Homeಫ್ಯಾಕ್ಟ್‌ಚೆಕ್Fact Check: ಬಿಪಿನ್ ರಾವತ್‌ರವರ ಹೆಲಿಕಾಪ್ಟರ್ ಪತನ ಎಂದು ಹಳೆಯ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

Fact Check: ಬಿಪಿನ್ ರಾವತ್‌ರವರ ಹೆಲಿಕಾಪ್ಟರ್ ಪತನ ಎಂದು ಹಳೆಯ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

- Advertisement -
- Advertisement -

ಡಿಸೆಂಬರ್ 08 ರಂದು ಭಾರತದ ರಕ್ಷಣಾ ಸಿಬ್ಬಂದಿ ಮುಖ್ಯಸ್ಥ (ಸಿಡಿಎಸ್) ಜನರಲ್ ಬಿಪಿನ್ ರಾವತ್ ರವರಿದ್ದ IAFನ Mi-17 V5 ಸೇನಾ ಹೆಲಿಕಾಪ್ಟರ್ ತಮಿಳುನಾಡಿನ ಕೂನೂರ್‌ನಲ್ಲಿ ಅಪಘಾತಕ್ಕೀಡಾಗಿದೆ. ಈ ದುರ್ಘಟನೆಯಲ್ಲಿ ಬಿಪಿನ್‌ ರಾವತ್, ಅವರ ಪತ್ನಿ ಸೇರಿ ಒಟ್ಟು 13 ಜನ ಮೃತಪಟ್ಟಿದ್ದಾರೆ. ಈ ಕುರಿತು ತನಿಖೆಗೆ ವಾಯುಸೇನೆ ಆದೇಶಿಸಿದೆ.

ಇಂತಹ ಸಂದರ್ಭದಲ್ಲಿ ದೇಶ-ವಿದೇಶದಾದ್ಯಂತ ಸಂತಾಪ ಸೂಚಿಸಲಾಗುತ್ತಿದೆ. ಅದೇ ಸಮಯದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಅಪಘಾತ ಸಂಭವಿಸಿದ ಲೈವ್ ವಿಡಿಯೋ ಎಂದು ಸಂಬಂಧವಿಲ್ಲದ ವಿಡಿಯೋಗಳು ಸಹ ಹರಿದಾಡುತ್ತಿವೆ.

ಟ್ವಿಟ್ಟರ್ ಬಳಕೆದಾರರಾದ Sir Don Bradman ಆಕಾಶದಲ್ಲಿ ಹೆಲಿಕಾಪ್ಟರ್ ಒಂದಕ್ಕೆ ಬೆಂಕಿ ಹೊತ್ತಿಕೊಂಡಿರುವ ವೀಡಿಯೊವನ್ನು ಪೋಸ್ಟ್ ಮಾಡಿ “ಬಿಪಿನ್ ರಾವತ್ ಇದ್ದ ಹೆಲಿಕಾಪ್ಟರ್ ತಮಿಳುನಾಡಿನಲ್ಲಿ ಪತನಗೊಂಡಿದೆ” ಎಂದು ಬರೆದಿದ್ದಾರೆ. ಈ ವಿಡಿಯೋವನ್ನು ಸುಮಾರು 2 ಲಕ್ಷ ಜನರು ವೀಕ್ಷಿಸಿದ್ದಾರೆ. ಟ್ವಿಟರ್ ಬಳಕೆದಾರರು @MarwadiClub ಸಹ ಈ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ. ಫೇಸ್‌ಬುಕ್‌ನಲ್ಲಿಯೂ ವಿಡಿಯೋ ಹರಿದಾಡಿದೆ.

ಫ್ಯಾಕ್ಟ್‌ಚೆಕ್

ಸೂಲೂರು ವಾಯುನೆಲೆಯಿಂದ ಟೇಕಾಫ್ ಆದ ಐಎಎಫ್ ಹೆಲಿಕಾಪ್ಟರ್ ವೆಲ್ಲಿಂಗ್ಟನ್‌ನಲ್ಲಿರುವ ರಕ್ಷಣಾ ಸೇವೆಗಳ ಸಿಬ್ಬಂದಿ ಕಾಲೇಜಿಗೆ ತೆರಳುತ್ತಿರುವಾಗ ಪತನಗೊಂಡು ನೆಲಕ್ಕೆ ಅಪ್ಪಳಿಸಿದ ನಂತರ ಬೆಂಕಿಗೆ ಆಹುತಿಯಾಗಿದೆ ಎಂದು ದಿ ಹಿಂದೂ ಸೇರಿದಂತೆ ಹಲವು ಮಾಧ್ಯಮಗಳು ವರದಿ ಮಾಡಿವೆ. ಆದರೆ ಈ ಮೇಲಿನ ವಿಡಿಯೋದಲ್ಲಿ ಹೆಲಿಕಾಪ್ಟರ್ ಆಕಾಶದಲ್ಲಿರುವಾಗಲೇ ಬೆಂಕಿ ಹೊತ್ತಿಕೊಂಡಿರುವುದರಿಂದ ಈ ಘಟನೆಗೆ ಸಂಬಂಧಿಸಿಲ್ಲ ಎಂದು ತಿಳಿಯಬಹುದು.

ವಿಡಿಯೋದ ಸ್ಕ್ರೀನ್‌ಶಾಟ್‌ಗಳನ್ನು ಗೂಗಲ್ ರಿವರ್ಸ್ ಮೂಲಕ ಹುಡುಕಿದಾಗ ಈ ವೀಡಿಯೊವು ಫೆಬ್ರವರಿ 2020 ರ ಹಿಂದಿನದು ಎಂದು ತಿಳಿದುಬಂದಿದೆ. ಇದನ್ನು ಅಥೆನ್ಸ್ ಮೂಲದ ಪತ್ರಕರ್ತ ಬಾಬಕ್ ತಘ್ವೇ ಪೋಸ್ಟ್ ಮಾಡಿದ್ದಾರೆ. ಅವರ ಟ್ವೀಟ್‌ನ ಪ್ರಕಾರ, ಸಿರಿಯಾದ ಅರಬ್ ಏರ್ ಫೋರ್ಸ್‌ನ Mi-17 ಅನ್ನು ಟರ್ಕಿಶ್ ಸೇನೆಯು ಸಿರಿಯಾದ ಅಲ್-ನೈರಾಬ್ ಬಳಿ ಹೊಡೆದುರುಳಿಸಿದೆ ಎಂದು ವಿವರಿಸಲಾಗಿದೆ.

ಹಾಗಾಗಿ ಈ ವಿಡಿಯೋ ಇತ್ತೀಚಿನದ್ದಲ್ಲ ಎಂದು ಸ್ಪಷ್ಟವಾಗಿ ತಿಳಿದುಬರುತ್ತದೆ.

ಮಾಧ್ಯಮ ಸಂಸ್ಥೆ ಎನ್‌ಡಿಟಿವಿ ಬಿಪಿನ್ ರಾವತ್‌ರವರಿದ್ದ ಹೆಲಿಕಾಪ್ಟರ್ ಪತನಕ್ಕೂ ಮುಂಚೆ ಹಾರುವುದರ ಸಣ್ಣ ಅಧಿಕೃತ ವಿಡಿಯೋ ತುಣುಕನ್ನು ಬಿಡುಗಡೆ ಮಾಡಿವೆ. ಅದನ್ನು ಇಲ್ಲಿ ನೋಡಬಹುದು.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಬ್ರಿಟನ್ ರಾಣಿಗಿಂತ ಸೋನಿಯಾ ಶ್ರೀಮಂತೆ ಎಂಬುದು ಸುಳ್ಳು ಸುದ್ದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...