Homeಮುಖಪುಟಹೈದ್ರಾಬಾದ್ ಕರ್ನಾಟಕದ ಮೇಲೆ ನಡೆಯುತ್ತಿದೆ ನಿರಂತರ ವಂಚನೆ : ಡಾ.ರಝಾಕ ಉಸ್ತಾದ

ಹೈದ್ರಾಬಾದ್ ಕರ್ನಾಟಕದ ಮೇಲೆ ನಡೆಯುತ್ತಿದೆ ನಿರಂತರ ವಂಚನೆ : ಡಾ.ರಝಾಕ ಉಸ್ತಾದ

ಯಾವುದೇ ಒಂದು ಸರಕಾರ ತನ್ನದೇ ರಾಜ್ಯದ ಒಂದು ಪ್ರದೇಶದ ಜನರಿಗೆ ಇಷ್ಟೊಂದು ಅನ್ಯಾಯ ಮಾಡಿದೆ ಎಂದರೆ ನಿಜವಾಗಿಯೂ ಇದು ಪ್ರಜಾಪ್ರಭುತ್ವ ಸರಕಾರವೇ ಎಂದು ಪ್ರಶ್ನಿಸುತ್ತಿದ್ದಾರೆ ಹೈ.ಕ ದ ಹೋರಾಟಗಾರರಾದ ಡಾ.ರಝಾಕ ಉಸ್ತಾದ್‌..

- Advertisement -
- Advertisement -

ಹೈದ್ರಾಬಾದ ಕರ್ನಾಟಕ ಪ್ರದೇಶವು ರಾಜ್ಯದ ಈಶಾನ್ಯ ಭಾಗದಲ್ಲಿದ್ದು, ಕನ್ನಡ ಭಾಷೆ ಮಾತನಾಡುವ ಜನರಿಂದ ಆವೃತವಾಗಿರುವ ಈ ಪ್ರದೇಶವು 1724 – 1948ರ ವರೆಗೆ ಹೈದ್ರಾಬಾದ ನಿಜಾಮರ ಆಳ್ವಿಕೆಯಲ್ಲಿ ಇತ್ತು. 1948 ರಲ್ಲಿ ಭಾರತ ಒಕ್ಕೂಟದಲ್ಲಿ ವಿಲೀನಗೊಳಿಸಿದ ನಂತರ ಈ ಪ್ರದೇಶವು 1956ರ ವರೆಗೆ ಹೈದ್ರಾಬಾದ ರಾಜ್ಯದ ಭಾಗವಾಗಿತ್ತು. ಹೈದ್ರಾಬಾದ ಕರ್ನಾಟಕ ಪ್ರದೇಶವು ಬೀದರ್, ಕಲಬುರಗಿ, ಯಾದಗೀರ್, ರಾಯಚೂರು ಹಾಗೂ ಕೊಪ್ಪಳ ಜಿಲ್ಲೆಗಳು ಹಾಗೂ ಬಳ್ಳಾರಿ ಜಿಲ್ಲೆ ಸೇರಿಕೊಂಡು ಇರುತ್ತದೆ. ಹೈದ್ರಾಬಾದ ಕರ್ನಾಟಕ ಪ್ರದೇಶವು ರಾಷ್ಟ್ರದ ಎರಡನೆಯ ಅತೀ ದೊಡ್ಡ ಶುಷ್ಕ ಪ್ರದೇಶವಾಗಿರುತ್ತದೆ.

ಹೈದ್ರಾಬಾದ ಕರ್ನಾಟಕ ಪ್ರದೇಶದ ಭೌಗೋಳಿಕ ವಿಸ್ತೀರ್ಣವು ರಾಜ್ಯದ ಒಟ್ಟಾರೆ ಭೌಗೋಳಿಕ ವಿಸ್ತೀರ್ಣದ ಪ್ರತಿಶತ 23 ರಷ್ಟಿರುತ್ತದೆ. ಪ್ರದೇಶದ ಸಾಗುವಳಿಯಾಗದ ಕೇತ್ರದ ವಿಸ್ತೀರ್ಣವು ರಾಜ್ಯದ ಒಟ್ಟಾರೆ ಸಾಗುವಳಿಯಾಗದ ವಿಸ್ತೀರ್ಣದ ಪ್ರತಿಶತ 23 ರಷ್ಟಿದೆ. ಪ್ರದೇಶದ ಜನಸಂಖ್ಯೆಯು ರಾಜ್ಯದ ಜನಸಂಖ್ಯೆಯ ಪ್ರತಿಶತ 18 ರಷ್ಟಿರುತ್ತದೆ, ರಾಜ್ಯದ ಪರಿಶಿಷ್ಟ ಜಾತಿಯವರ ಜನಸಂಖ್ಯೆಯ ಪೈಕಿ ಪ್ರತಿಶತ 24 ರಷ್ಟಿದೆ, ಪರಿಶಿಷ್ಟ ವರ್ಗದವರ ಜನಸಂಖ್ಯೆಯ ಪೈಕಿ ಪ್ರತಿಶತ 34 ರಷ್ಟಿದೆ, ರಾಜ್ಯದ ಸಾಕ್ಷರತೆ ಪ್ರಮಾಣ ಪ್ರತಿಶತ 75.36 ರ ಎದುರು ಪ್ರದೇಶದ ಸಾಕ್ಷರತಾ ಪ್ರಮಾಣವು ಪ್ರತಿಶತ 64.45 ರಷ್ಟಿದೆ.

ಹೈದ್ರಾಬಾದ ಕರ್ನಾಟಕ ಪ್ರದೇಶಕ್ಕೆ ಸಂವಿಧಾನದ ಅನುಚ್ಛೇದ 371ರ ತಿದ್ದುಪಡಿಗಾಗಿ ಹಲವು ದಶಕಗಳ ಕಾಲ ಈ ಪ್ರದೇಶದ ಜನತೆ ನಿರಂತರ ಹೋರಾಟ ಮಾಡಿದ್ದು ಈಗ ಇತಿಹಾಸ. ದಶಕಗಳ ಬೇಡಿಕೆಗೆ ಸ್ಪಂದಿಸಿದ ಅಂದಿನ ಯುಪಿಎ ಸರಕಾರ 2012ರ ಡಿಸೆಂಬರ್ ತಿಂಗಳಲ್ಲಿ ಸಂವಿಧಾನದ ಅನುಚ್ಛೇದ 371ಕ್ಕೆ ತಿದ್ದುಪಡಿ ತಂದು ಕರ್ನಾಟಕ ರಾಜ್ಯದ ಹೈದ್ರಾಬಾದ ಕರ್ನಾಟಕ ಪ್ರದೇಶವನ್ನು ಅನುಚ್ಛೇದ 371ಜೆ ಅಡಿಯಲ್ಲಿ ಸೇರಿಸಲಾಗಿದೆ. ಸಂವಿಧಾನದ ಅನುಚ್ಛೇದ 371ಜೆ ಅಡಿಯಲ್ಲಿ ಹೈದ್ರಾಬಾದ ಕರ್ನಾಟಕ ಪ್ರದೇಶದ ಜನರಿಗೆ ಶಿಕ್ಷಣ, ಉದ್ಯೋಗದಲ್ಲಿ ಮೀಸಲಾತಿ ನೀಡಲಾಗಿದೆಯಲ್ಲದೇ ಹೈದ್ರಾಬಾದ ಕರ್ನಾಟಕ ಪ್ರದೇಶದ ಅಭಿವೃದ್ಧಿಗೆ ಮಂಡಳಿ ರಚಿಸಲು ಅವಕಾಶ ಮಾಡಿಕೊಡಲಾಗಿದೆ.

ಅದರಂತೆ, 2013 ನವೆಂಬರ್ ತಿಂಗಳಲ್ಲಿ ಹೈದ್ರಾಬಾದ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಆದೇಶ, 2013ರ ಕಾಯ್ದೆಯ ಮೂಲಕ ಈ ಪ್ರದೇಶದಲ್ಲಿ ಮಂಡಳಿ ರಚಿಸಲಾಗಿದೆ. 2013-14ನೇ ಸಾಲಿನ ಸೀಮಿತ ಅವಧಿಗೆ 150 ಕೋ.ರೂ. ಅನುದಾನ ನೀಡಿ ಮಂಡಳಿ ಪ್ರಾರಂಭಿಸಲಾಗಿದೆ. 2014-15ನೇ ಸಾಲಿನಲ್ಲಿ ಬಜೆಟ್ ಮೂಲಕ 600 ಕೋ.ರೂ. ಅನುದಾನ ನಿಗದಿಗೊಳಿಸಲಾಗಿದೆ ಮತ್ತು 24-11-2014ರಂದು ಗುಲ್ಬರ್ಗಾದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ವಿಶೇಷವಾಗಿ 400 ಕೋ.ರೂ. ಅನುದಾನ ಒದಗಿಸಲಾಗಿದೆ, ಅಂದರೆ 2014-15 ನೇ ಸಾಲಿಗೆ ಒಟ್ಟು 1000 ಕೋ.ರೂ. ಅನುದಾನ ಹೈದ್ರಾಬಾದ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ನೀಡಲಾಗಿದೆ. ಅದರಂತೆ 2015-16 ಹಾಗೂ 2016-17ನೇ ಸಾಲಿನ ಬಜೆಟ್‍ನಲ್ಲಿ 1000 ಕೋ.ರೂ. ಅನುದಾನ ಮಂಡಳಿಗೆ ನೀಡಲಾಗಿದೆ. ನಂತರ 2017-18ನೇ ಸಾಲಿನಿಂದ 2019-20ರ ವರೆಗೆ ಪ್ರತಿ ಬಜೆಟ್‍ನಲ್ಲಿ ಸುಮಾರು 1500 ಕೋ.ರೂ. ಅನುದಾನ ಘೋಷಣೆ ಮಾಡಲಾಗಿದೆ.

ಆದರೆ ಸರಕಾರದ ಆರ್ಥಿಕ ವರದಿ 2019-20ನೇ ಸಾಲಿನ ವರದಿಯಲ್ಲಿ 2017-18, 2018-19 ನೇ ಸಾಲಿನಲ್ಲಿ ಕೇವಲ 1000 ಕೋ.ರೂ. ಅನುದಾನ ನೀಡಿರುವ ಮಾಹಿತಿ ನೀಡಿದ್ದು, ಯಾವುದು ಸತ್ಯ, ಯಾವುದು ಸುಳ್ಳು ಎನ್ನುವದು ತಿಳಿಯದಂತ ಪರಿಸ್ಥಿತಿ ಒದಗಿಬಂದಿದೆ. ಸಿದ್ದರಾಮಯ್ಯ ಸರಕಾರ ಹಾಗೂ ಕುಮಾರಸ್ವಾಮಿಯವರ ಸರಕಾರ ಈ ಭಾಗದಲ್ಲಿ ಇಂದಿಗೂ ನಾವು 1500 ಕೋ.ರೂ ಅನುದಾನ ನೀಡಿದ್ದೇವೆ ಎಂದೆ ಪ್ರತಿಪಾದಿಸುತ್ತ ಬಂದಿದ್ದಾರೆ. ಆದರೆ, ಅವರದೇ ಸರಕಾರದ ವರದಿ ಬೇರೆಯದ್ದೇ ಮಾಹಿತಿ ನೀಡುತ್ತಿದೆ. ಇದು ಹೈದ್ರಾಬಾದ ಕರ್ನಾಟಕದ ಜನತೆಗೆ ಮಾಡಿದ ವಂಚನೆ ಎಂದೇ ಹೇಳಬಹುದು.

ಹೈದ್ರಾಬಾದ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ನೀಡಿದ ಮಾಹಿತಿಯಂತೆ ಕಳೆದ ಆರು ವರ್ಷಗಳಲ್ಲಿ ಮಂಡಳಿಗೆ ಹಂಚಿಕೆಯಾದ ಅನುದಾನ 6612.63 ಕೋ.ರೂ., ಸರಕಾರ ತನ್ನ ಆರ್ಥಿಕ ವರದಿಯಲ್ಲಿ ನೀಡಿದ ಅನುದಾನ ಒಟ್ಟು 6253.50 ಕೋ.ರೂ. ಅನುದಾನ ಮಂಜೂರು ಮಾಡಲಾಗಿದೆ. ಆದರೆ, ಕಳೆದ 6 ವರ್ಷಗಳಿಂದ ಬಜೆಟ್‍ನಲ್ಲಿ ಘೋಷಿಸಿದಂತೆ ಮತ್ತು ಗುಲ್ಬರ್ಗಾದಲ್ಲಿ ನಡೆದ 24-11-2014ರ ಸಚಿವಸಂಪುಟದ ನಿರ್ಣಯದ 400 ಕೋ.ರೂ. ಅನುದಾನ ಸೇರಿದಂತೆ ಸುಮಾರು 7650 ಕೋ.ರೂ ಅನುದಾನ ಮಂಡಳಿಗೆ ಹಂಚಿಕೆಯಾಗಬೇಕು. ಆದರೆ, ಯಾವುದೇ ಒಂದು ಸರಕಾರ ತನ್ನದೇ ರಾಜ್ಯದ ಒಂದು ಪ್ರದೇಶದ ಜನರಿಗೆ ಇಷ್ಟೊಂದು ಅನ್ಯಾಯ ಮಾಡಿದೆ ಎಂದರೆ ನಿಜವಾಗಿಯೂ ಇದು ಪ್ರಜಾಪ್ರಭುತ್ವ ಸರಕಾರವೇ ಎಂದು ಕೇಳಬೇಕೆನಿಸಿದೆ.

ಮಂಡಳಿ ನೀಡುತ್ತಿರುವ ಮಾಹಿತಿಗೂ ಸರಕಾರ ಬಜೆಟ್‍ನಲ್ಲಿ ಘೋಷಿಸಿದ ಮಾಹಿತಿಗೂ ಸಾಕಷ್ಟು ವ್ಯತ್ಯಾಸ ಈಗಾಗಲೇ ಗೊಂದಲ ಮೂಡಿಸಿದ ನಡುವೆ ಸರಕಾರದ ಆರ್ಥಿಕ ವರದಿ ಇನ್ನೂ ಅಚ್ಚರಿ ಮೂಡಿಸುವ ಅಂಶವನ್ನು ಗಮನಿಸಿದಲ್ಲಿ ಉದ್ದೇಶಪೂರ್ವಕ ಗೊಂದಲ ಸೃಷ್ಟಿಸಲಾಗಿದೆ.

ಕೋಷ್ಠಕದಲ್ಲಿ ವಿವರಿಸಿರುವಂತೆ ರೀತಿ ಸರಕಾರವೇ ಇಷ್ಟೊಂದು ಮೋಸ ಮಾಡುತ್ತಿರುವದರ ಜೊತೆಗೆ ಕಳೆದ ಜುಲೈ 2019ರಿಂದ ಇಲ್ಲಿಯವರೆಗೆ ಹೈದ್ರಾಬಾದ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ಅಧ್ಯಕ್ಷರನ್ನು ನೇಮಿಸದೇ ಇಲ್ಲಿಯವರೆಗೆ ಮಂಡಳಿಯ ಯಾವುದೇ ಸಭೆ ನಡೆಯಲು ಸಾದ್ಯವಾಗದ ರೀತಿ ಸರಕಾರ ನಡೆದುಕೊಂಡಿದೆ, ಈ ನಡುವೆ ಸರಕಾರ ಹೈದ್ರಾಬಾದ ಕರ್ನಾಟಕ ಪ್ರದೇಶವನ್ನು ಕಲ್ಯಾಣ ಕರ್ನಾಟಕ ಎಂದು ಮರುನಾಮಕರಣ ಮಾಡಿರುವದರಿಂದ ಸರಕಾರ ಕಾಗದದಲ್ಲಿ ಮಾತ್ರ ಕಲ್ಯಾಣ ಮಾಡಲು ಹೋಗುತ್ತಿರುವದು ನಾಚಿಕೆಗೇಡಿನ ಸಂಗತಿ. ಒಂದು ಇಡೀ ಆರ್ಥಿಕ ವರ್ಷಕ್ಕೆ ಮಂಡಳಿಗೆ ಅಧ್ಯಕ್ಷರಿಲ್ಲದಂತಾಗಿ ಅಭಿವೃದ್ಧಿ ವೇಗ ಕುಂಠಿತಗೊಂಡಿದೆ. ಇದರ ನಡುವೆ ಸರಕಾರ ಹೈದ್ರಾಬಾದ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷರನ್ನು ಆ ಭಾಗದ ಜಿಲ್ಲಾ ಉಸ್ತುವಾರಿ ಸಚಿವರಲ್ಲಿ ಒಬ್ಬರನ್ನು ಅಧ್ಯಕ್ಷರನ್ನಾಗಿ ಮಾಡಬೇಕೆಂದು ಇರುವದನ್ನು ತಿದ್ದುಪಡಿ ಮಾಡಿ ಮಂಡಳಿಯನ್ನು ದುರ್ಬಲಗೊಳಿಸಲು ಪ್ರಯತ್ನಿಸುತ್ತಿದೆ. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಲ್ಲಿ ಆ ಭಾಗದ ಎಲ್ಲ ಜಿಲ್ಲಾ ಉಸ್ತುವಾರಿ ಸಚಿವರು, ಒಬ್ಬರು ಲೋಕಸಭಾ ಸದಸ್ಯರು, ರಾಜ್ಯಸಭಾ ಸದಸ್ಯರು, ಇಬ್ಬರು ವಿಧಾನ ಪರಿಷತ್ ಸದಸ್ಯರು, ಎಂಟು ಜನ ಶಾಸಕರು ಹಾಗೂ ರಾಜ್ಯ ಹಿರಿಯ ಅಧಿಕಾರಿಗಳು ಆ ಮಂಡಳಿಗೆ ಸದಸ್ಯರಾಗಿರುತ್ತಾರೆ. ಇಂತಹ ಮಂಡಳಿಗೆ ಸಾಕಷ್ಟು ಚರ್ಚಿಸಿ, ಈ ಭಾಗದ ಜನರೊಂದಿಗೆ ಸಭೆ-ಚರ್ಚೆ-ಸಂವಾದ ನಡೆಸಿ, ಸಂಘ ಸಂಸ್ಥೆಗಳೊಂದಿಗೆ, ಹೋರಾಟಗಾರರ ಜೊತೆಗೆ ಚರ್ಚಿಸಿ ಒಬ್ಬ ಜಿಲ್ಲಾ ಉಸ್ತುವಾರಿ ಸಚಿವರನ್ನೇ ಅಧ್ಯಕ್ಷರನ್ನಾಗಿ ಮಾಡಲು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧ್ದಿ ಮಂಡಳಿ ಕಾಯ್ದೆಯಲ್ಲಿ ಅವಕಾಶ ಮಾಡಲಾಗಿದೆ. ಯಾರೊಂದಿಗೂ ಚರ್ಚಿಸದೇ ಏಕಾಏಕೀ ಯಾರೊಂದಿಗೂ ಚರ್ಚಿಸದೇ ಶಾಸಕರನ್ನು ಅಧ್ಯಕ್ಷರನ್ನಾಗಿ ಮಾಡುವ ನಿರ್ಣಯವನ್ನು ಸಚಿವ ಸಂಪುಟದಲ್ಲಿ ತೆಗೆದುಕೊಂಡಿರುವದು ಈ ಪ್ರದೇಶದ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಇದರಿಂದ ಮಂಡಳಿ ದುರ್ಬಲವಾಗಿ 1991 ರಿಂದ 2013 ರ ವರೆಗೆ ಇದ್ದಂತಹ ಮಂಡಳಿಯ ತರಹ ಇದೂ ಕೂಡ ಆಗುತ್ತದೆ ಎನ್ನುವ ಭಾವನೆ ಜನರಲ್ಲಿ ಮೂಡಿದೆ.

ಈ ಮಂಡಳಿ ಕಳೆದ ಏಳು ವರ್ಷಗಳಲ್ಲಿ ಶಿಕ್ಷಣಕ್ಕಾಗಿ 1519.00 ಕೋ.ರೂ, ಆರೋಗ್ಯ ಕ್ಷೇತ್ರಕ್ಕೆ 316.00 ಕೋ.ರೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ವಲಯಕ್ಕೆ 87.00 ಕೋ.ರೂ, ರಸ್ತೆ ಮತ್ತು ಸೇತುವೆಗಳಿಗೆ 3650.00 ಕೋ.ರೂ ಹಾಗೂ ಸಾಮಾಜಿಕ ಕ್ಷೇತ್ರದ ಅಭಿವೃದ್ಧಿಗೆ 253.00 ಕೋ.ರೂ ಅನುದಾನ ಖರ್ಚು ಮಾಡಲಾಗಿದೆ. ವಿಶೇಷವೆನೆಂದರೆ, ಕಲ್ಯಾಣ ಕರ್ನಾಟಕ ಪ್ರದೇಶವು ಶಿಕ್ಷಣ, ಆರೋಗ್ಯ, ಮಹಿಳೆ ಮತ್ತು ಮಕ್ಕಳು ಅಪೌಷ್ಟಿಕತೆ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಸಾಕಷ್ಟು ಹಿಂದುಳಿದಿರುವದರಿಂದ ಅಂತಹ ಕ್ಷೇತ್ರಗಳನ್ನು ಗುರುತಿಸಿ ಮಂಡಳಿಯು ಯೋಜನೆ ರೂಪಿಸಬೇಕಿತ್ತು, ಆದರೆ ಮಂಡಳಿಯ ಕಾರ್ಯಕ್ರಮಗಳು ಈ ಭಾಗದಲ್ಲಿ ಕಾಂಕ್ರೀಟ ರಸ್ತೆ ನಿರ್ಮಿಸುವದರಲ್ಲಿಯೇ ಆಸಕ್ತಿವಹಿಸಿರುವದು ಅತ್ಯಂತ ಚಿಂತೆಗೀಡುಮಾಡುತ್ತಿದೆ. ಈ ಭಾಗದ ಪ್ರಗತಿಪರರು, ಹೋರಾಟಗಾರರು ಹಾಗೂ ಸಾಮಾಜಿಕ ಕಾರ್ಯಕರ್ತರು ಈ ಪ್ರದೇಶದ ಅಭಿವೃದ್ಧಿಯ ನೀಲನಕ್ಷೆ ಸಿದ್ಧಪಡಿಸದೇ ಇದ್ದರೆ ಖಂಡಿತವಾಗಿಯೂ ಮಂಡಳಿಯು ಈ ಭಾಗದ ಅಭಿವೃದ್ದಿ ಶ್ರಮಿಸುತ್ತದೆ ಎನ್ನುವ ವಿಶ್ವಾಸ ಜನರಲ್ಲಿ ಮೂಡಿಸುವುದಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...