Homeಮುಖಪುಟಮುಂದಿನ ಭಾರೀ ಕಾಂಗ್ರೆಸ್ ಮುಖ್ಯಮಂತ್ರಿ ಚರ್ಚೆ!: ಮಹಾರಾಷ್ಟ್ರ ಮೈತ್ರಿ ಗಟ್ಟಿಯೆಂದ ಶಿವಸೇನೆ

ಮುಂದಿನ ಭಾರೀ ಕಾಂಗ್ರೆಸ್ ಮುಖ್ಯಮಂತ್ರಿ ಚರ್ಚೆ!: ಮಹಾರಾಷ್ಟ್ರ ಮೈತ್ರಿ ಗಟ್ಟಿಯೆಂದ ಶಿವಸೇನೆ

- Advertisement -
- Advertisement -

ಮಹಾರಾಷ್ಟ್ರ ರಾಜಕೀಯದಲ್ಲಿ ಹೊಸ ರಾಜಕೀಯ ಬೆಳವಣಿಗೆಗಳು ಅರಂಭವಾಗಿವೆ. ಶಿವಸೇನೆ, ಎನ್‌ಸಿಪಿ, ಕಾಂಗ್ರೆಸ್‌ ಮೈತ್ರಿಕೂಟದಲ್ಲಿ ಸಣ್ಣದಾದ ಅಸಮಾಧಾನದ ಕಿಡಿ ಹೊತ್ತಿಕೊಂಡಿದೆ. ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಬಂದ ದಿನದಿಂದಲೂ ಮಹಾರಾಷ್ಟ್ರ ಕಾಂಗ್ರೆಸ್ ನಾಯಕರು ಮುಖ್ಯಮಂತ್ರಿ ಠಾಕ್ರೆ ವಿರುದ್ಧ ತಮ್ಮ ಆಕ್ಷೇಪಗಳನ್ನು ಹೊರಹಾಕುತ್ತಲೇ ಬಂದಿದ್ದಾರೆ. ಕೆಳಹಂತದ ನಾಯಕರಿಂದ ಆರಂಭವಾದ ಈ ಭಿನ್ನಮತ ಮತ್ತು ಮೈತ್ರಿಯ ಬಗೆಗಿನ ಅಸಮಾಧಾನ ನಿಧಾನಕ್ಕೆ ಕಾಂಗ್ರೆಸ್‌ನ ಉನ್ನತ ನಾಯಕರಿಂದಲೂ ಬರತೊಡಗಿದೆ. ಇದಕ್ಕೆ ತುಪ್ಪ ಸುರಿಯುವಂತೆ ಇಂದು ಮಹಾರಾಷ್ಟ್ರ ಕಾಂಗ್ರೆಸ್‌ನ ರಾಜ್ಯಾಧ್ಯಕ್ಷ ನಾನಾ ಪಟೋಲಿ ಹೇಳಿಕೆಯನ್ನು ನೀಡಿದ್ದಾರೆ.

ಬಿಜೆಪಿಯನ್ನು ಅಧಿಕಾರದಿಂದ ತಡೆಯುವುದಾಕ್ಕಾಗಿ ಮಾತ್ರ ಕಾಂಗ್ರೆಸ್ ಶಿವಸೇನೆಯೊಂದಿಗೆ ಮೈತ್ರಿ ಮಾಡಿಕೊಂಡಿದೆ. ಹಾಗಾಗಿ ಕಾಂಗ್ರೆಸ್ ಮಹಾರಾಷ್ಟ್ರ ವಿಕಾಸ ಅಘಾಡಿಯ ಭಾಗವಾಗಿದೆ. ಕಾಂಗ್ರೆಸ್ ಮತ್ತು ಶಿವಸೇನೆ ಮಹಾರಾಷ್ಟ್ರದಲ್ಲಿ ನಡೆಯುವ ಎಲ್ಲಾ ಚುನಾವಣೆಗಳಲ್ಲಿ ಒಟ್ಟಾಗಿ ಸ್ಪರ್ಧಿಸುತ್ತವೆ ಎಂಬ ಕುರಿತು ಮೈತ್ರಿ ಸರ್ಕಾರ ರಚನೆಯ ಸಂದರ್ಭದಲ್ಲಿ ಯಾವುದೇ ಚರ್ಚೆಯಾಗಿಲ್ಲ. ಪ್ರತಿಯೊಂದು ರಾಜಕೀಯ ಪಕ್ಷವೂ ತನ್ನ ಮತದಾರರ ಬೇಸ್ ಅನ್ನು ಬೆಳೆಸಲು ಪ್ರಯತ್ನಿಸುತ್ತದೆ. ಕಾಂಗ್ರೆಸ್‌ ಕೂಡ ಮಹಾರಾಷ್ಟ್ರದಲ್ಲಿ ಅದನ್ನೆ ಮಾಡುತ್ತಿದೆ. ಆದರೆ ಕಾಂಗ್ರೆಸ್ ತಾನಾಗಿಯೇ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಮೈತ್ರಿ ಸರ್ಕಾರವನ್ನು ಕೆಡವುವ ಯಾವ ಪ್ರಯತ್ನಕ್ಕೂ ಮುಂದಾಗುವುದಿಲ್ಲ. ಶಿವಸೇನೆ, ಸರ್ಕಾರದ ಭಾಗವಾದ ಕಾಂಗ್ರೆಸ್‌ ಪಕ್ಷವನ್ನು ಗೌರವಿಸುವ ಮೂಲಕ ಮೈತ್ರಿಧರ್ಮವನ್ನು ಪಾಲಿಸಬೇಕು ಎಂದು ಹೇಳುವ ಮೂಲಕ ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲಿ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಚರ್ಚೆಗಳಿಗೆ ಇನ್ನಷ್ಟು ಪುಷ್ಠಿ ನೀಡಿದ್ದಾರೆ.

ಕಳೆದ ಕೆಲವು ದಿನಗಳ ಹಿಂದೆ ಬೃಹನ್‌ ಮುಂಬೈ ಕಾರ್ಪೋರೇಷನ್ (BMC) ಚುನಾವಣೆ ಮತ್ತು ಮುಂದಿನ ಮಹರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಹೇಳುವ ಮೂಲಕ ಕಾಂಗ್ರೆಸ್-ಶಿವಸೇನೆ ಮೈತ್ರಿ ಕೇವಲ 5 ವರ್ಷದ ಅವಧಿಯದು ಎಂಬುದನ್ನು ನಾನಾ ಪಟೋಲಿ ಪರೋಕ್ಷವಾಗಿ ತಿಳಿಸಿದ್ದರು.

ಇನ್ನು ಕಾಂಗ್ರೆಸ್ ಮುಖಂಡ, ಮಾಜಿ ಸಿಎಂ ಪೃಥ್ವಿರಾಜ್ ಚೌಹಾಣ್ “ಮುಂದಿನ ಮೈತ್ರಿಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರೊಬ್ಬರು ಮುಖ್ಯಮಂತ್ರಿಯಾಗಲಿದ್ದಾರೆ. ಅಂದರೆ ಕಾಂಗ್ರೆಸ್ ಮೈತ್ರಿಯ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ” ಎಂದು ಹೇಳಿಕೆ ನೀಡಿದ್ದಾರೆ.

ಇದಕ್ಕೆ ಭಿನ್ನವಾದ ಪ್ರತಿಕ್ರಿಯೆನ್ನು ಶಿವಸೇನಾ ಸಂಸದ ಸಂಜಯ್ ರಾವತ್ ವ್ಯಕ್ತಪಡಿಸಿದ್ದಾರೆ. “ಮೈತ್ರಿಯಲ್ಲಿ ಬಿರುಕು ಮೂಡಿಸಲು ಕೆಲವರು ಪ್ರಯತ್ನಿಸುತ್ತಿದ್ದು, ಅದು ಯಾವುದೇ ಕಾರಣಕ್ಕೂ ಸಾಧ್ಯವಿಲ್ಲ. ಶಿವಸೇನೆ, ಕಾಂಗ್ರೆಸ್ ಮತ್ತು ಎನ್‌ಸಿಪಿ ಒಗ್ಗಟ್ಟಾಗಿದ್ದೇವೆ ಮತ್ತು ಒಗ್ಗಟ್ಟಾಗಿಯೇ 5 ವರ್ಷ ಪೂರೈಸುತ್ತೇವೆ. ಸರ್ಕಾರ ರಚಿಸಲು ಪ್ರಯತ್ನಿಸಿ ವಿಫಲರಾದ, ಅಧಿಕಾರ ಕಳೆದುಕೊಂಡ ಕೆಲ ಹೊರಗಿನ ಶಕ್ತಿಗಳು ಊಹಾಪೋಹಗಳನ್ನು ಹರಿಯಬಿಡುತ್ತಿವೆ. ಆದರೆ ಅದು ಯಶಸ್ವಿಯಾಗುವುದಿಲ್ಲ” ಎಂದು ಅವರು ಮೈತ್ರಿ ಸರ್ಕಾರದ ಪರ ನಿಂತಿದ್ದಾರೆ.

ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನಾನಾ ಪಟೋಲಿ ಹೇಳಿಕೆಗೆ ಪರೊಕ್ಷವಾಗಿ ಪ್ರತಿಕ್ರಿಯಿಸಿ ರಾಜಕೀಯ ಪಕ್ಷಗಳು ಬೇರೆ ಎಲ್ಲಾ ವಿಷಯಗಳನ್ನು ಬದಿಗೊತ್ತಿ ಸದ್ಯ ಮಹರಾಷ್ಟ್ರದ ಅಭಿವೃದ್ದಿ ಮತ್ತು ರಾಜ್ಯದ ಆರ್ಥಿಕ ಚೇತರಿಕೆಯ ಕಡೆ ಗಮನಕೊಡಬೇಕು ಎಂದಿದ್ದರು.

ಒಟ್ಟಿನಲ್ಲಿ ಎರಡು ವಿರುದ್ಧ ಸಿದ್ಧಾಂತಗಳ ಪಕ್ಷಗಳಾದ ಕಾಂಗ್ರೆಸ್ ಮತ್ತು ಶಿವಸೇನೆ ಎಷ್ಟುದಿನ ಹೊಂದಾಣಿಕೆಯಿಂದ ಅಡಳಿತ ನಡೆಸಬಲ್ಲವು ಎಂದು ಹಲವರು ಮೈತ್ರಿಯ ಅರಂಭದಲ್ಲಿಯೇ ಅನುಮಾನವನ್ನು ವ್ಯಕ್ತಪಡಿಸಿದ್ದರು. ಈಗ ನಿಧಾನಕ್ಕೆ ಮಹಾರಾಷ್ಟ್ರ ಸರ್ಕಾರದಲ್ಲಿ ಅಸಮಾಧಾನದ ಅಲೆಗಳು ಏಳತೊಡಗಿವೆ.

ಇದನ್ನು ಓದಿ : ದೆಹಲಿ ಗಲಭೆ ಪ್ರಕರಣ: CAA ವಿರೋಧಿ ಹೋರಾಟಗಾರರ ಬಿಡುಗಡೆಯ ನಿರೀಕ್ಷೆಗಳಿಗೆ ಸುಪ್ರೀಂ ಕೋರ್ಟ್ ತಡೆಗೋಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...