HomeಮುಖಪುಟRJD ಗೆ ಸೇರುವ JDU ಶಾಸಕರ ಸಂಖ್ಯೆ ಶೀಘ್ರವೇ 28 ಕ್ಕೇರಲಿದೆ: ನಿತೀಶ್‌ಗೆ ಮತ್ತೊಂದು ಶಾಕ್!

RJD ಗೆ ಸೇರುವ JDU ಶಾಸಕರ ಸಂಖ್ಯೆ ಶೀಘ್ರವೇ 28 ಕ್ಕೇರಲಿದೆ: ನಿತೀಶ್‌ಗೆ ಮತ್ತೊಂದು ಶಾಕ್!

ರಾಜ್ಯದ ವಿರೋಧ ಪಕ್ಷದ ಆರ್‌ಜೆಡಿ ಮುಖಂಡ ಶ್ಯಾಂ ರಾಜಕ್, “17 ಜೆಡಿಯು ಶಾಸಕರು ಆರ್‌ಜೆಡಿಯೊಂದಿಗೆ ಸಂಪರ್ಕದಲ್ಲಿದ್ದಾರೆ” ಎಂದು ಮಂಗಳವಾರ ಹೇಳಿದ್ದರು

- Advertisement -
- Advertisement -

JDU ಪಕ್ಷದ 17 ಶಾಸಕರು ತಮ್ಮ ಪಕ್ಷಕ್ಕೆ ಬರಲು ಸಿದ್ಧರಾಗಿದ್ದಾರೆ ಎಂದು ಹೇಳಿದ್ದ ಆರ್‌ಜೆಡಿ ಮುಖಂಡ ಶ್ಯಾಂ ರಾಜಕ್, ಈಗ ಇನ್ನೊಂದು ಸ್ಫೋಟಕ ಮಾಹಿತಿಯನ್ನು ನೀಡಿದ್ದಾರೆ. “ತಮ್ಮ ಪಕ್ಷಕ್ಕೆ ಬರುವ ಶಾಸಕರ ಸಂಖ್ಯೆ ಶೀಘ್ರವೇ 28 ಕ್ಕೆ ಏರಲಿದೆ” ಎಂದು ಹೇಳಿದ್ದಾರೆ.

ಈ ಕುರಿತು ಆರ್‌ಜೆಡಿ ಮುಖಂಡರ ಹೇಳಿಕೆಯನ್ನು ಎಎನ್‌ಐ ಟ್ವೀಟ್ ಮಾಡಿದ್ದು , “17 JDU ಶಾಸಕರು ನಮ್ಮೊಂದಿಗೆ ಸಂಪರ್ಕದಲ್ಲಿದ್ದು, ಯಾವುದೇ ಸಮಯದಲ್ಲಿ ನಮ್ಮ ಪಕ್ಷಕ್ಕೆ ಸೇರಲು ಸಿದ್ಧರಾಗಿದ್ದಾರೆ. ಆದರೆ ಪಕ್ಷಾಂತರ ನಿಷೇಧ ಕಾನೂನನ್ನು ಉಲ್ಲಂಘಿಸಲು ನಾವು ಬಯಸುವುದಿಲ್ಲವಾದ್ದರಿಂದ, ಅವರು 28 ಶಾಸಕರ ಗುಂಪಿನಲ್ಲಿ ಬಂದಾಗ ಮಾತ್ರ ಅವರನ್ನು ಸ್ವಾಗತಿಸುತ್ತೇವೆ ಎಂದು ನಾವು ಅವರಿಗೆ ತಿಳಿಸಿದ್ದೇವೆ. ಅವರ ಸಂಖ್ಯೆ ಶೀಘ್ರದಲ್ಲೇ 28 ಕ್ಕೆ ಏರಲಿದೆ” ಎಂದು ಹೇಳಿರುವುದಾಗಿ ವರದಿ ಮಾಡಿದೆ.

ಇದನ್ನೂ ಓದಿ: JNU ಪ್ರತಿಭಟನೆ ಆಧಾರಿತ ಚಿತ್ರಕ್ಕೆ ತಡೆಯೊಡ್ಡಿದ ಸೆನ್ಸಾರ್ ಮಂಡಳಿಯ ಬಿಜೆಪಿ ಮುಖಂಡ!

ಇದನ್ನೂ ಓದಿ: ರೈತರ ಕೈಯಲ್ಲಿರುವ ರೊಟ್ಟಿಯನ್ನು ಕಿತ್ತುಕೊಳ್ಳಬೇಡಿ: ಭಾವನಾತ್ಮಕ ಟ್ವೀಟ್ ಮಾಡಿದ ರೈತ ಒಕ್ಕೂಟ

ಬಿಹಾರದ ಆಡಳಿತಾರೂಢ ಪಕ್ಷ ಜೆಡಿಯು ಅರುಣಾಚಲ ಪ್ರದೇಶದಲ್ಲಿ ಪಕ್ಷಾಂತರದ ಕಾವನ್ನು ಅನುಭವಿಸಿದ ಬೆನ್ನಲ್ಲೇ, ರಾಜ್ಯದ ವಿರೋಧ ಪಕ್ಷದ ಆರ್‌ಜೆಡಿ ಮುಖಂಡ ಶ್ಯಾಂ ರಾಜಕ್, “17 ಜೆಡಿಯು ಶಾಸಕರು ಆರ್‌ಜೆಡಿಯೊಂದಿಗೆ ಸಂಪರ್ಕದಲ್ಲಿದ್ದಾರೆ” ಎಂದು ಹೇಳಿದ್ದರು.

“ಜೆಡಿಯು ಪಕ್ಷದೊಳಗೆ ಮತ್ತು ಪಕ್ಷದ ವ್ಯವಹಾರಗಳ ಹಿಡಿತದಲ್ಲಿ ನಿತೀಶ್ ಕುಮಾರ್ ಅವರ ನಿರಂಕುಶಾಧಿಕಾರಿ ವರ್ತನೆ ಅಲ್ಲಿನ ಬಹುಪಾಲು ಶಾಸಕರಿಗೆ ಕಿರಿಕಿರಿಯನ್ನುಂಟು ಮಾಡಿದೆ. ನಿತೀಶ್ ಕುಮಾರ್ ತಮ್ಮ ರಾಜಕೀಯ ಚಿತ್ರಣದ ಬಗ್ಗೆ ಮಾತ್ರ ಕಾಳಜಿ ವಹಿಸುತ್ತಾರೆ” ಎಂದು ವಿಧಾನಸಭಾ ಚುನಾವಣೆಗೆ ಮೊದಲು ನಿತೀಶ್ ಕುಮಾರ್ ಸಂಪುಟದಲ್ಲಿ ಕೈಗಾರಿಕಾ ಸಚಿವರಾಗಿದ್ದ ಶಯಂ ರಾಜಕ್ ಆರೋಪಿಸಿದ್ದಾರೆ.

“ಬಿಹಾರದಲ್ಲಿ ನಿತೀಶ್ ಕುಮಾರ್ ನೇತೃತ್ವದ ಎನ್‌ಡಿಎ ಸರ್ಕಾರ ಶೀಘ್ರದಲ್ಲೇ ಬೀಳಲಿದೆ. ಮಿತ್ರಪಕ್ಷಗಳ ನಡುವೆ ಅಸಮಾಧಾನ ಹೆಚ್ಚುತ್ತಿದೆ. ಆಡಳಿತದಲ್ಲಿ ಪ್ರಾಬಲ್ಯ ಸಾಧಿಸಲು ಬಿಜೆಪಿ ಮತ್ತು ಜೆಡಿಯು ನಡುವೆ ಹೆಚ್ಚುತ್ತಿರುವ ಹೋರಾಟದಿಂದಾಗಿ ಈಗ ಇದು ಅನಿವಾರ್ಯವಾಗುತ್ತಿದೆ” ಎಂದು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಹೇಳಿದ್ದಾರೆ.

ಇದನ್ನೂ ಓದಿ: ಉಪಸಭಾಪತಿ ಧರ್ಮೇಗೌಡರನ್ನು ಕೊಂದವರಾರು?!

“ಜನವರಿ 14 ರ ನಂತರ ಜೆಡಿಯು ತನ್ನ 17 ಶಾಸಕರ ಮತ್ತೊಂದು ಪಕ್ಷಾಂತರವನ್ನು ಎದುರಿಸಬೇಕಾಗಬಹುದು. ಏಕೆಂದರೆ ನಿತೀಶ್ ಕುಮಾರ್ ತಮ್ಮ ಪಕ್ಷವನ್ನು ಕಟ್ಟುವಲ್ಲಿ ವಿಫಲರಾಗಿದ್ದಾರೆ” ಎಂದು ಹೇಳಿದ್ದಾರೆ.

ಅರುಣಾಚಲ ಪ್ರದೇಶದಲ್ಲಿ ಜೆಡಿಯುನ ಆರು ಶಾಸಕರು ಇತ್ತೀಚೆಗೆ ಬಿಜೆಪಿಗೆ ಪಕ್ಷಾಂತರವಾಗಿದ್ದರು. ಹಾಗಾಗಿ ಆರ್‌ಜೆಡಿ ಮುಖಂಡರ ಈ ಹೇಳಿಕೆ ನಿತೀಶ್ ಕುಮಾರ್ ಅವರಿಗೆ ಮತ್ತೊಂದು ಆಘಾತ ನೀಡಿದೆ.


ಇದನ್ನೂ ಓದಿ: ಗ್ರಾಮ ಪಂಚಾಯತ್‌ ಚುನಾವಣಾ ಫಲಿತಾಂಶ – ಯಾರಿಗೆ ಗೆಲುವು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...