Homeಫ್ಯಾಕ್ಟ್‌ಚೆಕ್Fact Check: ಬಿಪಿನ್ ರಾವತ್‌ರವರ ಹೆಲಿಕಾಪ್ಟರ್ ಪತನ ಎಂದು ಹಳೆಯ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

Fact Check: ಬಿಪಿನ್ ರಾವತ್‌ರವರ ಹೆಲಿಕಾಪ್ಟರ್ ಪತನ ಎಂದು ಹಳೆಯ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

- Advertisement -
- Advertisement -

ಡಿಸೆಂಬರ್ 08 ರಂದು ಭಾರತದ ರಕ್ಷಣಾ ಸಿಬ್ಬಂದಿ ಮುಖ್ಯಸ್ಥ (ಸಿಡಿಎಸ್) ಜನರಲ್ ಬಿಪಿನ್ ರಾವತ್ ರವರಿದ್ದ IAFನ Mi-17 V5 ಸೇನಾ ಹೆಲಿಕಾಪ್ಟರ್ ತಮಿಳುನಾಡಿನ ಕೂನೂರ್‌ನಲ್ಲಿ ಅಪಘಾತಕ್ಕೀಡಾಗಿದೆ. ಈ ದುರ್ಘಟನೆಯಲ್ಲಿ ಬಿಪಿನ್‌ ರಾವತ್, ಅವರ ಪತ್ನಿ ಸೇರಿ ಒಟ್ಟು 13 ಜನ ಮೃತಪಟ್ಟಿದ್ದಾರೆ. ಈ ಕುರಿತು ತನಿಖೆಗೆ ವಾಯುಸೇನೆ ಆದೇಶಿಸಿದೆ.

ಇಂತಹ ಸಂದರ್ಭದಲ್ಲಿ ದೇಶ-ವಿದೇಶದಾದ್ಯಂತ ಸಂತಾಪ ಸೂಚಿಸಲಾಗುತ್ತಿದೆ. ಅದೇ ಸಮಯದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಅಪಘಾತ ಸಂಭವಿಸಿದ ಲೈವ್ ವಿಡಿಯೋ ಎಂದು ಸಂಬಂಧವಿಲ್ಲದ ವಿಡಿಯೋಗಳು ಸಹ ಹರಿದಾಡುತ್ತಿವೆ.

ಟ್ವಿಟ್ಟರ್ ಬಳಕೆದಾರರಾದ Sir Don Bradman ಆಕಾಶದಲ್ಲಿ ಹೆಲಿಕಾಪ್ಟರ್ ಒಂದಕ್ಕೆ ಬೆಂಕಿ ಹೊತ್ತಿಕೊಂಡಿರುವ ವೀಡಿಯೊವನ್ನು ಪೋಸ್ಟ್ ಮಾಡಿ “ಬಿಪಿನ್ ರಾವತ್ ಇದ್ದ ಹೆಲಿಕಾಪ್ಟರ್ ತಮಿಳುನಾಡಿನಲ್ಲಿ ಪತನಗೊಂಡಿದೆ” ಎಂದು ಬರೆದಿದ್ದಾರೆ. ಈ ವಿಡಿಯೋವನ್ನು ಸುಮಾರು 2 ಲಕ್ಷ ಜನರು ವೀಕ್ಷಿಸಿದ್ದಾರೆ. ಟ್ವಿಟರ್ ಬಳಕೆದಾರರು @MarwadiClub ಸಹ ಈ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ. ಫೇಸ್‌ಬುಕ್‌ನಲ್ಲಿಯೂ ವಿಡಿಯೋ ಹರಿದಾಡಿದೆ.

ಫ್ಯಾಕ್ಟ್‌ಚೆಕ್

ಸೂಲೂರು ವಾಯುನೆಲೆಯಿಂದ ಟೇಕಾಫ್ ಆದ ಐಎಎಫ್ ಹೆಲಿಕಾಪ್ಟರ್ ವೆಲ್ಲಿಂಗ್ಟನ್‌ನಲ್ಲಿರುವ ರಕ್ಷಣಾ ಸೇವೆಗಳ ಸಿಬ್ಬಂದಿ ಕಾಲೇಜಿಗೆ ತೆರಳುತ್ತಿರುವಾಗ ಪತನಗೊಂಡು ನೆಲಕ್ಕೆ ಅಪ್ಪಳಿಸಿದ ನಂತರ ಬೆಂಕಿಗೆ ಆಹುತಿಯಾಗಿದೆ ಎಂದು ದಿ ಹಿಂದೂ ಸೇರಿದಂತೆ ಹಲವು ಮಾಧ್ಯಮಗಳು ವರದಿ ಮಾಡಿವೆ. ಆದರೆ ಈ ಮೇಲಿನ ವಿಡಿಯೋದಲ್ಲಿ ಹೆಲಿಕಾಪ್ಟರ್ ಆಕಾಶದಲ್ಲಿರುವಾಗಲೇ ಬೆಂಕಿ ಹೊತ್ತಿಕೊಂಡಿರುವುದರಿಂದ ಈ ಘಟನೆಗೆ ಸಂಬಂಧಿಸಿಲ್ಲ ಎಂದು ತಿಳಿಯಬಹುದು.

ವಿಡಿಯೋದ ಸ್ಕ್ರೀನ್‌ಶಾಟ್‌ಗಳನ್ನು ಗೂಗಲ್ ರಿವರ್ಸ್ ಮೂಲಕ ಹುಡುಕಿದಾಗ ಈ ವೀಡಿಯೊವು ಫೆಬ್ರವರಿ 2020 ರ ಹಿಂದಿನದು ಎಂದು ತಿಳಿದುಬಂದಿದೆ. ಇದನ್ನು ಅಥೆನ್ಸ್ ಮೂಲದ ಪತ್ರಕರ್ತ ಬಾಬಕ್ ತಘ್ವೇ ಪೋಸ್ಟ್ ಮಾಡಿದ್ದಾರೆ. ಅವರ ಟ್ವೀಟ್‌ನ ಪ್ರಕಾರ, ಸಿರಿಯಾದ ಅರಬ್ ಏರ್ ಫೋರ್ಸ್‌ನ Mi-17 ಅನ್ನು ಟರ್ಕಿಶ್ ಸೇನೆಯು ಸಿರಿಯಾದ ಅಲ್-ನೈರಾಬ್ ಬಳಿ ಹೊಡೆದುರುಳಿಸಿದೆ ಎಂದು ವಿವರಿಸಲಾಗಿದೆ.

ಹಾಗಾಗಿ ಈ ವಿಡಿಯೋ ಇತ್ತೀಚಿನದ್ದಲ್ಲ ಎಂದು ಸ್ಪಷ್ಟವಾಗಿ ತಿಳಿದುಬರುತ್ತದೆ.

ಮಾಧ್ಯಮ ಸಂಸ್ಥೆ ಎನ್‌ಡಿಟಿವಿ ಬಿಪಿನ್ ರಾವತ್‌ರವರಿದ್ದ ಹೆಲಿಕಾಪ್ಟರ್ ಪತನಕ್ಕೂ ಮುಂಚೆ ಹಾರುವುದರ ಸಣ್ಣ ಅಧಿಕೃತ ವಿಡಿಯೋ ತುಣುಕನ್ನು ಬಿಡುಗಡೆ ಮಾಡಿವೆ. ಅದನ್ನು ಇಲ್ಲಿ ನೋಡಬಹುದು.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಬ್ರಿಟನ್ ರಾಣಿಗಿಂತ ಸೋನಿಯಾ ಶ್ರೀಮಂತೆ ಎಂಬುದು ಸುಳ್ಳು ಸುದ್ದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...