Homeಕರ್ನಾಟಕಮುಂದಿನ ಮುಖ್ಯಮಂತ್ರಿ ಎಂಬ ಅಪಾಯಕಾರಿ ಚರ್ಚೆ: ಡಾ.ಹೆಚ್.ಸಿ ಮಹದೇವಪ್ಪ

ಮುಂದಿನ ಮುಖ್ಯಮಂತ್ರಿ ಎಂಬ ಅಪಾಯಕಾರಿ ಚರ್ಚೆ: ಡಾ.ಹೆಚ್.ಸಿ ಮಹದೇವಪ್ಪ

ಮೊದಲು ಜನಪರವಾಗಿ ಹೋರಾಡೋಣ, ಅಧಿಕಾರ ಕೊಡುವುದು ಬಿಡುವುದನ್ನು ಜನರ ಆಯ್ಕೆ ಮತ್ತು ವಿವೇಚನೆಗೇ ಬಿಡೋಣ!

- Advertisement -
- Advertisement -

ಪ್ರಸ್ತುತ ನಮ್ಮ ರಾಜ್ಯ ಮತ್ತು ದೇಶವು ಕೆಲವು ಗಂಭೀರ ಸಮಸ್ಯೆಗಳನ್ನು ಎದುರಿಸುತ್ತಿದೆ.  ಮೊದಲನೆಯದಾಗಿ ತೈಲ ಬೆಲೆ ಏರಿಕೆ ಮತ್ತು ಅದರಿಂದ ಜನ ಸಾಮಾನ್ಯರ ಅಗತ್ಯ ವಸ್ತುಗಳ ಮೇಲೆ ಉಂಟಾದ ಬೆಲೆ ಏರಿಕೆ..

ಎರಡನೆಯದಾಗಿ ಭೂ ಸುಧಾರಣಾ ತಿದ್ದುಪಡಿ ಕಾಯ್ದೆಯಿಂದ ಮುಂದೆ ಭಾರತದ ಕೃಷಿ ಮತ್ತು ರೈತರ ಮೇಲೆ ಉಂಟಾಗುವ ದುಷ್ಪರಿಣಾಮಗಳು..

ಮೂರನೆಯದಾಗಿ ಕರೋನಾ ಸಂದರ್ಭದ ವೈಫಲ್ಯ ಹಾಗೂ ಜನ ಸಾಮಾನ್ಯರಿಗೆ ಆಗುತ್ತಿರುವ ತೊಂದರೆ, ನಾಲ್ಕನೆಯದಾಗಿ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಡಿ ಮನುವಾದ ಮತ್ತು ಕೇಸರೀಕರಣವನ್ನು ಶಿಕ್ಷಣ ವ್ಯವಸ್ಥೆಯಲ್ಲಿ ಅಳವಡಿಸಲು ಹೊರಟಿರುವ ಕೋಮುವಾದಿಗಳ ಹುನ್ನಾರ..

ಕೊನೆಯದಾಗಿ ಶ್ರೇಷ್ಠತೆಯ ಪ್ರಜ್ಞೆಯಿಂದ ಕೆಳ ವರ್ಗಗಳ ಮೇಲೆ ಏನನ್ನಾದರೂ ಮಾಡಬಹುದೆಂಬ ಸರ್ವಾಧಿಕಾರದ ವಿರುದ್ಧ ಹೋರಾಟ ನಡೆಸುವ ಮೂಲಕ ಈ ದೇಶಕ್ಕೆ ಬಾಬಾ ಸಾಹೇಬರು ನೀಡಿದ ಸಂವಿಧಾನ ಮತ್ತು ಸಂವಿಧಾನದ ಆಶಯಗಳನ್ನು ಕಾಪಾಡುವುದು ಈ ಹೊತ್ತಿನ ನಮ್ಮ ಹೋರಾಟದ ವಿಷಯವಾಗಿದೆ.

ಆದರೆ ಪಕ್ಷಾತೀತವಾಗಿ ಎಲ್ಲೆಡೆಯೂ ಸಹ ಜನ ಸಾಮಾನ್ಯರಿಗೆ ಮಗ್ಗುಲ ಮುಳ್ಳಾಗಿ ಕಾಡುತ್ತಿರುವ ಫ್ಯೂಡಲ್‌ಗಳು ಮತ್ತು ಅಕ್ಷರಶಃ ಜನಪರ ಆಡಳಿತದ ಸಂವೇದನೆಯನ್ನು ಕಳೆದುಕೊಂಡಿರುವ ಜಾತಿ ಶ್ರೇಷ್ಠತಾವ್ಯಾಧಿಗಳು ಈ ದಿನ ಜನಪರ ಆಡಳಿತಕ್ಕೆ ಇರಬೇಕಾದ ದೂರದೃಷ್ಟಿಯನ್ನು ಪಕ್ಕಕ್ಕೆ ಇಟ್ಟು “ಕಾಂಗ್ರೆಸ್ ನಲ್ಲಿ ಮುಂದಿನ ಮುಖ್ಯಮಂತ್ರಿ ಯಾರು?” ಎಂಬ ಅಸಂಬದ್ಧವಾದ ಚರ್ಚೆಯನ್ನು ಹುಟ್ಟು ಹಾಕಲು ತಮ್ಮ ನಾಯಕತ್ವವನ್ನು ಬಳಸಿಕೊಳ್ಳುತ್ತಾರೆ ಎಂದರೆ ಇವರಿಗೆ ಸಮಾಜಪರವಾದಂತಹ ಯಾವುದೇ ಕಾಳಜಿಯಾಗಲೀ ಜವಾಬ್ದಾರಿಯಾಗಲೀ ಇಲ್ಲವೆಂಬುದನ್ನು ನಾವು ಸುಲಭವಾಗಿ ಅರ್ಥಮಾಡಿಕೊಳ್ಳಬಹುದು.

ಬಿಜೆಪಿಗರ ಕಳಪೆ ಆಡಳಿತದಿಂದ ಬೇಸತ್ತು ಕಣ್ಣೀರು ಹಾಕುತ್ತಿರುವ ಜನ ಸಾಮಾನ್ಯರ ಬದುಕಿಗೆ ವಿಶ್ವಾಸದ ಶಕ್ತಿಯಾಗಿ, ಉತ್ತಮ ಭವಿಷ್ಯದ ನಂಬಿಕೆಯಾಗಿ ಮೂಡಿ ಬರಬೇಕಿರುವ ನಮ್ಮ ಕಾಂಗ್ರೆಸ್ ಪಕ್ಷದ ಕೆಲ ನಾಯಕರು, ತಮಗೆ ತಾವೇ ಕಚ್ಚಾಡಿಕೊಳ್ಳುವ ಮೂಲಕ ಕೋಮುವಾದಿಗಳ ಎದುರು ದುರ್ಬಲರಾಗಿಯೂ ಜನ ಸಾಮಾನ್ಯರ ಎದುರು ಮತ್ತಷ್ಟು ದುರ್ಬಲರಾಗಿಯೂ ಗೋಚರಿಸುವಂತಹ ಅಪಾಯವನ್ನು ಮೈಮೇಲೆ ಎಳೆದುಕೊಳ್ಳುತ್ತಿದ್ದಾರೆ.

ಜನಪರ ನಾಯಕತ್ವ ಎಂದರೆ ಜನರು ತೊಂದರೆ ಅನುಭವಿಸುವಾಗ ಅವರ ಪರವಾಗಿ ದೃಢವಾಗಿ ನಿಲ್ಲುವುದೇ ಹೊರತು, ದುರ್ಬಲರ ಆಡಳಿತದಲ್ಲಿ, ನಾಯಕತ್ವಕ್ಕಾಗಿ ಕಿತ್ತಾಡುವುದಲ್ಲ.

ಕೊನೆಯದಾಗಿ ಕಲಹಗಳ ಮೂಲಕ ಇಂತಹ ತಪ್ಪು ಸಂದೇಶವನ್ನು ರವಾನಿಸುವುದು ಜನಪರ ಆಡಳಿತವನ್ನು ನೀಡಲು ಎಲ್ಲ ರೀತಿಯಿಂದಲೂ ಶಕ್ತವಾಗಿರುವ ಮತ್ತು ಈಗಾಗಲೇ ಅದನ್ನು ಸಾಧಿಸಿ ತೋರಿಸಿರುವ ಕಾಂಗ್ರೆಸ್ ಪಕ್ಷಕ್ಕೆ ನಿಜಕ್ಕೂ ಒಳ್ಳೆಯದಲ್ಲ!

ಮೊದಲು ಜನಪರವಾಗಿ ಹೋರಾಡೋಣ, ಅಧಿಕಾರ ಕೊಡುವುದು ಬಿಡುವುದನ್ನು ಜನರ ಆಯ್ಕೆ ಮತ್ತು ವಿವೇಚನೆಗೇ ಬಿಡೋಣ!

ಇನ್ನು who is who, what is what ಎಂಬ ಸಂಗತಿಯು ಹೈಕಮಾಂಡ್ ನವರಿಗೇ ಚೆನ್ನಾಗಿ ಗೊತ್ತಿರುವುದರಿಂದ ಸರ್ಕಾರದ ನಾಯಕತ್ವದ ಬಗ್ಗೆ ಅವರೇ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ

ಅಲ್ಲಿಯವರೆಗೂ ಮುಖ್ಯಮಂತ್ರಿ ಯಾರಾಗಬೇಕೆಂಬ ಚರ್ಚೆಯು ಎಷ್ಟು ಅಪ್ರಸ್ತುತವೋ ಅಷ್ಟೇ ಅಪಾಯಕಾರಿ ಕೂಡಾ!

  • ಡಾ.ಹೆಚ್.ಸಿ ಮಹದೇವಪ್ಪ

(ಡಾ.ಹೆಚ್.ಸಿ ಮಹದೇವಪ್ಪನವರು ಮಾಜಿ ಸಚಿವರು. ಕಾಂಗ್ರೆಸ್ ಮುಖಂಡರು. ಲೇಖನದಲ್ಲಿನ ಅಭಿಪ್ರಾಯಗಳು ವಯಕ್ತಿಕವಾದವು)


ಇದನ್ನೂ ಓದಿ: ಮೊದಲು ಚುನಾವಣೆ ಗೆಲ್ಲುವ ಕಡೆ ಗಮನ ಕೊಡಿ, ಮುಖ್ಯಮಂತ್ರಿ ಅಭ್ಯರ್ಥಿ ವಿಚಾರ ನಂತರದ್ದು: ರಣದೀಪ್ ಸಿಂಗ್ ಸುರ್ಜೆವಾಲಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...