Homeಕರ್ನಾಟಕಮುಂದಿನ ಮುಖ್ಯಮಂತ್ರಿ ಎಂಬ ಅಪಾಯಕಾರಿ ಚರ್ಚೆ: ಡಾ.ಹೆಚ್.ಸಿ ಮಹದೇವಪ್ಪ

ಮುಂದಿನ ಮುಖ್ಯಮಂತ್ರಿ ಎಂಬ ಅಪಾಯಕಾರಿ ಚರ್ಚೆ: ಡಾ.ಹೆಚ್.ಸಿ ಮಹದೇವಪ್ಪ

ಮೊದಲು ಜನಪರವಾಗಿ ಹೋರಾಡೋಣ, ಅಧಿಕಾರ ಕೊಡುವುದು ಬಿಡುವುದನ್ನು ಜನರ ಆಯ್ಕೆ ಮತ್ತು ವಿವೇಚನೆಗೇ ಬಿಡೋಣ!

- Advertisement -
- Advertisement -

ಪ್ರಸ್ತುತ ನಮ್ಮ ರಾಜ್ಯ ಮತ್ತು ದೇಶವು ಕೆಲವು ಗಂಭೀರ ಸಮಸ್ಯೆಗಳನ್ನು ಎದುರಿಸುತ್ತಿದೆ.  ಮೊದಲನೆಯದಾಗಿ ತೈಲ ಬೆಲೆ ಏರಿಕೆ ಮತ್ತು ಅದರಿಂದ ಜನ ಸಾಮಾನ್ಯರ ಅಗತ್ಯ ವಸ್ತುಗಳ ಮೇಲೆ ಉಂಟಾದ ಬೆಲೆ ಏರಿಕೆ..

ಎರಡನೆಯದಾಗಿ ಭೂ ಸುಧಾರಣಾ ತಿದ್ದುಪಡಿ ಕಾಯ್ದೆಯಿಂದ ಮುಂದೆ ಭಾರತದ ಕೃಷಿ ಮತ್ತು ರೈತರ ಮೇಲೆ ಉಂಟಾಗುವ ದುಷ್ಪರಿಣಾಮಗಳು..

ಮೂರನೆಯದಾಗಿ ಕರೋನಾ ಸಂದರ್ಭದ ವೈಫಲ್ಯ ಹಾಗೂ ಜನ ಸಾಮಾನ್ಯರಿಗೆ ಆಗುತ್ತಿರುವ ತೊಂದರೆ, ನಾಲ್ಕನೆಯದಾಗಿ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಡಿ ಮನುವಾದ ಮತ್ತು ಕೇಸರೀಕರಣವನ್ನು ಶಿಕ್ಷಣ ವ್ಯವಸ್ಥೆಯಲ್ಲಿ ಅಳವಡಿಸಲು ಹೊರಟಿರುವ ಕೋಮುವಾದಿಗಳ ಹುನ್ನಾರ..

ಕೊನೆಯದಾಗಿ ಶ್ರೇಷ್ಠತೆಯ ಪ್ರಜ್ಞೆಯಿಂದ ಕೆಳ ವರ್ಗಗಳ ಮೇಲೆ ಏನನ್ನಾದರೂ ಮಾಡಬಹುದೆಂಬ ಸರ್ವಾಧಿಕಾರದ ವಿರುದ್ಧ ಹೋರಾಟ ನಡೆಸುವ ಮೂಲಕ ಈ ದೇಶಕ್ಕೆ ಬಾಬಾ ಸಾಹೇಬರು ನೀಡಿದ ಸಂವಿಧಾನ ಮತ್ತು ಸಂವಿಧಾನದ ಆಶಯಗಳನ್ನು ಕಾಪಾಡುವುದು ಈ ಹೊತ್ತಿನ ನಮ್ಮ ಹೋರಾಟದ ವಿಷಯವಾಗಿದೆ.

ಆದರೆ ಪಕ್ಷಾತೀತವಾಗಿ ಎಲ್ಲೆಡೆಯೂ ಸಹ ಜನ ಸಾಮಾನ್ಯರಿಗೆ ಮಗ್ಗುಲ ಮುಳ್ಳಾಗಿ ಕಾಡುತ್ತಿರುವ ಫ್ಯೂಡಲ್‌ಗಳು ಮತ್ತು ಅಕ್ಷರಶಃ ಜನಪರ ಆಡಳಿತದ ಸಂವೇದನೆಯನ್ನು ಕಳೆದುಕೊಂಡಿರುವ ಜಾತಿ ಶ್ರೇಷ್ಠತಾವ್ಯಾಧಿಗಳು ಈ ದಿನ ಜನಪರ ಆಡಳಿತಕ್ಕೆ ಇರಬೇಕಾದ ದೂರದೃಷ್ಟಿಯನ್ನು ಪಕ್ಕಕ್ಕೆ ಇಟ್ಟು “ಕಾಂಗ್ರೆಸ್ ನಲ್ಲಿ ಮುಂದಿನ ಮುಖ್ಯಮಂತ್ರಿ ಯಾರು?” ಎಂಬ ಅಸಂಬದ್ಧವಾದ ಚರ್ಚೆಯನ್ನು ಹುಟ್ಟು ಹಾಕಲು ತಮ್ಮ ನಾಯಕತ್ವವನ್ನು ಬಳಸಿಕೊಳ್ಳುತ್ತಾರೆ ಎಂದರೆ ಇವರಿಗೆ ಸಮಾಜಪರವಾದಂತಹ ಯಾವುದೇ ಕಾಳಜಿಯಾಗಲೀ ಜವಾಬ್ದಾರಿಯಾಗಲೀ ಇಲ್ಲವೆಂಬುದನ್ನು ನಾವು ಸುಲಭವಾಗಿ ಅರ್ಥಮಾಡಿಕೊಳ್ಳಬಹುದು.

ಬಿಜೆಪಿಗರ ಕಳಪೆ ಆಡಳಿತದಿಂದ ಬೇಸತ್ತು ಕಣ್ಣೀರು ಹಾಕುತ್ತಿರುವ ಜನ ಸಾಮಾನ್ಯರ ಬದುಕಿಗೆ ವಿಶ್ವಾಸದ ಶಕ್ತಿಯಾಗಿ, ಉತ್ತಮ ಭವಿಷ್ಯದ ನಂಬಿಕೆಯಾಗಿ ಮೂಡಿ ಬರಬೇಕಿರುವ ನಮ್ಮ ಕಾಂಗ್ರೆಸ್ ಪಕ್ಷದ ಕೆಲ ನಾಯಕರು, ತಮಗೆ ತಾವೇ ಕಚ್ಚಾಡಿಕೊಳ್ಳುವ ಮೂಲಕ ಕೋಮುವಾದಿಗಳ ಎದುರು ದುರ್ಬಲರಾಗಿಯೂ ಜನ ಸಾಮಾನ್ಯರ ಎದುರು ಮತ್ತಷ್ಟು ದುರ್ಬಲರಾಗಿಯೂ ಗೋಚರಿಸುವಂತಹ ಅಪಾಯವನ್ನು ಮೈಮೇಲೆ ಎಳೆದುಕೊಳ್ಳುತ್ತಿದ್ದಾರೆ.

ಜನಪರ ನಾಯಕತ್ವ ಎಂದರೆ ಜನರು ತೊಂದರೆ ಅನುಭವಿಸುವಾಗ ಅವರ ಪರವಾಗಿ ದೃಢವಾಗಿ ನಿಲ್ಲುವುದೇ ಹೊರತು, ದುರ್ಬಲರ ಆಡಳಿತದಲ್ಲಿ, ನಾಯಕತ್ವಕ್ಕಾಗಿ ಕಿತ್ತಾಡುವುದಲ್ಲ.

ಕೊನೆಯದಾಗಿ ಕಲಹಗಳ ಮೂಲಕ ಇಂತಹ ತಪ್ಪು ಸಂದೇಶವನ್ನು ರವಾನಿಸುವುದು ಜನಪರ ಆಡಳಿತವನ್ನು ನೀಡಲು ಎಲ್ಲ ರೀತಿಯಿಂದಲೂ ಶಕ್ತವಾಗಿರುವ ಮತ್ತು ಈಗಾಗಲೇ ಅದನ್ನು ಸಾಧಿಸಿ ತೋರಿಸಿರುವ ಕಾಂಗ್ರೆಸ್ ಪಕ್ಷಕ್ಕೆ ನಿಜಕ್ಕೂ ಒಳ್ಳೆಯದಲ್ಲ!

ಮೊದಲು ಜನಪರವಾಗಿ ಹೋರಾಡೋಣ, ಅಧಿಕಾರ ಕೊಡುವುದು ಬಿಡುವುದನ್ನು ಜನರ ಆಯ್ಕೆ ಮತ್ತು ವಿವೇಚನೆಗೇ ಬಿಡೋಣ!

ಇನ್ನು who is who, what is what ಎಂಬ ಸಂಗತಿಯು ಹೈಕಮಾಂಡ್ ನವರಿಗೇ ಚೆನ್ನಾಗಿ ಗೊತ್ತಿರುವುದರಿಂದ ಸರ್ಕಾರದ ನಾಯಕತ್ವದ ಬಗ್ಗೆ ಅವರೇ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ

ಅಲ್ಲಿಯವರೆಗೂ ಮುಖ್ಯಮಂತ್ರಿ ಯಾರಾಗಬೇಕೆಂಬ ಚರ್ಚೆಯು ಎಷ್ಟು ಅಪ್ರಸ್ತುತವೋ ಅಷ್ಟೇ ಅಪಾಯಕಾರಿ ಕೂಡಾ!

  • ಡಾ.ಹೆಚ್.ಸಿ ಮಹದೇವಪ್ಪ

(ಡಾ.ಹೆಚ್.ಸಿ ಮಹದೇವಪ್ಪನವರು ಮಾಜಿ ಸಚಿವರು. ಕಾಂಗ್ರೆಸ್ ಮುಖಂಡರು. ಲೇಖನದಲ್ಲಿನ ಅಭಿಪ್ರಾಯಗಳು ವಯಕ್ತಿಕವಾದವು)


ಇದನ್ನೂ ಓದಿ: ಮೊದಲು ಚುನಾವಣೆ ಗೆಲ್ಲುವ ಕಡೆ ಗಮನ ಕೊಡಿ, ಮುಖ್ಯಮಂತ್ರಿ ಅಭ್ಯರ್ಥಿ ವಿಚಾರ ನಂತರದ್ದು: ರಣದೀಪ್ ಸಿಂಗ್ ಸುರ್ಜೆವಾಲಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...