Homeಮುಖಪುಟಮುಂದಿನ ಭಾರೀ ಕಾಂಗ್ರೆಸ್ ಮುಖ್ಯಮಂತ್ರಿ ಚರ್ಚೆ!: ಮಹಾರಾಷ್ಟ್ರ ಮೈತ್ರಿ ಗಟ್ಟಿಯೆಂದ ಶಿವಸೇನೆ

ಮುಂದಿನ ಭಾರೀ ಕಾಂಗ್ರೆಸ್ ಮುಖ್ಯಮಂತ್ರಿ ಚರ್ಚೆ!: ಮಹಾರಾಷ್ಟ್ರ ಮೈತ್ರಿ ಗಟ್ಟಿಯೆಂದ ಶಿವಸೇನೆ

- Advertisement -
- Advertisement -

ಮಹಾರಾಷ್ಟ್ರ ರಾಜಕೀಯದಲ್ಲಿ ಹೊಸ ರಾಜಕೀಯ ಬೆಳವಣಿಗೆಗಳು ಅರಂಭವಾಗಿವೆ. ಶಿವಸೇನೆ, ಎನ್‌ಸಿಪಿ, ಕಾಂಗ್ರೆಸ್‌ ಮೈತ್ರಿಕೂಟದಲ್ಲಿ ಸಣ್ಣದಾದ ಅಸಮಾಧಾನದ ಕಿಡಿ ಹೊತ್ತಿಕೊಂಡಿದೆ. ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಬಂದ ದಿನದಿಂದಲೂ ಮಹಾರಾಷ್ಟ್ರ ಕಾಂಗ್ರೆಸ್ ನಾಯಕರು ಮುಖ್ಯಮಂತ್ರಿ ಠಾಕ್ರೆ ವಿರುದ್ಧ ತಮ್ಮ ಆಕ್ಷೇಪಗಳನ್ನು ಹೊರಹಾಕುತ್ತಲೇ ಬಂದಿದ್ದಾರೆ. ಕೆಳಹಂತದ ನಾಯಕರಿಂದ ಆರಂಭವಾದ ಈ ಭಿನ್ನಮತ ಮತ್ತು ಮೈತ್ರಿಯ ಬಗೆಗಿನ ಅಸಮಾಧಾನ ನಿಧಾನಕ್ಕೆ ಕಾಂಗ್ರೆಸ್‌ನ ಉನ್ನತ ನಾಯಕರಿಂದಲೂ ಬರತೊಡಗಿದೆ. ಇದಕ್ಕೆ ತುಪ್ಪ ಸುರಿಯುವಂತೆ ಇಂದು ಮಹಾರಾಷ್ಟ್ರ ಕಾಂಗ್ರೆಸ್‌ನ ರಾಜ್ಯಾಧ್ಯಕ್ಷ ನಾನಾ ಪಟೋಲಿ ಹೇಳಿಕೆಯನ್ನು ನೀಡಿದ್ದಾರೆ.

ಬಿಜೆಪಿಯನ್ನು ಅಧಿಕಾರದಿಂದ ತಡೆಯುವುದಾಕ್ಕಾಗಿ ಮಾತ್ರ ಕಾಂಗ್ರೆಸ್ ಶಿವಸೇನೆಯೊಂದಿಗೆ ಮೈತ್ರಿ ಮಾಡಿಕೊಂಡಿದೆ. ಹಾಗಾಗಿ ಕಾಂಗ್ರೆಸ್ ಮಹಾರಾಷ್ಟ್ರ ವಿಕಾಸ ಅಘಾಡಿಯ ಭಾಗವಾಗಿದೆ. ಕಾಂಗ್ರೆಸ್ ಮತ್ತು ಶಿವಸೇನೆ ಮಹಾರಾಷ್ಟ್ರದಲ್ಲಿ ನಡೆಯುವ ಎಲ್ಲಾ ಚುನಾವಣೆಗಳಲ್ಲಿ ಒಟ್ಟಾಗಿ ಸ್ಪರ್ಧಿಸುತ್ತವೆ ಎಂಬ ಕುರಿತು ಮೈತ್ರಿ ಸರ್ಕಾರ ರಚನೆಯ ಸಂದರ್ಭದಲ್ಲಿ ಯಾವುದೇ ಚರ್ಚೆಯಾಗಿಲ್ಲ. ಪ್ರತಿಯೊಂದು ರಾಜಕೀಯ ಪಕ್ಷವೂ ತನ್ನ ಮತದಾರರ ಬೇಸ್ ಅನ್ನು ಬೆಳೆಸಲು ಪ್ರಯತ್ನಿಸುತ್ತದೆ. ಕಾಂಗ್ರೆಸ್‌ ಕೂಡ ಮಹಾರಾಷ್ಟ್ರದಲ್ಲಿ ಅದನ್ನೆ ಮಾಡುತ್ತಿದೆ. ಆದರೆ ಕಾಂಗ್ರೆಸ್ ತಾನಾಗಿಯೇ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಮೈತ್ರಿ ಸರ್ಕಾರವನ್ನು ಕೆಡವುವ ಯಾವ ಪ್ರಯತ್ನಕ್ಕೂ ಮುಂದಾಗುವುದಿಲ್ಲ. ಶಿವಸೇನೆ, ಸರ್ಕಾರದ ಭಾಗವಾದ ಕಾಂಗ್ರೆಸ್‌ ಪಕ್ಷವನ್ನು ಗೌರವಿಸುವ ಮೂಲಕ ಮೈತ್ರಿಧರ್ಮವನ್ನು ಪಾಲಿಸಬೇಕು ಎಂದು ಹೇಳುವ ಮೂಲಕ ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲಿ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಚರ್ಚೆಗಳಿಗೆ ಇನ್ನಷ್ಟು ಪುಷ್ಠಿ ನೀಡಿದ್ದಾರೆ.

ಕಳೆದ ಕೆಲವು ದಿನಗಳ ಹಿಂದೆ ಬೃಹನ್‌ ಮುಂಬೈ ಕಾರ್ಪೋರೇಷನ್ (BMC) ಚುನಾವಣೆ ಮತ್ತು ಮುಂದಿನ ಮಹರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಹೇಳುವ ಮೂಲಕ ಕಾಂಗ್ರೆಸ್-ಶಿವಸೇನೆ ಮೈತ್ರಿ ಕೇವಲ 5 ವರ್ಷದ ಅವಧಿಯದು ಎಂಬುದನ್ನು ನಾನಾ ಪಟೋಲಿ ಪರೋಕ್ಷವಾಗಿ ತಿಳಿಸಿದ್ದರು.

ಇನ್ನು ಕಾಂಗ್ರೆಸ್ ಮುಖಂಡ, ಮಾಜಿ ಸಿಎಂ ಪೃಥ್ವಿರಾಜ್ ಚೌಹಾಣ್ “ಮುಂದಿನ ಮೈತ್ರಿಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರೊಬ್ಬರು ಮುಖ್ಯಮಂತ್ರಿಯಾಗಲಿದ್ದಾರೆ. ಅಂದರೆ ಕಾಂಗ್ರೆಸ್ ಮೈತ್ರಿಯ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ” ಎಂದು ಹೇಳಿಕೆ ನೀಡಿದ್ದಾರೆ.

ಇದಕ್ಕೆ ಭಿನ್ನವಾದ ಪ್ರತಿಕ್ರಿಯೆನ್ನು ಶಿವಸೇನಾ ಸಂಸದ ಸಂಜಯ್ ರಾವತ್ ವ್ಯಕ್ತಪಡಿಸಿದ್ದಾರೆ. “ಮೈತ್ರಿಯಲ್ಲಿ ಬಿರುಕು ಮೂಡಿಸಲು ಕೆಲವರು ಪ್ರಯತ್ನಿಸುತ್ತಿದ್ದು, ಅದು ಯಾವುದೇ ಕಾರಣಕ್ಕೂ ಸಾಧ್ಯವಿಲ್ಲ. ಶಿವಸೇನೆ, ಕಾಂಗ್ರೆಸ್ ಮತ್ತು ಎನ್‌ಸಿಪಿ ಒಗ್ಗಟ್ಟಾಗಿದ್ದೇವೆ ಮತ್ತು ಒಗ್ಗಟ್ಟಾಗಿಯೇ 5 ವರ್ಷ ಪೂರೈಸುತ್ತೇವೆ. ಸರ್ಕಾರ ರಚಿಸಲು ಪ್ರಯತ್ನಿಸಿ ವಿಫಲರಾದ, ಅಧಿಕಾರ ಕಳೆದುಕೊಂಡ ಕೆಲ ಹೊರಗಿನ ಶಕ್ತಿಗಳು ಊಹಾಪೋಹಗಳನ್ನು ಹರಿಯಬಿಡುತ್ತಿವೆ. ಆದರೆ ಅದು ಯಶಸ್ವಿಯಾಗುವುದಿಲ್ಲ” ಎಂದು ಅವರು ಮೈತ್ರಿ ಸರ್ಕಾರದ ಪರ ನಿಂತಿದ್ದಾರೆ.

ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನಾನಾ ಪಟೋಲಿ ಹೇಳಿಕೆಗೆ ಪರೊಕ್ಷವಾಗಿ ಪ್ರತಿಕ್ರಿಯಿಸಿ ರಾಜಕೀಯ ಪಕ್ಷಗಳು ಬೇರೆ ಎಲ್ಲಾ ವಿಷಯಗಳನ್ನು ಬದಿಗೊತ್ತಿ ಸದ್ಯ ಮಹರಾಷ್ಟ್ರದ ಅಭಿವೃದ್ದಿ ಮತ್ತು ರಾಜ್ಯದ ಆರ್ಥಿಕ ಚೇತರಿಕೆಯ ಕಡೆ ಗಮನಕೊಡಬೇಕು ಎಂದಿದ್ದರು.

ಒಟ್ಟಿನಲ್ಲಿ ಎರಡು ವಿರುದ್ಧ ಸಿದ್ಧಾಂತಗಳ ಪಕ್ಷಗಳಾದ ಕಾಂಗ್ರೆಸ್ ಮತ್ತು ಶಿವಸೇನೆ ಎಷ್ಟುದಿನ ಹೊಂದಾಣಿಕೆಯಿಂದ ಅಡಳಿತ ನಡೆಸಬಲ್ಲವು ಎಂದು ಹಲವರು ಮೈತ್ರಿಯ ಅರಂಭದಲ್ಲಿಯೇ ಅನುಮಾನವನ್ನು ವ್ಯಕ್ತಪಡಿಸಿದ್ದರು. ಈಗ ನಿಧಾನಕ್ಕೆ ಮಹಾರಾಷ್ಟ್ರ ಸರ್ಕಾರದಲ್ಲಿ ಅಸಮಾಧಾನದ ಅಲೆಗಳು ಏಳತೊಡಗಿವೆ.

ಇದನ್ನು ಓದಿ : ದೆಹಲಿ ಗಲಭೆ ಪ್ರಕರಣ: CAA ವಿರೋಧಿ ಹೋರಾಟಗಾರರ ಬಿಡುಗಡೆಯ ನಿರೀಕ್ಷೆಗಳಿಗೆ ಸುಪ್ರೀಂ ಕೋರ್ಟ್ ತಡೆಗೋಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...