HomeಮುಖಪುಟRJD ಗೆ ಸೇರುವ JDU ಶಾಸಕರ ಸಂಖ್ಯೆ ಶೀಘ್ರವೇ 28 ಕ್ಕೇರಲಿದೆ: ನಿತೀಶ್‌ಗೆ ಮತ್ತೊಂದು ಶಾಕ್!

RJD ಗೆ ಸೇರುವ JDU ಶಾಸಕರ ಸಂಖ್ಯೆ ಶೀಘ್ರವೇ 28 ಕ್ಕೇರಲಿದೆ: ನಿತೀಶ್‌ಗೆ ಮತ್ತೊಂದು ಶಾಕ್!

ರಾಜ್ಯದ ವಿರೋಧ ಪಕ್ಷದ ಆರ್‌ಜೆಡಿ ಮುಖಂಡ ಶ್ಯಾಂ ರಾಜಕ್, “17 ಜೆಡಿಯು ಶಾಸಕರು ಆರ್‌ಜೆಡಿಯೊಂದಿಗೆ ಸಂಪರ್ಕದಲ್ಲಿದ್ದಾರೆ” ಎಂದು ಮಂಗಳವಾರ ಹೇಳಿದ್ದರು

- Advertisement -
- Advertisement -

JDU ಪಕ್ಷದ 17 ಶಾಸಕರು ತಮ್ಮ ಪಕ್ಷಕ್ಕೆ ಬರಲು ಸಿದ್ಧರಾಗಿದ್ದಾರೆ ಎಂದು ಹೇಳಿದ್ದ ಆರ್‌ಜೆಡಿ ಮುಖಂಡ ಶ್ಯಾಂ ರಾಜಕ್, ಈಗ ಇನ್ನೊಂದು ಸ್ಫೋಟಕ ಮಾಹಿತಿಯನ್ನು ನೀಡಿದ್ದಾರೆ. “ತಮ್ಮ ಪಕ್ಷಕ್ಕೆ ಬರುವ ಶಾಸಕರ ಸಂಖ್ಯೆ ಶೀಘ್ರವೇ 28 ಕ್ಕೆ ಏರಲಿದೆ” ಎಂದು ಹೇಳಿದ್ದಾರೆ.

ಈ ಕುರಿತು ಆರ್‌ಜೆಡಿ ಮುಖಂಡರ ಹೇಳಿಕೆಯನ್ನು ಎಎನ್‌ಐ ಟ್ವೀಟ್ ಮಾಡಿದ್ದು , “17 JDU ಶಾಸಕರು ನಮ್ಮೊಂದಿಗೆ ಸಂಪರ್ಕದಲ್ಲಿದ್ದು, ಯಾವುದೇ ಸಮಯದಲ್ಲಿ ನಮ್ಮ ಪಕ್ಷಕ್ಕೆ ಸೇರಲು ಸಿದ್ಧರಾಗಿದ್ದಾರೆ. ಆದರೆ ಪಕ್ಷಾಂತರ ನಿಷೇಧ ಕಾನೂನನ್ನು ಉಲ್ಲಂಘಿಸಲು ನಾವು ಬಯಸುವುದಿಲ್ಲವಾದ್ದರಿಂದ, ಅವರು 28 ಶಾಸಕರ ಗುಂಪಿನಲ್ಲಿ ಬಂದಾಗ ಮಾತ್ರ ಅವರನ್ನು ಸ್ವಾಗತಿಸುತ್ತೇವೆ ಎಂದು ನಾವು ಅವರಿಗೆ ತಿಳಿಸಿದ್ದೇವೆ. ಅವರ ಸಂಖ್ಯೆ ಶೀಘ್ರದಲ್ಲೇ 28 ಕ್ಕೆ ಏರಲಿದೆ” ಎಂದು ಹೇಳಿರುವುದಾಗಿ ವರದಿ ಮಾಡಿದೆ.

ಇದನ್ನೂ ಓದಿ: JNU ಪ್ರತಿಭಟನೆ ಆಧಾರಿತ ಚಿತ್ರಕ್ಕೆ ತಡೆಯೊಡ್ಡಿದ ಸೆನ್ಸಾರ್ ಮಂಡಳಿಯ ಬಿಜೆಪಿ ಮುಖಂಡ!

ಇದನ್ನೂ ಓದಿ: ರೈತರ ಕೈಯಲ್ಲಿರುವ ರೊಟ್ಟಿಯನ್ನು ಕಿತ್ತುಕೊಳ್ಳಬೇಡಿ: ಭಾವನಾತ್ಮಕ ಟ್ವೀಟ್ ಮಾಡಿದ ರೈತ ಒಕ್ಕೂಟ

ಬಿಹಾರದ ಆಡಳಿತಾರೂಢ ಪಕ್ಷ ಜೆಡಿಯು ಅರುಣಾಚಲ ಪ್ರದೇಶದಲ್ಲಿ ಪಕ್ಷಾಂತರದ ಕಾವನ್ನು ಅನುಭವಿಸಿದ ಬೆನ್ನಲ್ಲೇ, ರಾಜ್ಯದ ವಿರೋಧ ಪಕ್ಷದ ಆರ್‌ಜೆಡಿ ಮುಖಂಡ ಶ್ಯಾಂ ರಾಜಕ್, “17 ಜೆಡಿಯು ಶಾಸಕರು ಆರ್‌ಜೆಡಿಯೊಂದಿಗೆ ಸಂಪರ್ಕದಲ್ಲಿದ್ದಾರೆ” ಎಂದು ಹೇಳಿದ್ದರು.

“ಜೆಡಿಯು ಪಕ್ಷದೊಳಗೆ ಮತ್ತು ಪಕ್ಷದ ವ್ಯವಹಾರಗಳ ಹಿಡಿತದಲ್ಲಿ ನಿತೀಶ್ ಕುಮಾರ್ ಅವರ ನಿರಂಕುಶಾಧಿಕಾರಿ ವರ್ತನೆ ಅಲ್ಲಿನ ಬಹುಪಾಲು ಶಾಸಕರಿಗೆ ಕಿರಿಕಿರಿಯನ್ನುಂಟು ಮಾಡಿದೆ. ನಿತೀಶ್ ಕುಮಾರ್ ತಮ್ಮ ರಾಜಕೀಯ ಚಿತ್ರಣದ ಬಗ್ಗೆ ಮಾತ್ರ ಕಾಳಜಿ ವಹಿಸುತ್ತಾರೆ” ಎಂದು ವಿಧಾನಸಭಾ ಚುನಾವಣೆಗೆ ಮೊದಲು ನಿತೀಶ್ ಕುಮಾರ್ ಸಂಪುಟದಲ್ಲಿ ಕೈಗಾರಿಕಾ ಸಚಿವರಾಗಿದ್ದ ಶಯಂ ರಾಜಕ್ ಆರೋಪಿಸಿದ್ದಾರೆ.

“ಬಿಹಾರದಲ್ಲಿ ನಿತೀಶ್ ಕುಮಾರ್ ನೇತೃತ್ವದ ಎನ್‌ಡಿಎ ಸರ್ಕಾರ ಶೀಘ್ರದಲ್ಲೇ ಬೀಳಲಿದೆ. ಮಿತ್ರಪಕ್ಷಗಳ ನಡುವೆ ಅಸಮಾಧಾನ ಹೆಚ್ಚುತ್ತಿದೆ. ಆಡಳಿತದಲ್ಲಿ ಪ್ರಾಬಲ್ಯ ಸಾಧಿಸಲು ಬಿಜೆಪಿ ಮತ್ತು ಜೆಡಿಯು ನಡುವೆ ಹೆಚ್ಚುತ್ತಿರುವ ಹೋರಾಟದಿಂದಾಗಿ ಈಗ ಇದು ಅನಿವಾರ್ಯವಾಗುತ್ತಿದೆ” ಎಂದು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಹೇಳಿದ್ದಾರೆ.

ಇದನ್ನೂ ಓದಿ: ಉಪಸಭಾಪತಿ ಧರ್ಮೇಗೌಡರನ್ನು ಕೊಂದವರಾರು?!

“ಜನವರಿ 14 ರ ನಂತರ ಜೆಡಿಯು ತನ್ನ 17 ಶಾಸಕರ ಮತ್ತೊಂದು ಪಕ್ಷಾಂತರವನ್ನು ಎದುರಿಸಬೇಕಾಗಬಹುದು. ಏಕೆಂದರೆ ನಿತೀಶ್ ಕುಮಾರ್ ತಮ್ಮ ಪಕ್ಷವನ್ನು ಕಟ್ಟುವಲ್ಲಿ ವಿಫಲರಾಗಿದ್ದಾರೆ” ಎಂದು ಹೇಳಿದ್ದಾರೆ.

ಅರುಣಾಚಲ ಪ್ರದೇಶದಲ್ಲಿ ಜೆಡಿಯುನ ಆರು ಶಾಸಕರು ಇತ್ತೀಚೆಗೆ ಬಿಜೆಪಿಗೆ ಪಕ್ಷಾಂತರವಾಗಿದ್ದರು. ಹಾಗಾಗಿ ಆರ್‌ಜೆಡಿ ಮುಖಂಡರ ಈ ಹೇಳಿಕೆ ನಿತೀಶ್ ಕುಮಾರ್ ಅವರಿಗೆ ಮತ್ತೊಂದು ಆಘಾತ ನೀಡಿದೆ.


ಇದನ್ನೂ ಓದಿ: ಗ್ರಾಮ ಪಂಚಾಯತ್‌ ಚುನಾವಣಾ ಫಲಿತಾಂಶ – ಯಾರಿಗೆ ಗೆಲುವು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...