Homeಮುಖಪುಟಮುಂದಿನ ಭಾರೀ ಕಾಂಗ್ರೆಸ್ ಮುಖ್ಯಮಂತ್ರಿ ಚರ್ಚೆ!: ಮಹಾರಾಷ್ಟ್ರ ಮೈತ್ರಿ ಗಟ್ಟಿಯೆಂದ ಶಿವಸೇನೆ

ಮುಂದಿನ ಭಾರೀ ಕಾಂಗ್ರೆಸ್ ಮುಖ್ಯಮಂತ್ರಿ ಚರ್ಚೆ!: ಮಹಾರಾಷ್ಟ್ರ ಮೈತ್ರಿ ಗಟ್ಟಿಯೆಂದ ಶಿವಸೇನೆ

- Advertisement -
- Advertisement -

ಮಹಾರಾಷ್ಟ್ರ ರಾಜಕೀಯದಲ್ಲಿ ಹೊಸ ರಾಜಕೀಯ ಬೆಳವಣಿಗೆಗಳು ಅರಂಭವಾಗಿವೆ. ಶಿವಸೇನೆ, ಎನ್‌ಸಿಪಿ, ಕಾಂಗ್ರೆಸ್‌ ಮೈತ್ರಿಕೂಟದಲ್ಲಿ ಸಣ್ಣದಾದ ಅಸಮಾಧಾನದ ಕಿಡಿ ಹೊತ್ತಿಕೊಂಡಿದೆ. ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಬಂದ ದಿನದಿಂದಲೂ ಮಹಾರಾಷ್ಟ್ರ ಕಾಂಗ್ರೆಸ್ ನಾಯಕರು ಮುಖ್ಯಮಂತ್ರಿ ಠಾಕ್ರೆ ವಿರುದ್ಧ ತಮ್ಮ ಆಕ್ಷೇಪಗಳನ್ನು ಹೊರಹಾಕುತ್ತಲೇ ಬಂದಿದ್ದಾರೆ. ಕೆಳಹಂತದ ನಾಯಕರಿಂದ ಆರಂಭವಾದ ಈ ಭಿನ್ನಮತ ಮತ್ತು ಮೈತ್ರಿಯ ಬಗೆಗಿನ ಅಸಮಾಧಾನ ನಿಧಾನಕ್ಕೆ ಕಾಂಗ್ರೆಸ್‌ನ ಉನ್ನತ ನಾಯಕರಿಂದಲೂ ಬರತೊಡಗಿದೆ. ಇದಕ್ಕೆ ತುಪ್ಪ ಸುರಿಯುವಂತೆ ಇಂದು ಮಹಾರಾಷ್ಟ್ರ ಕಾಂಗ್ರೆಸ್‌ನ ರಾಜ್ಯಾಧ್ಯಕ್ಷ ನಾನಾ ಪಟೋಲಿ ಹೇಳಿಕೆಯನ್ನು ನೀಡಿದ್ದಾರೆ.

ಬಿಜೆಪಿಯನ್ನು ಅಧಿಕಾರದಿಂದ ತಡೆಯುವುದಾಕ್ಕಾಗಿ ಮಾತ್ರ ಕಾಂಗ್ರೆಸ್ ಶಿವಸೇನೆಯೊಂದಿಗೆ ಮೈತ್ರಿ ಮಾಡಿಕೊಂಡಿದೆ. ಹಾಗಾಗಿ ಕಾಂಗ್ರೆಸ್ ಮಹಾರಾಷ್ಟ್ರ ವಿಕಾಸ ಅಘಾಡಿಯ ಭಾಗವಾಗಿದೆ. ಕಾಂಗ್ರೆಸ್ ಮತ್ತು ಶಿವಸೇನೆ ಮಹಾರಾಷ್ಟ್ರದಲ್ಲಿ ನಡೆಯುವ ಎಲ್ಲಾ ಚುನಾವಣೆಗಳಲ್ಲಿ ಒಟ್ಟಾಗಿ ಸ್ಪರ್ಧಿಸುತ್ತವೆ ಎಂಬ ಕುರಿತು ಮೈತ್ರಿ ಸರ್ಕಾರ ರಚನೆಯ ಸಂದರ್ಭದಲ್ಲಿ ಯಾವುದೇ ಚರ್ಚೆಯಾಗಿಲ್ಲ. ಪ್ರತಿಯೊಂದು ರಾಜಕೀಯ ಪಕ್ಷವೂ ತನ್ನ ಮತದಾರರ ಬೇಸ್ ಅನ್ನು ಬೆಳೆಸಲು ಪ್ರಯತ್ನಿಸುತ್ತದೆ. ಕಾಂಗ್ರೆಸ್‌ ಕೂಡ ಮಹಾರಾಷ್ಟ್ರದಲ್ಲಿ ಅದನ್ನೆ ಮಾಡುತ್ತಿದೆ. ಆದರೆ ಕಾಂಗ್ರೆಸ್ ತಾನಾಗಿಯೇ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಮೈತ್ರಿ ಸರ್ಕಾರವನ್ನು ಕೆಡವುವ ಯಾವ ಪ್ರಯತ್ನಕ್ಕೂ ಮುಂದಾಗುವುದಿಲ್ಲ. ಶಿವಸೇನೆ, ಸರ್ಕಾರದ ಭಾಗವಾದ ಕಾಂಗ್ರೆಸ್‌ ಪಕ್ಷವನ್ನು ಗೌರವಿಸುವ ಮೂಲಕ ಮೈತ್ರಿಧರ್ಮವನ್ನು ಪಾಲಿಸಬೇಕು ಎಂದು ಹೇಳುವ ಮೂಲಕ ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲಿ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಚರ್ಚೆಗಳಿಗೆ ಇನ್ನಷ್ಟು ಪುಷ್ಠಿ ನೀಡಿದ್ದಾರೆ.

ಕಳೆದ ಕೆಲವು ದಿನಗಳ ಹಿಂದೆ ಬೃಹನ್‌ ಮುಂಬೈ ಕಾರ್ಪೋರೇಷನ್ (BMC) ಚುನಾವಣೆ ಮತ್ತು ಮುಂದಿನ ಮಹರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಹೇಳುವ ಮೂಲಕ ಕಾಂಗ್ರೆಸ್-ಶಿವಸೇನೆ ಮೈತ್ರಿ ಕೇವಲ 5 ವರ್ಷದ ಅವಧಿಯದು ಎಂಬುದನ್ನು ನಾನಾ ಪಟೋಲಿ ಪರೋಕ್ಷವಾಗಿ ತಿಳಿಸಿದ್ದರು.

ಇನ್ನು ಕಾಂಗ್ರೆಸ್ ಮುಖಂಡ, ಮಾಜಿ ಸಿಎಂ ಪೃಥ್ವಿರಾಜ್ ಚೌಹಾಣ್ “ಮುಂದಿನ ಮೈತ್ರಿಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರೊಬ್ಬರು ಮುಖ್ಯಮಂತ್ರಿಯಾಗಲಿದ್ದಾರೆ. ಅಂದರೆ ಕಾಂಗ್ರೆಸ್ ಮೈತ್ರಿಯ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ” ಎಂದು ಹೇಳಿಕೆ ನೀಡಿದ್ದಾರೆ.

ಇದಕ್ಕೆ ಭಿನ್ನವಾದ ಪ್ರತಿಕ್ರಿಯೆನ್ನು ಶಿವಸೇನಾ ಸಂಸದ ಸಂಜಯ್ ರಾವತ್ ವ್ಯಕ್ತಪಡಿಸಿದ್ದಾರೆ. “ಮೈತ್ರಿಯಲ್ಲಿ ಬಿರುಕು ಮೂಡಿಸಲು ಕೆಲವರು ಪ್ರಯತ್ನಿಸುತ್ತಿದ್ದು, ಅದು ಯಾವುದೇ ಕಾರಣಕ್ಕೂ ಸಾಧ್ಯವಿಲ್ಲ. ಶಿವಸೇನೆ, ಕಾಂಗ್ರೆಸ್ ಮತ್ತು ಎನ್‌ಸಿಪಿ ಒಗ್ಗಟ್ಟಾಗಿದ್ದೇವೆ ಮತ್ತು ಒಗ್ಗಟ್ಟಾಗಿಯೇ 5 ವರ್ಷ ಪೂರೈಸುತ್ತೇವೆ. ಸರ್ಕಾರ ರಚಿಸಲು ಪ್ರಯತ್ನಿಸಿ ವಿಫಲರಾದ, ಅಧಿಕಾರ ಕಳೆದುಕೊಂಡ ಕೆಲ ಹೊರಗಿನ ಶಕ್ತಿಗಳು ಊಹಾಪೋಹಗಳನ್ನು ಹರಿಯಬಿಡುತ್ತಿವೆ. ಆದರೆ ಅದು ಯಶಸ್ವಿಯಾಗುವುದಿಲ್ಲ” ಎಂದು ಅವರು ಮೈತ್ರಿ ಸರ್ಕಾರದ ಪರ ನಿಂತಿದ್ದಾರೆ.

ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನಾನಾ ಪಟೋಲಿ ಹೇಳಿಕೆಗೆ ಪರೊಕ್ಷವಾಗಿ ಪ್ರತಿಕ್ರಿಯಿಸಿ ರಾಜಕೀಯ ಪಕ್ಷಗಳು ಬೇರೆ ಎಲ್ಲಾ ವಿಷಯಗಳನ್ನು ಬದಿಗೊತ್ತಿ ಸದ್ಯ ಮಹರಾಷ್ಟ್ರದ ಅಭಿವೃದ್ದಿ ಮತ್ತು ರಾಜ್ಯದ ಆರ್ಥಿಕ ಚೇತರಿಕೆಯ ಕಡೆ ಗಮನಕೊಡಬೇಕು ಎಂದಿದ್ದರು.

ಒಟ್ಟಿನಲ್ಲಿ ಎರಡು ವಿರುದ್ಧ ಸಿದ್ಧಾಂತಗಳ ಪಕ್ಷಗಳಾದ ಕಾಂಗ್ರೆಸ್ ಮತ್ತು ಶಿವಸೇನೆ ಎಷ್ಟುದಿನ ಹೊಂದಾಣಿಕೆಯಿಂದ ಅಡಳಿತ ನಡೆಸಬಲ್ಲವು ಎಂದು ಹಲವರು ಮೈತ್ರಿಯ ಅರಂಭದಲ್ಲಿಯೇ ಅನುಮಾನವನ್ನು ವ್ಯಕ್ತಪಡಿಸಿದ್ದರು. ಈಗ ನಿಧಾನಕ್ಕೆ ಮಹಾರಾಷ್ಟ್ರ ಸರ್ಕಾರದಲ್ಲಿ ಅಸಮಾಧಾನದ ಅಲೆಗಳು ಏಳತೊಡಗಿವೆ.

ಇದನ್ನು ಓದಿ : ದೆಹಲಿ ಗಲಭೆ ಪ್ರಕರಣ: CAA ವಿರೋಧಿ ಹೋರಾಟಗಾರರ ಬಿಡುಗಡೆಯ ನಿರೀಕ್ಷೆಗಳಿಗೆ ಸುಪ್ರೀಂ ಕೋರ್ಟ್ ತಡೆಗೋಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...