Homeಕರ್ನಾಟಕಮಹಿಳೆಯ ಮಾತು ಉಲ್ಲಂಘಿಸಿ ಬಿಜೆಪಿ ಬಟನ್ ಒತ್ತಿದ ಅಧಿಕಾರಿ; ಚಿತ್ತಾಪುರದಲ್ಲಿ ಆಕ್ರೋಶ

ಮಹಿಳೆಯ ಮಾತು ಉಲ್ಲಂಘಿಸಿ ಬಿಜೆಪಿ ಬಟನ್ ಒತ್ತಿದ ಅಧಿಕಾರಿ; ಚಿತ್ತಾಪುರದಲ್ಲಿ ಆಕ್ರೋಶ

- Advertisement -
- Advertisement -

ಮತ ಹಾಕಲು ಸಹಕರಿಸಲು ಹೋಗಿದ್ದ ಅಧಿಕಾರಿ ಬಿಜೆಪಿ ಬಟನ್‌ ಒತ್ತಿರುವ ಘಟನೆ ಕಲುಬುರಗಿ ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನಲ್ಲಿ ನಡೆದಿದೆ. ಅಧಿಕಾರಿಯ ವಿರುದ್ಧ ಆಕ್ರೋಶ ವ್ಯಕ್ತವಾಗಿದ್ದು, ಉಗ್ವಿಗ್ನ ಪರಿಸ್ಥಿತಿ ಉಂಟಾಗಿದೆ.

ಮಹಿಳೆಯು ಕಾಂಗ್ರೆಸ್‌ ಬಟನ್ ಒತ್ತುವಂತೆ ಹೇಳಿದರೂ, ಅಧಿಕಾರಿ ಬಿಜೆಪಿ ಬಟನ್ ಒತ್ತಿರುವುದು ಬಯಲಾಗಿದೆ. ಚಿತ್ತಾಪುರ ತಾಲ್ಲೂಕಿನ ಚಾಮನೂರು ಗ್ರಾಮದಲ್ಲಿ ಘಟನೆ ನಡೆದಿದ್ದು, ಕ್ಷಣಕಾಲ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು.

ಬಿ.ಸಿ. ಚವ್ಹಾಣ ಎಂಬ ಚುನಾವಣಾ ಅಧಿಕಾರಿ ಮೇಲೆ ಆರೋಪ ಬಂದಿದ್ದು ಸ್ಥಳಕ್ಕೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ್ ಖರ್ಗೆಯವರು ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು. ನಂತರ ಚಿತ್ತಾಪುರ ಚುನಾವಣಾಧಿಕಾರಿ ನವೀನ್ ಕುಮಾರ್ ಯು. ಅವರು ಅಧಿಕಾರಿಯನ್ನು ಬದಲಾಯಿಸಿದರು.

ಬಸಮ್ಮ ಎಂಟುಮನ್ ಎಂಬ ಮಹಿಳೆ ಮತಗಟ್ಟೆಗೆ ಹೋಗಿ ಕಾಂಗ್ರೆಸ್ ಅಭ್ಯರ್ಥಿಯ ಚಿಹ್ನೆಗೆ ಬಟನ್ ಒತ್ತಲು ತಿಳಿಸಿದ್ದರು. ಆದರೆ ಚುನಾವಣಾಧಿಕಾರಿ ಬಿಜೆಪಿ ಅಭ್ಯರ್ಥಿಯ ಮುಂದಿರುವ ಬಟನ್ ಅನ್ನು ಬಿ.ಸಿ.ಚವ್ಹಾಣ್ ಒತ್ತಿದ್ದಾನೆ. ಅದು ವೃದ್ಧೆಯ ಗಮನಕ್ಕೆ ಬಂದು ಆಕ್ಷೇಪ ವ್ಯಕ್ತಪಡಿಸಿದಾಗ ಅಧಿಕಾರಿಯ ದುಷ್ಕೃತ್ಯ ಬಯಲಿಗೆ ಬಂದಿದೆ.

ಇದಕ್ಕೂ ಮೊದಲು ಮತಯಂತ್ರ ಪರೀಕ್ಷೆ ಸಮಯದಲ್ಲಿ ಸಹ ಬಿಜೆಪಿಯ ಸುಮಾರು ಐವತ್ತಕ್ಕೂ ಅಧಿಕ ಅಧಿಕ ಮತ ಹಾಕಲಾಗಿದೆ ಎಂದು ಹೇಳಲಾಗಿದ್ದು, ಸ್ಥಳೀಯರು ವಿರೋಧ ವ್ಯಕ್ತಪಡಿಸಿದ ನಂತರ ಅದನ್ನು ಡಿಲೀಟ್ ಮಾಡಲಾಗಿದೆ ಎಂದು ಸ್ಥಳೀಯ ಕಾಂಗ್ರೆಸ್ ಮುಖಂಡ ಭಗವಾನ್ ತಿಳಿಸಿರುವುದಾಗಿ ‘ಪ್ರಜಾವಾಣಿ’ ವರದಿ ಮಾಡಿದೆ.

ಸ್ಥಳಕ್ಕೆ ಬಂದ ಪ್ರಿಯಾಂಕ್ ಖರ್ಗೆ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡು ಬದಲಾಯಿಸುವಂತೆ ಚುನಾವಣಾ ಅಧಿಕಾರಿ ಮೇಲೆ ಒತ್ತಡ ಹೇರಿದ ಮೇಲೆ ಅವರನ್ನು ಬದಲಾಯಿಸಲಾಯಿತು. ಆರೋಪಿ ಚೌವ್ಹಾಣ್‌ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಚಿತ್ತಾಪುರ ವಿಧಾನಸಭಾ ಕ್ಷೇತ್ರವು ಹಲವು ಕಾರಣಗಳಿಗೆ ಈಗಾಗಲೇ ಸುದ್ದಿಯಾಗಿದೆ. ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಇವರ ವಿರುದ್ಧ ಬಿಜೆಪಿಯಿಂದ ಸ್ಪರ್ಧಿಸಿರುವ ಮಣಿಕಂಠ ರಾಠೋಡ್‌ ರೌಡಿ ಶೀಟರ್‌ ಆಗಿದ್ದಾನೆ.

ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಕುಟುಂಬಕ್ಕೆ ಕೊಲೆ ಬೆದರಿಕೆ ಹಾಕಿರುವ ಆರೋಪವೂ ಮಣಿಕಂಠ ವಿರುದ್ಧ ಬಂದಿದೆ. ಈ ಕುರಿತು ರಾಜಸ್ಥಾನದಲ್ಲಿ ಪ್ರಕರಣ ದಾಖಲಾಗಿದೆ.

‘ಖರ್ಗೆ, ಹೆಂಡತಿ ಮಕ್ಕಳನ್ನು ಸಾಫ್‌ ಮಾಡ್ತೀನಿ…’ ಎಂದು ಚಿತ್ತಾಪುರ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ ಹೇಳಿರುವ ಆಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

ರಾಥೋಡ್ ಮೇಲೆ 40ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳಿವೆ ಎಂದು ಅವರೇ ಘೋಷಿಸಿಕೊಂಡಿದ್ದಾರೆ. ಮೂಲತಃ ಯಾದಗಿರಿಯವರಾದ ಅವರ ಮೇಲೆ ಕಳ್ಳತನ, ಅಕ್ಕಿ, ಹಾಲಿನ ಪುಡಿ ಅಕ್ರಮ ಸಾಗಾಣೆ, ಕೊಲೆ ಬೆದರಿಕೆ ಸೇರಿ ಹಲವಾರು ಆರೋಪಗಳನ್ನು ಎದುರಿಸುತ್ತಿದ್ದಾರೆ. ಅನ್ನಭಾಗ್ಯ ಅಕ್ಕಿಯನ್ನು ಕದ್ದ ಪ್ರಕರಣದಲ್ಲಿ ಒಂದು ವರ್ಷ ಶಿಕ್ಷೆಯೂ ಆಗಿದ್ದು ನ್ಯಾಯಾಲಯದಿಂದ ತಡೆಯಾಜ್ಞೆ ಪಡೆದಿದ್ದಾರೆ.

ಯಾದಗಿರಿ, ವಿಜಯಪುರ, ಕಲಬುರಗಿ ಮೂರು ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಪ್ರಕರಣಗಳನ್ನು ಎದುರಿಸುತ್ತಿರುವ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್‌ನನ್ನು ಒಂದು ವರ್ಷಗಳ ಕಾಲ ಗಡಿಪಾರು ಮಾಡಿ ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ. ವೈ. ಎಸ್. ರವಿಕುಮಾರ ಆದೇಶ ಹೊರಡಿಸಿದ್ದರು. ಇದಕ್ಕೆ ಮಣಿಕಂಠ, ಹೈಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದರು. ಅಂತಹ ಬಿಜೆಪಿ ಅಭ್ಯರ್ಥಿಯ ಪರವಾಗಿ ಬಟ್‌ ಒತ್ತಿರುವ ಅಧಿಕಾರಿ ಈಗ ಸಿಕ್ಕಿಬಿದ್ದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....