥೆಯಲ್ಲಿ ಅಳವಡಿಸಲು ಹೊರಟಿರುವ ಕೋಮುವಾದಿಗಳ ಹುನ್ನಾರ..

ಕೊನೆಯದಾಗಿ ಶ್ರೇಷ್ಠತೆಯ ಪ್ರಜ್ಞೆಯಿಂದ ಕೆಳ ವರ್ಗಗಳ ಮೇಲೆ ಏನನ್ನಾದರೂ ಮಾಡಬಹುದೆಂಬ ಸರ್ವಾಧಿಕಾರದ ವಿರುದ್ಧ ಹೋರಾಟ ನಡೆಸುವ ಮೂಲಕ ಈ ದೇಶಕ್ಕೆ ಬಾಬಾ ಸಾಹೇಬರು ನೀಡಿದ ಸಂವಿಧಾನ ಮತ್ತು ಸಂವಿಧಾನದ ಆಶಯಗಳನ್ನು ಕಾಪಾಡುವುದು ಈ ಹೊತ್ತಿನ ನಮ್ಮ ಹೋರಾಟದ ವಿಷಯವಾಗಿದೆ.

ಆದರೆ ಪಕ್ಷಾತೀತವಾಗಿ ಎಲ್ಲೆಡೆಯೂ ಸಹ ಜನ ಸಾಮಾನ್ಯರಿಗೆ ಮಗ್ಗುಲ ಮುಳ್ಳಾಗಿ ಕಾಡುತ್ತಿರುವ ಫ್ಯೂಡಲ್‌ಗಳು ಮತ್ತು ಅಕ್ಷರಶಃ ಜನಪರ ಆಡಳಿತದ ಸಂವೇದನೆಯನ್ನು ಕಳೆದುಕೊಂಡಿರುವ ಜಾತಿ ಶ್ರೇಷ್ಠತಾವ್ಯಾಧಿಗಳು ಈ ದಿನ ಜನಪರ ಆಡಳಿತಕ್ಕೆ ಇರಬೇಕಾದ ದೂರದೃಷ್ಟಿಯನ್ನು ಪಕ್ಕಕ್ಕೆ ಇಟ್ಟು “ಕಾಂಗ್ರೆಸ್ ನಲ್ಲಿ ಮುಂದಿನ ಮುಖ್ಯಮಂತ್ರಿ ಯಾರು?” ಎಂಬ ಅಸಂಬದ್ಧವಾದ ಚರ್ಚೆಯನ್ನು ಹುಟ್ಟು ಹಾಕಲು ತಮ್ಮ ನಾಯಕತ್ವವನ್ನು ಬಳಸಿಕೊಳ್ಳುತ್ತಾರೆ ಎಂದರೆ ಇವರಿಗೆ ಸಮಾಜಪರವಾದಂತಹ ಯಾವುದೇ ಕಾಳಜಿಯಾಗಲೀ ಜವಾಬ್ದಾರಿಯಾಗಲೀ ಇಲ್ಲವೆಂಬುದನ್ನು ನಾವು ಸುಲಭವಾಗಿ ಅರ್ಥಮಾಡಿಕೊಳ್ಳಬಹುದು.

ಬಿಜೆಪಿಗರ ಕಳಪೆ ಆಡಳಿತದಿಂದ ಬೇಸತ್ತು ಕಣ್ಣೀರು ಹಾಕುತ್ತಿರುವ ಜನ ಸಾಮಾನ್ಯರ ಬದುಕಿಗೆ ವಿಶ್ವಾಸದ ಶಕ್ತಿಯಾಗಿ, ಉತ್ತಮ ಭವಿಷ್ಯದ ನಂಬಿಕೆಯಾಗಿ ಮೂಡಿ ಬರಬೇಕಿರುವ ನಮ್ಮ ಕಾಂಗ್ರೆಸ್ ಪಕ್ಷದ ಕೆಲ ನಾಯಕರು, ತಮಗೆ ತಾವೇ ಕಚ್ಚಾಡಿಕೊಳ್ಳುವ ಮೂಲಕ ಕೋಮುವಾದಿಗಳ ಎದುರು ದುರ್ಬಲರಾಗಿಯೂ ಜನ ಸಾಮಾನ್ಯರ ಎದುರು ಮತ್ತಷ್ಟು ದುರ್ಬಲರಾಗಿಯೂ ಗೋಚರಿಸುವಂತಹ ಅಪಾಯವನ್ನು ಮೈಮೇಲೆ ಎಳೆದುಕೊಳ್ಳುತ್ತಿದ್ದಾರೆ.

ಜನಪರ ನಾಯಕತ್ವ ಎಂದರೆ ಜನರು ತೊಂದರೆ ಅನುಭವಿಸುವಾಗ ಅವರ ಪರವಾಗಿ ದೃಢವಾಗಿ ನಿಲ್ಲುವುದೇ ಹೊರತು, ದುರ್ಬಲರ ಆಡಳಿತದಲ್ಲಿ, ನಾಯಕತ್ವಕ್ಕಾಗಿ ಕಿತ್ತಾಡುವುದಲ್ಲ.

ಕೊನೆಯದಾಗಿ ಕಲಹಗಳ ಮೂಲಕ ಇಂತಹ ತಪ್ಪು ಸಂದೇಶವನ್ನು ರವಾನಿಸುವುದು ಜನಪರ ಆಡಳಿತವನ್ನು ನೀಡಲು ಎಲ್ಲ ರೀತಿಯಿಂದಲೂ ಶಕ್ತವಾಗಿರುವ ಮತ್ತು ಈಗಾಗಲೇ ಅದನ್ನು ಸಾಧಿಸಿ ತೋರಿಸಿರುವ ಕಾಂಗ್ರೆಸ್ ಪಕ್ಷಕ್ಕೆ ನಿಜಕ್ಕೂ ಒಳ್ಳೆಯದಲ್ಲ!

ಮೊದಲು ಜನಪರವಾಗಿ ಹೋರಾಡೋಣ, ಅಧಿಕಾರ ಕೊಡುವುದು ಬಿಡುವುದನ್ನು ಜನರ ಆಯ್ಕೆ ಮತ್ತು ವಿವೇಚನೆಗೇ ಬಿಡೋಣ!

ಇನ್ನು who is who, what is what ಎಂಬ ಸಂಗತಿಯು ಹೈಕಮಾಂಡ್ ನವರಿಗೇ ಚೆನ್ನಾಗಿ ಗೊತ್ತಿರುವುದರಿಂದ ಸರ್ಕಾರದ ನಾಯಕತ್ವದ ಬಗ್ಗೆ ಅವರೇ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ

ಅಲ್ಲಿಯವರೆಗೂ ಮುಖ್ಯಮಂತ್ರಿ ಯಾರಾಗಬೇಕೆಂಬ ಚರ್ಚೆಯು ಎಷ್ಟು ಅಪ್ರಸ್ತುತವೋ ಅಷ್ಟೇ ಅಪಾಯಕಾರಿ ಕೂಡಾ!

  • ಡಾ.ಹೆಚ್.ಸಿ ಮಹದೇವಪ್ಪ

(ಡಾ.ಹೆಚ್.ಸಿ ಮಹದೇವಪ್ಪನವರು ಮಾಜಿ ಸಚಿವರು. ಕಾಂಗ್ರೆಸ್ ಮುಖಂಡರು. ಲೇಖನದಲ್ಲಿನ ಅಭಿಪ್ರಾಯಗಳು ವಯಕ್ತಿಕವಾದವು)


ಇದನ್ನೂ ಓದಿ: ಮೊದಲು ಚುನಾವಣೆ ಗೆಲ್ಲುವ ಕಡೆ ಗಮನ ಕೊಡಿ, ಮುಖ್ಯಮಂತ್ರಿ ಅಭ್ಯರ್ಥಿ ವಿಚಾರ ನಂತರದ್ದು: ರಣದೀಪ್ ಸಿಂಗ್ ಸುರ್ಜೆವಾಲಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....