Homeಕರ್ನಾಟಕಮುಂದಿನ ಮುಖ್ಯಮಂತ್ರಿ ಎಂಬ ಅಪಾಯಕಾರಿ ಚರ್ಚೆ: ಡಾ.ಹೆಚ್.ಸಿ ಮಹದೇವಪ್ಪ

ಮುಂದಿನ ಮುಖ್ಯಮಂತ್ರಿ ಎಂಬ ಅಪಾಯಕಾರಿ ಚರ್ಚೆ: ಡಾ.ಹೆಚ್.ಸಿ ಮಹದೇವಪ್ಪ

ಮೊದಲು ಜನಪರವಾಗಿ ಹೋರಾಡೋಣ, ಅಧಿಕಾರ ಕೊಡುವುದು ಬಿಡುವುದನ್ನು ಜನರ ಆಯ್ಕೆ ಮತ್ತು ವಿವೇಚನೆಗೇ ಬಿಡೋಣ!

- Advertisement -
- Advertisement -

ಪ್ರಸ್ತುತ ನಮ್ಮ ರಾಜ್ಯ ಮತ್ತು ದೇಶವು ಕೆಲವು ಗಂಭೀರ ಸಮಸ್ಯೆಗಳನ್ನು ಎದುರಿಸುತ್ತಿದೆ.  ಮೊದಲನೆಯದಾಗಿ ತೈಲ ಬೆಲೆ ಏರಿಕೆ ಮತ್ತು ಅದರಿಂದ ಜನ ಸಾಮಾನ್ಯರ ಅಗತ್ಯ ವಸ್ತುಗಳ ಮೇಲೆ ಉಂಟಾದ ಬೆಲೆ ಏರಿಕೆ..

ಎರಡನೆಯದಾಗಿ ಭೂ ಸುಧಾರಣಾ ತಿದ್ದುಪಡಿ ಕಾಯ್ದೆಯಿಂದ ಮುಂದೆ ಭಾರತದ ಕೃಷಿ ಮತ್ತು ರೈತರ ಮೇಲೆ ಉಂಟಾಗುವ ದುಷ್ಪರಿಣಾಮಗಳು..

ಮೂರನೆಯದಾಗಿ ಕರೋನಾ ಸಂದರ್ಭದ ವೈಫಲ್ಯ ಹಾಗೂ ಜನ ಸಾಮಾನ್ಯರಿಗೆ ಆಗುತ್ತಿರುವ ತೊಂದರೆ, ನಾಲ್ಕನೆಯದಾಗಿ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಡಿ ಮನುವಾದ ಮತ್ತು ಕೇಸರೀಕರಣವನ್ನು ಶಿಕ್ಷಣ ವ್ಯವಸ್ಥೆಯಲ್ಲಿ ಅಳವಡಿಸಲು ಹೊರಟಿರುವ ಕೋಮುವಾದಿಗಳ ಹುನ್ನಾರ..

ಕೊನೆಯದಾಗಿ ಶ್ರೇಷ್ಠತೆಯ ಪ್ರಜ್ಞೆಯಿಂದ ಕೆಳ ವರ್ಗಗಳ ಮೇಲೆ ಏನನ್ನಾದರೂ ಮಾಡಬಹುದೆಂಬ ಸರ್ವಾಧಿಕಾರದ ವಿರುದ್ಧ ಹೋರಾಟ ನಡೆಸುವ ಮೂಲಕ ಈ ದೇಶಕ್ಕೆ ಬಾಬಾ ಸಾಹೇಬರು ನೀಡಿದ ಸಂವಿಧಾನ ಮತ್ತು ಸಂವಿಧಾನದ ಆಶಯಗಳನ್ನು ಕಾಪಾಡುವುದು ಈ ಹೊತ್ತಿನ ನಮ್ಮ ಹೋರಾಟದ ವಿಷಯವಾಗಿದೆ.

ಆದರೆ ಪಕ್ಷಾತೀತವಾಗಿ ಎಲ್ಲೆಡೆಯೂ ಸಹ ಜನ ಸಾಮಾನ್ಯರಿಗೆ ಮಗ್ಗುಲ ಮುಳ್ಳಾಗಿ ಕಾಡುತ್ತಿರುವ ಫ್ಯೂಡಲ್‌ಗಳು ಮತ್ತು ಅಕ್ಷರಶಃ ಜನಪರ ಆಡಳಿತದ ಸಂವೇದನೆಯನ್ನು ಕಳೆದುಕೊಂಡಿರುವ ಜಾತಿ ಶ್ರೇಷ್ಠತಾವ್ಯಾಧಿಗಳು ಈ ದಿನ ಜನಪರ ಆಡಳಿತಕ್ಕೆ ಇರಬೇಕಾದ ದೂರದೃಷ್ಟಿಯನ್ನು ಪಕ್ಕಕ್ಕೆ ಇಟ್ಟು “ಕಾಂಗ್ರೆಸ್ ನಲ್ಲಿ ಮುಂದಿನ ಮುಖ್ಯಮಂತ್ರಿ ಯಾರು?” ಎಂಬ ಅಸಂಬದ್ಧವಾದ ಚರ್ಚೆಯನ್ನು ಹುಟ್ಟು ಹಾಕಲು ತಮ್ಮ ನಾಯಕತ್ವವನ್ನು ಬಳಸಿಕೊಳ್ಳುತ್ತಾರೆ ಎಂದರೆ ಇವರಿಗೆ ಸಮಾಜಪರವಾದಂತಹ ಯಾವುದೇ ಕಾಳಜಿಯಾಗಲೀ ಜವಾಬ್ದಾರಿಯಾಗಲೀ ಇಲ್ಲವೆಂಬುದನ್ನು ನಾವು ಸುಲಭವಾಗಿ ಅರ್ಥಮಾಡಿಕೊಳ್ಳಬಹುದು.

ಬಿಜೆಪಿಗರ ಕಳಪೆ ಆಡಳಿತದಿಂದ ಬೇಸತ್ತು ಕಣ್ಣೀರು ಹಾಕುತ್ತಿರುವ ಜನ ಸಾಮಾನ್ಯರ ಬದುಕಿಗೆ ವಿಶ್ವಾಸದ ಶಕ್ತಿಯಾಗಿ, ಉತ್ತಮ ಭವಿಷ್ಯದ ನಂಬಿಕೆಯಾಗಿ ಮೂಡಿ ಬರಬೇಕಿರುವ ನಮ್ಮ ಕಾಂಗ್ರೆಸ್ ಪಕ್ಷದ ಕೆಲ ನಾಯಕರು, ತಮಗೆ ತಾವೇ ಕಚ್ಚಾಡಿಕೊಳ್ಳುವ ಮೂಲಕ ಕೋಮುವಾದಿಗಳ ಎದುರು ದುರ್ಬಲರಾಗಿಯೂ ಜನ ಸಾಮಾನ್ಯರ ಎದುರು ಮತ್ತಷ್ಟು ದುರ್ಬಲರಾಗಿಯೂ ಗೋಚರಿಸುವಂತಹ ಅಪಾಯವನ್ನು ಮೈಮೇಲೆ ಎಳೆದುಕೊಳ್ಳುತ್ತಿದ್ದಾರೆ.

ಜನಪರ ನಾಯಕತ್ವ ಎಂದರೆ ಜನರು ತೊಂದರೆ ಅನುಭವಿಸುವಾಗ ಅವರ ಪರವಾಗಿ ದೃಢವಾಗಿ ನಿಲ್ಲುವುದೇ ಹೊರತು, ದುರ್ಬಲರ ಆಡಳಿತದಲ್ಲಿ, ನಾಯಕತ್ವಕ್ಕಾಗಿ ಕಿತ್ತಾಡುವುದಲ್ಲ.

ಕೊನೆಯದಾಗಿ ಕಲಹಗಳ ಮೂಲಕ ಇಂತಹ ತಪ್ಪು ಸಂದೇಶವನ್ನು ರವಾನಿಸುವುದು ಜನಪರ ಆಡಳಿತವನ್ನು ನೀಡಲು ಎಲ್ಲ ರೀತಿಯಿಂದಲೂ ಶಕ್ತವಾಗಿರುವ ಮತ್ತು ಈಗಾಗಲೇ ಅದನ್ನು ಸಾಧಿಸಿ ತೋರಿಸಿರುವ ಕಾಂಗ್ರೆಸ್ ಪಕ್ಷಕ್ಕೆ ನಿಜಕ್ಕೂ ಒಳ್ಳೆಯದಲ್ಲ!

ಮೊದಲು ಜನಪರವಾಗಿ ಹೋರಾಡೋಣ, ಅಧಿಕಾರ ಕೊಡುವುದು ಬಿಡುವುದನ್ನು ಜನರ ಆಯ್ಕೆ ಮತ್ತು ವಿವೇಚನೆಗೇ ಬಿಡೋಣ!

ಇನ್ನು who is who, what is what ಎಂಬ ಸಂಗತಿಯು ಹೈಕಮಾಂಡ್ ನವರಿಗೇ ಚೆನ್ನಾಗಿ ಗೊತ್ತಿರುವುದರಿಂದ ಸರ್ಕಾರದ ನಾಯಕತ್ವದ ಬಗ್ಗೆ ಅವರೇ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ

ಅಲ್ಲಿಯವರೆಗೂ ಮುಖ್ಯಮಂತ್ರಿ ಯಾರಾಗಬೇಕೆಂಬ ಚರ್ಚೆಯು ಎಷ್ಟು ಅಪ್ರಸ್ತುತವೋ ಅಷ್ಟೇ ಅಪಾಯಕಾರಿ ಕೂಡಾ!

  • ಡಾ.ಹೆಚ್.ಸಿ ಮಹದೇವಪ್ಪ

(ಡಾ.ಹೆಚ್.ಸಿ ಮಹದೇವಪ್ಪನವರು ಮಾಜಿ ಸಚಿವರು. ಕಾಂಗ್ರೆಸ್ ಮುಖಂಡರು. ಲೇಖನದಲ್ಲಿನ ಅಭಿಪ್ರಾಯಗಳು ವಯಕ್ತಿಕವಾದವು)


ಇದನ್ನೂ ಓದಿ: ಮೊದಲು ಚುನಾವಣೆ ಗೆಲ್ಲುವ ಕಡೆ ಗಮನ ಕೊಡಿ, ಮುಖ್ಯಮಂತ್ರಿ ಅಭ್ಯರ್ಥಿ ವಿಚಾರ ನಂತರದ್ದು: ರಣದೀಪ್ ಸಿಂಗ್ ಸುರ್ಜೆವಾಲಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...